Homeಮುಖಪುಟವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ -...

ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ – ಬಿಜೆಪಿ

ಕೃಷಿ ಕಾನೂನುಗಳು, ಎಪಿಎಂಸಿ ಕಾಯ್ದೆ ಖಾಸಗೀಕರಣದ ಪರವಾಗಿವೆ ಎಂಬುದನ್ನು ಒಪ್ಪಿಕೊಂಡ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್?

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ನಾಳೆಗೆ ಭಾರತ್ ಬಂದ್‌ಗೆ ಎಲ್ಲಾ ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಈ ನಿಲುವನ್ನು ಖಂಡಿಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ “ಈಗ ಎನ್‌ಡಿಎ ಸರ್ಕಾರ ಯಾವ ಕಾನೂನುಗಳನ್ನು ಅಂಗೀಕರಿಸಿದೆಯೇ ಅವೆಲ್ಲವನ್ನು ಸಹ ಯುಪಿಎ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಲು ಬಯಸಿದ್ದರು. ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಖಾಸಗೀಕರಣದ ಪರವಾಗಿತ್ತು. ಈಗ ಅವರೆಲ್ಲಾ ಈ ಕಾನೂನುಗಳನ್ನು ವಿರೋಧಿಸುವುದು ಅವರ ಇಬ್ಬಂದಿತನ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಪಿಎಂಸಿ ಕಾಯ್ದೆಯು 2019ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗಲೇ ಹಲವು ರಾಜ್ಯಗಳು ಗುತ್ತಿಗೆ ಕೃಷಿ ಪದ್ದತಿಗೆ ಅನುಮೋದನೆ ನೀಡಿವೆ. ಆದರೆ ಈಗ ಮಾತ್ರ ಅವರು ನಮ್ಮ ಕಾನೂನುಗಳನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳುವ ಮೂಲಕ ತಾವು ತಂದಿರುವ ಕಾಯ್ದೆಗಳು ಖಾಸಗೀಕರಣದ ಪರವಾಗಿವೆ ಎಂದು ಕೇಂದ್ರ ಸಚಿವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಎಪಿಎಂಸಿ ಕಾಯ್ದೆಯನ್ನು ಮರುತರುವುದಾಗಿ ಮತ್ತು ಯಾವುದೇ ಅಡೆತಡೆಯಿಲ್ಲದ ಅಂತರ್‌ರಾಜ್ಯ ವ್ಯಾಪಾರಕ್ಕೆ ಅವಕಾಶ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಬರೆದಿದೆ ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಎಪಿಎಂಸಿ ಕಾಯ್ದೆ ಆರು ತಿಂಗಳಲ್ಲಿ ಕೊನೆಗೊಳ್ಳಲಿದೆ… ಕೇಂದ್ರ ಸರ್ಕಾರವು ಯೋಜನಾ ಆಯೋಗದ ಶಿಫಾರಸ್ಸಿನ ಮೇರೆ ಅಂತರ ರಾಜ್ಯ ಕೃಷಿ ವ್ಯಾಪಾರ ಕಾಯ್ದೆಯನ್ನು ಜಾರಿಗೆ ತರಬಹುದು ಎಂದು ಯುಪಿಎ ಸರ್ಕಾರದ ಅವಧಿಯಲ್ಲಿ ಶರದ್ ಪವಾರ್ ಹೇಳಿದ್ದರು. ಈ ಸುಧಾರಣೆಗಳನ್ನು ಒಪ್ಪಿಕೊಳ್ಳದಿದ್ದರೆ ಅನುದಾನ ನೀಡಲಾಗುವುದಿಲ್ಲ ಎಂದು ಅವರು ಹೇಳುತ್ತಿದ್ದಾಗ ಎಸ್‌ಪಿ, ಟಿಡಿಪಿ, ಎಡಪಂಥೀಯರೆಲ್ಲರೂ ಮನಮೋಹನ್ ಸರ್ಕಾರವನ್ನು ಬೆಂಬಲಿಸುತ್ತಿದ್ದರು. ಇದು ಇಮ್ಮ ದ್ವಿಮುಖ ನೀತಿ. ನೀವು ಯಾವ ಮಿತಿಗೂ ಹೋಗಲು ಸಿದ್ದರಿರುವರು ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರದಿಂದ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ತೆಲಂಗಾಣ ರಾಷ್ಟ್ರ ಸಮಿತಿ, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಶಿರೋಮಣಿ ಅಕಾಲಿ ದಳ, ಎನ್.ಸಿ.ಪಿ, ಆರ್.ಜೆ.ಡಿ, ಡಿಎಂಕೆ, ಸಮಾಜವಾದಿ ಪಕ್ಷ, ಬಿಎಸ್‌ಪಿ ಸೇರಿ ಹಲವು ವಿರೋಧ ಪಕ್ಷಗಳು ರೈತರ ಭಾರತ್ ಬಂದ್‌ಗೆ ಬೇಷರತ್ ಬೆಂಬಲ ವ್ಯಕ್ತಪಡಿಸಿವೆ. ಆದಾಗಿನಿಂದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಮೇಲೆ ಮುಗಿಬಿದ್ದಿದೆ.

2022ರ ವೇಳೆಗೆ ರೈತರ ಆದಾಯ ಡಬಲ್ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಆದರೆ ಈಗ ಅದರ ಬದಲು ಮೂರು ಕಾಯ್ದೆಗಳನ್ನು ಜಾರಿಗೊಳಿಸಿದ್ದಾರೆ. ಆರಂಭದಿಂದಲು ಈ ಕಾಯ್ದೆ ರೈತರ ಒಳಿತಿಗಾಗಿ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಮೋದಿ ಸರ್ಕಾರ ಯಾವುದೇ ರೈತರೊಂದಿಗೆ ಚರ್ಚಿಸದೇ ಸುಗ್ರೀವಾಜ್ಞೆಗಳ ಮೂಲಕ ಈ ಕಾನೂನುಗಳನ್ನು ತಂದಿದ್ದಲ್ಲದೇ ವಿರೋಧ ಪಕ್ಷಗಳ ಮತ್ತು ರೈತರ ಭಾರೀ ವಿರೋಧದ ನಡುವೆಯೂ ಚರ್ಚೆ ನಡೆಸದೆ ಅಂಗೀಕರಿಸಿದೆ.

ಇನ್ನು ಆರಂಭದಲ್ಲಿ ರೈತರು ಈ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಆರಂಭಿಸಿದಾಗ ಅವರನ್ನು ಖಾಲಿಸ್ತಾನ್‌ಗಳು, ಭಯೋತ್ಪಾದಕರು ಎಂದು ಬಿಂಬಿಸಿದ್ದಲ್ಲದೇ ಅವರ ಮೇಲೆ ಲಾಠೀ ಪ್ರಹಾರ, ಟಿಯರ್ ಗ್ಯಾಸ್, ಜಲಫಿರಂಗಿಗಳನ್ನು ಪ್ರಯೋಗ ಮಾಡಿ ಹೋರಾಟ ಹತ್ತಿಕ್ಕಲು ಯತ್ನಿಸಿತು. ಆದರೆ ರೈತರು ಎದೆಗುಂದದೆ ದಿಟ್ಟ ಹೋರಾಟ ನಡೆಸಿದ ನಂತರ ಅನಿವಾರ್ಯವಾಗಿ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸುತ್ತಿದೆ. ಇನ್ನೊಂದು ಕಡೆ ವಿರೋಧ ಪಕ್ಷಗಳು ರೈತರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎನ್ನುತ್ತಿದ್ದ ಕೇಂದ್ರ ಈಗ ರೈತರು ಬಗ್ಗದೇ ಇರುವುದರಿಂದ ಮತ್ತ ವಿರೋಧ ಪಕ್ಷಗಳ ಮೇಲೆ ದಾಳಿ ನಡೆಸುತ್ತಿದೆ. ಅವರೂ ಖಾಸಗೀಕರಣದ ಪರವಾಗಿದ್ದರು ಎನ್ನುವ ನೆಪ ನೀಡುವ ಮೂಲಕ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ. ಇದಕ್ಕೆ ರೈತರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...