Homeಮುಖಪುಟಮಣಿಪುರ ಹಿಂಸಾಚಾರ ವಿಚಾರಕ್ಕೆ ಸದನದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ: ಸಂಸದ ಸಂಜಯ್ ಸಿಂಗ್‌ ಅಧಿವೇಶನದಿಂದ ಅಮಾನತು

ಮಣಿಪುರ ಹಿಂಸಾಚಾರ ವಿಚಾರಕ್ಕೆ ಸದನದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ: ಸಂಸದ ಸಂಜಯ್ ಸಿಂಗ್‌ ಅಧಿವೇಶನದಿಂದ ಅಮಾನತು

- Advertisement -
- Advertisement -

ಮಣಿಪುರ ಹಿಂಸಾಚಾರದ ಕುರಿತು ಸದನದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆಯ ಸಂದರ್ಭದಲ್ಲಿ ಅಶಿಸ್ತಿನ ವರ್ತನೆ ತೋರಿದ್ದಾರೆ ಎಂದು ಹೇಳಿ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಮಾನ್ಸೂನ್ ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ವಿರೋಧ ಪಕ್ಷದ ಸದಸ್ಯರು ಹಿಂಸಾಚಾರ ಪೀಡಿತ ರಾಜ್ಯದಲ್ಲಿನ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ಒತ್ತಾಯಿಸಿ ಘೋಷಣೆಗಳನ್ನು ಎತ್ತುವುದನ್ನು ಮುಂದುವರೆಸಿದರು. ಈ ವೇಳೆ ಸಂಜಯ್ ಸಿಂಗ್ ಅವರು ಸದನದ ಬಾವಿಗೆ ಇಳಿದು ಪ್ರತಿಭಟಿಸಿದರು. ಹಾಗಾಗಿ ಸಭಾಪತಿ ಜಗದೀಪ್ ಧನಕರ್ ಅವರು ಸಂಜಯ್ ಸಿಂಗ್ ಅವರನ್ನು ಅಮಾನತು ಮಾಡಿದ್ದಾರೆ.

ಸದನದ ನಾಯಕ ಪಿಯೂಷ್ ಗೋಯಲ್ ಅವರು ಸಿಂಗ್ ಅವರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು. ”ಈ ರೀತಿಯ ನಡವಳಿಕೆಯು ಬಾವಿಗೆ ಬರುವುದು ಮತ್ತು ಸದನವನ್ನು ತೊಂದರೆಗೊಳಿಸುವುದು ಸದನದ ನೈತಿಕತೆ ಮತ್ತು ನಿಯಮಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ” ಎಂದು ಗೋಯಲ್ ಹೇಳಿದರು.

ವಿರೋಧ ಪಕ್ಷದ ಸದಸ್ಯರ ದೊಡ್ಡ ಗದ್ದಲದ ನಡುವೆ ಧ್ವನಿ ಮತದ ಮೂಲಕ ಸದನವು ಈ ಪ್ರಸ್ತಾಪವನ್ನು ಅಂಗೀಕರಿಸಿತು.

ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸಿರುವುದನ್ನು ಪ್ರಕಟಿಸಿದ ರಾಜ್ಯಸಭಾ ಅಧ್ಯಕ್ಷರು, ”ಸಭಾಪತಿಯ ನಿರ್ದೇಶನವನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಸಂಜಯ್ ಸಿಂಗ್ ಅವರನ್ನು ಈ ಅಧಿವೇಶನದ ಸಂಪೂರ್ಣ ಅವಧಿಗೆ ಅಮಾನತುಗೊಳಿಸಲಾಗಿದೆ” ಎಂದು ಹೇಳಿದರು.

ಸಿಂಗ್ ಅವರನ್ನು ಅಮಾನತುಗೊಳಿಸಿದ ಕೂಡಲೇ ಸಭಾಪತಿಯವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು. ಪ್ರತಿಪಕ್ಷಗಳ ಸದಸ್ಯರು ಸದನದಲ್ಲಿ ಗದ್ದಲವನ್ನು ಮುಂದುವರೆಸಿದರು.

ಮಣಿಪುರ ವಿಚಾರವಾಗಿ ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಸಮಗ್ರ ಹೇಳಿಕೆ ನೀಡಬೇಕು: INDIA ಒಕ್ಕೂಟದಿಂದ ಒತ್ತಾಯ

ಗಾಂಧಿ ಪ್ರತಿಮೆ ಎದುರು ವಿಪಕ್ಷಗಳ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ವಿಚಾರದಲ್ಲಿ ಸರ್ಕಾರದ ಮೌನದ ವಿರುದ್ಧ ವಿರೋಧ ಪಕ್ಷ ಗಳ INDIA ಒಕ್ಕೂಟ ಸೋಮವಾರ ಸಂಸತ್ತಿನ ಎದುರಿಗಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಪ್ರಧಾನಿ ಮೋದಿ ಅವರು ಸಂಸತ್ತಿನಲ್ಲಿ ಮಾತನಾಡಬೇಕು ಎಂದು ಪುನರುಚ್ಚರಿಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಭಟನಾ ಸ್ಥಳದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ”ವಾಸ್ತವ ಸ್ಥಿತಿ ಏನೆಂಬುದರ ಕುರಿತು ಮೋದಿ ಬಂದು ಮಾತನಾಡಬೇಕು ಎಂದು ರಾಜ್ಯಸಭಾ ಮತ್ತು ಲೋಕಸಭೆಯ ಸ್ಪೀಕರ್‌ಗಳಿಬ್ಬರನ್ನೂ ಒತ್ತಾಯಿಸುತ್ತೇವೆ. ಪ್ರಧಾನಿ ಸಂಸತ್ತಿನ ಚೇಂಬರ್‌ಗಳಿಗೆ ಬರುವುದಿಲ್ಲ ಮತ್ತು ಅವರು ತಮ್ಮ ಕಚೇರಿಯಲ್ಲಿ ಕುಳಿತು ಏನು ನಡೆಯುತ್ತಿದೆ ಎಂಬುದನ್ನು ನೋಡುತ್ತಾರೆ. ಮಣಿಪುರದ ಬಗ್ಗೆ ಸಂಸತ್ತಿನಲ್ಲಿ ಪ್ರಧಾನಿ ಹೇಳಿಕೆ ನೀಡಿದರೆ, ನಾವು ಚರ್ಚೆ ನಡೆಸಬಹುದು” ಎಂದು ಹೇಳಿದರು.

”ಸಂಸತ್ತಿನ ಕಾರ್ಯವಿಧಾನದ ನಿಯಮ 267 ಅಂತಹ ವಿಷಯದ ಬಗ್ಗೆ ಒಂದು ಗಂಟೆ ಅಥವಾ ಇಡೀ ದಿನ ಚರ್ಚೆಗೆ ಅವಕಾಶ ನೀಡುತ್ತದೆ. ಆದರೆ ಅವರು [ಸರ್ಕಾರ] ಅದನ್ನು ಚರ್ಚೆ ಮಾಡಲು ಬಯಸುವುದಿಲ್ಲ. ಒಬ್ಬರು ಅರ್ಧ ಗಂಟೆ ಚರ್ಚೆ, ಮತ್ತೊಬ್ಬರು ಅಲ್ಪಾವಧಿ ಚರ್ಚೆ ಎನ್ನುತ್ತಾರೆ. ನೀವು [ಮೋದಿ] ಸದನಕ್ಕೆ ಬಂದು ಸತ್ಯವನ್ನು ಏಕೆ ಹೇಳುತ್ತಿಲ್ಲ?” ಎಂದು ಪ್ರಶ್ನೆ ಮಾಡಿದರು.

ಮಣಿಪುರದಲ್ಲಿ ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸುತ್ತಿರುವ ವಿಡಿಯೋ ಜುಲೈ 19 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಇದು ದೇಶಾದ್ಯಂತ ಆಕ್ರೋಶ ಹೆಚ್ಚಾಗಲು ಕಾರಣವಾಯಿತು. ಕಳೆದ ವಾರ ಮುಂಗಾರು ಅಧಿವೇಶನದ ಮೊದಲ ಎರಡು ದಿನಗಳಲ್ಲಿ ಈ ವಿಚಾರ ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದವು. ಆದರೆ ಸರ್ಕಾರ ಚರ್ಚೆ ನಡೆಸದೇ ಎರಡು ದಿನದ ಕಲಾಪವನ್ನು ವ್ಯರ್ಥ ಮಾಡಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉತ್ತರದ ನಂತರ ಉಭಯ ಸದನಗಳಲ್ಲಿ ಚರ್ಚೆ ನಡೆಸುವುದಾಗಿ ಸರ್ಕಾರ ಹೇಳಿತು ಆದರೆ ಪ್ರತಿಪಕ್ಷಗಳು ಮೋದಿ ಹೇಳಿಕೆಗೆ ಪಟ್ಟು ಹಿಡಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...