Homeಮುಖಪುಟನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

- Advertisement -
- Advertisement -

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ.

ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ ಓದಲಾದ 217ನೇ ವಿಧಿಯ ಅಡಿಯಲ್ಲಿ ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ನಿರ್ಣಯ ಮಂಡಿಸಲಾಗಿದೆ.

ಡಿಎಂಕೆ ನಾಯಕರಾದ ಟಿ.ಆರ್ ಬಾಲು ಮತ್ತು ಕನಿಮೊಳಿ, ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್, ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಎನ್‌ಸಿಪಿಎಸ್‌ಪಿಯ ಸುಪ್ರಿಯಾ ಸುಳೆ ಮುಂತಾದವರು ಪ್ರಸ್ತಾವನೆಗೆ ಸಹಿ ಹಾಕಿದ್ದಾರೆ.

‘ದುರ್ವರ್ತನೆ’ ಆಧಾರದ ಮೇಲೆ ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸಲು ಅರ್ಜಿಯಲ್ಲಿ ಕೋರಲಾಗಿದೆ. ನ್ಯಾಯಾಧೀಶರ ನಡವಳಿಕೆಯು ಅವರ ನಿಷ್ಪಕ್ಷಪಾತ, ಪಾರದರ್ಶಕತೆ ಮತ್ತು ಜಾತ್ಯತೀತ ಕಾರ್ಯನಿರ್ವಹಣೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ ಎಂದು ಹೇಳಲಾಗಿದೆ. ನ್ಯಾಯಾಧೀಶರು ಹಿರಿಯ ವಕೀಲರು ಮತ್ತು ನಿರ್ದಿಷ್ಟ ಸಮುದಾಯದ ವಕೀಲರ ಬಗ್ಗೆ ‘ಪಕ್ಷಪಾತಿ ಧೋರಣೆ’ ಹೊಂದಿದ್ದಾರೆ ಎಂದು ಆರೋಪಿಸಲಾಗಿದೆ.

‘ನಿರ್ದಿಷ್ಟ ರಾಜಕೀಯ ಸಿದ್ಧಾಂತ’ದ ಆಧಾರದ ಮೇಲೆ ಮತ್ತು ಸಂವಿಧಾನದ ಜಾತ್ಯತೀತ ತತ್ವಗಳಿಗೆ ವಿರುದ್ಧವಾಗಿ ಪ್ರಕರಣಗಳನ್ನು ನಿರ್ಧರಿಸುವ ಕಾರಣಕ್ಕೆ ನ್ಯಾಯಮೂರ್ತಿ ಸ್ವಾಮಿನಾಥನ್ ಅವರನ್ನು ಪದಚ್ಯುತಗೊಳಿಸಬೇಕೆಂದು ಸಂಸದರು ಕೋರಿದ್ದಾರೆ.

ನ್ಯಾಯಮೂರ್ತಿ ಸ್ವಾಮಿನಾಥನ್ ಅವರು ದೇವಾಲಯದ ಭಕ್ತರು ದರ್ಗಾದ ಬಳಿಯ ತಿರುಪ್ಪರಂಕುಂದ್ರಂ ಬೆಟ್ಟದ ಮೇಲಿರುವ ಕಲ್ಲಿನ ಕಂಬದ ಮೇಲೆ ದೀಪ ಹಚ್ಚಲು ಅನುಮತಿ ನೀಡಿ ಕಳೆದ ವಾರ ಆದೇಶಿಸಿದ್ದರು. ಆ ಬೆನ್ನಲ್ಲೇ ಈ ಬೆಳವಣಿಗೆ ನಡೆದಿರುವುದು ಗಮನಾರ್ಹವಾಗಿದೆ. ಸ್ವಾಮಿನಾಥನ್ ಪೀಠದ ಆದೇಶವನ್ನು ತಮಿಳುನಾಡು ಸರ್ಕಾರ ಜಾರಿಗೆ ತಂದಿಲ್ಲ. ಅದರ ವಿರುದ್ಧ ಮೇಲ್ಮನವಿ ಸಲ್ಲಿಸಿದೆ.

ಸ್ವಾಮಿನಾಥನ್ ಅವರ ಪದಚ್ಯುತಿ ಪ್ರಸ್ತಾವನೆಗೆ 107 ಸಂಸದರು ಸಹಿ ಹಾಕಿದ್ದಾರೆ. ಟಿ.ಆರ್‌ ಬಾಲು, ಎ. ರಾಜಾ, ಕನಿಮೋಳಿ, ಅಖಿಲೇಶ್ ಯಾದವ್, ಸುಪ್ರಿಯಾ ಸುಳೆ, ಅರವಿಂದ್ ಸಾವಂತ್, ಡಿಂಪಲ್ ಯಾದವ್, ಇಟಿ ಮುಹಮ್ಮದ್ ಬಶೀರ್, ಅಸಾದುದ್ದೀನ್ ಓವೈಸಿ, ಟಿಆರ್ ಬಾಲು, ದಯಾನಿಧಿ ಮಾರನ್, ಗೌರವ್ ಗೊಗೊಯ್, ಮಾಣಿಕಂ ಟ್ಯಾಗೋರ್, ತಿರುಮಾವಲವನ್ ಮುಂತಾದವರು ಸಹಿ ಹಾಕಿದ ಪ್ರಮುಖರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...