Homeಮುಖಪುಟಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ: ನರೇಂದ್ರ ಮೋದಿ

ನಮ್ಮ ಸರ್ಕಾರ ರೈತರ ಎಲ್ಲಾ ಸಮಸ್ಯೆಗಳನ್ನು ದಿನದ 24 ಗಂಟೆಯೂ ಆಲಿಸಲು ಸಿದ್ದವಾಗಿದೆ ಎಂದು ನಾನು ಎಲ್ಲ ರೈತ ಸಹೋದರ ಮತ್ತು ಸಹೋದರಿಯರಿಗೆ ಭರವಸೆ ನೀಡುತ್ತೇನೆ.

- Advertisement -
- Advertisement -

ದೇಶದಲ್ಲಿ ರೈತ ಹೋರಾಟ ದಿನದಿಂದ ದಿನಕ್ಕೆ ಕಾವೇರುತ್ತಿದ್ದು, ಕೇಂದ್ರ ಸರ್ಕಾರ ಕೃಷಿ ಕಾನೂನುಗಳನ್ನು ಹಿಂಪಡೆಯಲಿ ಎಂದು ರೈತರು 20 ದಿನಗಳಿಂದ ಹೋರಾಟ ನೆಸುತ್ತಿದ್ದು, ನಿನ್ನೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತೆ ಇಂದು ತಮ್ಮ ವಿವಾದಾತ್ಮಕ ಕಾನೂನುಗಳನ್ನು ಸಮರ್ಥಿಸಿಕೊಂಡಿದ್ದಾರೆ. ದೆಹಲಿಯಲ್ಲಿ ಹೋರಾಟನಿರತ ರೈತರನ್ನು ವಿರೋಧ ಪಕ್ಷಗಳು ದಾರಿ ತಪ್ಪಿಸುತ್ತಿವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

“ಈಗ ಆಗಿರುವ ಕೃಷಿ ಸುಧಾರಣೆಗಳು ಅನೇಕ ವರ್ಷಗಳಿಂದ ರೈತ ಸಂಘಗಳು ಮತ್ತು ಪ್ರತಿಪಕ್ಷಗಳು ಕೇಳುತ್ತಿರುವ ಸುಧಾರಣೆಗಳೇ ಆಗಿವೆ. ಭಾರತ ಸರ್ಕಾರ ಯಾವಾಗಲೂ ರೈತ ಕಲ್ಯಾಣಕ್ಕೆ ಬದ್ಧವಾಗಿದೆ. ಅವರ ಸಮಸ್ಯೆಗಳನ್ನು ಬಗೆಹರಿಸುತ್ತೇವೆ ಎಂದು ನಾವು ರೈತರಿಗೆ ಭರವಸೆ ನೀಡುತ್ತೇವೆ” ಎಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ರೈತ ಹೋರಾಟ ಬೆಂಬಲಿಸಿದ್ದ ಟ್ರೂಡೊ: ಭಾರತ-ಕೆನಡಾ ರಾಜಕೀಯ ಸಂಬಂಧದಲ್ಲಿ ಬಿರುಕು!

“ಇಂದು ಪ್ರತಿಪಕ್ಷಗಳಲ್ಲಿ ಕುಳಿತು ರೈತರನ್ನು ದಾರಿ ತಪ್ಪಿಸುತ್ತಿರುವವರು ತಮ್ಮ ಸರ್ಕಾರದ ಅವಧಿಯಲ್ಲಿ ಈ ಕೃಷಿ ಸುಧಾರಣೆಗಳ ಪರವಾಗಿದ್ದರು. ಅವರು ತಮ್ಮ ಸರ್ಕಾರದ ಅವಧಿಯಲ್ಲಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಲಿಲ್ಲ. ಇಂದು ರಾಷ್ಟ್ರವು ಐತಿಹಾಸಿಕ ಹೆಜ್ಜೆ ಇಟ್ಟಾಗ ಇವರು ರೈತರನ್ನು ದಾರಿ ತಪ್ಪಿಸುತ್ತಿದ್ದಾರೆ” ಎಂದು ಪ್ರಧಾನಿ ಕಛ್‌ನಲ್ಲಿ ನಡೆದ ಸಮಾರಂಭವೊಂದರಲ್ಲಿ ಹೇಳಿದ್ದಾರೆ.

ದೆಹಲಿಯಲ್ಲಿರುವ ರೈತರನ್ನು ದಿಕ್ಕತಪ್ಪಿಸುವ ಪಿತೂರಿ ನಡೆಯುತ್ತಿದೆ. ಈ ಕೃಷಿ ಕಾಯ್ದೆಗಳಿಂದ ರೈತರ ಭೂಮಿಯನ್ನು ಇತರರು ಕಬಳಿಸುತ್ತಾರೆ ಎಂದು ರೈತರು ಹೆದರಿದ್ದಾರೆ. ಡೈರಿ ಕಂಪನಿಗಳು ನಿಮ್ಮಿಂದ ಹಾಲನ್ನು ಕೊಂಡುಕೊಳ್ಳುತ್ತವೆಯೊ? ಅಥವಾ ನಿಮ್ಮ ಹಸುಗಳನ್ನು ಕಿತ್ತುಕೊಳ್ಳುತ್ತಿವೆಯೋ ನೀವು ಹೇಳಿ? ಎಂದು ಮೋದಿ ಪ್ರಶ್ನಿಸಿದ್ದಾರೆ.

ನಮ್ಮ ಸರ್ಕಾರ ರೈತರ ಎಲ್ಲಾ ಸಮಸ್ಯೆಗಳನ್ನು ದಿನದ 24 ಗಂಟೆಯೂ ಆಲಿಸಲು ಸಿದ್ದವಾಗಿದೆ ಎಂದು ನಾನು ಎಲ್ಲ ರೈತ ಸಹೋದರ ಮತ್ತು ಸಹೋದರಿಯರಿಗೆ ಭರವಸೆ ನೀಡುತ್ತೇನೆ. ಮೊದಲ ದಿನದಿಂದಲೂ ರೈತರ ಹಿತರಕ್ಷಣೆಯೇ ನಮ್ಮ ಆದ್ಯತೆಯೆಂದು ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ಹೊಸ ಸಂಸತ್ ಭವನದ ನಿರ್ಮಾಣಕ್ಕೆ ಟಾಟಾ ಕಂಪೆನಿ ಆಯ್ಕೆಯಾಗಿದ್ದು ಹೇಗೆ: ಸುಬ್ರಮಣಿಯನ್ ಸ್ವಾಮಿ ಪ್ರಶ್ನೆ

ಕೇಂದ್ರ ಸರ್ಕಾರದ ಬಿಜೆಪಿ ನಾಯಕರು ತಾವು ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳಲು ಪದೇ ಪದೇ ಪ್ರತಿಪಕ್ಷಗಳತ್ತ ಬೆರಳು ತೋರಿಸುತ್ತಲೇ ಇದೆ. ಮೋದಿ ಸರ್ಕಾರ ಜಾರಿಗೆ ತಂದ ಜಿಎಸ್‌ಟಿ ಕೂಡ ಕಾಂಗ್ರೆಸ್ ಸರ್ಕಾರದ ಕಾರ್ಯಕ್ರಮ ಎಂದು ನುಣುಚಿಕೊಂಡಿತ್ತು.

ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ಹೇಳುವ ಬಿಜೆಪಿ, ಇಕ್ಕಟ್ಟಿನ ಸಂದರ್ಭದಲ್ಲೆಲ್ಲಾ ‘ಇದು ಕಾಂಗ್ರೆಸ್‌ನ ಯೋಜನೆ’ ಎಂದು ನುಣುಚಿಕೊಳ್ಳುತ್ತಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆರೋಪ ವ್ಯಕ್ತವಾಗಿದೆ.

ಇದನ್ನೂ ಓದಿ: ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಯಲ್ಲೂ AAP ಸ್ಪರ್ಧೆ: ಕೇಜ್ರಿವಾಲ್ ಘೋಷಣೆ

ಈ ಹಿಂದೆಯೂ ರೈತರ ಹೋರಾಟವನ್ನು ಖಂಡಿಸಿ ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ “ಈಗ ಎನ್‌ಡಿಎ ಸರ್ಕಾರ ಯಾವ ಕಾನೂನುಗಳನ್ನು ಅಂಗೀಕರಿಸಿದೆಯೇ ಅವೆಲ್ಲವನ್ನು ಸಹ ಯುಪಿಎ ಅಧಿಕಾರದಲ್ಲಿದ್ದಾಗ ಜಾರಿಗೊಳಿಸಲು ಬಯಸಿದ್ದವು. ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಖಾಸಗೀಕರಣದ ಪರವಾಗಿತ್ತು. ಈಗ ಅವರೆಲ್ಲಾ ಈ ಕಾನೂನುಗಳನ್ನು ವಿರೋಧಿಸುವುದು ಅವರ ಇಬ್ಬಂದಿತನ” ಎಂದು ಹೇಳಿದ್ದರು.

ತಮ್ಮ ಆಡಳಿತದಲ್ಲಿ ಏನೇ ಒಳ್ಳೆಯದಾದರೂ ಅವುಗಳ ಕ್ರೆಡಿಟ್ ಬಿಜೆಪಿಗೇ ಸೇರುತ್ತದೆ. ಆದರೆ ಏನಾದರೂ ಕೆಡುಕಾದರೆ ಅದಕ್ಕೆ ನೆಹರೂ, ಕಾಂಗ್ರೆಸ್ ಕಾರಣ ಎಂದು ಹೇಳಿ ತಪ್ಪಿಸಿಕೊಳ್ಳುತ್ತದೆ. ಇದು ಬಿಜೆಪಿಯ ಅನೈತಿಕ ರಾಜಕಾರಣವನ್ನು ತೋರಿಸುತ್ತದೆ ನೆಟ್ಟಿಗರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ಉಪಸಭಾಪತಿಯನ್ನು ಎಳೆದಾಡಿದ ಕಾಂಗ್ರೆಸ್-ಬಿಜೆಪಿ ಸದಸ್ಯರು: ವಿಧಾನ ಪರಿಷತ್‌ನಲ್ಲಿ ಭಾರಿ ಗದ್ದಲ

2022ರ ವೇಳೆಗೆ ರೈತರ ಆದಾಯ ಡಬಲ್ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದರು. ಆದರೆ ಈಗ ಅದರ ಬದಲು ಮೂರು ಕಾಯ್ದೆಗಳನ್ನು ಜಾರಿಗೊಳಿಸಿದ್ದಾರೆ. ಆರಂಭದಿಂದಲು ಈ ಕಾಯ್ದೆ ರೈತರ ಒಳಿತಿಗಾಗಿ ಎಂದು ಕೇಂದ್ರ ಸರ್ಕಾರ ಹೇಳುತ್ತಿದೆ. ಆದರೆ ಮೋದಿ ಸರ್ಕಾರ ಯಾವುದೇ ರೈತರೊಂದಿಗೆ ಚರ್ಚಿಸದೇ ಸುಗ್ರೀವಾಜ್ಞೆಗಳ ಮೂಲಕ ಈ ಕಾನೂನುಗಳನ್ನು ತಂದಿದ್ದಲ್ಲದೇ ವಿರೋಧ ಪಕ್ಷಗಳ ಮತ್ತು ರೈತರ ಭಾರೀ ವಿರೋಧದ ನಡುವೆಯೂ ಚರ್ಚೆ ನಡೆಸದೆ ಅಂಗೀಕರಿಸಿದೆ.

ಆರಂಭದಲ್ಲಿ ರೈತರು ಈ ಕಾಯ್ದೆಗಳ ವಿರುದ್ಧ ಪ್ರತಿಭಟನೆ ಆರಂಭಿಸಿದಾಗ ಅವರನ್ನು ಖಲಿಸ್ತಾನಿಗಳು, ಭಯೋತ್ಪಾದಕರು, ನಕ್ಸಲರು ಎಂದು ಬಿಂಬಿಸಿದ್ದಲ್ಲದೇ ಅವರ ಮೇಲೆ ಲಾಠೀ ಪ್ರಹಾರ, ಟಿಯರ್ ಗ್ಯಾಸ್, ಜಲಫಿರಂಗಿಗಳನ್ನು ಪ್ರಯೋಗ ಮಾಡಿ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿತ್ತು. ಆದರೆ ರೈತರು ಇದಾವುದಕ್ಕೂ ಹೆದರದೇ ದಿಟ್ಟ ಹೋರಾಟ ನಡೆಸಿದ ನಂತರ ಅನಿವಾರ್ಯವಾಗಿ ಸರ್ಕಾರ ಅವರೊಂದಿಗೆ ಮಾತುಕತೆ ನಡೆಸಿತ್ತು.

ಇದನ್ನೂ ಓದಿ: ತುಮಕೂರು: ವಕೀಲರೊಬ್ಬರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ -ಸಬ್‌ಇನ್ಸ್‌ಪೆಕ್ಟರ್ ವಿರುದ್ದ ಕ್ರಮಕ್ಕೆ ವಕೀಲರ ಆಗ್ರಹ

ಇನ್ನೊಂದು ಕಡೆ ವಿರೋಧ ಪಕ್ಷಗಳು ರೈತರನ್ನು ದಿಕ್ಕುತಪ್ಪಿಸುತ್ತಿದ್ದಾರೆ ಎನ್ನುತ್ತಿದ್ದ ಕೇಂದ್ರ ಈಗ ರೈತರು ಬಗ್ಗದೇ ಇರುವುದರಿಂದ ಮತ್ತೆ ವಿರೋಧ ಪಕ್ಷಗಳ ಮೇಲೆ ದಾಳಿ ನಡೆಸುತ್ತಿದೆ. ಅವರೂ ಖಾಸಗೀಕರಣದ ಪರವಾಗಿದ್ದರು ಎನ್ನುವ ನೆಪ ನೀಡುವ ಮೂಲಕ ಈ ಕಾಯ್ದೆಗಳನ್ನು ಸಮರ್ಥಿಸಿಕೊಳ್ಳುತ್ತಿದೆ.

ಆದರೆ ಕೇಂದ್ರ ಸರ್ಕಾರದ ಈ ಗೊಡ್ಡು ಸಮರ್ಥನೆಗಳು ನಡೆಯುವುದಿಲ್ಲ ಎಂಬಂತೆ ರೈತರು ಪಟ್ಟುಬಿಡದೇ ದಿಟ್ಟ ಹೋರಾಟ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಕೊರೆಯುವ ಚಳಿಯಲ್ಲಿ ರೈತ ಹೋರಾಟಗಾರರು; ಕರುಣೆ ಇಲ್ಲದ ಸರ್ಕಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...