Homeಮುಖಪುಟವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ -...

ವಿರೋಧ ಪಕ್ಷಗಳು ಸಹ ಇದೇ ಕೃಷಿ ಕಾನೂನು ತರಬಯಸಿದ್ದವು, ಈಗ ವಿರೋಧಿಸುವುದು ಅವರ ಇಬ್ಬಂದಿತನ – ಬಿಜೆಪಿ

ಕೃಷಿ ಕಾನೂನುಗಳು, ಎಪಿಎಂಸಿ ಕಾಯ್ದೆ ಖಾಸಗೀಕರಣದ ಪರವಾಗಿವೆ ಎಂಬುದನ್ನು ಒಪ್ಪಿಕೊಂಡ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್?

- Advertisement -
- Advertisement -

ವಿವಾದಾತ್ಮಕ ಕೃಷಿ ಕಾನೂನುಗಳನ್ನು ವಿರೋಧಿಸಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ನಾಳೆಗೆ ಭಾರತ್ ಬಂದ್‌ಗೆ ಎಲ್ಲಾ ವಿರೋಧ ಪಕ್ಷಗಳು ಬೆಂಬಲ ನೀಡಿವೆ. ಈ ನಿಲುವನ್ನು ಖಂಡಿಸಿರುವ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ “ಈಗ ಎನ್‌ಡಿಎ ಸರ್ಕಾರ ಯಾವ ಕಾನೂನುಗಳನ್ನು ಅಂಗೀಕರಿಸಿದೆಯೇ ಅವೆಲ್ಲವನ್ನು ಸಹ ಯುಪಿಎ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಲು ಬಯಸಿದ್ದರು. ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಖಾಸಗೀಕರಣದ ಪರವಾಗಿತ್ತು. ಈಗ ಅವರೆಲ್ಲಾ ಈ ಕಾನೂನುಗಳನ್ನು ವಿರೋಧಿಸುವುದು ಅವರ ಇಬ್ಬಂದಿತನ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಪಿಎಂಸಿ ಕಾಯ್ದೆಯು 2019ರ ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪ್ರಣಾಳಿಕೆಯಲ್ಲಿತ್ತು. ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗಲೇ ಹಲವು ರಾಜ್ಯಗಳು ಗುತ್ತಿಗೆ ಕೃಷಿ ಪದ್ದತಿಗೆ ಅನುಮೋದನೆ ನೀಡಿವೆ. ಆದರೆ ಈಗ ಮಾತ್ರ ಅವರು ನಮ್ಮ ಕಾನೂನುಗಳನ್ನು ವಿರೋಧಿಸುತ್ತಿದ್ದಾರೆ ಎಂದು ಹೇಳುವ ಮೂಲಕ ತಾವು ತಂದಿರುವ ಕಾಯ್ದೆಗಳು ಖಾಸಗೀಕರಣದ ಪರವಾಗಿವೆ ಎಂದು ಕೇಂದ್ರ ಸಚಿವರು ಪರೋಕ್ಷವಾಗಿ ಒಪ್ಪಿಕೊಂಡಿದ್ದಾರೆ.

ಎಪಿಎಂಸಿ ಕಾಯ್ದೆಯನ್ನು ಮರುತರುವುದಾಗಿ ಮತ್ತು ಯಾವುದೇ ಅಡೆತಡೆಯಿಲ್ಲದ ಅಂತರ್‌ರಾಜ್ಯ ವ್ಯಾಪಾರಕ್ಕೆ ಅವಕಾಶ ನೀಡುವುದಾಗಿ ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಬರೆದಿದೆ ಎಂದು ರವಿಶಂಕರ್ ಪ್ರಸಾದ್ ತಿಳಿಸಿದ್ದಾರೆ.

ಎಪಿಎಂಸಿ ಕಾಯ್ದೆ ಆರು ತಿಂಗಳಲ್ಲಿ ಕೊನೆಗೊಳ್ಳಲಿದೆ… ಕೇಂದ್ರ ಸರ್ಕಾರವು ಯೋಜನಾ ಆಯೋಗದ ಶಿಫಾರಸ್ಸಿನ ಮೇರೆ ಅಂತರ ರಾಜ್ಯ ಕೃಷಿ ವ್ಯಾಪಾರ ಕಾಯ್ದೆಯನ್ನು ಜಾರಿಗೆ ತರಬಹುದು ಎಂದು ಯುಪಿಎ ಸರ್ಕಾರದ ಅವಧಿಯಲ್ಲಿ ಶರದ್ ಪವಾರ್ ಹೇಳಿದ್ದರು. ಈ ಸುಧಾರಣೆಗಳನ್ನು ಒಪ್ಪಿಕೊಳ್ಳದಿದ್ದರೆ ಅನುದಾನ ನೀಡಲಾಗುವುದಿಲ್ಲ ಎಂದು ಅವರು ಹೇಳುತ್ತಿದ್ದಾಗ ಎಸ್‌ಪಿ, ಟಿಡಿಪಿ, ಎಡಪಂಥೀಯರೆಲ್ಲರೂ ಮನಮೋಹನ್ ಸರ್ಕಾರವನ್ನು ಬೆಂಬಲಿಸುತ್ತಿದ್ದರು. ಇದು ಇಮ್ಮ ದ್ವಿಮುಖ ನೀತಿ. ನೀವು ಯಾವ ಮಿತಿಗೂ ಹೋಗಲು ಸಿದ್ದರಿರುವರು ಎಂದು ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾನುವಾರದಿಂದ ಕಾಂಗ್ರೆಸ್, ಆಮ್ ಆದ್ಮಿ ಪಕ್ಷ, ತೆಲಂಗಾಣ ರಾಷ್ಟ್ರ ಸಮಿತಿ, ತೃಣಮೂಲ ಕಾಂಗ್ರೆಸ್, ಸಿಪಿಐ, ಸಿಪಿಐ(ಎಂ), ಶಿರೋಮಣಿ ಅಕಾಲಿ ದಳ, ಎನ್.ಸಿ.ಪಿ, ಆರ್.ಜೆ.ಡಿ, ಡಿಎಂಕೆ, ಸಮಾಜವಾದಿ ಪಕ್ಷ, ಬಿಎಸ್‌ಪಿ ಸೇರಿ ಹಲವು ವಿರೋಧ ಪಕ್ಷಗಳು ರೈತರ ಭಾರತ್ ಬಂದ್‌ಗೆ ಬೇಷರತ್ ಬೆಂಬಲ ವ್ಯಕ್ತಪಡಿಸಿವೆ. ಆದಾಗಿನಿಂದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ವಿರೋಧ ಪಕ್ಷಗಳ ಮೇಲೆ ಮುಗಿಬಿದ್ದಿದೆ.

2022ರ ವೇಳೆಗೆ ರೈತರ ಆದಾಯ ಡಬಲ್ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಆದರೆ ಈಗ ಅದರ ಬದಲು ಮೂರು ಕಾಯ್ದೆಗಳನ್ನು ಜಾರಿಗೊಳಿಸಿದ್ದಾರೆ. ಆರಂಭದಿಂದಲು ಈ ಕಾಯ್ದೆ ರೈತರ ಒಳಿತಿಗಾಗಿ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಮೋದಿ ಸರ್ಕಾರ ಯಾವುದೇ ರೈತರೊಂದಿಗೆ ಚರ್ಚಿಸದೇ ಸುಗ್ರೀವಾಜ್ಞೆಗಳ ಮೂಲಕ ಈ ಕಾನೂನುಗಳನ್ನು ತಂದಿದ್ದಲ್ಲದೇ ವಿರೋಧ ಪಕ್ಷಗಳ ಮತ್ತು ರೈತರ ಭಾರೀ ವಿರೋಧದ ನಡುವೆಯೂ ಚರ್ಚೆ ನಡೆಸದೆ ಅಂಗೀಕರಿಸಿದೆ.

ಇನ್ನು ಆರಂಭದಲ್ಲಿ ರೈತರು ಈ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಆರಂಭಿಸಿದಾಗ ಅವರನ್ನು ಖಾಲಿಸ್ತಾನ್‌ಗಳು, ಭಯೋತ್ಪಾದಕರು ಎಂದು ಬಿಂಬಿಸಿದ್ದಲ್ಲದೇ ಅವರ ಮೇಲೆ ಲಾಠೀ ಪ್ರಹಾರ, ಟಿಯರ್ ಗ್ಯಾಸ್, ಜಲಫಿರಂಗಿಗಳನ್ನು ಪ್ರಯೋಗ ಮಾಡಿ ಹೋರಾಟ ಹತ್ತಿಕ್ಕಲು ಯತ್ನಿಸಿತು. ಆದರೆ ರೈತರು ಎದೆಗುಂದದೆ ದಿಟ್ಟ ಹೋರಾಟ ನಡೆಸಿದ ನಂತರ ಅನಿವಾರ್ಯವಾಗಿ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸುತ್ತಿದೆ. ಇನ್ನೊಂದು ಕಡೆ ವಿರೋಧ ಪಕ್ಷಗಳು ರೈತರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎನ್ನುತ್ತಿದ್ದ ಕೇಂದ್ರ ಈಗ ರೈತರು ಬಗ್ಗದೇ ಇರುವುದರಿಂದ ಮತ್ತ ವಿರೋಧ ಪಕ್ಷಗಳ ಮೇಲೆ ದಾಳಿ ನಡೆಸುತ್ತಿದೆ. ಅವರೂ ಖಾಸಗೀಕರಣದ ಪರವಾಗಿದ್ದರು ಎನ್ನುವ ನೆಪ ನೀಡುವ ಮೂಲಕ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ. ಇದಕ್ಕೆ ರೈತರು ಯಾವ ರೀತಿ ಪ್ರತಿಕ್ರಿಯಿಸುತ್ತಾರೆ ಕಾದು ನೋಡಬೇಕಿದೆ.


ಇದನ್ನೂ ಓದಿ: ಕಾರ್ಟೂನಿಸ್ಟ್‌ಗಳ ಕಣ್ಣಲ್ಲಿ ರೈತ ಹೋರಾಟ: ವೈರಲ್ ಆದ ಹೋರಾಟದ ಚಿತ್ರಗಳು

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...