Homeಮುಖಪುಟಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ನಮ್ಮ ಸರ್ಕಾರ ರೈತರ ಎಲ್ಲಾ ಸಮಸ್ಯೆಗಳನ್ನು ದಿನದ 24 ಗಂಟೆಯೂ ಆಲಿಸಲು ಸಿದ್ದವಾಗಿದೆ ಎಂದು ನಾನು ಎಲ್ಲ ರೈತ ಸಹೋದರ ಮತ್ತು ಸಹೋದರಿಯರಿಗೆ ಭರವಸೆ ನೀಡುತ್ತೇನೆ.

- Advertisement -
- Advertisement -

ದೇಶದಲ್ಲಿ ರೈತ ಹೋರಾಟ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಹಿಂಪಡೆಯಲಿ ಎಂದು ರೈತರು 20 ದಿನಗಳಿಂದ ಹೋರಾಟ ನೆಸುತ್ತಿದ್ದು, ನಿನ್ನೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಇಂದು ತಮ್ಮ ವಿವಾದಾತ್ಮಕ ಕಾನೂನುಗಳನ್ನು ಸಮರ್ಥಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ಈಗ ಆಗಿರುವ ಕೃಷಿ ಸುಧಾರಣೆಗಳು ಅನೇಕ ವರ್ಷಗಳಿಂದ ರೈತ ಸಂಘಗಳು ಮತ್ತು ಪ್ರತಿಪಕ್ಷಗಳು ಕೇಳುತ್ತಿರುವ ಸುಧಾರಣೆಗಳೇ ಆಗಿವೆ. ಭಾರತ ಸರ್ಕಾರ ಯಾವಾಗಲೂ ರೈತ ಕಲ್ಯಾಣಕ್ಕೆ ಬದ್ಧವಾಗಿದೆ. ಅವರ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ನಾವು ರೈತರಿಗೆ ಭರವಸೆ ನೀಡುತ್ತೇವೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

“ಇಂದು ಪ್ರತಿಪಕ್ಷಗಳಲ್ಲಿ ಕುಳಿತು ರೈತರನ್ನು ದಾರಿ ತಪ್ಪಿಸುತ್ತಿರುವವರು ತಮ್ಮ ಸರ್ಕಾರದ ಅವಧಿಯಲ್ಲಿ ಈ ಕೃಷಿ ಸುಧಾರಣೆಗಳ ಪರವಾಗಿದ್ದರು. ಅವರು ತಮ್ಮ ಸರ್ಕಾರದ ಅವಧಿಯಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಇಂದು ರಾಷ್ಟ್ರವು ಐತಿಹಾಸಿಕ ಹೆಜ್ಜೆ ಇಟ್ಟಾಗ ಇವರು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ” ಎಂದು ಪ್ರಧಾನಿ ಕಛ್‌ನಲ್ಲಿ ನಡೆದ ಸಮಾರಂಭವೊಂದರಲ್ಲಿ ಹೇಳಿದ್ದಾರೆ.

ದೆಹಲಿಯಲ್ಲಿರುವ ರೈತರನ್ನು ದಿಕ್ಕತಪ್ಪಿಸುವ ಪಿತೂರಿ ನಡೆಯುತ್ತಿದೆ. ಈ ಕೃಷಿ ಕಾಯ್ದೆಗಳಿಂದ ರೈತರ ಭೂಮಿಯನ್ನು ಇತರರು ಕಬಳಿಸುತ್ತಾರೆ ಎಂದು ರೈತರು ಹೆದರಿದ್ದಾರೆ. ಡೈರಿ ಕಂಪನಿಗಳು ನಿಮ್ಮಿಂದ ಹಾಲನ್ನು ಕೊಂಡುಕೊಳ್ಳುತ್ತವೆಯೊ? ಅಥವಾ ನಿಮ್ಮ ಹಸುಗಳನ್ನು ಕಿತ್ತುಕೊಳ್ಳುತ್ತಿವೆಯೋ ನೀವು ಹೇಳಿ? ಎಂದು ಮೋದಿ ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ರೈತರ ಎಲ್ಲಾ ಸಮಸ್ಯೆಗಳನ್ನು ದಿನದ 24 ಗಂಟೆಯೂ ಆಲಿಸಲು ಸಿದ್ದವಾಗಿದೆ ಎಂದು ನಾನು ಎಲ್ಲ ರೈತ ಸಹೋದರ ಮತ್ತು ಸಹೋದರಿಯರಿಗೆ ಭರವಸೆ ನೀಡುತ್ತೇನೆ. ಮೊದಲ ದಿನದಿಂದಲೂ ರೈತರ ಹಿತರಕ್ಷಣೆಯೇ ನಮ್ಮ ಆದ್ಯತೆಯೆಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಸಂಸತ್ ಭವನದ ನಿರ್ಮಾಣಕ್ಕೆ ಟಾಟಾ ಕಂಪೆನಿ ಆಯ್ಕೆಯಾಗಿದ್ದು ಹೇಗೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

ಕೇಂದ್ರ ಸರ್ಕಾರದ ಬಿಜೆಪಿ ನಾಯಕರು ತಾವು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳಲು ಪದೇ ಪದೇ ಪ್ರತಿಪಕ್ಷಗಳತ್ತ ಬೆರಳು ತೋರಿಸುತ್ತಲೇ ಇದೆ. ಮೋದಿ ಸರ್ಕಾರ ಜಾರಿಗೆ ತಂದ ಜಿಎಸ್‌ಟಿ ಕೂಡ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಎಂದು ನುಣುಚಿಕೊಂಡಿತ್ತು.

ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಹೇಳುವ ಬಿಜೆಪಿ, ಇಕ್ಕಟ್ಟಿನ ಸಂದರ್ಭದಲ್ಲೆಲ್ಲಾ ‘ಇದು ಕಾಂಗ್ರೆಸ್‌ನ ಯೋಜನೆ’ ಎಂದು ನುಣುಚಿಕೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆರೋಪ ವ್ಯಕ್ತವಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲೂ AAP ಸ್ಪರ್ಧೆ: ಕೇಜ್ರಿವಾಲ್ ಘೋಷಣೆ

ಈ ಹಿಂದೆಯೂ ರೈತರ ಹೋರಾಟವನ್ನು ಖಂಡಿಸಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ “ಈಗ ಎನ್‌ಡಿಎ ಸರ್ಕಾರ ಯಾವ ಕಾನೂನುಗಳನ್ನು ಅಂಗೀಕರಿಸಿದೆಯೇ ಅವೆಲ್ಲವನ್ನು ಸಹ ಯುಪಿಎ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಲು ಬಯಸಿದ್ದವು. ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಖಾಸಗೀಕರಣದ ಪರವಾಗಿತ್ತು. ಈಗ ಅವರೆಲ್ಲಾ ಈ ಕಾನೂನುಗಳನ್ನು ವಿರೋಧಿಸುವುದು ಅವರ ಇಬ್ಬಂದಿತನ” ಎಂದು ಹೇಳಿದ್ದರು.

ತಮ್ಮ ಆಡಳಿತದಲ್ಲಿ ಏನೇ ಒಳ್ಳೆಯದಾದರೂ ಅವುಗಳ ಕ್ರೆಡಿಟ್ ಬಿಜೆಪಿಗೇ ಸೇರುತ್ತದೆ. ಆದರೆ ಏನಾದರೂ ಕೆಡುಕಾದರೆ ಅದಕ್ಕೆ ನೆಹರೂ, ಕಾಂಗ್ರೆಸ್ ಕಾರಣ ಎಂದು ಹೇಳಿ ತಪ್ಪಿಸಿಕೊಳ್ಳುತ್ತದೆ. ಇದು ಬಿಜೆಪಿಯ ಅನೈತಿಕ ರಾಜಕಾರಣವನ್ನು ತೋರಿಸುತ್ತದೆ ನೆಟ್ಟಿಗರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

2022ರ ವೇಳೆಗೆ ರೈತರ ಆದಾಯ ಡಬಲ್ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಆದರೆ ಈಗ ಅದರ ಬದಲು ಮೂರು ಕಾಯ್ದೆಗಳನ್ನು ಜಾರಿಗೊಳಿಸಿದ್ದಾರೆ. ಆರಂಭದಿಂದಲು ಈ ಕಾಯ್ದೆ ರೈತರ ಒಳಿತಿಗಾಗಿ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಮೋದಿ ಸರ್ಕಾರ ಯಾವುದೇ ರೈತರೊಂದಿಗೆ ಚರ್ಚಿಸದೇ ಸುಗ್ರೀವಾಜ್ಞೆಗಳ ಮೂಲಕ ಈ ಕಾನೂನುಗಳನ್ನು ತಂದಿದ್ದಲ್ಲದೇ ವಿರೋಧ ಪಕ್ಷಗಳ ಮತ್ತು ರೈತರ ಭಾರೀ ವಿರೋಧದ ನಡುವೆಯೂ ಚರ್ಚೆ ನಡೆಸದೆ ಅಂಗೀಕರಿಸಿದೆ.

ಆರಂಭದಲ್ಲಿ ರೈತರು ಈ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಆರಂಭಿಸಿದಾಗ ಅವರನ್ನು ಖಲಿಸ್ತಾನಿಗಳು, ಭಯೋತ್ಪಾದಕರು, ನಕ್ಸಲರು ಎಂದು ಬಿಂಬಿಸಿದ್ದಲ್ಲದೇ ಅವರ ಮೇಲೆ ಲಾಠೀ ಪ್ರಹಾರ, ಟಿಯರ್ ಗ್ಯಾಸ್, ಜಲಫಿರಂಗಿಗಳನ್ನು ಪ್ರಯೋಗ ಮಾಡಿ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿತ್ತು. ಆದರೆ ರೈತರು ಇದಾವುದಕ್ಕೂ ಹೆದರದೇ ದಿಟ್ಟ ಹೋರಾಟ ನಡೆಸಿದ ನಂತರ ಅನಿವಾರ್ಯವಾಗಿ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸಿತ್ತು.

ಇದನ್ನೂ ಓದಿ: ತುಮಕೂರು: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ -ಸಬ್‌ಇನ್ಸ್‌ಪೆಕ್ಟರ್ ವಿರುದ್ದ ಕ್ರಮಕ್ಕೆ ವಕೀಲರ ಆಗ್ರಹ

ಇನ್ನೊಂದು ಕಡೆ ವಿರೋಧ ಪಕ್ಷಗಳು ರೈತರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎನ್ನುತ್ತಿದ್ದ ಕೇಂದ್ರ ಈಗ ರೈತರು ಬಗ್ಗದೇ ಇರುವುದರಿಂದ ಮತ್ತೆ ವಿರೋಧ ಪಕ್ಷಗಳ ಮೇಲೆ ದಾಳಿ ನಡೆಸುತ್ತಿದೆ. ಅವರೂ ಖಾಸಗೀಕರಣದ ಪರವಾಗಿದ್ದರು ಎನ್ನುವ ನೆಪ ನೀಡುವ ಮೂಲಕ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ.

ಆದರೆ ಕೇಂದ್ರ ಸರ್ಕಾರದ ಈ ಗೊಡ್ಡು ಸಮರ್ಥನೆಗಳು ನಡೆಯುವುದಿಲ್ಲ ಎಂಬಂತೆ ರೈತರು ಪಟ್ಟುಬಿಡದೇ ದಿಟ್ಟ ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...