Homeಮುಖಪುಟಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಚುನಾವಣೆಗೆ ವಿಪಕ್ಷಗಳು ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ

ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಚುನಾವಣೆಗೆ ವಿಪಕ್ಷಗಳು ಅಭ್ಯರ್ಥಿ ಕಣಕ್ಕಿಳಿಸುವ ಸಾಧ್ಯತೆ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ನೂತನ ಎನ್‌ಡಿಎ ಸರ್ಕಾರ ರಚನೆಯಾಗಿ ಸಚಿವರಿಗೆ ಖಾತೆಗಳ ಹಂಚಿಕೆಯೂ ಆಗಿದೆ.

ಬಿಹಾರದ ಜೆಡಿ (ಯು) ಮತ್ತು ಆಂಧ್ರ ಪ್ರದೇಶದ ಟಿಡಿಪಿ ಪಕ್ಷಗಳ ಪ್ರಮುಖ ಬೆಂಬಲದೊಂದಿಗೆ ಸರ್ಕಾರ ರಚಿಸಿರುವ ಎನ್‌ಡಿಎ ಒಕ್ಕೂಟ, ಲೋಕಸಭೆ ಸ್ಪೀಕರ್ ಆಯ್ಕೆಯ ಲೆಕ್ಕಾಚಾರದಲ್ಲಿದೆ.

ಸರ್ಕಾರ ರಚನೆಯಾಗುವ ಮುನ್ನ ಜೆಡಿಯು ಮತ್ತು ಟಿಡಿಪಿ ಸ್ಪೀಕರ್ ಹುದ್ದೆಗ ಪಟ್ಟು ಹಿಡಿದಿದೆ ಎಂದು ವರದಿಯಾಗಿತ್ತು. ಆ ವಿಷಯ ಸದ್ಯಕ್ಕೆ ತನ್ನಗಾಗಿದ್ದು, ಇನ್ನೂ ಅಂತಿಮಗೊಂಡಿಲ್ಲ.

ಆಡಳಿತ ಎನ್‌ಡಿಎ ಒಕ್ಕೂಟದ್ದಾದರೂ, ಅದೇ ಒಕ್ಕೂಟದವರು ಲೋಕಸಭೆ ಸ್ಪೀಕರ್ ಆಗಬೇಕೆಂದಿಲ್ಲ. ಆದರೂ, ಸಾಮಾನ್ಯವಾಗಿ ಸ್ಪೀಕರ್ ಹುದ್ದೆ ಆಡಳಿತ ಪಕ್ಷದ ಕೂಟದವರಿಗೆ ಸಿಗುವುದು ವಾಡಿಕೆ. ಈ ಬಾರಿಯೂ ಈ ಪದ್ದತಿ ಮುಂದುವರಿಯಬಹುದು.

ಈ ನಡುವೆ ಉಪ ಸ್ಪೀಕರ್ ಹುದ್ದೆ ನಮಗೆ ನೀಡಬೇಕು ಎಂಬ ಬೇಡಿಯಕೆಯನ್ನು ಪ್ರತಿಪಕ್ಷಗಳು ಆಡಳಿತ ಕೂಟದ ಮುಂದೆ ಇಟ್ಟಿದೆ ಎಂದು ವರದಿಯಾಗಿದೆ.

ಇಂಡಿಯಾ ಟುಡೇ ವರದಿ ಪ್ರಕಾರ, ಉಪ ಸ್ಪೀಕರ್ ಹುದ್ದೆ ನೀಡದಿದ್ದರೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸುವುದಾಗಿ ಪ್ರತಿಪಕ್ಷಗಳು ಎಚ್ಚರಿಕೆ ನೀಡಿವೆ ಎಂದು ತಿಳಿದು ಬಂದಿದೆ.

ಈ ಬಾರಿ ನಿರೀಕ್ಷೆಗಿಂತ ಹೆಚ್ಚಿನ ಸ್ಥಾನಗಳನ್ನು ಪ್ರತಿಪಕ್ಷಗಳ ಒಕ್ಕೂಟ ಇಂಡಿಯಾ ಪಡೆದುಕೊಂಡಿದೆ. ಹಾಗಾಗಿ, ಉಪ ಸ್ಪೀಕರ್ ಹುದ್ದೆ ನೀಡುವಂತೆ ಪಟ್ಟು ಹಿಡಿದಿದೆ. ಹೊಸ ಸರ್ಕಾರದ ಮೊದಲ ಸಂಸತ್‌ ಅಧಿವೇಶನಕ್ಕೂ ಮುನ್ನ ಈ ವಿಚಾರ ಮುನ್ನೆಲೆಗೆ ಬಂದಿದೆ.

ಸ್ಪೀಕರ್ ಹುದ್ದೆಯ ಜೊತೆಗೆ ಇಂಡಿಯಾ ಒಕ್ಕೂಟ ಪ್ರತಿಪಕ್ಷ ನಾಯಕನನ್ನೂ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್‌ ಈಗಾಗಲೇ ರಾಹುಲ್ ಗಾಂಧಿಯನ್ನು ಪ್ರತಿಪಕ್ಷ ನಾಯಕನನ್ನಾಗಿ ಮಾಡಲು ಸರ್ವಾನುಮತದ ನಿರ್ಣಯ ಕೈಗೊಂಡಿದೆ. ಇಂಡಿಯಾ ಒಕ್ಕೂಟದ ಇತರ ಪಕ್ಷಗಳ ಮೇಲೆ ನಿರ್ಣಯ ನಿಂತಿದೆ. ಬಹುತೇಕ ರಾಹುಲ್ ಗಾಂಧಿಯೇ ಪ್ರತಿಪಕ್ಷ ನಾಯಕರಾಗುವ ಸಾಧ್ಯತೆ ಇದೆ.

ಇದನ್ನೂ ಓದಿ : ಎನ್‌ಡಿಎ ಸರ್ಕಾರದ ಪತನ ಸನ್ನಿಹಿತವಾಗಿದೆ: ಮಲ್ಲಿಕಾರ್ಜುನ ಖರ್ಗೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...