Homeಮುಖಪುಟಸಿಎಎ, ಎನ್‌ಪಿಆರ್, ಆರ್ಥಿಕತೆಯ ವಿರುದ್ಧ ಪ್ರತಿಪಕ್ಷಗಳ ಸಭೆ ಇಂದು: ಟಿಎಂಸಿ, ಬಿಎಸ್‌ಪಿ, ಆಪ್‌ ಗೈರು..

ಸಿಎಎ, ಎನ್‌ಪಿಆರ್, ಆರ್ಥಿಕತೆಯ ವಿರುದ್ಧ ಪ್ರತಿಪಕ್ಷಗಳ ಸಭೆ ಇಂದು: ಟಿಎಂಸಿ, ಬಿಎಸ್‌ಪಿ, ಆಪ್‌ ಗೈರು..

- Advertisement -
- Advertisement -

ಪೌರತ್ವ ತಿದ್ದುಪಡಿ ಕಾಯ್ದೆ, ನಾಗರಿಕರ ರಾಷ್ಟ್ರೀಯ ನೋಂದಣಿ (ಎನ್‌ಆರ್‌ಸಿ) ಮತ್ತು ದೇಶದ ಆರ್ಥಿಕ ಪರಿಸ್ಥಿತಿ ಕುರಿತು ಭಾರತೀಯ ಜನತಾ ಪಕ್ಷವನ್ನು ಹೇಗೆ ಎದುರಿಸುವುದು ಎಂಬ ಜಂಟಿ ಕಾರ್ಯತಂತ್ರವನ್ನು ರೂಪಿಸಲು ಪ್ರತಿಪಕ್ಷಗಳು ಇಂದು ಸಭೆ ಸೇರಿವೆ.

ಸಿಎಎ ಮತ್ತು ಎನ್‌ಆರ್‌ಸಿಯನ್ನು ವಿರೋಧಿಸುವಲ್ಲಿ ಎಲ್ಲಾ ವಿರೋಧ ಪಕ್ಷಗಳು ಸಕ್ರಿಯವಾಗಿದ್ದವು. ಈಗಾಗಲೇ ಪ್ರತ್ಯೇಕವಾಗಿ ಹಲವು ಪ್ರತಿಭಟನೆಗಳನ್ನು ಆಯೋಜಿಸಿವೆ. ಆದರೆ ಜಂಟಿ ಕಾರ್ಯತಂತ್ರವನ್ನು ರೂಪಿಸುವ ಪ್ರಯತ್ನದಲ್ಲಿ ಅವರು ಇದೇ ಮೊದಲ ಬಾರಿಗೆ ಭೇಟಿಯಾಗುತ್ತಿದ್ದಾರೆ.

ಆದರೂ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಭೆಯಿಂದ ಹೊರಗುಳಿದಿದ್ದರಿಂದ ಪ್ರತಿಪಕ್ಷಗಳ ಏಕತೆಗೆ ಈಗಾಗಲೇ ದೊಡ್ಡ ಪೆಟ್ಟು ಬಿದ್ದಿದೆ. ಎಎಪಿ ಮತ್ತು ಬಿಎಸ್ಪಿ ಕೂಡ ಸಭೆಯಲ್ಲಿ ಭಾಗವಹಿಸಲು ನಿರಾಕರಿಸಿದೆ.

ಕಾಂಗ್ರೆಸ್, ಎಡ ಪಕ್ಷಗಳು, ಡಿಎಂಕೆ, ಆರ್‌ಜೆಡಿ, ಜೆಎಂಎಂ, ಎನ್‌ಸಿಪಿ, ಸಮಾಜವಾದಿ ಪಕ್ಷ ಮತ್ತು ಕೆಲವು ಸಣ್ಣ ಪಕ್ಷಗಳು ಸಭೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.

ಸಭೆಯನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕರೆದಿದ್ದಾರೆ. ಇದು ಬಹುಶಃ 2019 ರ ಸಾರ್ವತ್ರಿಕ ಚುನಾವಣೆಯ ನಂತರದ ಮೊದಲ ಉನ್ನತ ಮಟ್ಟದ ಪ್ರತಿಪಕ್ಷ ಸಭೆಯಾಗಿದೆ.

ವಿವಿಧ ರಾಜಕೀಯ ಪಕ್ಷಗಳ ಈ ಸಭೆ ಗಮನಾರ್ಹವಾಗಿದೆ. ಸಂಸತ್ತಿನಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮುಂದೆ ಅವರು ಸಂಖ್ಯಾತ್ಮಕವಾಗಿ ಕಡಿಮೆಯಿದ್ದರೂ ಸಹ, ಬಿಜೆಪಿಗೆ ಸವಾಲು ಎಸೆಯಲು ಅವರು ಪ್ರತಿಪಕ್ಷಗಳ ಗುಂಪಾಗಿ ಒಗ್ಗೂಡುತ್ತಿದ್ದಾರೆ ಎಂದು ತೋರಿಸುತ್ತಿದ್ದಾರೆ.

ಇಂದು ಮಧ್ಯಾಹ್ನ 2 ಗಂಟೆಗೆ ಸಭೆ ಪ್ರಾರಂಭವಾಗಲಿದೆ. ಸಿಎಎಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಜಂಟಿ ಹೇಳಿಕೆಯನ್ನು ಬಿಡುಗಡೆ ಮಾಡಲಿದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

2023ರಲ್ಲಿ ತೀವ್ರ ಹಸಿವಿನಿಂದ ತತ್ತರಿಸಿದ 282 ಮಿಲಿಯನ್ ಜನರು: ಆಹಾರದ ಅಭಾವಕ್ಕೆ ವಿಶ್ವಸಂಸ್ಥೆ ಉಲ್ಲೇಖಿಸಿದ...

0
ಕಳೆದ ವರ್ಷ ಪ್ರಪಂಚದಾದ್ಯಂತ ಆಹಾರ ಅಭದ್ರತೆ ಸ್ಥಿತಿ ಭಾರೀ ಹದಗೆಟ್ಟಿದೆ, 2023ರಲ್ಲಿ ಸುಮಾರು 282 ಮಿಲಿಯನ್ ಜನರು ತೀವ್ರ ಹಸಿವಿನಿಂದ ಬಳಲಿದ್ದಾರೆ, ಇದರಲ್ಲಿ ವಿಶೇಷವಾಗಿ ಯುದ್ಧಪೀಡಿತ ಗಾಝಾ ಮತ್ತು ಸುಡಾನ್‌ನಲ್ಲಿ ಹೆಚ್ಚಿನ ಜನರು...