Homeಮುಖಪುಟಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಚುನಾವಣೆಗೆ ವಿಪಕ್ಷಗಳು ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಚುನಾವಣೆಗೆ ವಿಪಕ್ಷಗಳು ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ನೂತನ ಎನ್‌ಡಿಎ ಸರ್ಕಾರ ರಚನೆಯಾಗಿ ಸಚಿವರಿಗೆ ಖಾತೆಗಳ ಹಂಚಿಕೆಯೂ ಆಗಿದೆ.

ಬಿಹಾರದ ಜೆಡಿ (ಯು) ಮತ್ತು ಆಂಧ್ರ ಪ್ರದೇಶದ ಟಿಡಿಪಿ ಪಕ್ಷಗಳ ಪ್ರಮುಖ ಬೆಂಬಲದೊಂದಿಗೆ ಸರ್ಕಾರ ರಚಿಸಿರುವ ಎನ್‌ಡಿಎ ಒಕ್ಕೂಟ, ಲೋಕಸಭೆ ಸ್ಪೀಕರ್ ಆಯ್ಕೆಯ ಲೆಕ್ಕಾಚಾರದಲ್ಲಿದೆ.

ಸರ್ಕಾರ ರಚನೆಯಾಗುವ ಮುನ್ನ ಜೆಡಿಯು ಮತ್ತು ಟಿಡಿಪಿ ಸ್ಪೀಕರ್ ಹುದ್ದೆಗ ಪಟ್ಟು ಹಿಡಿದಿದೆ ಎಂದು ವರದಿಯಾಗಿತ್ತು. ಆ ವಿಷಯ ಸದ್ಯಕ್ಕೆ ತನ್ನಗಾಗಿದ್ದು, ಇನ್ನೂ ಅಂತಿಮಗೊಂಡಿಲ್ಲ.

ಆಡಳಿತ ಎನ್‌ಡಿಎ ಒಕ್ಕೂಟದ್ದಾದರೂ, ಅದೇ ಒಕ್ಕೂಟದವರು ಲೋಕಸಭೆ ಸ್ಪೀಕರ್ ಆಗಬೇಕೆಂದಿಲ್ಲ. ಆದರೂ, ಸಾಮಾನ್ಯವಾಗಿ ಸ್ಪೀಕರ್ ಹುದ್ದೆ ಆಡಳಿತ ಪಕ್ಷದ ಕೂಟದವರಿಗೆ ಸಿಗುವುದು ವಾಡಿಕೆ. ಈ ಬಾರಿಯೂ ಈ ಪದ್ದತಿ ಮುಂದುವರಿಯಬಹುದು.

ಈ ನಡುವೆ ಉಪ ಸ್ಪೀಕರ್ ಹುದ್ದೆ ನಮಗೆ ನೀಡಬೇಕು ಎಂಬ ಬೇಡಿಯಕೆಯನ್ನು ಪ್ರತಿಪಕ್ಷಗಳು ಆಡಳಿತ ಕೂಟದ ಮುಂದೆ ಇಟ್ಟಿದೆ ಎಂದು ವರದಿಯಾಗಿದೆ.

ಇಂಡಿಯಾ ಟುಡೇ ವರದಿ ಪ್ರಕಾರ, ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಪ್ರತಿಪಕ್ಷಗಳು ಎಚ್ಚರಿಕೆ ನೀಡಿವೆ ಎಂದು ತಿಳಿದು ಬಂದಿದೆ.

ಈ ಬಾರಿ ನಿರೀಕ್ಷೆಗಿಂತ ಹೆಚ್ಚಿನ ಸ್ಥಾನಗಳನ್ನು ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಪಡೆದುಕೊಂಡಿದೆ. ಹಾಗಾಗಿ, ಉಪ ಸ್ಪೀಕರ್ ಹುದ್ದೆ ನೀಡುವಂತೆ ಪಟ್ಟು ಹಿಡಿದಿದೆ. ಹೊಸ ಸರ್ಕಾರದ ಮೊದಲ ಸಂಸತ್‌ ಅಧಿವೇಶನಕ್ಕೂ ಮುನ್ನ ಈ ವಿಚಾರ ಮುನ್ನೆಲೆಗೆ ಬಂದಿದೆ.

ಸ್ಪೀಕರ್ ಹುದ್ದೆಯ ಜೊತೆಗೆ ಇಂಡಿಯಾ ಒಕ್ಕೂಟ ಪ್ರತಿಪಕ್ಷ ನಾಯಕನನ್ನೂ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್‌ ಈಗಾಗಲೇ ರಾಹುಲ್ ಗಾಂಧಿಯನ್ನು ಪ್ರತಿಪಕ್ಷ ನಾಯಕನನ್ನಾಗಿ ಮಾಡಲು ಸರ್ವಾನುಮತದ ನಿರ್ಣಯ ಕೈಗೊಂಡಿದೆ. ಇಂಡಿಯಾ ಒಕ್ಕೂಟದ ಇತರ ಪಕ್ಷಗಳ ಮೇಲೆ ನಿರ್ಣಯ ನಿಂತಿದೆ. ಬಹುತೇಕ ರಾಹುಲ್ ಗಾಂಧಿಯೇ ಪ್ರತಿಪಕ್ಷ ನಾಯಕರಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಎನ್‌ಡಿಎ ಸರ್ಕಾರದ ಪತನ ಸನ್ನಿಹಿತವಾಗಿದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...