Homeಮುಖಪುಟಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

ಚುನಾವಣಾ ಆಯುಕ್ತರ ನೇಮಕಾತಿ ಕುರಿತ ಮಸೂದೆ ಲೋಕಸಭೆಯಲ್ಲಿ ಅಂಗೀಕಾರ

- Advertisement -
- Advertisement -

ಲೋಕಸಭೆಯಿಂದ ಬಹುಪಾಲು ಪ್ರತಿಪಕ್ಷಗಳ ಸದಸ್ಯರು ಅಮಾನತುಗೊಂಡ ಬೆನ್ನಲ್ಲಿ ಇದೀಗ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ(ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಕುರಿತ ಮಸೂದೆ-2023ನ್ನು ಅಂಗೀಕರಿಸಲಾಗಿದೆ.

ವಿವಾದಾತ್ಮಕ ಈ ಮಸೂದೆ ಮೊದಲು ರಾಜ್ಯಸಭೆಯಲ್ಲಿ ಅಂಗೀಕಾರವಾಗಿತ್ತು. ಇದೀಗ ಮಸೂದೆಗೆ ರಾಷ್ಟ್ರಪತಿಗಳ ಸಹಿ ಮಾತ್ರ ಬಾಕಿ ಉಳಿದಿದೆ.

ಡಿಸೆಂಬರ್ 12ರಂದು ರಾಜ್ಯಸಭೆಯಲ್ಲಿ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ (ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿ) ಮಸೂದೆ, 2023 ಅಂಗೀಕಾರಗೊಂಡಿತ್ತು.

ಈ ಮಸೂದೆಯು ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ (EC)ಗಳ ನೇಮಕಾತಿ, ಸೇವಾ ಷರತ್ತುಗಳು ಮತ್ತು ಅಧಿಕಾರದ ಅವಧಿಯನ್ನು ನಿಯಂತ್ರಿಸುವ ಗುರಿಯನ್ನು ಹೊಂದಿದೆ. ಜೊತೆಗೆ ಚುನಾವಣಾ ಆಯೋಗದ ಕಾರ್ಯನಿರ್ವಹಣೆಯ ಕಾರ್ಯವಿಧಾನವನ್ನು ಇದು ವಿವರಿಸುತ್ತದೆ.

ಆ.10 ರಂದು ಈ ಮಸೂದೆಯನ್ನು ಇಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ರಾಜ್ಯ ಸಭೆಯಲ್ಲಿ ಮಂಡಿಸಿದ್ದರು. ಸಂಸತ್ತಿನ ಮೇಲ್ಮನೆಯಲ್ಲಿ ಚರ್ಚೆಯ ನಂತರ ಮಸೂದೆ ಅಂಗೀಕಾರಗೊಂಡಿತು. ಮಸೂದೆಯನ್ನು ವಿರೋಧಿಸಿ ಪ್ರತಿಪಕ್ಷಗಳು ಸದನತ್ಯಾಗ ಮಾಡಿದ್ದವು. ಮುಖ್ಯ ಚುನಾವಣಾ ಆಯುಕ್ತ ಮತ್ತು ಇತರ  ಚುನಾವಣಾ ಆಯುಕ್ತರನ್ನು ಆಯ್ಕೆ ಮಾಡುವ ಸಮಿತಿಯಿಂದ ಭಾರತದ ಮುಖ್ಯ ನ್ಯಾಯಾಧೀಶರನ್ನು ಕೈಬಿಟ್ಟಿರುವುದನ್ನು ಪ್ರತಿಪಕ್ಷಗಳು ವಿರೋಧಿಸಿದ್ದವು.

ಮಸೂದೆಯ ಪ್ರಮುಖ ನಿಬಂಧನೆಗಳು ಚುನಾವಣಾ ಆಯೋಗದ (ಚುನಾವಣಾ ಆಯುಕ್ತರ ಸೇವಾ ನಿಯಮಗಳು ಮತ್ತು ವ್ಯವಹಾರದ ವಹಿವಾಟು) ಕಾಯಿದೆ, 1991ನ್ನು ಬದಲಿಸಲಿದೆ. ಹೊಸ ಮಸೂದೆ ಮುಖ್ಯ ಚುನಾವಣಾ ಆಯುಕ್ತರು ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿ, ಸಂಬಳ ಮತ್ತು ವಜಾಗೊಳಿಸುವಿಕೆಯಂತಹ ಅಂಶಗಳನ್ನು ಒಳಗೊಂಡಿದೆ.

ಪ್ರಧಾನ ಮಂತ್ರಿ, ಕೇಂದ್ರ ಸಂಪುಟ ಸಚಿವರು, ವಿರೋಧ ಪಕ್ಷದ ನಾಯಕ ಅಥವಾ ಲೋಕಸಭೆಯ ಅತಿದೊಡ್ಡ ವಿರೋಧ ಪಕ್ಷದ ನಾಯಕರನ್ನು ಒಳಗೊಂಡಿರುವ ಆಯ್ಕೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ ರಾಷ್ಟ್ರಪತಿಗಳು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳನ್ನು ನೇಮಿಸಲಿದ್ದಾರೆ. ಪೂರ್ಣ ಸಮಿತಿಯ ಅನುಪಸ್ಥಿತಿಯಲ್ಲಿಯೂ ಈ ಸಮಿತಿಯ ಶಿಫಾರಸುಗಳು ಮಾನ್ಯವಾಗಿರುತ್ತವೆ. ಕಾನೂನು ಸಚಿವರ ನೇತೃತ್ವದ ಶೋಧನಾ ಸಮಿತಿಯು ಆಯ್ಕೆ ಸಮಿತಿಗೆ ಹೆಸರುಗಳನ್ನು ಪ್ರಸ್ತಾಪಿಸುತ್ತದೆ. ಅರ್ಹತಾ ಮಾನದಂಡಗಳೊಂದಿಗೆ ಅಭ್ಯರ್ಥಿಗಳು ಕೇಂದ್ರ ಸರ್ಕಾರದ ಕಾರ್ಯದರ್ಶಿಗೆ ಸಮಾನವಾದ ಸ್ಥಾನವನ್ನು ಹೊಂದಿರಬೇಕು. ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳಿಗೆ ವೇತನ ಮತ್ತು ಸೇವಾ ಷರತ್ತುಗಳನ್ನು ಸಂಪುಟ ಕಾರ್ಯದರ್ಶಿಗೆ ಸಮನಾಗಿ ಹೊಂದಿಸಲಾಗಿದೆ. ಇದು ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವೇತನಕ್ಕೆ ಸಮಾನಾಗಿ ಇದ್ದ ನಿಯಮವನ್ನು ಬದಲಿಸಲಿದೆ.

ಪ್ರಸ್ತಾವಿತ ಬದಲಾವಣೆಗಳು ಚುನಾವಣಾ ಆಯೋಗದ ಸ್ಥಾನಮಾನವನ್ನು ಕೆಳಮಟ್ಟಕ್ಕಿಳಿಸಲಿದೆ ಎಂದು ಪ್ರತಿಪಾದಿಸಿದ ಮಾಜಿ ಮುಖ್ಯ ಚುನಾವಣಾ ಆಯುಕ್ತರಗಳು ವೇತನ ಅಸಮಾನತೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ ನಂತರ, ಕೇಂದ್ರ ಸರ್ಕಾರವು ಮುಖ್ಯ ಚುನಾವಣಾ ಆಯುಕ್ತರು ಮತ್ತು ಚುನಾವಣಾ ಆಯುಕ್ತರುಗಳ ವೇತನ ಮತ್ತು ಸವಲತ್ತುಗಳನ್ನು ಸುಪ್ರೀಂ ಕೋರ್ಟ್‌ ನ್ಯಾಯಾಧೀಶರ ಮಟ್ಟದಲ್ಲಿ ಮುಂದುವರೆಸಲು ಮಸೂದೆಯಲ್ಲಿ ತಿದ್ದುಪಡಿ ಮಾಡಿದೆ.

ಆಯ್ಕೆ ಸಮಿತಿಯ ಭಾರತದ ಮುಖ್ಯ ನ್ಯಾಯಮೂರ್ತಿ ಹೊರಕ್ಕೆ!  

ಹೊಸ ಮಸೂದೆಯು ಭಾರತದ ಮುಖ್ಯ ನ್ಯಾಯಮೂರ್ತಿಗಳನ್ನು ಚುನಾವಣಾ ಆಯುಕ್ತರ ಆಯ್ಕೆ ಸಮಿತಿಯಿಂದ ಹೊರಗಿಡಲಿದೆ. ಈ ವರ್ಷದ ಮಾರ್ಚ್‌ನಲ್ಲಿ, ಸುಪ್ರೀಂ ಕೋರ್ಟ್‌ನ ಸಾಂವಿಧಾನಿಕ ಪೀಠವು ಸಂಸತ್ತು ಕಾನೂನು ರೂಪಿಸುವವರೆಗೆ ಚುನಾವಣಾ ಆಯುಕ್ತರನ್ನು ಪ್ರಧಾನಿ, ವಿರೋಧ ಪಕ್ಷದ ನಾಯಕ ಮತ್ತು ಮುಖ್ಯ ನ್ಯಾಯಾಧೀಶರನ್ನು ಒಳಗೊಂಡ ಸಮಿತಿ ಆಯ್ಕೆ ಮಾಡುತ್ತದೆ ಎಂದು ತೀರ್ಪು ನೀಡಿತ್ತು. ನ್ಯಾಯಮೂರ್ತಿ ಕೆಎಂ ಜೋಸೆಫ್ ನೇತೃತ್ವದ ಪೀಠವು ಚುನಾವಣಾ ಆಯುಕ್ತರ ಸ್ವಾತಂತ್ರ್ಯವನ್ನು ಖಚಿತಪಡಿಸಿಕೊಳ್ಳಲು ನಿರ್ದೇಶನ ನೀಡಿತ್ತು. ಈ ಬೆನ್ನಲ್ಲೇ ಕೇಂದ್ರ ಸರ್ಕಾರ ಮಸೂದೆ ಮಂಡಿಸಿ ಕಾನೂನು ರೂಪಿಸಲು ಮುಂದಾಗಿದೆ.

ಇದನ್ನು ಓದಿ: ಸಂಸತ್ತಿನ ಭದ್ರತಾ ಲೋಪ: ಕರ್ನಾಟಕದ ಮಾಜಿ ಪೊಲೀಸ್ ಅಧಿಕಾರಿಯೋರ್ವರ ಪುತ್ರ ಸೇರಿ ಮತ್ತಿಬ್ಬರ ಬಂಧನ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...