Homeಮುಖಪುಟಚುನಾವಣಾ ಆಯೋಗವನ್ನು ಭೇಟಿ ಮಾಡಿದ ಪ್ರತಿಪಕ್ಷ ನಿಯೋಗ: ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ತೀವ್ರ ವಿರೋಧ

ಚುನಾವಣಾ ಆಯೋಗವನ್ನು ಭೇಟಿ ಮಾಡಿದ ಪ್ರತಿಪಕ್ಷ ನಿಯೋಗ: ಬಿಹಾರ ಮತದಾರರ ಪಟ್ಟಿ ಪರಿಷ್ಕರಣೆಗೆ ತೀವ್ರ ವಿರೋಧ

- Advertisement -
- Advertisement -

ಭಾರತೀಯ ಚುನಾವಣಾ ಆಯೋಗವನ್ನು ಬುಧವಾರ ಭೇಟಿಯಾಗಿರುವ ಪ್ರತಿಪಕ್ಷ ನಿಯೋಗ ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಎಆರ್‌) ಕುರಿತು ಕಳವಳ ವ್ಯಕ್ತಪಡಿಸಿದೆ.

ಕಾಂಗ್ರೆಸ್, ಆರ್‌ಜೆಡಿ, ಸಿಪಿಐ, ಸಿಪಿಐ(ಎಂಎಲ್‌) ಲಿಬರೇಶನ್, ಎನ್‌ಸಿಪಿ-ಎಸ್‌ಪಿ ಮತ್ತು ಸಮಾಜವಾದಿ ಪಕ್ಷಗಳ 11 ಮಂದಿ ನಾಯಕರು ಮುಖ್ಯ ಆಯುಕ್ತ ಜ್ಞಾನೇಶ್ ಕುಮಾರ್ ಮತ್ತು ಇತರ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ, ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಇರುವಾಗ ಕೈಗೊಂಡಿರುವ ಮತದಾರರ ಪಟ್ಟಿ ಪರಿಶೀಲನೆಯನ್ನು ವಿರೋಧಿಸಿದ್ದಾರೆ.

ಬಿಹಾರದಲ್ಲಿ ಈಗಾಗಲೇ ಪ್ರಾರಂಭವಾಗಿರುವ ಮತ್ತು ಮುಂದಿನ ವರ್ಷ ಚುನಾವಣೆ ನಡೆಯಲಿರುವ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಲ್ಲಿ ಜಾರಿಗೆ ಬರಲಿರುವ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ಇಂಡಿಯಾದ ಒಕ್ಕೂಟದ ಪಕ್ಷಗಳು ತೀವ್ರವಾಗಿ ವಿರೋಧಿಸುತ್ತಿವೆ.

ಚುನಾವಣಾ ಆಯೋಗದ ಜೊತೆಗಿನ ಸಭೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಕಾಂಗ್ರೆಸ್ ಸಂಸದ ಅಭಿಷೇಕ್ ಮನು ಸಿಂಘ್ವಿ, ಪಕ್ಷದ ಅಧ್ಯಕ್ಷರು ಮಾತ್ರ ತನ್ನ ಮುಂದೆ ಹಾಜರಾಗಬೇಕೆಂದು ಹೇಳುವ, ಚುನಾವಣಾ ಆಯೋಗದ ಅವರಣ ಪ್ರವೇಶಕ್ಕೆ ಸಂಬಂಧಿಸಿದ ಆಯೋಗದ ಹೊಸ ನಿರ್ದೇಶನದ ವಿರುದ್ದವೂ ನಾವು ಪ್ರತಿಭಟಿಸಿದ್ದೇವೆ ಎಂದು ಹೇಳಿದ್ದಾರೆ.

ಮೊಟ್ಟ ಮೊದಲ ಬಾರಿಗೆ ನಮಗೆ ಇಂತಹ ನಿಯಮಗಳನ್ನು ವಿಧಿಸಲಾಗಿದೆ. ಪಕ್ಷದ ಮುಖ್ಯಸ್ಥರು ಮಾತ್ರ ಭೇಟಿ ಮಾಡಬಹುದು ಎಂದು ಮೊದಲ ಬಾರಿಗೆ ಹೇಳಲಾಗಿದೆ. ಈ ರೀತಿಯ ನಿರ್ಬಂಧಗಳಿಂದ ಚುನಾವಣಾ ಆಯೋಗ ಮತ್ತು ರಾಜಕೀಯ ಪಕ್ಷಗಳ ನಡುವೆ ಅತ್ಯಗತ್ಯ ಮಾತುಕತೆಗಳನ್ನು ನಡೆಸಲು ಸಾಧ್ಯವಿಲ್ಲ ಎಂದು ಸಿಂಘ್ವಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾವು ಪಟ್ಟಿಯನ್ನು ಕೊಟ್ಟಿದ್ದೇವೆ. ಅನಧಿಕೃತ ವ್ಯಕ್ತಿಗಳನ್ನು ಅನುಮತಿಸಲು ಸಾಧ್ಯವಿಲ್ಲ. ಇಬ್ಬರಿಗೆ ಮಾತ್ರ ಅವಕಾಶ ನೀಡುವುದು ವಿಪರ್ಯಾಸ. ಕೆಲವು ಹಿರಿಯ ನಾಯಕರು ಮೂರು ಗಂಟೆಗಳ ಕಾಲ ಕಾಯಬೇಕಾಯಿತು ಎಂದು ಸಿಂಘ್ವಿ ತಿಳಿಸಿದ್ದಾರೆ.

ನಾವು ಕಳೆದ ಪರಿಷ್ಕರಣೆಯಿಂದ ಮಾಹಿತಿ ಕೇಳಿದ್ದೇವೆ. ಅವಾಗಿನಿಂದ ಬಿಹಾರದಲ್ಲಿ ನಾಲ್ಕು ಅಥವಾ ಐದು ಚುನಾವಣೆಗಳು ನಡೆದಿವೆ. 2003ರ ಎಸ್‌ಐಆರ್ ಲೋಕಸಭಾ ಚುನಾವಣೆಗೆ ಒಂದು ವರ್ಷ ಮೊದಲು ನಡೆದಿತ್ತು. ಅಂದರೆ, ಬಿಹಾರ ವಿಧಾನಸಭಾ ಚುನಾವಣೆಯ 24 ತಿಂಗಳು ಮೊದಲು ಎಂದು ಸಿಂಘ್ವಿ ಹೇಳಿದ್ದಾರೆ.

“ಎರಡನೆಯದಾಗಿ ನೀವು ಎಸ್‌ಐಆರ್ ಮಾಡುವುದಾದರೆ ಜೂನ್ ಅಂತ್ಯದಲ್ಲಿ ಏಕೆ ಘೋಷಣೆ ಮಾಡಿದಿರಿ ಎಂದು ನಾವು ಕೇಳಿದ್ದೇವೆ. ಮೂರನೆಯದಾಗಿ, ಕಳೆದ ಒಂದು ದಶಕದಲ್ಲಿ ಎಲ್ಲದಕ್ಕೂ ಆಧಾರ್ ಮತ್ತು ಪಡಿತರ ಚೀಟಿಯನ್ನು ಕೇಳಿದ್ದೀರಿ. ಮೊಟ್ಟ ಮೊದಲ ಜನನ ಪ್ರಮಾಣ ಪತ್ರ ಇಲ್ಲದವರನ್ನು ಪರಿಗಣಿಸುವುದಿಲ್ಲ ಎನ್ನುತ್ತಿದ್ದೀರಿ ಎಂಬುವುದನ್ನು ಪ್ರಶ್ನಿಸಿದ್ದೇವೆ ಎಂದು ಸಿಂಘ್ವಿ ತಿಳಿಸಿದ್ದಾರೆ.

ವಿಶೇಷ ಸಚಿವ ಸಂಪುಟ ಸಭೆಯಲ್ಲಿ 48 ವಿಷಯಗಳು ಕುರಿತು ಚರ್ಚೆ; 3400 ಕೋಟಿ ಮೊತ್ತ ಮಂಜೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಆರು ಮಂದಿ ಶಾಸಕರನ್ನು ಅಮಾನತುಗೊಳಿಸಿದ ಬಿಜೆಡಿ

ಮಾರ್ಚ್ 16ರಂದು ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಆರು ಮಂದಿ ಶಾಸಕರನ್ನು ಒಡಿಶಾದ ಬಿಜು ಜನತಾದಳ (ಬಿಜೆಡಿ) ಅಮಾನತುಗೊಳಿಸಿದೆ ಎಂದು ವರದಿಯಾಗಿದೆ. ಒಟ್ಟು 8 ಶಾಸಕರು ಪಕ್ಷದ ವಿಪ್ ಉಲ್ಲಂಘಿಸಿದ್ದಾರೆ....

ಆಸ್ಕರ್ ನಾಮನಿರ್ದೇಶಿತ ‘ದಿ ವಾಯ್ಸ್ ಆಫ್ ಹಿಂದ್ ರಜಬ್’ ಚಿತ್ರ ಪ್ರದರ್ಶನಕ್ಕೆ ಭಾರತದಲ್ಲಿ ನಿರ್ಬಂಧ!

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ಳನ್ನು ಇಸ್ರೇಲಿ ಸೈನಿಕರು ಸುಮಾರು 300 ಸುತ್ತು ಗುಂಡಿಕ್ಕಿ ಭೀಕರವಾಗಿ ಹತ್ಯೆ ಮಾಡಿರುವ ಕಥೆಯನ್ನು ಹೇಳುವ, 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರದ ಪ್ರದರ್ಶನಕ್ಕೆ...

ವೈದ್ಯೆ ವಂದನಾ ದಾಸ್ ಹತ್ಯೆ ಪ್ರಕರಣ; ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೇರಳ ನ್ಯಾಯಾಲಯ

ಕೊಲ್ಲಂ: ಆಸ್ಪತ್ರೆಯಲ್ಲಿ ನಡೆದ ಡಾ. ವಂದನಾ ದಾಸ್ ಅವರ ಹತ್ಯೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಅಪರಾಧಿ ಜಿ. ಸಂದೀಪ್ ಗೆ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಆರೋಪಿಗೆ ಮರಣದಂಡನೆ ವಿಧಿಸುವಂತೆ ಕೋರಿ ಮೇಲ್ಮನವಿ ಸಲ್ಲಿಸುವುದಾಗಿ...

ಕಾಂಗ್ರೆಸ್, ರಾಹುಲ್ ಗಾಂಧಿ ಬಿಜೆಪಿಯ ಬಿ-ಟೀಮ್: ಕೇರಳ ಸಿಎಂ ಪಿಣರಾಯಿ ವಿಜಯನ್

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಶನಿವಾರ ಕಾಂಗ್ರೆಸ್ ಮತ್ತು ಅದರ ನಾಯಕ ರಾಹುಲ್ ಗಾಂಧಿ ಅವರನ್ನು ಟೀಕಿಸಿದ್ದು, ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಬಿಜೆಪಿಯ ಬಿ-ಟೀಮ್ ಎಂದು ಆರೋಪಿಸಿದ್ದಾರೆ.   ಕೇಂದ್ರೀಯ ಸಂಸ್ಥೆಗಳು ಕೇರಳ...

‘ಬಿಜೆಪಿ ಮತದಾನದ ಹಕ್ಕನ್ನು ಕಸಿದುಕೊಳ್ಳಲು ಬಿಡುವುದಿಲ್ಲ, ಕೊನೆಯವರೆಗೂ ಹೋರಾಡುತ್ತೇವೆ’; ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ಮತದಾರರ ಪಟ್ಟಿಯ ಪರಿಷ್ಕರಣೆಯ ಮೂಲಕ ಜನರ "ಮತದಾನದ ಹಕ್ಕನ್ನು ಕಸಿದುಕೊಳ್ಳಲು" ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ.  "ಮೋದಿ ಜಿ...

ಏಳು ವರ್ಷಗಳ ನಂತರ ಯುಎಪಿಎ ಪ್ರಕರಣದಲ್ಲಿ ಇಬ್ಬರು ಕಾಶ್ಮೀರಿ ಯುವಕರನ್ನು ಖುಲಾಸೆಗೊಳಿಸಿದ ದೆಹಲಿ ನ್ಯಾಯಾಲಯ

ಏಳು ವರ್ಷಗಳಿಗೂ ಹೆಚ್ಚು ಕಾಲದ ನಂತರ, ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲ್ಪಟ್ಟ ಇಬ್ಬರು ಕಾಶ್ಮೀರಿ ಯುವಕರನ್ನು ಗುರುವಾರ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಪ್ರಾಸಿಕ್ಯೂಷನ್ ತನ್ನ ಆರೋಪಗಳನ್ನು ಸಾಬೀತುಪಡಿಸಲು ವಿಫಲವಾಗಿದೆ ಮತ್ತು ದೆಹಲಿ ಪೊಲೀಸರು...

‘ನಾವು ಯುದ್ಧವನ್ನು ಶಾಶ್ವತವಾಗಿ ಕೊನೆಗೊಳಿಸಲು ಪ್ರಯತ್ನಿಸುತ್ತೇವೆ’; ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಗ್ಚಿ: ವರದಿ

ಟೆಹ್ರಾನ್: ಇಸ್ರೇಲ್ ಮತ್ತು ಅಮೆರಿಕದ ದಾಳಿಗಳ ನಂತರ ಇರಾನ್‌ನ ಉನ್ನತ ಅಧಿಕಾರಿಗಳು ಮತ್ತು ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಸೇರಿದಂತೆ ಸಾವಿರಾರು ಜನರು ಸಾವನ್ನಪ್ಪಿದ ನಂತರ, ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ...

‘ಅಮೆರಿಕ ಇಲ್ಲದೆ, ನ್ಯಾಟೋ ಒಂದು ಕಾಗದದ ಹುಲಿ’: ಅಟ್ಲಾಂಟಿಕ್ ಮೈತ್ರಿಕೂಟದ ದೇಶಗಳನ್ನು ‘ಹೇಡಿಗಳು’ ಎಂದ ಡೊನಾಲ್ಡ್ ಟ್ರಂಪ್  

ಇರಾನ್ ವಿರುದ್ಧದ ಅಮೆರಿಕ - ಇಸ್ರೇಲ್ ಯುದ್ಧಕ್ಕೆ ಬೆಂಬಲ ನೀಡದ ನ್ಯಾಟೋ ಮಿತ್ರರಾಷ್ಟ್ರಗಳ ವಿರುದ್ಧ ಶುಕ್ರವಾರ ವಾಗ್ದಾಳಿ ನಡೆಸಿದ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ದೀರ್ಘಕಾಲದ ಅಮೆರಿಕದ ಮಿತ್ರರಾಷ್ಟ್ರಗಳನ್ನು "ಹೇಡಿಗಳು" ಎಂದು ಕರೆದಿದ್ದಾರೆ. "ಯುಎಸ್ಎ ಇಲ್ಲದೆ,...

ಮುಖ್ಯಮಂತ್ರಿಗಳಿಗೆ ವರ್ಗಾವಣೆಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮಹತ್ವದ ಕೆಲಸವಿದೆ: ಕರ್ನಾಟಕ ಹೈಕೋರ್ಟ್ 

ಸರ್ಕಾರಿ ನೌಕರರ ವರ್ಗಾವಣೆ ಮತ್ತು ನೇಮಕಾತಿಗಳಲ್ಲಿ ಹಸ್ತಕ್ಷೇಪ ಮಾಡುವುದಕ್ಕಿಂತ ಮುಖ್ಯಮಂತ್ರಿಗಳು ನಿರ್ವಹಿಸಬೇಕಾದ ಕೆಲಸ ಉತ್ತಮ ಮತ್ತು ಹೆಚ್ಚು ಮುಖ್ಯವಾದುದು ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚಿನ ತೀರ್ಪೊಂದರಲ್ಲಿ ಹೇಳಿದೆ.  ಬೆಸ್ಕಾಂ ಎಂಜಿನಿಯರ್ ವರ್ಗಾವಣೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ...

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...