Homeಮುಖಪುಟವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ -...

ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ – ಬಿಜೆಪಿ

ಕೃಷಿ ಕಾನೂನುಗಳು, ಎಪಿಎಂಸಿ ಕಾಯ್ದೆ ಖಾಸಗೀಕರಣದ ಪರವಾಗಿವೆ ಎಂಬುದನ್ನು ಒಪ್ಪಿಕೊಂಡ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್?

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ನಾಳೆಗೆ ಭಾರತ್ ಬಂದ್‌ಗೆ ಎಲ್ಲಾ ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಈ ನಿಲುವನ್ನು ಖಂಡಿಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ “ಈಗ ಎನ್‌ಡಿಎ ಸರ್ಕಾರ ಯಾವ ಕಾನೂನುಗಳನ್ನು ಅಂಗೀಕರಿಸಿದೆಯೇ ಅವೆಲ್ಲವನ್ನು ಸಹ ಯುಪಿಎ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಲು ಬಯಸಿದ್ದರು. ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಖಾಸಗೀಕರಣದ ಪರವಾಗಿತ್ತು. ಈಗ ಅವರೆಲ್ಲಾ ಈ ಕಾನೂನುಗಳನ್ನು ವಿರೋಧಿಸುವುದು ಅವರ ಇಬ್ಬಂದಿತನ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಪಿಎಂಸಿ ಕಾಯ್ದೆಯು 2019ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗಲೇ ಹಲವು ರಾಜ್ಯಗಳು ಗುತ್ತಿಗೆ ಕೃಷಿ ಪದ್ದತಿಗೆ ಅನುಮೋದನೆ ನೀಡಿವೆ. ಆದರೆ ಈಗ ಮಾತ್ರ ಅವರು ನಮ್ಮ ಕಾನೂನುಗಳನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳುವ ಮೂಲಕ ತಾವು ತಂದಿರುವ ಕಾಯ್ದೆಗಳು ಖಾಸಗೀಕರಣದ ಪರವಾಗಿವೆ ಎಂದು ಕೇಂದ್ರ ಸಚಿವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಎಪಿಎಂಸಿ ಕಾಯ್ದೆಯನ್ನು ಮರುತರುವುದಾಗಿ ಮತ್ತು ಯಾವುದೇ ಅಡೆತಡೆಯಿಲ್ಲದ ಅಂತರ್‌ರಾಜ್ಯ ವ್ಯಾಪಾರಕ್ಕೆ ಅವಕಾಶ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಬರೆದಿದೆ ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಎಪಿಎಂಸಿ ಕಾಯ್ದೆ ಆರು ತಿಂಗಳಲ್ಲಿ ಕೊನೆಗೊಳ್ಳಲಿದೆ… ಕೇಂದ್ರ ಸರ್ಕಾರವು ಯೋಜನಾ ಆಯೋಗದ ಶಿಫಾರಸ್ಸಿನ ಮೇರೆ ಅಂತರ ರಾಜ್ಯ ಕೃಷಿ ವ್ಯಾಪಾರ ಕಾಯ್ದೆಯನ್ನು ಜಾರಿಗೆ ತರಬಹುದು ಎಂದು ಯುಪಿಎ ಸರ್ಕಾರದ ಅವಧಿಯಲ್ಲಿ ಶರದ್ ಪವಾರ್ ಹೇಳಿದ್ದರು. ಈ ಸುಧಾರಣೆಗಳನ್ನು ಒಪ್ಪಿಕೊಳ್ಳದಿದ್ದರೆ ಅನುದಾನ ನೀಡಲಾಗುವುದಿಲ್ಲ ಎಂದು ಅವರು ಹೇಳುತ್ತಿದ್ದಾಗ ಎಸ್‌ಪಿ, ಟಿಡಿಪಿ, ಎಡಪಂಥೀಯರೆಲ್ಲರೂ ಮನಮೋಹನ್ ಸರ್ಕಾರವನ್ನು ಬೆಂಬಲಿಸುತ್ತಿದ್ದರು. ಇದು ಇಮ್ಮ ದ್ವಿಮುಖ ನೀತಿ. ನೀವು ಯಾವ ಮಿತಿಗೂ ಹೋಗಲು ಸಿದ್ದರಿರುವರು ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರದಿಂದ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ತೆಲಂಗಾಣ ರಾಷ್ಟ್ರ ಸಮಿತಿ, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಶಿರೋಮಣಿ ಅಕಾಲಿ ದಳ, ಎನ್.ಸಿ.ಪಿ, ಆರ್.ಜೆ.ಡಿ, ಡಿಎಂಕೆ, ಸಮಾಜವಾದಿ ಪಕ್ಷ, ಬಿಎಸ್‌ಪಿ ಸೇರಿ ಹಲವು ವಿರೋಧ ಪಕ್ಷಗಳು ರೈತರ ಭಾರತ್ ಬಂದ್‌ಗೆ ಬೇಷರತ್ ಬೆಂಬಲ ವ್ಯಕ್ತಪಡಿಸಿವೆ. ಆದಾಗಿನಿಂದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಮೇಲೆ ಮುಗಿಬಿದ್ದಿದೆ.

2022ರ ವೇಳೆಗೆ ರೈತರ ಆದಾಯ ಡಬಲ್ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಆದರೆ ಈಗ ಅದರ ಬದಲು ಮೂರು ಕಾಯ್ದೆಗಳನ್ನು ಜಾರಿಗೊಳಿಸಿದ್ದಾರೆ. ಆರಂಭದಿಂದಲು ಈ ಕಾಯ್ದೆ ರೈತರ ಒಳಿತಿಗಾಗಿ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಮೋದಿ ಸರ್ಕಾರ ಯಾವುದೇ ರೈತರೊಂದಿಗೆ ಚರ್ಚಿಸದೇ ಸುಗ್ರೀವಾಜ್ಞೆಗಳ ಮೂಲಕ ಈ ಕಾನೂನುಗಳನ್ನು ತಂದಿದ್ದಲ್ಲದೇ ವಿರೋಧ ಪಕ್ಷಗಳ ಮತ್ತು ರೈತರ ಭಾರೀ ವಿರೋಧದ ನಡುವೆಯೂ ಚರ್ಚೆ ನಡೆಸದೆ ಅಂಗೀಕರಿಸಿದೆ.

ಇನ್ನು ಆರಂಭದಲ್ಲಿ ರೈತರು ಈ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಆರಂಭಿಸಿದಾಗ ಅವರನ್ನು ಖಾಲಿಸ್ತಾನ್‌ಗಳು, ಭಯೋತ್ಪಾದಕರು ಎಂದು ಬಿಂಬಿಸಿದ್ದಲ್ಲದೇ ಅವರ ಮೇಲೆ ಲಾಠೀ ಪ್ರಹಾರ, ಟಿಯರ್ ಗ್ಯಾಸ್, ಜಲಫಿರಂಗಿಗಳನ್ನು ಪ್ರಯೋಗ ಮಾಡಿ ಹೋರಾಟ ಹತ್ತಿಕ್ಕಲು ಯತ್ನಿಸಿತು. ಆದರೆ ರೈತರು ಎದೆಗುಂದದೆ ದಿಟ್ಟ ಹೋರಾಟ ನಡೆಸಿದ ನಂತರ ಅನಿವಾರ್ಯವಾಗಿ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸುತ್ತಿದೆ. ಇನ್ನೊಂದು ಕಡೆ ವಿರೋಧ ಪಕ್ಷಗಳು ರೈತರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎನ್ನುತ್ತಿದ್ದ ಕೇಂದ್ರ ಈಗ ರೈತರು ಬಗ್ಗದೇ ಇರುವುದರಿಂದ ಮತ್ತ ವಿರೋಧ ಪಕ್ಷಗಳ ಮೇಲೆ ದಾಳಿ ನಡೆಸುತ್ತಿದೆ. ಅವರೂ ಖಾಸಗೀಕರಣದ ಪರವಾಗಿದ್ದರು ಎನ್ನುವ ನೆಪ ನೀಡುವ ಮೂಲಕ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ. ಇದಕ್ಕೆ ರೈತರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...