Homeಮುಖಪುಟಯುಪಿಯಲ್ಲಿ ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ನಿಷೇಧ: ಹಿಂದುಳಿದ ಸಮುದಾಯಗಳ ಧ್ವನಿ ಅಡಗಿಸುವ ತಂತ್ರ ಎಂದ...

ಯುಪಿಯಲ್ಲಿ ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ನಿಷೇಧ: ಹಿಂದುಳಿದ ಸಮುದಾಯಗಳ ಧ್ವನಿ ಅಡಗಿಸುವ ತಂತ್ರ ಎಂದ ಪ್ರತಿಪಕ್ಷಗಳು

- Advertisement -
- Advertisement -

ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ಮತ್ತು ಜಾತಿ ಆಧಾರಿತ ಫಲಕಗಳ ಸಾರ್ವಜನಿಕ ಪ್ರದರ್ಶನವನ್ನು ನಿಷೇಧಿಸಿ ಉತ್ತರ ಪ್ರದೇಶ ರಾಜ್ಯ ಸರ್ಕಾರ ಹೊರಡಿಸಿರುವ ನಿರ್ದೇಶನವನ್ನು ಪ್ರತಿಪಕ್ಷಗಳು ಟೀಕಿಸಿವೆ.

ಈ ಆದೇಶ ಅಪಾಯಕಾರಿ ಮತ್ತು ಹಿಂದುಳಿದ ಸಮುದಾಯಗಳ ಧ್ವನಿಯನ್ನು ಅಡಗಿಸಲು ಮಾಡಿದ ‘ಕಣ್ಣೊರೆಸುವ ತಂತ್ರ’ ಎಂದು ಹೇಳಿದೆ.

ಭಾನುವಾರ (ಸೆ.21) ಉತ್ತರ ಪ್ರದೇಶ ಸರ್ಕಾರ ಹೊರಡಿಸಿ ನಿರ್ದೇಶನದಲ್ಲಿ ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ಸಾಮಾಜಿಕ ಸಂಘರ್ಷವನ್ನು ಉತ್ತೇಜಿಸುತ್ತವೆ. ಸಾರ್ವಜನಿಕ ಸುವ್ಯವಸ್ಥೆಗೆ ಬೆದರಿಕೆ ಉಂಟು ಮಾಡುತ್ತವೆ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುತ್ತವೆ ಎಂದು ಹೇಳಿದೆ.

ಜಿಲ್ಲಾ ನ್ಯಾಯಾಧೀಶರು, ಪೊಲೀಸ್ ಮುಖ್ಯಸ್ಥರು ಮತ್ತು ಇತರ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ದೀಪಕ್ ಕುಮಾರ್ ಅವರು ಹೊರಡಿಸಿದ ನಿರ್ದೇಶನದಲ್ಲಿ, ಜಾತಿ ಆಧಾರಿತ ಪ್ರದರ್ಶನಗಳು ಮತ್ತು ಪ್ರತಿಭಟನೆಗಳ ಮೂಲಕ ವಿಭಜನೆಯನ್ನು ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಪೊಲೀಸ್ ದಾಖಲೆಗಳು ಸೇರಿದಂತೆ ಸಾರ್ವಜನಿಕ ದಾಖಲೆಗಳಲ್ಲಿ ಜಾತಿ ಘೋಷಣೆಯನ್ನು ನಿಷೇಧಿಸಿ ಅಲಹಾಬಾದ್ ಹೈಕೋರ್ಟ್ ಆದೇಶ ಹೊರಡಿಸಿದ ಐದು ದಿನಗಳ ನಂತರ ಸರ್ಕಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ವಾಹನಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಜಾತಿ ವೈಭವೀಕರಣದ ಅಭ್ಯಾಸವನ್ನು ನ್ಯಾಯಾಲಯವು ಆಕ್ಷೇಪಿಸಿದೆ.

ಸರ್ಕಾರದ ನಿರ್ದೇಶವನ್ನು ಉಲ್ಲೇಖಿಸಿ ಸೋಮವಾರ (ಸೆ.22) ಹೇಳಿಕೆ ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು “5,000 ವರ್ಷಗಳಿಂದ ನಮ್ಮ ಮನಸ್ಸಿನಲ್ಲಿ ಬೇರೂರಿರುವ ಜಾತಿ ತಾರತಮ್ಯವನ್ನು ತೆಗೆದುಹಾಕಲು ಏನು ಮಾಡುವುದು?” ಎಂದು ಪ್ರಶ್ನಿಸಿದ್ದಾರೆ.

“ಬಟ್ಟೆ, ವೇಷಭೂಷಣಗಳು ಮತ್ತು ಚಿಹ್ನೆಗಳ ಪ್ರದರ್ಶನಗಳಿಂದ ಉಂಟಾಗುವ ಜಾತಿ ತಾರತಮ್ಯವನ್ನು ನಿರ್ಮೂಲನೆ ಮಾಡಲು ಏನು ಮಾಡುವುದು?” ಎಂದು ಕೇಳಿದ್ದಾರೆ.

“ಯಾರನ್ನಾದರೂ ಭೇಟಿಯಾದಾಗ ಅವರ ಹೆಸರಿಗಿಂತ ಮೊದಲು ‘ಜಾತಿ’ ಕೇಳುವ ಜಾತಿ ತಾರತಮ್ಯದ ಮನಸ್ಥಿತಿಯನ್ನು ಕೊನೆಗೊಳಿಸಲು ಏನು ಮಾಡುವುದು? ಯಾರನ್ನಾದರೂ ತಮ್ಮ ಮನೆಯನ್ನು ಸ್ವಚ್ಛಗೊಳಿಸುವಂತೆ ಮಾಡುವ ಜಾತಿ ತಾರತಮ್ಯದ ಚಿಂತನೆಯನ್ನು ಕೊನೆಗೊಳಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತೀರಾ?”ಎಂದಿದ್ದಾರೆ.

ಸುಳ್ಳು ಮತ್ತು ಮಾನಹಾನಿಕರ ಆರೋಪಗಳನ್ನು ಮಾಡುವ ಮೂಲಕ ಯಾರನ್ನಾದರೂ ದೂಷಿಸಲು ಮಾಡುವ ‘ಜಾತಿ ಆಧಾರಿತ ಪಿತೂರಿಗಳನ್ನು’ ಕೊನೆಗೊಳಿಸಲು ಏನು ಮಾಡುತ್ತೀರಾ? ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ.

ಗುರ್ಜರ್ ಸಮುದಾಯದ ರಾಜಕೀಯ ಅರಿವಿನ ಬಗ್ಗೆ ಉತ್ತರ ಪ್ರದೇಶ ಸರ್ಕಾರಕ್ಕೆ ‘ಹೆದರಿಕೆ’ ಇದೆಯೇ? ಎಂದು ಸಮಾಜವಾದಿ ಪಕ್ಷದ ವಕ್ತಾರ ರಾಜ್‌ಕುಮಾರ್ ಭಾಟಿ ಕೇಳಿದ್ದಾರೆ.

ಭಾನುವಾರ ನಿರ್ದೇಶನ ಹೊರಡಿಸುವ ಮೊದಲು ಬಿಜೆಪಿಯೇ ಜಾತಿ ರ‍್ಯಾಲಿಗಳು ಮತ್ತು ಸಮ್ಮೇಳನಗಳನ್ನು ಆಯೋಜಿಸುತ್ತಿತ್ತು ಎಂದು ಭಾಟಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಿಂದುತ್ವ ಪಕ್ಷವು ಒಂದು ತಿಂಗಳ ಕಾಲ ಹಲವಾರು ಜಾತಿ ಗುಂಪುಗಳೊಂದಿಗೆ ಸಭೆಗಳನ್ನು ನಡೆಸಿತ್ತು ಎಂದಿದ್ದಾರೆ.

“ಬಿಜೆಪಿ ತಮ್ಮ ಸರ್ಕಾರವು ಪ್ರತಿ ಜಾತಿಯಿಂದ ಎಷ್ಟು ಸಚಿವರನ್ನು ನೇಮಿಸಿದೆ ಎಂಬುದನ್ನು ತೋರಿಸುವ ಫಲಕಗಳನ್ನು ಲಕ್ನೋದಲ್ಲಿ ಹಾಕಿತ್ತು” ಎಂದು ರಾಜ್‌ಕುಮಾರ್ ಭಾಟಿ ಹೇಳಿದ್ದಾರೆ.

ಗಾಝಿಯಾಬಾದ್ ವಿಧಾನಸಭಾ ಉಪಚುನಾವಣೆಯ ಸಮಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೋಡ್ ಶೋ ನಡೆಸಿದ್ದರು. ಅಲ್ಲಿ ವಿವಿಧ ಜಾತಿಗಳಿಗೆ ಹತ್ತು ಸ್ವಾಗತ ವೇದಿಕೆಗಳನ್ನು ಸ್ಥಾಪಿಸಲಾಗಿತ್ತು, ಪ್ರತಿಯೊಂದರ ಮೇಲೆ ಆಯಾ ಜಾತಿಗಳ ಹೆಸರುಗಳನ್ನು ಬರೆಯಲಾಗಿತ್ತು ಎಂದು ನೆನಪಿಸಿದ್ದಾರೆ.

“ಇಂದು, ಗುರ್ಜರ್ ಸಮುದಾಯದಲ್ಲಿ ರಾಜಕೀಯ ಜಾಗೃತಿ ಮೂಡಿಸಲು ಅಭಿಯಾನ ನಡೆಯುತ್ತಿರುವಾಗ ಮತ್ತು ನಾವು ಬೃಹತ್ ಗುರ್ಜರ್ ರ‍್ಯಾಲಿಯನ್ನು ಘೋಷಿಸಿರುವಾಗ, ಜಾತಿಗಳ ಹೆಸರಿನಲ್ಲಿ ರ‍್ಯಾಲಿಗಳನ್ನು ನಡೆಸಬಾರದು ಎಂದು ಸರ್ಕಾರಕ್ಕೆ ಇದ್ದಕ್ಕಿದ್ದಂತೆ ಹೇಗೆ ನೆನಪಾಯಿತು?” ಎಂದು ಅವರು ಕೇಳಿದ್ದಾರೆ.

ಸಮಾಜವಾದಿ ಪಕ್ಷದ ಮತ್ತೊಬ್ಬ ನಾಯಕ ಉದಯವೀರ್ ಸಿಂಗ್, “ಬಿಜೆಪಿ ಸರ್ಕಾರವು ಮೊದಲು ತನ್ನ ಜಾತಿ ಆಧಾರಿತ ಮನಸ್ಥಿತಿಯನ್ನು ಹೇಗೆ ತೆಗೆದು ಹಾಕುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ” ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಮ್ಮ ಪಕ್ಷ ಎಂದಿಗೂ ಜಾತಿ ಆಧಾರಿತ ರ‍್ಯಾಲಿಗಳನ್ನು ನಡೆಸುವುದಿಲ್ಲ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಹೇಳಿದ್ದಾರೆ.

“ವಾಸ್ತವವಾಗಿ, ಬಿಜೆಪಿ ಜಾತಿ ಆಧಾರಿತ ರಾಜಕೀಯವನ್ನು ಹೆಚ್ಚು ಉತ್ತೇಜಿಸುತ್ತದೆ” ಎಂದು ಅಜಯ್ ರೈ ಹೇಳಿದ್ದಾಗಿ ಪತ್ರಿಕೆಯೊಂದು ಉಲ್ಲೇಖಿಸಿದೆ. “ಆರ್‌ಎಸ್‌ಎಸ್ [ರಾಷ್ಟ್ರೀಯ ಸ್ವಯಂಸೇವಕ ಸಂಘ] ಜಾತಿ ಆಧಾರಿತ ಪ್ರತಿನಿಧಿಗಳನ್ನು ಹೊಂದಿದೆ” ಎಂದು ರೈ ಹೇಳಿದ್ದಾರೆ.

ಈ ಆದೇಶವನ್ನು ಹೇಗೆ ಜಾರಿಗೆ ತರುತ್ತೀರಿ? ಇದು ವಿರೋಧ ಪಕ್ಷಗಳಿಗೆ ಕಿರುಕುಳ ನೀಡುವ ಮತ್ತೊಂದು ಕಾರ್ಯವಿಧಾನವಾಗಿ ಬದಲಾಗುತ್ತಾ? ಎಂದು ಕಾದು ನೋಡಬೇಕಾಗಿದೆ ಎಂದು ರೈ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರ ಅಪಾಯಕಾರಿ. ದಲಿತ ಸಮುದಾಯ ಮತ್ತು ಇತರ ತಳಮಟ್ಟದ ಗುಂಪುಗಳ ಧ್ವನಿಗಳನ್ನು ಅಡಗಿಸಲು ಮಾಡುವ ‘ಕಣ್ಣೊರೆಸುವ ತಂತ್ರ’ ಎಂದು ಕಾಂಗ್ರೆಸ್ ನಾಯಕ ಅನಿಲ್ ಯಾದವ್ ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಭಾನುವಾರ ಹೊರಡಿಸಲಾದ ನಿರ್ದೇಶನವು ‘ಅನ್ಯಾಯದ ಶಕ್ತಿಗಳನ್ನು ಮತ್ತಷ್ಟು ಧೈರ್ಯಗೊಳಿಸುತ್ತದೆ ಮತ್ತು ಅಂತಿಮವಾಗಿ ತಾರತಮ್ಯದ ವಿರುದ್ಧ ಹೋರಾಡುವ ಸಾಮಾಜಿಕ ಸಮುದಾಯ ಆಧಾರಿತ ಗುಂಪುಗಳನ್ನು ಗುರಿಯಾಗಿಸುತ್ತದೆ’ ಎಂದು ಅನಿಲ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಕಾನೂನು ಅಗತ್ಯತೆ ಇಲ್ಲದೆ ಜಾತಿಯನ್ನು ದಾಖಲಿಸುವುದು ಅಥವಾ ಘೋಷಿಸುವುದು ಗುರುತಿನ ಪ್ರೊಫೈಲಿಂಗ್‌ಗೆ ಸಮನಾಗಿರುತ್ತದೆ. ಇದು ಪೂರ್ವಾಗ್ರಹವನ್ನು ಬಲಪಡಿಸುತ್ತದೆ ಮತ್ತು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ಭಾನುವಾರ, ರಾಜ್ಯ ಸರ್ಕಾರವು ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿ ತನ್ನ ನಿರ್ದೇಶನವನ್ನು ಹೊರಡಿಸಿದೆ.

ಬಂಧನ ಮೆಮೊಗಳು ಮತ್ತು ಠಾಣೆಯ ಸೂಚನಾ ಫಲಕಗಳಂತಹ ಪೊಲೀಸ್ ದಾಖಲೆಗಳು ಜಾತಿ ವಿವರಗಳನ್ನು ಹೊಂದಿರಬಾರದು. ಇಬ್ಬರೂ ಪೋಷಕರ ಹೆಸರನ್ನು ದಾಖಲಿಸಬೇಕು ಎಂದು ನಿರ್ದೇಶನದಲ್ಲಿ ತಿಳಿಸಲಾಗಿದೆ.

ಅಪರಾಧ ಮತ್ತು ಅಪರಾಧ ಟ್ರ್ಯಾಕಿಂಗ್ ನೆಟ್‌ವರ್ಕ್ ಮತ್ತು ಸಿಸ್ಟಮ್ಸ್ ಪೋರ್ಟಲ್‌ನಿಂದ ಜಾತಿ ಕಾಲಮ್‌ಗಳನ್ನು ತೆಗೆದುಹಾಕಲು ಮತ್ತು ಬದಲಾವಣೆಗಳನ್ನು ಮಾಡುವವರೆಗೆ ಆ ಜಾಗವನ್ನು ಖಾಲಿ ಬಿಡಲು ಅಧಿಕಾರಿಗಳಿಗೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದೊಂದಿಗೆ ಸಂಯೋಜನೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಅಪರಾಧಗಳಂತಹ ಜಾತಿ ಗುರುತುಗಳನ್ನು ನಮೂದಿಸುವುದು ಕಾನೂನಿನಲ್ಲಿ ಅಗತ್ಯವಿದ್ದಾಗ ಮಾತ್ರ ವಿನಾಯಿತಿಗಳನ್ನು ನೀಡಬಹುದು ಎಂದು ಸರ್ಕಾರದ ನಿರ್ದೇಶನದಲ್ಲಿ ತಿಳಿಸಿದೆ.

ಜಾತಿ ಘೋಷಣೆಗಳು ಅಥವಾ ಸ್ಟಿಕ್ಕರ್‌ಗಳನ್ನು ಹೊತ್ತ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ದಂಡ ವಿಧಿಸಬೇಕು ಮತ್ತು ಜಾತಿಯನ್ನು ವೈಭವೀಕರಿಸುವ ಅಥವಾ ಪ್ರದೇಶಗಳನ್ನು ಜಾತಿ ಪ್ರದೇಶಗಳಾಗಿ ಘೋಷಿಸುವ ಸೈನ್‌ಬೋರ್ಡ್‌ಗಳನ್ನು ತೆಗೆದುಹಾಕಬೇಕು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ರಾಜಸ್ಥಾನ: ದೇವಾಲಯ ಪ್ರವೇಶಿಸಲು ಯತ್ನಿಸಿದ ದಲಿತ ವ್ಯಕ್ತಿ ಮೇಲೆ ಗುಂಪು ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...