Homeಮುಖಪುಟವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ -...

ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ – ಬಿಜೆಪಿ

ಕೃಷಿ ಕಾನೂನುಗಳು, ಎಪಿಎಂಸಿ ಕಾಯ್ದೆ ಖಾಸಗೀಕರಣದ ಪರವಾಗಿವೆ ಎಂಬುದನ್ನು ಒಪ್ಪಿಕೊಂಡ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್?

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ನಾಳೆಗೆ ಭಾರತ್ ಬಂದ್‌ಗೆ ಎಲ್ಲಾ ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಈ ನಿಲುವನ್ನು ಖಂಡಿಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ “ಈಗ ಎನ್‌ಡಿಎ ಸರ್ಕಾರ ಯಾವ ಕಾನೂನುಗಳನ್ನು ಅಂಗೀಕರಿಸಿದೆಯೇ ಅವೆಲ್ಲವನ್ನು ಸಹ ಯುಪಿಎ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಲು ಬಯಸಿದ್ದರು. ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಖಾಸಗೀಕರಣದ ಪರವಾಗಿತ್ತು. ಈಗ ಅವರೆಲ್ಲಾ ಈ ಕಾನೂನುಗಳನ್ನು ವಿರೋಧಿಸುವುದು ಅವರ ಇಬ್ಬಂದಿತನ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಪಿಎಂಸಿ ಕಾಯ್ದೆಯು 2019ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗಲೇ ಹಲವು ರಾಜ್ಯಗಳು ಗುತ್ತಿಗೆ ಕೃಷಿ ಪದ್ದತಿಗೆ ಅನುಮೋದನೆ ನೀಡಿವೆ. ಆದರೆ ಈಗ ಮಾತ್ರ ಅವರು ನಮ್ಮ ಕಾನೂನುಗಳನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳುವ ಮೂಲಕ ತಾವು ತಂದಿರುವ ಕಾಯ್ದೆಗಳು ಖಾಸಗೀಕರಣದ ಪರವಾಗಿವೆ ಎಂದು ಕೇಂದ್ರ ಸಚಿವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಎಪಿಎಂಸಿ ಕಾಯ್ದೆಯನ್ನು ಮರುತರುವುದಾಗಿ ಮತ್ತು ಯಾವುದೇ ಅಡೆತಡೆಯಿಲ್ಲದ ಅಂತರ್‌ರಾಜ್ಯ ವ್ಯಾಪಾರಕ್ಕೆ ಅವಕಾಶ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಬರೆದಿದೆ ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಎಪಿಎಂಸಿ ಕಾಯ್ದೆ ಆರು ತಿಂಗಳಲ್ಲಿ ಕೊನೆಗೊಳ್ಳಲಿದೆ… ಕೇಂದ್ರ ಸರ್ಕಾರವು ಯೋಜನಾ ಆಯೋಗದ ಶಿಫಾರಸ್ಸಿನ ಮೇರೆ ಅಂತರ ರಾಜ್ಯ ಕೃಷಿ ವ್ಯಾಪಾರ ಕಾಯ್ದೆಯನ್ನು ಜಾರಿಗೆ ತರಬಹುದು ಎಂದು ಯುಪಿಎ ಸರ್ಕಾರದ ಅವಧಿಯಲ್ಲಿ ಶರದ್ ಪವಾರ್ ಹೇಳಿದ್ದರು. ಈ ಸುಧಾರಣೆಗಳನ್ನು ಒಪ್ಪಿಕೊಳ್ಳದಿದ್ದರೆ ಅನುದಾನ ನೀಡಲಾಗುವುದಿಲ್ಲ ಎಂದು ಅವರು ಹೇಳುತ್ತಿದ್ದಾಗ ಎಸ್‌ಪಿ, ಟಿಡಿಪಿ, ಎಡಪಂಥೀಯರೆಲ್ಲರೂ ಮನಮೋಹನ್ ಸರ್ಕಾರವನ್ನು ಬೆಂಬಲಿಸುತ್ತಿದ್ದರು. ಇದು ಇಮ್ಮ ದ್ವಿಮುಖ ನೀತಿ. ನೀವು ಯಾವ ಮಿತಿಗೂ ಹೋಗಲು ಸಿದ್ದರಿರುವರು ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರದಿಂದ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ತೆಲಂಗಾಣ ರಾಷ್ಟ್ರ ಸಮಿತಿ, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಶಿರೋಮಣಿ ಅಕಾಲಿ ದಳ, ಎನ್.ಸಿ.ಪಿ, ಆರ್.ಜೆ.ಡಿ, ಡಿಎಂಕೆ, ಸಮಾಜವಾದಿ ಪಕ್ಷ, ಬಿಎಸ್‌ಪಿ ಸೇರಿ ಹಲವು ವಿರೋಧ ಪಕ್ಷಗಳು ರೈತರ ಭಾರತ್ ಬಂದ್‌ಗೆ ಬೇಷರತ್ ಬೆಂಬಲ ವ್ಯಕ್ತಪಡಿಸಿವೆ. ಆದಾಗಿನಿಂದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಮೇಲೆ ಮುಗಿಬಿದ್ದಿದೆ.

2022ರ ವೇಳೆಗೆ ರೈತರ ಆದಾಯ ಡಬಲ್ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಆದರೆ ಈಗ ಅದರ ಬದಲು ಮೂರು ಕಾಯ್ದೆಗಳನ್ನು ಜಾರಿಗೊಳಿಸಿದ್ದಾರೆ. ಆರಂಭದಿಂದಲು ಈ ಕಾಯ್ದೆ ರೈತರ ಒಳಿತಿಗಾಗಿ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಮೋದಿ ಸರ್ಕಾರ ಯಾವುದೇ ರೈತರೊಂದಿಗೆ ಚರ್ಚಿಸದೇ ಸುಗ್ರೀವಾಜ್ಞೆಗಳ ಮೂಲಕ ಈ ಕಾನೂನುಗಳನ್ನು ತಂದಿದ್ದಲ್ಲದೇ ವಿರೋಧ ಪಕ್ಷಗಳ ಮತ್ತು ರೈತರ ಭಾರೀ ವಿರೋಧದ ನಡುವೆಯೂ ಚರ್ಚೆ ನಡೆಸದೆ ಅಂಗೀಕರಿಸಿದೆ.

ಇನ್ನು ಆರಂಭದಲ್ಲಿ ರೈತರು ಈ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಆರಂಭಿಸಿದಾಗ ಅವರನ್ನು ಖಾಲಿಸ್ತಾನ್‌ಗಳು, ಭಯೋತ್ಪಾದಕರು ಎಂದು ಬಿಂಬಿಸಿದ್ದಲ್ಲದೇ ಅವರ ಮೇಲೆ ಲಾಠೀ ಪ್ರಹಾರ, ಟಿಯರ್ ಗ್ಯಾಸ್, ಜಲಫಿರಂಗಿಗಳನ್ನು ಪ್ರಯೋಗ ಮಾಡಿ ಹೋರಾಟ ಹತ್ತಿಕ್ಕಲು ಯತ್ನಿಸಿತು. ಆದರೆ ರೈತರು ಎದೆಗುಂದದೆ ದಿಟ್ಟ ಹೋರಾಟ ನಡೆಸಿದ ನಂತರ ಅನಿವಾರ್ಯವಾಗಿ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸುತ್ತಿದೆ. ಇನ್ನೊಂದು ಕಡೆ ವಿರೋಧ ಪಕ್ಷಗಳು ರೈತರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎನ್ನುತ್ತಿದ್ದ ಕೇಂದ್ರ ಈಗ ರೈತರು ಬಗ್ಗದೇ ಇರುವುದರಿಂದ ಮತ್ತ ವಿರೋಧ ಪಕ್ಷಗಳ ಮೇಲೆ ದಾಳಿ ನಡೆಸುತ್ತಿದೆ. ಅವರೂ ಖಾಸಗೀಕರಣದ ಪರವಾಗಿದ್ದರು ಎನ್ನುವ ನೆಪ ನೀಡುವ ಮೂಲಕ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ. ಇದಕ್ಕೆ ರೈತರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...