Homeಮುಖಪುಟಅದಾನಿ ಸಮೂಹದ ಉದ್ಯೋಗಿಯನ್ನು ಕೇಂದ್ರದ EAC ಸಮಿತಿಗೆ ನೇಮಕ: ಪ್ರತಿಪಕ್ಷಗಳಿಂದ ಟೀಕೆ

ಅದಾನಿ ಸಮೂಹದ ಉದ್ಯೋಗಿಯನ್ನು ಕೇಂದ್ರದ EAC ಸಮಿತಿಗೆ ನೇಮಕ: ಪ್ರತಿಪಕ್ಷಗಳಿಂದ ಟೀಕೆ

- Advertisement -
- Advertisement -

ಕೇಂದ್ರ ಪರಿಸರ ಸಚಿವಾಲಯದ ಅಧೀನದ ತಜ್ಞರ ಮೌಲ್ಯಮಾಪನ ಸಮಿತಿ(ಇಎಸಿ) ಸದಸ್ಯರಾಗಿ ಜನಾರ್ದನ್ ಚೌಧರಿ ಅವರನ್ನು ನೇಮಕ ಮಾಡಿದ್ದಕ್ಕೆ ವಿರೋಧ ಪಕ್ಷಗಳು ಮಂಗಳವಾರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಚೌಧರಿ ಅದಾನಿ ಕಂಪೆನಿಯ ಉದ್ಯೋಗಿ ಎಂದು ಆರೋಪಿಸಿದೆ.

ಮಾದ್ಯಮ ವರದಿಗಳ ಪ್ರಕಾರ, ಅದಾನಿ ಗ್ರೀನ್‌ ಎನರ್ಜಿ ಲಿಮಿಟೆಡ್‌ನ ಸಲಹೆಗಾರರಾಗಿರುವ ಚೌಧರಿಯನ್ನು ಅದಾನಿ ಸಮೂಹದ ಜಲವಿದ್ಯುತ್ ಯೋಜನೆ ಪ್ರಸ್ತಾವನೆಗಳಿಗೆ ಒಪ್ಪಿಗೆ ನೀಡಲಿರುವ ಪರಿಸರ ಸಚಿವಾಲಯದ ಮೌಲ್ಯಮಾಪನ ಸಮಿತಿಗೆ ಸೆಪ್ಟಂಬರ್‌ನಲ್ಲಿ ನೇಮಕ ಮಾಡಲಾಗಿದೆ.

ಪರಿಸರ ಸಚಿವಾಲಯದ ಅಡಿಯ ಇಎಸಿ ಸದಸ್ಯರನ್ನಾಗಿ ಅದಾನಿ ಕಂಪೆನಿಯ ಉದ್ಯೋಗಿ ಜನಾರ್ದನ್ ಚೌಧರಿ ಅವರನ್ನು ಅದಾನಿಯ ಪ್ರಧಾನ ಸೇವಕ ನೇಮಿಸಿದ್ದಾರೆ. ಈ ಸಮಿತಿಯು ಅದಾನಿಯ 6 ಯೋಜನೆಗಳನ್ನು (10,300 MW) ಅನುಮೋದಿಸಬೇಕಾಗಿದೆ ಎಂದು ಕೇರಳ ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್‌ ಖಾತೆಯಲ್ಲಿ ಹೇಳಿಕೊಂಡಿದೆ.

ಇತ್ತೀಚೆಗೆ ಮಹಾರಾಷ್ಟ್ರದ ಸತಾರದಲ್ಲಿ 1500 ಮೆಗಾವ್ಯಾಟ್ ಸಾಮರ್ಥ್ಯದ ವಿದ್ಯುತ್‌ ಸ್ಥಾವರಕ್ಕೆ ಇವರೇ ಒಪ್ಪಿಗೆ ನೀಡಿದ್ದಾರೆ ಎಂದು ಆರೋಪಿಸಿದೆ. ಇದು ವ್ಯಾಪಾರವನ್ನು ಸುಲಭಗೊಳಿಸುವ ವಿಧಾನ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ.

ಚೌದರಿ ಅವರು ಅದಾನಿ ಗ್ರೀನ್ ಎನರ್ಜಿ ಲಿಮಿಟೆಡ್‌ನ (AGEL) ಪ್ರಮುಖ ಸಲಹೆಗಾರ, ಈಗ ಅವರು ಕೇಂದ್ರದ ಪರಿಸರ ಸಚಿವಾಲಯದ ಮೌಲ್ಯಮಾಪನ ಸಮಿತಿಯ (ಇಎಸಿ) ಸದಸ್ಯರಾಗಿದ್ದಾರೆ. ಸೆಪ್ಟೆಂಬರ್ 27ರಂದು ಕೇಂದ್ರ ಪರಿಸರ ಸಚಿವಾಲಯವು 7 ಸಾಂಸ್ಥಿಕ ಸದಸ್ಯರ ನೇಮಕದ ವೇಳೆ ಚೌಧರಿ ಅವರನ್ನು ಕೂಡ ನೇಮಿಸಿದ್ದರು.

ಶಿವಸೇನಾ (ಉದ್ಧವ್‌ ಬಣ) ಹಾಗೂ ತೃಣಮೂಲ ಕಾಂಗ್ರೆಸ್‌ ಕೂಡ  ಪರಿಸರ ಸಚಿವಾಲಯದ ಮೌಲ್ಯಮಾಪನ ಸಮಿತಿಗೆ ಚೌದರಿಯನ್ನು ನೇಮಕ ಮಾಡಿರುವುದನ್ನು ವಿರೋಧಿಸಿದೆ. ದೋಸ್ತಿ ಎಂದರೆ ಹೀಗಿರಬೇಕು ಎಂದು ಶಿವಸೇನಾ ರಾಜ್ಯಸಭೆ ಸದಸ್ಯೆ ಪ್ರಿಯಾಂಕ ಚತುರ್ವೇದಿ ಟೀಕಿಸಿದ್ದಾರೆ.

ಇದನ್ನು ಓದಿ: ಉಡುಪಿ: ಒಂದೇ ಕುಟುಂಬದ ನಾಲ್ವರ ಕೊಲೆ ಪ್ರಕರಣ; ಆರೋಪಿ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಮತದಾರರ ಹಕ್ಕು ರಕ್ಷಣೆಗೆ ಕಣಕ್ಕಿಳಿದ ‘ನಾಗರಿಕ ಮತ ಕಾವಲು ಸಮಿತಿ’

ರಾಜ್ಯದ ಶೋಷಿತ, ಹಿಂದುಳಿದ ಮತ್ತು ಅಂಚಿನಲ್ಲಿರುವ ಸಮುದಾಯಗಳ ಮತದಾನದ ಹಕ್ಕಿಗೆ ಯಾವುದೇ ಚ್ಯುತಿ ಬಾರದಂತೆ ತಡೆಯಲು ಬೂತ್ ಮಟ್ಟದಿಂದ ಹಿಡಿದು ರಾಜ್ಯ ಮಟ್ಟದವರೆಗೆ ‘ನಾಗರಿಕ ಮತ ಕಾವಲು ಸಮಿತಿ’ಯನ್ನು ಅಸ್ತಿತ್ವಕ್ಕೆ ತರಲಾಗಿದೆ. ಎಸ್‌ಐಆರ್...

ಮೋಹನ್‌ಲಾಲ್ ‘ದಂತ’ ಕಥೆ: ಅರಣ್ಯ ಇಲಾಖೆ ಮುಂದೆ 10 ಆನೆ ದಂತ, 13 ಮೂರ್ತಿಗಳ ಅಚ್ಚರಿಯ ಘೋಷಣೆ!

ನಟ ಮೋಹನ್‌ಲಾಲ್ ಅವರು ತಾವೇ ಕಾನೂನುಬಾಹಿರವಾಗಿ ವನ್ಯಜೀವಿ ವಸ್ತುಗಳನ್ನು ಹೊಂದಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದರೂ, ತಮ್ಮ ಬಳಿ 10 ಆನೆ ದಂತಗಳು ಮತ್ತು 13 ದಂತದ ಮೂರ್ತಿಗಳು ಇರುವುದಾಗಿ ಕೇರಳ ಅರಣ್ಯ...

ಅಯೋಧ್ಯೆ ರಾಮಮಂದಿರ ಹಗರಣ: ‘ಕದ್ದ ಹಣ’ ಹಂಚಿಕೆಯ ಮೊಬೈಲ್ ಚಾಟ್‌ಗಳು ಬಹಿರಂಗ; ತೀವ್ರಗೊಂಡ ತನಿಖೆ

ಲಕ್ನೋ: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ನಿಧಿ ದುರುಪಯೋಗ ಮತ್ತು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಅತ್ಯಂತ ಸ್ಫೋಟಕ ಮಾಹಿತಿ ಹೊರಬಿದ್ದಿದ್ದು, ತನಿಖೆ ತೀವ್ರಗೊಂಡಿದೆ. ಪ್ರಕರಣದ ಪ್ರಮುಖ ಆರೋಪಿಗಳ ಮೊಬೈಲ್ ಫೋನ್‌ಗಳ...

ಅಪ್ರಾಪ್ತ ಬಾಲಕಿಯ ಅತ್ಯಾಚಾರ-ಕೊಲೆ ಆರೋಪ : ಪ. ಬಂಗಾಳದ ಬಾರುಯಿಪುರದಲ್ಲಿ ಹಿಂಸಾಚಾರ ; ಶಂಕಿತ ಆರೋಪಿಯ ಗುಂಪು ಹತ್ಯೆ

ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬಾರುಯಿಪುರದಲ್ಲಿ ಶನಿವಾರ (ಜು.4) ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಅಪ್ರಾಪ್ತ ಬಾಲಕಿಯೊಬ್ಬಳ ಶವ ಭಾನುವಾರ (ಜು.5) ಬೆಳಿಗ್ಗೆ ಕೆರೆಯಲ್ಲಿ ಪತ್ತೆಯಾಗಿದ್ದು, ಆ ಬಳಿಕ ಅಲ್ಲಿ ತೀವ್ರ ಹಿಂಸಾತ್ಮಕ...

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...