Homeಮುಖಪುಟನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

- Advertisement -
- Advertisement -

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ.

ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ ಓದಲಾದ 217ನೇ ವಿಧಿಯ ಅಡಿಯಲ್ಲಿ ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ನಿರ್ಣಯ ಮಂಡಿಸಲಾಗಿದೆ.

ಡಿಎಂಕೆ ನಾಯಕರಾದ ಟಿ.ಆರ್ ಬಾಲು ಮತ್ತು ಕನಿಮೊಳಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಎನ್‌ಸಿಪಿಎಸ್‌ಪಿಯ ಸುಪ್ರಿಯಾ ಸುಳೆ ಮುಂತಾದವರು ಪ್ರಸ್ತಾವನೆಗೆ ಸಹಿ ಹಾಕಿದ್ದಾರೆ.

‘ದುರ್ವರ್ತನೆ’ ಆಧಾರದ ಮೇಲೆ ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸಲು ಅರ್ಜಿಯಲ್ಲಿ ಕೋರಲಾಗಿದೆ. ನ್ಯಾಯಾಧೀಶರ ನಡವಳಿಕೆಯು ಅವರ ನಿಷ್ಪಕ್ಷಪಾತ, ಪಾರದರ್ಶಕತೆ ಮತ್ತು ಜಾತ್ಯತೀತ ಕಾರ್ಯನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಲಾಗಿದೆ. ನ್ಯಾಯಾಧೀಶರು ಹಿರಿಯ ವಕೀಲರು ಮತ್ತು ನಿರ್ದಿಷ್ಟ ಸಮುದಾಯದ ವಕೀಲರ ಬಗ್ಗೆ ‘ಪಕ್ಷಪಾತಿ ಧೋರಣೆ’ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ.

‘ನಿರ್ದಿಷ್ಟ ರಾಜಕೀಯ ಸಿದ್ಧಾಂತ’ದ ಆಧಾರದ ಮೇಲೆ ಮತ್ತು ಸಂವಿಧಾನದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿ ಪ್ರಕರಣಗಳನ್ನು ನಿರ್ಧರಿಸುವ ಕಾರಣಕ್ಕೆ ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸಬೇಕೆಂದು ಸಂಸದರು ಕೋರಿದ್ದಾರೆ.

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ದೇವಾಲಯದ ಭಕ್ತರು ದರ್ಗಾದ ಬಳಿಯ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದ ಮೇಲೆ ದೀಪ ಹಚ್ಚಲು ಅನುಮತಿ ನೀಡಿ ಕಳೆದ ವಾರ ಆದೇಶಿಸಿದ್ದರು. ಆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಗಮನಾರ್ಹವಾಗಿದೆ. ಸ್ವಾಮಿನಾಥನ್ ಪೀಠದ ಆದೇಶವನ್ನು ತಮಿಳುನಾಡು ಸರ್ಕಾರ ಜಾರಿಗೆ ತಂದಿಲ್ಲ. ಅದರ ವಿರುದ್ಧ ಮೇಲ್ಮನವಿ ಸಲ್ಲಿಸಿದೆ.

ಸ್ವಾಮಿನಾಥನ್ ಅವರ ಪದಚ್ಯುತಿ ಪ್ರಸ್ತಾವನೆಗೆ 107 ಸಂಸದರು ಸಹಿ ಹಾಕಿದ್ದಾರೆ. ಟಿ.ಆರ್‌ ಬಾಲು, ಎ. ರಾಜಾ, ಕನಿಮೋಳಿ, ಅಖಿಲೇಶ್ ಯಾದವ್, ಸುಪ್ರಿಯಾ ಸುಳೆ, ಅರವಿಂದ್ ಸಾವಂತ್, ಡಿಂಪಲ್ ಯಾದವ್, ಇಟಿ ಮುಹಮ್ಮದ್ ಬಶೀರ್, ಅಸಾದುದ್ದೀನ್ ಓವೈಸಿ, ಟಿಆರ್ ಬಾಲು, ದಯಾನಿಧಿ ಮಾರನ್, ಗೌರವ್ ಗೊಗೊಯ್, ಮಾಣಿಕಂ ಟ್ಯಾಗೋರ್, ತಿರುಮಾವಲವನ್ ಮುಂತಾದವರು ಸಹಿ ಹಾಕಿದ ಪ್ರಮುಖರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ನಿಧನ

ಬಾಂಗ್ಲಾದೇಶದ ಮೊದಲ ಮಹಿಳಾ ಪ್ರಧಾನಿ ಖಾಲಿದಾ ಝಿಯಾ ದೀರ್ಘಕಾಲದ ಅನಾರೋಗ್ಯದ ನಂತರ ಮಂಗಳವಾರ (ಡಿಸೆಂಬರ್ 30, 2025) ಬೆಳಗಿನ ಜಾವ ನಿಧನರಾದರು. ಅವರಿಗೆ 80 ವರ್ಷ ವಯಸ್ಸಾಗಿತ್ತು. ಖಾಲಿದಾ ಅವರು ಬಾಂಗ್ಲಾದೇಶದ ವಿರೋಧ ಪಕ್ಷ...

‘ಆತ ಗಲ್ಲಿಗೇರುವವರೆಗೆ ಹೋರಾಟ ಮುಂದುವರಿಸುತ್ತೇನೆ’ : ಸುಪ್ರೀಂ ಕೋರ್ಟ್ ಆದೇಶ ಸ್ವಾಗತಿಸಿದ ಉನ್ನಾವೋ ಅತ್ಯಾಚಾರ ಸಂತ್ರಸ್ತೆ

ಅಪರಾಧಿ ಕುಲದೀಪ್ ಸಿಂಗ್ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತಿಗೆ ತಡೆ ನೀಡಿರುವ ಸುಪ್ರೀಂ ಕೋರ್ಟ್‌ ಆದೇಶವನ್ನು ಉನ್ನಾವೋ ಅತ್ಯಾಚಾರ ಸಂತ್ರಸ್ತೆ ಸ್ವಾಗತಿಸಿದ್ದು, ಸೆಂಗಾರ್‌ ಗಲ್ಲಿಗೇರುವವರೆಗೆ ತನ್ನ ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿದ್ದಾರೆ. "ಈ...

ಅರಾವಳಿ ಬೆಟ್ಟ, ಶ್ರೇಣಿಗಳ ಮರು ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಹೊಸ ವ್ಯಾಖ್ಯಾನ ಕುರಿತು ನವೆಂಬರ್ 20ರಂದು ನಿವೃತ್ತ ಸಿಜೆಐ ಬಿ. ಆರ್ ಗವಾಯಿ ನೇತೃತ್ವದ ಪೀಠ ನೀಡಿದ ತೀರ್ಪಿನ ಅನುಷ್ಠಾನವನ್ನು ಮೂವರು ನ್ಯಾಯಾಧೀಶರ ಸುಪ್ರೀಂ ಕೋರ್ಟ್‌ನ ವಿಶೇಷ...

ತಮಿಳುನಾಡು: ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ಗಾಂಜಾ ವ್ಯಸನಿಗಳಿಂದ ಹಲ್ಲೆ; ಡಿಎಂಕೆಯನ್ನು ಟೀಕಿಸಿದ ಬಿಜೆಪಿ 

ತಮಿಳುನಾಡಿನ ತಿರುವಲ್ಲೂರು ಜಿಲ್ಲೆಯಲ್ಲಿ ವಲಸೆ ಕಾರ್ಮಿಕನ ಮೇಲೆ ನಾಲ್ವರು ಅಪ್ರಾಪ್ತ ವಯಸ್ಕರು ಹಲ್ಲೆ ನಡೆಸಿದ್ದು, ವಲಸೆ ಕಾರ್ಮಿಕ ತೀವ್ರವಾಗಿ ಗಾಯಗೊಂಡಿದ್ದಾರೆ. ಈ ಘಟನೆಯನ್ನು ಅಪ್ರಾಪ್ತ ವಯಸ್ಕರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದು, ಈ ಆಘಾತಕಾರಿ...

ಬಿಜೆಪಿ ಶಾಸಕ ಶರಣು ಸಲಗರ್ ಮೇಲೆ ಎಫ್ಐಆರ್: ಚುನಾವಣೆ ವೇಳೆ ₹99 ಲಕ್ಷ ಸಾಲ ಪಡೆದು ವಂಚನೆ ಆರೋಪ

ಬೀದರ್: 2023 ರ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಸಾಲವಾಗಿ ಪಡೆದಿದ್ದ ಹಣವನ್ನು ಹಿಂದಿರುಗಿಸಲು ವಿಫಲವಾದ ಆರೋಪದ ಮೇಲೆ 99 ಲಕ್ಷ ರೂ.ಗಳ ಚೆಕ್ ಅಮಾನ್ಯವಾದ ದೂರಿಗೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಶರಣು ಸಲಗರ್...

ಗಾಜಾದಲ್ಲಿ ನರಮೇಧ ಮುಂದುವರೆಸಿದ ಇಸ್ರೇಲ್: 80 ದಿನಗಳಲ್ಲಿ 969 ಬಾರಿ ಕದನ ವಿರಾಮ ಉಲ್ಲಂಘನೆ: 418ಜನರ ಹತ್ಯೆ

80 ದಿನಗಳ ಅವಧಿಯಲ್ಲಿ ಇಸ್ರೇಲ್ 969 ಬಾರಿ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದ್ದು, 418 ನಾಗರಿಕರು ಸಾವನ್ನಪ್ಪಿದ್ದಾರೆ ಮತ್ತು 1,141 ಜನರು ಗಾಯಗೊಂಡಿದ್ದಾರೆ ಎಂದು ಗಾಜಾದಲ್ಲಿರುವ ಸರ್ಕಾರಿ ಮಾಧ್ಯಮ ಕಚೇರಿ ತಿಳಿಸಿದೆ. ಭಾನುವಾರ ಬಿಡುಗಡೆ...

BREAKING NEWS: ಉನ್ನಾವೋ ಅತ್ಯಾಚಾರ: ಸೆಂಗಾರ್ ಜೀವಾವಧಿ ಶಿಕ್ಷೆ ಅಮಾನತುಗೊಳಿಸಿದ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

2017 ರ ಉನ್ನಾವೋ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಉಚ್ಚಾಟಿತ ಭಾರತೀಯ ಜನತಾ ಪಕ್ಷ (ಬಿಜೆಪಿ) ನಾಯಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿದ್ದ ದೆಹಲಿ ಹೈಕೋರ್ಟ್ ಆದೇಶವನ್ನು...

‘ಲವ್ ಜಿಹಾದ್’ ಆರೋಪ: ಬರೇಲಿಯಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಹಿಂಸಾಚಾರಕ್ಕೆ ತಿರುಗಿಸಿದ ಬಜರಂಗದಳ 

ಬರೇಲಿಯ ಕೆಫೆಯೊಂದರಲ್ಲಿ ನರ್ಸಿಂಗ್ ವಿದ್ಯಾರ್ಥಿನಿಯ ಹುಟ್ಟುಹಬ್ಬದ ಆಚರಣೆಯಾಗಿ ಆರಂಭವಾದ ಸಂಭ್ರಮ, ಶನಿವಾರ ಬಜರಂಗದಳ ಸದಸ್ಯರು ಸ್ಥಳಕ್ಕೆ ನುಗ್ಗಿ, ಅತಿಥಿಗಳ ಮೇಲೆ ಹಲ್ಲೆ ನಡೆಸಿ, ಅಲ್ಲಿದ್ದ ಇಬ್ಬರು ಮುಸ್ಲಿಂ ಹುಡುಗರನ್ನು "ಲವ್ ಜಿಹಾದ್" ಎಂದು...

ಉನ್ನಾವೋ ಅತ್ಯಾಚಾರ: ಕುಲದೀಪ್ ಸೆಂಗಾರ್ ಶಿಕ್ಷೆ ಅಮಾನತು ಪ್ರಶ್ನಿಸಿದ ಅರ್ಜಿ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ

ಉನ್ನಾವೋ ಅತ್ಯಾಚಾರ ಪ್ರಕರಣದ ಅಪರಾಧಿ, ಬಿಜೆಪಿ ಮಾಜಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೀವಾವಧಿ ಶಿಕ್ಷೆ ಅಮಾನತ್ತಿನಲ್ಲಿಟ್ಟಿರುವುದನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿರುವ ಅರ್ಜಿಯ ವಿಚಾರಣೆ ಇಂದು (ಡಿ.29) ಸುಪ್ರೀಂ ಕೋರ್ಟ್‌ನಲ್ಲಿ ನಡೆಯಲಿದೆ. ಮುಖ್ಯ ನ್ಯಾಯಮೂರ್ತಿ...

ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಬೆಂಕಿ : ಓರ್ವ ಪ್ರಯಾಣಿಕ ಸಾವು

ಆಂಧ್ರ ಪ್ರದೇಶದ ಅನಕಪಲ್ಲಿ ಜಿಲ್ಲೆಯ ಎಲಮಂಚಿಲಿ ಬಳಿ ಟಾಟಾನಗರ-ಎರ್ನಾಕುಲಂ ಎಕ್ಸ್‌ಪ್ರೆಸ್‌ ರೈಲಿನ ಎರಡು ಬೋಗಿಗಳಲ್ಲಿ ಸೋಮವಾರ (ಡಿ.29) ಮುಂಜಾನೆ ಬೆಂಕಿ ಕಾಣಿಸಿಕೊಂಡಿದ್ದು, ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಅನಕಪಲ್ಲಿ ಪೊಲೀಸ್ ವರಿಷ್ಠಾಧಿಕಾರಿ...