Homeಮುಖಪುಟಮಣಿಪುರ ಹಿಂಸಾಚಾರ ವಿಚಾರಕ್ಕೆ ಸದನದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ: ಸಂಸದ ಸಂಜಯ್ ಸಿಂಗ್‌ ಅಧಿವೇಶನದಿಂದ ಅಮಾನತು

ಮಣಿಪುರ ಹಿಂಸಾಚಾರ ವಿಚಾರಕ್ಕೆ ಸದನದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆ: ಸಂಸದ ಸಂಜಯ್ ಸಿಂಗ್‌ ಅಧಿವೇಶನದಿಂದ ಅಮಾನತು

- Advertisement -
- Advertisement -

ಮಣಿಪುರ ಹಿಂಸಾಚಾರದ ಕುರಿತು ಸದನದಲ್ಲಿ ಪ್ರತಿಪಕ್ಷಗಳ ಪ್ರತಿಭಟನೆಯ ಸಂದರ್ಭದಲ್ಲಿ ಅಶಿಸ್ತಿನ ವರ್ತನೆ ತೋರಿದ್ದಾರೆ ಎಂದು ಹೇಳಿ ಎಎಪಿ ಸಂಸದ ಸಂಜಯ್ ಸಿಂಗ್ ಅವರನ್ನು ಮಾನ್ಸೂನ್ ಅಧಿವೇಶನದ ಉಳಿದ ಅವಧಿಗೆ ರಾಜ್ಯಸಭೆಯಿಂದ ಅಮಾನತುಗೊಳಿಸಲಾಗಿದೆ.

ವಿರೋಧ ಪಕ್ಷದ ಸದಸ್ಯರು ಹಿಂಸಾಚಾರ ಪೀಡಿತ ರಾಜ್ಯದಲ್ಲಿನ ಪರಿಸ್ಥಿತಿಯ ಬಗ್ಗೆ ಚರ್ಚೆಗೆ ಒತ್ತಾಯಿಸಿ ಘೋಷಣೆಗಳನ್ನು ಎತ್ತುವುದನ್ನು ಮುಂದುವರೆಸಿದರು. ಈ ವೇಳೆ ಸಂಜಯ್ ಸಿಂಗ್ ಅವರು ಸದನದ ಬಾವಿಗೆ ಇಳಿದು ಪ್ರತಿಭಟಿಸಿದರು. ಹಾಗಾಗಿ ಸಭಾಪತಿ ಜಗದೀಪ್ ಧನಕರ್ ಅವರು ಸಂಜಯ್ ಸಿಂಗ್ ಅವರನ್ನು ಅಮಾನತು ಮಾಡಿದ್ದಾರೆ.

ಸದನದ ನಾಯಕ ಪಿಯೂಷ್ ಗೋಯಲ್ ಅವರು ಸಿಂಗ್ ಅವರನ್ನು ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸುವ ಪ್ರಸ್ತಾಪವನ್ನು ಮಂಡಿಸಿದರು. ”ಈ ರೀತಿಯ ನಡವಳಿಕೆಯು ಬಾವಿಗೆ ಬರುವುದು ಮತ್ತು ಸದನವನ್ನು ತೊಂದರೆಗೊಳಿಸುವುದು ಸದನದ ನೈತಿಕತೆ ಮತ್ತು ನಿಯಮಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ” ಎಂದು ಗೋಯಲ್ ಹೇಳಿದರು.

ವಿರೋಧ ಪಕ್ಷದ ಸದಸ್ಯರ ದೊಡ್ಡ ಗದ್ದಲದ ನಡುವೆ ಧ್ವನಿ ಮತದ ಮೂಲಕ ಸದನವು ಈ ಪ್ರಸ್ತಾಪವನ್ನು ಅಂಗೀಕರಿಸಿತು.

ಸಂಜಯ್ ಸಿಂಗ್ ಅವರನ್ನು ಅಮಾನತುಗೊಳಿಸಿರುವುದನ್ನು ಪ್ರಕಟಿಸಿದ ರಾಜ್ಯಸಭಾ ಅಧ್ಯಕ್ಷರು, ”ಸಭಾಪತಿಯ ನಿರ್ದೇಶನವನ್ನು ಪದೇ ಪದೇ ಉಲ್ಲಂಘಿಸಿದ್ದಕ್ಕಾಗಿ ಸಂಜಯ್ ಸಿಂಗ್ ಅವರನ್ನು ಈ ಅಧಿವೇಶನದ ಸಂಪೂರ್ಣ ಅವಧಿಗೆ ಅಮಾನತುಗೊಳಿಸಲಾಗಿದೆ” ಎಂದು ಹೇಳಿದರು.

ಸಿಂಗ್ ಅವರನ್ನು ಅಮಾನತುಗೊಳಿಸಿದ ಕೂಡಲೇ ಸಭಾಪತಿಯವರು ಕಲಾಪವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಿದರು. ಪ್ರತಿಪಕ್ಷಗಳ ಸದಸ್ಯರು ಸದನದಲ್ಲಿ ಗದ್ದಲವನ್ನು ಮುಂದುವರೆಸಿದರು.

ಮಣಿಪುರ ವಿಚಾರವಾಗಿ ಸದನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದ ಹೇಳಿಕೆ ನೀಡಬೇಕು ಎಂದು ಒತ್ತಾಯಿಸಿದರು.

ಇದನ್ನೂ ಓದಿ: ಮಣಿಪುರ ಹಿಂಸಾಚಾರ ಕುರಿತು ಪ್ರಧಾನಿ ಮೋದಿ ಸಂಸತ್ತಿನಲ್ಲಿ ಸಮಗ್ರ ಹೇಳಿಕೆ ನೀಡಬೇಕು: INDIA ಒಕ್ಕೂಟದಿಂದ ಒತ್ತಾಯ

ಗಾಂಧಿ ಪ್ರತಿಮೆ ಎದುರು ವಿಪಕ್ಷಗಳ ಪ್ರತಿಭಟನೆ

ಮಣಿಪುರದಲ್ಲಿ ನಡೆದ ಜನಾಂಗೀಯ ಹಿಂಸಾಚಾರದ ವಿಚಾರದಲ್ಲಿ ಸರ್ಕಾರದ ಮೌನದ ವಿರುದ್ಧ ವಿರೋಧ ಪಕ್ಷ ಗಳ INDIA ಒಕ್ಕೂಟ ಸೋಮವಾರ ಸಂಸತ್ತಿನ ಎದುರಿಗಿನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಈ ಬಗ್ಗೆ ಪ್ರಧಾನಿ ಮೋದಿ ಅವರು ಸಂಸತ್ತಿನಲ್ಲಿ ಮಾತನಾಡಬೇಕು ಎಂದು ಪುನರುಚ್ಚರಿಸಿದರು.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಪ್ರತಿಭಟನಾ ಸ್ಥಳದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿ, ”ವಾಸ್ತವ ಸ್ಥಿತಿ ಏನೆಂಬುದರ ಕುರಿತು ಮೋದಿ ಬಂದು ಮಾತನಾಡಬೇಕು ಎಂದು ರಾಜ್ಯಸಭಾ ಮತ್ತು ಲೋಕಸಭೆಯ ಸ್ಪೀಕರ್‌ಗಳಿಬ್ಬರನ್ನೂ ಒತ್ತಾಯಿಸುತ್ತೇವೆ. ಪ್ರಧಾನಿ ಸಂಸತ್ತಿನ ಚೇಂಬರ್‌ಗಳಿಗೆ ಬರುವುದಿಲ್ಲ ಮತ್ತು ಅವರು ತಮ್ಮ ಕಚೇರಿಯಲ್ಲಿ ಕುಳಿತು ಏನು ನಡೆಯುತ್ತಿದೆ ಎಂಬುದನ್ನು ನೋಡುತ್ತಾರೆ. ಮಣಿಪುರದ ಬಗ್ಗೆ ಸಂಸತ್ತಿನಲ್ಲಿ ಪ್ರಧಾನಿ ಹೇಳಿಕೆ ನೀಡಿದರೆ, ನಾವು ಚರ್ಚೆ ನಡೆಸಬಹುದು” ಎಂದು ಹೇಳಿದರು.

”ಸಂಸತ್ತಿನ ಕಾರ್ಯವಿಧಾನದ ನಿಯಮ 267 ಅಂತಹ ವಿಷಯದ ಬಗ್ಗೆ ಒಂದು ಗಂಟೆ ಅಥವಾ ಇಡೀ ದಿನ ಚರ್ಚೆಗೆ ಅವಕಾಶ ನೀಡುತ್ತದೆ. ಆದರೆ ಅವರು [ಸರ್ಕಾರ] ಅದನ್ನು ಚರ್ಚೆ ಮಾಡಲು ಬಯಸುವುದಿಲ್ಲ. ಒಬ್ಬರು ಅರ್ಧ ಗಂಟೆ ಚರ್ಚೆ, ಮತ್ತೊಬ್ಬರು ಅಲ್ಪಾವಧಿ ಚರ್ಚೆ ಎನ್ನುತ್ತಾರೆ. ನೀವು [ಮೋದಿ] ಸದನಕ್ಕೆ ಬಂದು ಸತ್ಯವನ್ನು ಏಕೆ ಹೇಳುತ್ತಿಲ್ಲ?” ಎಂದು ಪ್ರಶ್ನೆ ಮಾಡಿದರು.

ಮಣಿಪುರದಲ್ಲಿ ಮೂವರು ಮಹಿಳೆಯರನ್ನು ವಿವಸ್ತ್ರಗೊಳಿಸಿ ಮೆರವಣಿಗೆ ನಡೆಸುತ್ತಿರುವ ವಿಡಿಯೋ ಜುಲೈ 19 ರಂದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು. ಇದು ದೇಶಾದ್ಯಂತ ಆಕ್ರೋಶ ಹೆಚ್ಚಾಗಲು ಕಾರಣವಾಯಿತು. ಕಳೆದ ವಾರ ಮುಂಗಾರು ಅಧಿವೇಶನದ ಮೊದಲ ಎರಡು ದಿನಗಳಲ್ಲಿ ಈ ವಿಚಾರ ಚರ್ಚೆ ನಡೆಸಬೇಕು ಎಂದು ಪ್ರತಿಪಕ್ಷಗಳು ಒತ್ತಾಯಿಸಿದವು. ಆದರೆ ಸರ್ಕಾರ ಚರ್ಚೆ ನಡೆಸದೇ ಎರಡು ದಿನದ ಕಲಾಪವನ್ನು ವ್ಯರ್ಥ ಮಾಡಿದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಉತ್ತರದ ನಂತರ ಉಭಯ ಸದನಗಳಲ್ಲಿ ಚರ್ಚೆ ನಡೆಸುವುದಾಗಿ ಸರ್ಕಾರ ಹೇಳಿತು ಆದರೆ ಪ್ರತಿಪಕ್ಷಗಳು ಮೋದಿ ಹೇಳಿಕೆಗೆ ಪಟ್ಟು ಹಿಡಿದಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...