Homeಮುಖಪುಟಮಣಿಪುರ ಹಿಂಸಾಚಾರ ವಿಚಾರಕ್ಕೆ ಸದನದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ: ಸಂಸದ ಸಂಜಯ್ ಸಿಂಗ್‌ ಅಧಿವೇಶನದಿಂದ ಅಮಾನತು

ಮಣಿಪುರ ಹಿಂಸಾಚಾರ ವಿಚಾರಕ್ಕೆ ಸದನದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ: ಸಂಸದ ಸಂಜಯ್ ಸಿಂಗ್‌ ಅಧಿವೇಶನದಿಂದ ಅಮಾನತು

- Advertisement -
- Advertisement -

ಮಣಿಪುರ ಹಿಂಸಾಚಾರದ ಕುರಿತು ಸದನದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆಯ ಸಂದರ್ಭದಲ್ಲಿ ಅಶಿಸ್ತಿನ ವರ್ತನೆ ತೋರಿದ್ದಾರೆ ಎಂದು ಹೇಳಿ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಮಾನ್ಸೂನ್ ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ವಿರೋಧ ಪಕ್ಷದ ಸದಸ್ಯರು ಹಿಂಸಾಚಾರ ಪೀಡಿತ ರಾಜ್ಯದಲ್ಲಿನ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ಒತ್ತಾಯಿಸಿ ಘೋಷಣೆಗಳನ್ನು ಎತ್ತುವುದನ್ನು ಮುಂದುವರೆಸಿದರು. ಈ ವೇಳೆ ಸಂಜಯ್ ಸಿಂಗ್ ಅವರು ಸದನದ ಬಾವಿಗೆ ಇಳಿದು ಪ್ರತಿಭಟಿಸಿದರು. ಹಾಗಾಗಿ ಸಭಾಪತಿ ಜಗದೀಪ್ ಧನಕರ್ ಅವರು ಸಂಜಯ್ ಸಿಂಗ್ ಅವರನ್ನು ಅಮಾನತು ಮಾಡಿದ್ದಾರೆ.

ಸದನದ ನಾಯಕ ಪಿಯೂಷ್ ಗೋಯಲ್ ಅವರು ಸಿಂಗ್ ಅವರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು. ”ಈ ರೀತಿಯ ನಡವಳಿಕೆಯು ಬಾವಿಗೆ ಬರುವುದು ಮತ್ತು ಸದನವನ್ನು ತೊಂದರೆಗೊಳಿಸುವುದು ಸದನದ ನೈತಿಕತೆ ಮತ್ತು ನಿಯಮಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ” ಎಂದು ಗೋಯಲ್ ಹೇಳಿದರು.

ವಿರೋಧ ಪಕ್ಷದ ಸದಸ್ಯರ ದೊಡ್ಡ ಗದ್ದಲದ ನಡುವೆ ಧ್ವನಿ ಮತದ ಮೂಲಕ ಸದನವು ಈ ಪ್ರಸ್ತಾಪವನ್ನು ಅಂಗೀಕರಿಸಿತು.

ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸಿರುವುದನ್ನು ಪ್ರಕಟಿಸಿದ ರಾಜ್ಯಸಭಾ ಅಧ್ಯಕ್ಷರು, ”ಸಭಾಪತಿಯ ನಿರ್ದೇಶನವನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಸಂಜಯ್ ಸಿಂಗ್ ಅವರನ್ನು ಈ ಅಧಿವೇಶನದ ಸಂಪೂರ್ಣ ಅವಧಿಗೆ ಅಮಾನತುಗೊಳಿಸಲಾಗಿದೆ” ಎಂದು ಹೇಳಿದರು.

ಸಿಂಗ್ ಅವರನ್ನು ಅಮಾನತುಗೊಳಿಸಿದ ಕೂಡಲೇ ಸಭಾಪತಿಯವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು. ಪ್ರತಿಪಕ್ಷಗಳ ಸದಸ್ಯರು ಸದನದಲ್ಲಿ ಗದ್ದಲವನ್ನು ಮುಂದುವರೆಸಿದರು.

ಮಣಿಪುರ ವಿಚಾರವಾಗಿ ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಸಮಗ್ರ ಹೇಳಿಕೆ ನೀಡಬೇಕು: INDIA ಒಕ್ಕೂಟದಿಂದ ಒತ್ತಾಯ

ಗಾಂಧಿ ಪ್ರತಿಮೆ ಎದುರು ವಿಪಕ್ಷಗಳ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ವಿಚಾರದಲ್ಲಿ ಸರ್ಕಾರದ ಮೌನದ ವಿರುದ್ಧ ವಿರೋಧ ಪಕ್ಷ ಗಳ INDIA ಒಕ್ಕೂಟ ಸೋಮವಾರ ಸಂಸತ್ತಿನ ಎದುರಿಗಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಪ್ರಧಾನಿ ಮೋದಿ ಅವರು ಸಂಸತ್ತಿನಲ್ಲಿ ಮಾತನಾಡಬೇಕು ಎಂದು ಪುನರುಚ್ಚರಿಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಭಟನಾ ಸ್ಥಳದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ”ವಾಸ್ತವ ಸ್ಥಿತಿ ಏನೆಂಬುದರ ಕುರಿತು ಮೋದಿ ಬಂದು ಮಾತನಾಡಬೇಕು ಎಂದು ರಾಜ್ಯಸಭಾ ಮತ್ತು ಲೋಕಸಭೆಯ ಸ್ಪೀಕರ್‌ಗಳಿಬ್ಬರನ್ನೂ ಒತ್ತಾಯಿಸುತ್ತೇವೆ. ಪ್ರಧಾನಿ ಸಂಸತ್ತಿನ ಚೇಂಬರ್‌ಗಳಿಗೆ ಬರುವುದಿಲ್ಲ ಮತ್ತು ಅವರು ತಮ್ಮ ಕಚೇರಿಯಲ್ಲಿ ಕುಳಿತು ಏನು ನಡೆಯುತ್ತಿದೆ ಎಂಬುದನ್ನು ನೋಡುತ್ತಾರೆ. ಮಣಿಪುರದ ಬಗ್ಗೆ ಸಂಸತ್ತಿನಲ್ಲಿ ಪ್ರಧಾನಿ ಹೇಳಿಕೆ ನೀಡಿದರೆ, ನಾವು ಚರ್ಚೆ ನಡೆಸಬಹುದು” ಎಂದು ಹೇಳಿದರು.

”ಸಂಸತ್ತಿನ ಕಾರ್ಯವಿಧಾನದ ನಿಯಮ 267 ಅಂತಹ ವಿಷಯದ ಬಗ್ಗೆ ಒಂದು ಗಂಟೆ ಅಥವಾ ಇಡೀ ದಿನ ಚರ್ಚೆಗೆ ಅವಕಾಶ ನೀಡುತ್ತದೆ. ಆದರೆ ಅವರು [ಸರ್ಕಾರ] ಅದನ್ನು ಚರ್ಚೆ ಮಾಡಲು ಬಯಸುವುದಿಲ್ಲ. ಒಬ್ಬರು ಅರ್ಧ ಗಂಟೆ ಚರ್ಚೆ, ಮತ್ತೊಬ್ಬರು ಅಲ್ಪಾವಧಿ ಚರ್ಚೆ ಎನ್ನುತ್ತಾರೆ. ನೀವು [ಮೋದಿ] ಸದನಕ್ಕೆ ಬಂದು ಸತ್ಯವನ್ನು ಏಕೆ ಹೇಳುತ್ತಿಲ್ಲ?” ಎಂದು ಪ್ರಶ್ನೆ ಮಾಡಿದರು.

ಮಣಿಪುರದಲ್ಲಿ ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸುತ್ತಿರುವ ವಿಡಿಯೋ ಜುಲೈ 19 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಇದು ದೇಶಾದ್ಯಂತ ಆಕ್ರೋಶ ಹೆಚ್ಚಾಗಲು ಕಾರಣವಾಯಿತು. ಕಳೆದ ವಾರ ಮುಂಗಾರು ಅಧಿವೇಶನದ ಮೊದಲ ಎರಡು ದಿನಗಳಲ್ಲಿ ಈ ವಿಚಾರ ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದವು. ಆದರೆ ಸರ್ಕಾರ ಚರ್ಚೆ ನಡೆಸದೇ ಎರಡು ದಿನದ ಕಲಾಪವನ್ನು ವ್ಯರ್ಥ ಮಾಡಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉತ್ತರದ ನಂತರ ಉಭಯ ಸದನಗಳಲ್ಲಿ ಚರ್ಚೆ ನಡೆಸುವುದಾಗಿ ಸರ್ಕಾರ ಹೇಳಿತು ಆದರೆ ಪ್ರತಿಪಕ್ಷಗಳು ಮೋದಿ ಹೇಳಿಕೆಗೆ ಪಟ್ಟು ಹಿಡಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...