Homeಮುಖಪುಟ'ಪ್ರಜಾಪ್ರಭುತ್ವ ಅಪಾಯದಲ್ಲಿದೆ' ಬ್ಯಾನರ್ ಹಿಡಿದು ರಾಷ್ಟ್ರಪತಿ ಭವನದತ್ತ ಪ್ರತಿಪಕ್ಷಗಳ ಮೆರವಣಿಗೆ

‘ಪ್ರಜಾಪ್ರಭುತ್ವ ಅಪಾಯದಲ್ಲಿದೆ’ ಬ್ಯಾನರ್ ಹಿಡಿದು ರಾಷ್ಟ್ರಪತಿ ಭವನದತ್ತ ಪ್ರತಿಪಕ್ಷಗಳ ಮೆರವಣಿಗೆ

- Advertisement -
- Advertisement -

“ಪ್ರಜಾಪ್ರಭುತ್ವ ಅಪಾಯದಲ್ಲಿದೆ” ಬ್ಯಾನರ್‌ನೊಂದಿಗೆ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಇಂದು ವಿಜಯ್ ಚೌಕ್‌ನಿಂದ ರಾಷ್ಟ್ರಪತಿ ಭವನದತ್ತ ಭಾರೀ ಭದ್ರತಾ ನಿಯೋಜನೆಯ ನಡುವೆ ಮೆರವಣಿಗೆ ನಡೆಸುತ್ತಿದ್ದರು. ಈ ವೇಳೆ ಪೊಲೀಸರು ಮೆರವಣಿಗೆ ತಡೆದು ಸಂಸದರನ್ನು ಬಂಧಿಸಿ ಸಮೀಪದ ಪೊಲೀಸ್ ಠಾಣೆಗಳಿಗೆ ಬಸ್‌ನಲ್ಲಿ ಕರೆದೊಯ್ದಿದ್ದಾರೆ. ಮೆರವಣಿಗೆಗೆ ಅನುಮತಿ ಪಡೆದಿರಲಿಲ್ಲ ಮತ್ತು ರಾಷ್ಟ್ರಪತಿಗಳು ಕೂಡ ಇವರ ಭೇಟಿಗೆ ಸಮಯ ನೀಡಿರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಅದಾನಿ-ಹಿಂಡೆನ್‌ಬರ್ಗ್ ಸಮಸ್ಯೆಯ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ತನಿಖೆಗೆ ನೀಡಬೇಕು ಎನ್ನುವ ತಮ್ಮ ಬೇಡಿಕೆಯನ್ನು ಪುನರುಚ್ಚರಿಸಿದ ಪಕ್ಷಗಳು, ಅಧ್ಯಕ್ಷ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಲು ಬಯಸುತ್ತಿವೆ. ಕೋಟ್ಯಾಧಿಪತಿ ಕೈಗಾರಿಕೋದ್ಯಮಿ ಗೌತಮ್ ಅದಾನಿ ಅವರೊಂದಿಗಿನ ಪ್ರಧಾನಿಯವರ ಸ್ನೇಹದ ಬಗೆಗಿನ ಗಮನವನ್ನು ಬೇರೆಡೆಗೆ ಸೆಳೆಯಲು 2019ರ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಶಿಕ್ಷೆ ವಿಧಿಸುವ ತಂತ್ರ ಮಾಡಿದ್ದಾರೆ ಎಂದು ಪ್ರತಿಪಕ್ಷದ ನಾಯಕರು ಹೇಳಿದ್ದಾರೆ.

”ಅದಾನಿ ಷೇರುಗಳ ಸ್ಟಾಕ್ ಮ್ಯಾನಿಪ್ಯುಲೇಷನ್ ಆರೋಪದ ನಂತರ ಎಲ್ಐಸಿ ಎಸ್‌ಬಿಐನಂತಹ ರಾಜ್ಯ-ಸಂಬಂಧಿತ ಕಂಪನಿಗಳಲ್ಲಿ ಇರಿಸಲಾಗಿರುವ ಸಾರ್ವಜನಿಕ ಹಣ ಭಾರಿ ನಷ್ಟಕ್ಕೆ ಕಾರಣವಾಗಿದೆ” ಎಂದು ಪ್ರತಿಪಕ್ಷಗಳು ಹೇಳಿವೆ.

ಇದನ್ನೂ ಓದಿ: ‘ಮೋದಿ ಉಪನಾಮ’ ಟೀಕೆ ಕೇಸ್‌ನಲ್ಲಿ ರಾಹುಲ್‌ಗೆ 2 ವರ್ಷ ಜೈಲು: ಬಿಜೆಪಿಯ ಪಿತೂರಿ ಎಂದ ಪ್ರತಿಪಕ್ಷಗಳು

ಹಲವು ರಾಜ್ಯಗಳಲ್ಲಿ ಕಾಂಗ್ರೆಸ್ ಘಟಕಗಳು ಏಕಕಾಲದಲ್ಲಿ ಪ್ರತಿಭಟನೆಗಳನ್ನು ಆರಂಭಿಸಿವೆ. ಕೇಂದ್ರವು ಸೇಡಿನ ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ. ಗಾಂಧಿ ವಿರುದ್ಧದ ಸೂರತ್ ಕೋರ್ಟ್ ತೀರ್ಪಿನ ವಿರುದ್ಧ ಕರ್ನಾಟಕದಲ್ಲೂ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಪಕ್ಷದ ಇತರ ಮುಖಂಡರು ಮತ್ತು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.

ತಮ್ಮ ವಿವಾದಾತ್ಮಕ ಲಂಡನ್ ಹೇಳಿಕೆಗಳ ಬಗ್ಗೆ ತಮ್ಮ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯಿಸಲು ರಾಹುಲ್ ಗಾಂಧಿ ಅವರು ಸಮಯ ಕೋರಿ ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದಾರೆ. ಆದರೆ ಅವರ ಧ್ವನಿ ಅಡಗಿಸುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ಹೇಳಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, ”ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಮೂಲಕ ಕೇಂದ್ರ ಸರ್ಕಾರವು ಪ್ರತಿಪಕ್ಷಗಳ ನಾಯಕರನ್ನು ಬೇಟೆಯಾಡುತ್ತಿದೆ. ದೇಶದಲ್ಲಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸುವ ನಿಟ್ಟಿನಲ್ಲಿ ಈ ಪಾದಯಾತ್ರೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

ಸದನದ ಕಲಾಪ ಪ್ರಾರಂಭವಾಗುವ ಮೊದಲು ಪಕ್ಷದ ಸಂಸದರ ಸಭೆಯಲ್ಲಿ ರಾಹುಲ್‌ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಕೂಡ ಉಪಸ್ಥಿತರಿದ್ದರು.

ಪಾದಯಾತ್ರೆಗೂ ಮುನ್ನ ಕಾಂಗ್ರೆಸ್ ಮುಖ್ಯಸ್ಥ ಮತ್ತು ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಸಂಸತ್ತಿನ ಕಚೇರಿಯಲ್ಲಿ 12 ವಿರೋಧ ಪಕ್ಷಗಳ ಸದಸ್ಯರು ಸಭೆ ನಡೆಸಿದರು.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು, ”ಸೂರತ್ ನ್ಯಾಯಾಲಯದ ತೀರ್ಪನ್ನು ”ದುರದೃಷ್ಟಕರ” ಎಂದು ಕರೆದಿದ್ದಾರೆ. ಅದಾನಿ-ಹಿಂಡೆನ್‌ಬರ್ಗ್ ವಿಷಯವನ್ನು ಪ್ರಸ್ತಾಪಿಸಿದಾಗಿನಿಂದಲೂ ಸರ್ಕಾರವು ರಾಹುಲ್ ಅವರನ್ನು ಮಾತನಾಡದಂತೆ ತಡೆಯಲು ಪ್ರಯತ್ನಿಸುತ್ತಿದೆ” ಎಂದು ಹೇಳಿದರು.

”ನಾವು ಪರಿಸ್ಥಿತಿಯನ್ನು ವಿಶ್ಲೇಷಿಸಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ಸಂಬಂಧಿಸಿದಂತೆ ಈ ತೀರ್ಪು ತುಂಬಾ ದುರದೃಷ್ಟಕರವಾಗಿದೆ. ಪ್ರತಿಪಕ್ಷಗಳೆಲ್ಲಾ ಸೇರಿ ಕಾಂಗ್ರೆಸ್ ಪಕ್ಷಕ್ಕಾಗಿ ಸಾಮೂಹಿಕ ಮೆರವಣಿಗೆ ಮಾಡುತ್ತೇವೆ. ನಾವು ಅಧ್ಯಕ್ಷರೊಂದಿಗೆ ಅಪಾಯಿಂಟ್ಮೆಂಟ್ ಕೇಳುತ್ತಿದ್ದೇವೆ. ರಾಹುಲ್ ಗಾಂಧಿ ಅವರು ಅದಾನಿ ವಿಚಾರವನ್ನು ಪ್ರಸ್ತಾಪಿಸಿದ ಮೊದಲ ದಿನದಿಂದ ಅವರನ್ನು ತಡೆಯಲು ಬಿಜೆಪಿಯವರು ಮುಂದಾದರು. ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮಾತನಾಡುವುದು ಅವರಿಗೆ ಇಷ್ಟವಿಲ್ಲ. ಅವರ ಧ್ವನಿಯನ್ನು ನಿಲ್ಲಿಸಲು ಅವರು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ” ಎಂದು ವೇಣುಗೋಪಾಲ್ ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...