Homeಮುಖಪುಟವಿಪಕ್ಷಗಳಿಂದ ಇವಿಎಂ ಟ್ಯಾಂಪರಿಂಗ್ ಆರೋಪ; ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ಭುಗಿಲೆದ್ದ ಪ್ರತಿಭಟನೆ

ವಿಪಕ್ಷಗಳಿಂದ ಇವಿಎಂ ಟ್ಯಾಂಪರಿಂಗ್ ಆರೋಪ; ಮಹಾರಾಷ್ಟ್ರ ವಿಧಾನಸಭೆ ಅಧಿವೇಶನದಲ್ಲಿ ಭುಗಿಲೆದ್ದ ಪ್ರತಿಭಟನೆ

- Advertisement -
- Advertisement -

ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ ದಿನ, ಚುನಾವಣಾ ಅವ್ಯವಹಾರಗಳು ಮತ್ತು ಇವಿಎಂ ಟ್ಯಾಂಪರಿಂಗ್ ಆರೋಪದ ಮೇಲೆ ವಿರೋಧ ಪಕ್ಷದ ಸದಸ್ಯರಿಂದ ಪ್ರತಿಭಟನೆಗಳು ಕಂಡುಬಂದವು. ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ವಿಧಾನಸಭಾ ಕ್ಷೇತ್ರದ ಮರ್ಕಟ್ವಾಡಿ ಎಂಬ ಗ್ರಾಮವು ಚರ್ಚೆಯ ಕೇಂದ್ರಬಿಂದುವಾಯಿತು.

ಇವಿಎಂಗಳ ದುರುಪಯೋಗದ ಮೂಲಕ “ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗಿದೆ” ಎಂದು ಪ್ರತಿಪಕ್ಷಗಳು ಆರೋಪಿಸಿದ್ದು, ಮರ್ಕಟವಾಡಿ ಗ್ರಾಮದ ನಿವಾಸಿಗಳು ಮತಯಂತ್ರಗಳನ್ನು ಬಳಸಿಕೊಂಡು ಅಣಕು ಮರು ಮತದಾನಕ್ಕೆ ಒತ್ತಾಯಿಸಿದರು. ನಿಷೇಧಾಜ್ಞೆ ಉಲ್ಲಂಘಿಸಿದ ಮತ್ತು ಚುನಾವಣಾ ಪ್ರಕ್ರಿಯೆಯ ಬಗ್ಗೆ ಅಪನಂಬಿಕೆ ಹರಡಿದ್ದಕ್ಕಾಗಿ ಸೊಲ್ಲಾಪುರ ಪೊಲೀಸರು ಕನಿಷ್ಠ 200 ಜನರ ವಿರುದ್ಧ ಎಫ್‌ಐಆರ್ ದಾಖಲಿಸಿದ ನಂತರ ಡಿಸೆಂಬರ್ 3 ರಂದು ಯೋಜಿಸಲಾಗಿದ್ದ ಅಣಕು ಮತದಾನ ಕಾರ್ಯಕ್ರಮವನ್ನು ರದ್ದುಗೊಳಿಸಲಾಯಿತು.

ವಿಧಾನಸಭೆಯಲ್ಲಿ ಪ್ರತಿಭಟನೆಯ ನಡುವೆಯೇ ಪ್ರತಿಪಕ್ಷಗಳು ವಿಶೇಷ ಅಧಿವೇಶನವನ್ನು ಬಹಿಷ್ಕರಿಸಿದವು.

“ಇವಿಎಂಗಳ ದುರ್ಬಳಕೆಯಿಂದ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗಿದೆ; ಆದ್ದರಿಂದ, ಮರ್ಕಟವಾಡಿ ಗ್ರಾಮದ ಜನರು ಮತಯಂತ್ರಗಳನ್ನು ಬಳಸಿಕೊಂಡು ಅಣಕು ಮರು ಮತದಾನಕ್ಕೆ ಒತ್ತಾಯಿಸಿದ್ದಾರೆ” ಎಂದು ಎನ್‌ಸಿಪಿ (ಶರದ್ ಪವಾರ್ ಶಿಬಿರ) ಶಾಸಕ ಉತ್ತಮರಾವ್ ಜಂಕರ್ ಹೇಳಿದರು.

ಮಹಾ ವಿಕಾಸ್ ಅಘಾಡಿ (ಎಂವಿಎ) ಯ ಶಾಸಕ ಆದಿತ್ಯ ಠಾಕ್ರೆ ಸರ್ಕಾರವನ್ನು ಟೀಕಿಸಿ, “ಜನರಿಂದ ಆದೇಶವನ್ನು ನೀಡಲಾಗಿಲ್ಲ. ಆದರೆ, ಇವಿಎಂಗಳು ಮತ್ತು ಭಾರತದ ಚುನಾವಣಾ ಆಯೋಗದಿಂದ ನೀಡಲಾಗಿದೆ” ಎಂದು ಹೇಳಿದ್ದಾರೆ.

ಎನ್‌ಸಿಪಿ ನಾಯಕ ಶರದ್ ಪವಾರ್ ಮರ್ಕಟ್‌ವಾಡಿಗೆ ಭೇಟಿ ನೀಡಿ ಚುನಾವಣಾ ಫಲಿತಾಂಶದ ಬಗ್ಗೆ ಕಾಳಜಿ ಹೊಂದಿರುವ ಗ್ರಾಮಸ್ಥರನ್ನು ಭೇಟಿ ಮಾಡುವ ನಿರೀಕ್ಷೆಯಿದೆ. ಪಕ್ಷದ ರಾಜ್ಯ ಘಟಕದ ಪ್ರಕಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗ್ರಾಮದಿಂದ ಮೆರವಣಿಗೆಯನ್ನು ಮುನ್ನಡೆಸುವ ಸಾಧ್ಯತೆಯಿದೆ.

ಇವಿಎಂಗಳ ದುರ್ಬಳಕೆ ಆರೋಪಕ್ಕೆ ಪ್ರತಿಯಾಗಿ ಪ್ರತಿಪಕ್ಷಗಳು ಸರಣಿ ಪ್ರತಿಭಟನೆಗಳನ್ನು ಯೋಜಿಸಿವೆ. ಡಿಸೆಂಬರ್ 6 ರಂದು ಡಾ.ಬಿ.ಆರ್.ಅಂಬೇಡ್ಕರ್ ಅವರ ಪುಣ್ಯತಿಥಿಯ ಅಂಗವಾಗಿ ದಾದರ್‌ನ ಚೈತ್ಯಭೂಮಿಯಲ್ಲಿ ಮರ್ಕಟವಾಡಿಯಿಂದ ಸಾಂಕೇತಿಕವಾಗಿ ಉತ್ತಮರಾವ್ ಜಂಕರ್ ಮಣ್ಣನ್ನು ಅರ್ಪಿಸಿದರು. ಮಣ್ಣನ್ನು ದೆಹಲಿಯಲ್ಲಿರುವ ರಾಹುಲ್ ಗಾಂಧಿ ಬಳಿ ಕೊಂಡೊಯ್ಯಲು ನಿರ್ಧರಿಸಲಾಗಿದ್ದು, ಅಲ್ಲಿ ರಾಜ್‌ಘಾಟ್‌ನಲ್ಲಿ ಅರ್ಪಣೆ ಮಾಡಲಾಗುವುದು ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ನಾನಾ ಪಟೋಲೆ ತಿಳಿಸಿದ್ದಾರೆ.

ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಚುನಾವಣಾ ಅವ್ಯವಹಾರದ ಆರೋಪಗಳನ್ನು ತಳ್ಳಿಹಾಕಿದರು. ಅವುಗಳನ್ನು ‘ಅನ್ಯಾಯ’ ಎಂದು ಕರೆದರು. ಎಂವಿಎ 31 ಲೋಕಸಭಾ ಸ್ಥಾನಗಳನ್ನು ಗೆದ್ದಾಗ ಅವರು ಇವಿಎಂಗಳನ್ನು ಪ್ರಶ್ನಿಸಲಿಲ್ಲ. ಅವರು ಪ್ರತಿಭಟಿಸಲು ಸ್ವತಂತ್ರರು. ಆದರೆ, ಸದನದ ಕಲಾಪಗಳಲ್ಲಿ ಭಾಗವಹಿಸಲು ಪ್ರಮಾಣ ವಚನ ಸ್ವೀಕರಿಸಬೇಕು ಎಂದರು.

ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ಉಪಮುಖ್ಯಮಂತ್ರಿಗಳಾದ ಏಕನಾಥ್ ಶಿಂಧೆ ಮತ್ತು ಅಜಿತ್ ಪವಾರ್ ಅವರು ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸುವುದರೊಂದಿಗೆ ಮಹಾರಾಷ್ಟ್ರ ವಿಧಾನಸಭೆಯ ಅಧಿವೇಶನ ಪ್ರಾರಂಭವಾಯಿತು. ಹಂಗಾಮಿ ಸ್ಪೀಕರ್ ಕಾಳಿದಾಸ್ ಕೊಳಂಬ್ಕರ್ ಅವರು ಹೊಸದಾಗಿ ಆಯ್ಕೆಯಾದ 173 ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು. ಆದರೆ, ಬಹುತೇಕ ಪ್ರತಿಪಕ್ಷಗಳ 115 ಶಾಸಕರು ಇನ್ನೂ ಪ್ರಮಾಣ ವಚನ ಸ್ವೀಕರಿಸಿಲ್ಲ.

ಇದನ್ನೂ ಓದಿ; ಮಹಾರಾಷ್ಟ್ರ | ಬಾಬರಿ ಮಸೀದಿ ಧ್ವಂಸ ಸಮರ್ಥಿಸಿದ ಶಿವಸೇನೆ : ಎಂವಿಎ ಒಕ್ಕೂಟ ತೊರೆದ ಸಮಾಜವಾದಿ ಪಕ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...