Homeಮುಖಪುಟಯುಪಿಯಲ್ಲಿ ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ನಿಷೇಧ: ಹಿಂದುಳಿದ ಸಮುದಾಯಗಳ ಧ್ವನಿ ಅಡಗಿಸುವ ತಂತ್ರ ಎಂದ...

ಯುಪಿಯಲ್ಲಿ ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ನಿಷೇಧ: ಹಿಂದುಳಿದ ಸಮುದಾಯಗಳ ಧ್ವನಿ ಅಡಗಿಸುವ ತಂತ್ರ ಎಂದ ಪ್ರತಿಪಕ್ಷಗಳು

- Advertisement -
- Advertisement -

ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ಮತ್ತು ಜಾತಿ ಆಧಾರಿತ ಫಲಕಗಳ ಸಾರ್ವಜನಿಕ ಪ್ರದರ್ಶನವನ್ನು ನಿಷೇಧಿಸಿ ಉತ್ತರ ಪ್ರದೇಶ ರಾಜ್ಯ ಸರ್ಕಾರ ಹೊರಡಿಸಿರುವ ನಿರ್ದೇಶನವನ್ನು ಪ್ರತಿಪಕ್ಷಗಳು ಟೀಕಿಸಿವೆ.

ಈ ಆದೇಶ ಅಪಾಯಕಾರಿ ಮತ್ತು ಹಿಂದುಳಿದ ಸಮುದಾಯಗಳ ಧ್ವನಿಯನ್ನು ಅಡಗಿಸಲು ಮಾಡಿದ ‘ಕಣ್ಣೊರೆಸುವ ತಂತ್ರ’ ಎಂದು ಹೇಳಿದೆ.

ಭಾನುವಾರ (ಸೆ.21) ಉತ್ತರ ಪ್ರದೇಶ ಸರ್ಕಾರ ಹೊರಡಿಸಿ ನಿರ್ದೇಶನದಲ್ಲಿ ಜಾತಿ ಆಧಾರಿತ ರಾಜಕೀಯ ರ‍್ಯಾಲಿಗಳು ಸಾಮಾಜಿಕ ಸಂಘರ್ಷವನ್ನು ಉತ್ತೇಜಿಸುತ್ತವೆ. ಸಾರ್ವಜನಿಕ ಸುವ್ಯವಸ್ಥೆಗೆ ಬೆದರಿಕೆ ಉಂಟು ಮಾಡುತ್ತವೆ ಮತ್ತು ಸಾಂವಿಧಾನಿಕ ಮೌಲ್ಯಗಳನ್ನು ದುರ್ಬಲಗೊಳಿಸುತ್ತವೆ ಎಂದು ಹೇಳಿದೆ.

ಜಿಲ್ಲಾ ನ್ಯಾಯಾಧೀಶರು, ಪೊಲೀಸ್ ಮುಖ್ಯಸ್ಥರು ಮತ್ತು ಇತರ ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ದೀಪಕ್ ಕುಮಾರ್ ಅವರು ಹೊರಡಿಸಿದ ನಿರ್ದೇಶನದಲ್ಲಿ, ಜಾತಿ ಆಧಾರಿತ ಪ್ರದರ್ಶನಗಳು ಮತ್ತು ಪ್ರತಿಭಟನೆಗಳ ಮೂಲಕ ವಿಭಜನೆಯನ್ನು ಪ್ರಚೋದಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ.

ಪೊಲೀಸ್ ದಾಖಲೆಗಳು ಸೇರಿದಂತೆ ಸಾರ್ವಜನಿಕ ದಾಖಲೆಗಳಲ್ಲಿ ಜಾತಿ ಘೋಷಣೆಯನ್ನು ನಿಷೇಧಿಸಿ ಅಲಹಾಬಾದ್ ಹೈಕೋರ್ಟ್ ಆದೇಶ ಹೊರಡಿಸಿದ ಐದು ದಿನಗಳ ನಂತರ ಸರ್ಕಾರ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ವಾಹನಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಜಾತಿ ವೈಭವೀಕರಣದ ಅಭ್ಯಾಸವನ್ನು ನ್ಯಾಯಾಲಯವು ಆಕ್ಷೇಪಿಸಿದೆ.

ಸರ್ಕಾರದ ನಿರ್ದೇಶವನ್ನು ಉಲ್ಲೇಖಿಸಿ ಸೋಮವಾರ (ಸೆ.22) ಹೇಳಿಕೆ ನೀಡಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು “5,000 ವರ್ಷಗಳಿಂದ ನಮ್ಮ ಮನಸ್ಸಿನಲ್ಲಿ ಬೇರೂರಿರುವ ಜಾತಿ ತಾರತಮ್ಯವನ್ನು ತೆಗೆದುಹಾಕಲು ಏನು ಮಾಡುವುದು?” ಎಂದು ಪ್ರಶ್ನಿಸಿದ್ದಾರೆ.

“ಬಟ್ಟೆ, ವೇಷಭೂಷಣಗಳು ಮತ್ತು ಚಿಹ್ನೆಗಳ ಪ್ರದರ್ಶನಗಳಿಂದ ಉಂಟಾಗುವ ಜಾತಿ ತಾರತಮ್ಯವನ್ನು ನಿರ್ಮೂಲನೆ ಮಾಡಲು ಏನು ಮಾಡುವುದು?” ಎಂದು ಕೇಳಿದ್ದಾರೆ.

“ಯಾರನ್ನಾದರೂ ಭೇಟಿಯಾದಾಗ ಅವರ ಹೆಸರಿಗಿಂತ ಮೊದಲು ‘ಜಾತಿ’ ಕೇಳುವ ಜಾತಿ ತಾರತಮ್ಯದ ಮನಸ್ಥಿತಿಯನ್ನು ಕೊನೆಗೊಳಿಸಲು ಏನು ಮಾಡುವುದು? ಯಾರನ್ನಾದರೂ ತಮ್ಮ ಮನೆಯನ್ನು ಸ್ವಚ್ಛಗೊಳಿಸುವಂತೆ ಮಾಡುವ ಜಾತಿ ತಾರತಮ್ಯದ ಚಿಂತನೆಯನ್ನು ಕೊನೆಗೊಳಿಸಲು ಯಾವ ಕ್ರಮಗಳನ್ನು ತೆಗೆದುಕೊಳ್ಳುತ್ತೀರಾ?”ಎಂದಿದ್ದಾರೆ.

ಸುಳ್ಳು ಮತ್ತು ಮಾನಹಾನಿಕರ ಆರೋಪಗಳನ್ನು ಮಾಡುವ ಮೂಲಕ ಯಾರನ್ನಾದರೂ ದೂಷಿಸಲು ಮಾಡುವ ‘ಜಾತಿ ಆಧಾರಿತ ಪಿತೂರಿಗಳನ್ನು’ ಕೊನೆಗೊಳಿಸಲು ಏನು ಮಾಡುತ್ತೀರಾ? ಎಂದು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರಶ್ನಿಸಿದ್ದಾರೆ.

ಗುರ್ಜರ್ ಸಮುದಾಯದ ರಾಜಕೀಯ ಅರಿವಿನ ಬಗ್ಗೆ ಉತ್ತರ ಪ್ರದೇಶ ಸರ್ಕಾರಕ್ಕೆ ‘ಹೆದರಿಕೆ’ ಇದೆಯೇ? ಎಂದು ಸಮಾಜವಾದಿ ಪಕ್ಷದ ವಕ್ತಾರ ರಾಜ್‌ಕುಮಾರ್ ಭಾಟಿ ಕೇಳಿದ್ದಾರೆ.

ಭಾನುವಾರ ನಿರ್ದೇಶನ ಹೊರಡಿಸುವ ಮೊದಲು ಬಿಜೆಪಿಯೇ ಜಾತಿ ರ‍್ಯಾಲಿಗಳು ಮತ್ತು ಸಮ್ಮೇಳನಗಳನ್ನು ಆಯೋಜಿಸುತ್ತಿತ್ತು ಎಂದು ಭಾಟಿ ಸಾಮಾಜಿಕ ಮಾಧ್ಯಮ ಪೋಸ್ಟ್‌ನಲ್ಲಿ ತಿಳಿಸಿದ್ದಾರೆ. 2024ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಹಿಂದುತ್ವ ಪಕ್ಷವು ಒಂದು ತಿಂಗಳ ಕಾಲ ಹಲವಾರು ಜಾತಿ ಗುಂಪುಗಳೊಂದಿಗೆ ಸಭೆಗಳನ್ನು ನಡೆಸಿತ್ತು ಎಂದಿದ್ದಾರೆ.

“ಬಿಜೆಪಿ ತಮ್ಮ ಸರ್ಕಾರವು ಪ್ರತಿ ಜಾತಿಯಿಂದ ಎಷ್ಟು ಸಚಿವರನ್ನು ನೇಮಿಸಿದೆ ಎಂಬುದನ್ನು ತೋರಿಸುವ ಫಲಕಗಳನ್ನು ಲಕ್ನೋದಲ್ಲಿ ಹಾಕಿತ್ತು” ಎಂದು ರಾಜ್‌ಕುಮಾರ್ ಭಾಟಿ ಹೇಳಿದ್ದಾರೆ.

ಗಾಝಿಯಾಬಾದ್ ವಿಧಾನಸಭಾ ಉಪಚುನಾವಣೆಯ ಸಮಯದಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರೋಡ್ ಶೋ ನಡೆಸಿದ್ದರು. ಅಲ್ಲಿ ವಿವಿಧ ಜಾತಿಗಳಿಗೆ ಹತ್ತು ಸ್ವಾಗತ ವೇದಿಕೆಗಳನ್ನು ಸ್ಥಾಪಿಸಲಾಗಿತ್ತು, ಪ್ರತಿಯೊಂದರ ಮೇಲೆ ಆಯಾ ಜಾತಿಗಳ ಹೆಸರುಗಳನ್ನು ಬರೆಯಲಾಗಿತ್ತು ಎಂದು ನೆನಪಿಸಿದ್ದಾರೆ.

“ಇಂದು, ಗುರ್ಜರ್ ಸಮುದಾಯದಲ್ಲಿ ರಾಜಕೀಯ ಜಾಗೃತಿ ಮೂಡಿಸಲು ಅಭಿಯಾನ ನಡೆಯುತ್ತಿರುವಾಗ ಮತ್ತು ನಾವು ಬೃಹತ್ ಗುರ್ಜರ್ ರ‍್ಯಾಲಿಯನ್ನು ಘೋಷಿಸಿರುವಾಗ, ಜಾತಿಗಳ ಹೆಸರಿನಲ್ಲಿ ರ‍್ಯಾಲಿಗಳನ್ನು ನಡೆಸಬಾರದು ಎಂದು ಸರ್ಕಾರಕ್ಕೆ ಇದ್ದಕ್ಕಿದ್ದಂತೆ ಹೇಗೆ ನೆನಪಾಯಿತು?” ಎಂದು ಅವರು ಕೇಳಿದ್ದಾರೆ.

ಸಮಾಜವಾದಿ ಪಕ್ಷದ ಮತ್ತೊಬ್ಬ ನಾಯಕ ಉದಯವೀರ್ ಸಿಂಗ್, “ಬಿಜೆಪಿ ಸರ್ಕಾರವು ಮೊದಲು ತನ್ನ ಜಾತಿ ಆಧಾರಿತ ಮನಸ್ಥಿತಿಯನ್ನು ಹೇಗೆ ತೆಗೆದು ಹಾಕುತ್ತದೆ ಎಂಬುದು ದೊಡ್ಡ ಪ್ರಶ್ನೆಯಾಗಿದೆ” ಎಂದು ಹೇಳಿರುವುದಾಗಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ನಮ್ಮ ಪಕ್ಷ ಎಂದಿಗೂ ಜಾತಿ ಆಧಾರಿತ ರ‍್ಯಾಲಿಗಳನ್ನು ನಡೆಸುವುದಿಲ್ಲ ಎಂದು ಉತ್ತರ ಪ್ರದೇಶ ಕಾಂಗ್ರೆಸ್ ಮುಖ್ಯಸ್ಥ ಅಜಯ್ ರೈ ಹೇಳಿದ್ದಾರೆ.

“ವಾಸ್ತವವಾಗಿ, ಬಿಜೆಪಿ ಜಾತಿ ಆಧಾರಿತ ರಾಜಕೀಯವನ್ನು ಹೆಚ್ಚು ಉತ್ತೇಜಿಸುತ್ತದೆ” ಎಂದು ಅಜಯ್ ರೈ ಹೇಳಿದ್ದಾಗಿ ಪತ್ರಿಕೆಯೊಂದು ಉಲ್ಲೇಖಿಸಿದೆ. “ಆರ್‌ಎಸ್‌ಎಸ್ [ರಾಷ್ಟ್ರೀಯ ಸ್ವಯಂಸೇವಕ ಸಂಘ] ಜಾತಿ ಆಧಾರಿತ ಪ್ರತಿನಿಧಿಗಳನ್ನು ಹೊಂದಿದೆ” ಎಂದು ರೈ ಹೇಳಿದ್ದಾರೆ.

ಈ ಆದೇಶವನ್ನು ಹೇಗೆ ಜಾರಿಗೆ ತರುತ್ತೀರಿ? ಇದು ವಿರೋಧ ಪಕ್ಷಗಳಿಗೆ ಕಿರುಕುಳ ನೀಡುವ ಮತ್ತೊಂದು ಕಾರ್ಯವಿಧಾನವಾಗಿ ಬದಲಾಗುತ್ತಾ? ಎಂದು ಕಾದು ನೋಡಬೇಕಾಗಿದೆ ಎಂದು ರೈ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ನಿರ್ಧಾರ ಅಪಾಯಕಾರಿ. ದಲಿತ ಸಮುದಾಯ ಮತ್ತು ಇತರ ತಳಮಟ್ಟದ ಗುಂಪುಗಳ ಧ್ವನಿಗಳನ್ನು ಅಡಗಿಸಲು ಮಾಡುವ ‘ಕಣ್ಣೊರೆಸುವ ತಂತ್ರ’ ಎಂದು ಕಾಂಗ್ರೆಸ್ ನಾಯಕ ಅನಿಲ್ ಯಾದವ್ ಹೇಳಿದ್ದಾಗಿ ದಿ ಹಿಂದೂ ವರದಿ ಮಾಡಿದೆ.

ಭಾನುವಾರ ಹೊರಡಿಸಲಾದ ನಿರ್ದೇಶನವು ‘ಅನ್ಯಾಯದ ಶಕ್ತಿಗಳನ್ನು ಮತ್ತಷ್ಟು ಧೈರ್ಯಗೊಳಿಸುತ್ತದೆ ಮತ್ತು ಅಂತಿಮವಾಗಿ ತಾರತಮ್ಯದ ವಿರುದ್ಧ ಹೋರಾಡುವ ಸಾಮಾಜಿಕ ಸಮುದಾಯ ಆಧಾರಿತ ಗುಂಪುಗಳನ್ನು ಗುರಿಯಾಗಿಸುತ್ತದೆ’ ಎಂದು ಅನಿಲ್ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಕಾನೂನು ಅಗತ್ಯತೆ ಇಲ್ಲದೆ ಜಾತಿಯನ್ನು ದಾಖಲಿಸುವುದು ಅಥವಾ ಘೋಷಿಸುವುದು ಗುರುತಿನ ಪ್ರೊಫೈಲಿಂಗ್‌ಗೆ ಸಮನಾಗಿರುತ್ತದೆ. ಇದು ಪೂರ್ವಾಗ್ರಹವನ್ನು ಬಲಪಡಿಸುತ್ತದೆ ಮತ್ತು ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ಭಾನುವಾರ, ರಾಜ್ಯ ಸರ್ಕಾರವು ಹೈಕೋರ್ಟ್ ಆದೇಶವನ್ನು ಉಲ್ಲೇಖಿಸಿ ತನ್ನ ನಿರ್ದೇಶನವನ್ನು ಹೊರಡಿಸಿದೆ.

ಬಂಧನ ಮೆಮೊಗಳು ಮತ್ತು ಠಾಣೆಯ ಸೂಚನಾ ಫಲಕಗಳಂತಹ ಪೊಲೀಸ್ ದಾಖಲೆಗಳು ಜಾತಿ ವಿವರಗಳನ್ನು ಹೊಂದಿರಬಾರದು. ಇಬ್ಬರೂ ಪೋಷಕರ ಹೆಸರನ್ನು ದಾಖಲಿಸಬೇಕು ಎಂದು ನಿರ್ದೇಶನದಲ್ಲಿ ತಿಳಿಸಲಾಗಿದೆ.

ಅಪರಾಧ ಮತ್ತು ಅಪರಾಧ ಟ್ರ್ಯಾಕಿಂಗ್ ನೆಟ್‌ವರ್ಕ್ ಮತ್ತು ಸಿಸ್ಟಮ್ಸ್ ಪೋರ್ಟಲ್‌ನಿಂದ ಜಾತಿ ಕಾಲಮ್‌ಗಳನ್ನು ತೆಗೆದುಹಾಕಲು ಮತ್ತು ಬದಲಾವಣೆಗಳನ್ನು ಮಾಡುವವರೆಗೆ ಆ ಜಾಗವನ್ನು ಖಾಲಿ ಬಿಡಲು ಅಧಿಕಾರಿಗಳಿಗೆ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋದೊಂದಿಗೆ ಸಂಯೋಜನೆ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆಯಡಿಯಲ್ಲಿ ದಾಖಲಾಗಿರುವ ಅಪರಾಧಗಳಂತಹ ಜಾತಿ ಗುರುತುಗಳನ್ನು ನಮೂದಿಸುವುದು ಕಾನೂನಿನಲ್ಲಿ ಅಗತ್ಯವಿದ್ದಾಗ ಮಾತ್ರ ವಿನಾಯಿತಿಗಳನ್ನು ನೀಡಬಹುದು ಎಂದು ಸರ್ಕಾರದ ನಿರ್ದೇಶನದಲ್ಲಿ ತಿಳಿಸಿದೆ.

ಜಾತಿ ಘೋಷಣೆಗಳು ಅಥವಾ ಸ್ಟಿಕ್ಕರ್‌ಗಳನ್ನು ಹೊತ್ತ ವಾಹನಗಳಿಗೆ ಕೇಂದ್ರ ಮೋಟಾರು ವಾಹನ ಕಾಯ್ದೆಯಡಿಯಲ್ಲಿ ದಂಡ ವಿಧಿಸಬೇಕು ಮತ್ತು ಜಾತಿಯನ್ನು ವೈಭವೀಕರಿಸುವ ಅಥವಾ ಪ್ರದೇಶಗಳನ್ನು ಜಾತಿ ಪ್ರದೇಶಗಳಾಗಿ ಘೋಷಿಸುವ ಸೈನ್‌ಬೋರ್ಡ್‌ಗಳನ್ನು ತೆಗೆದುಹಾಕಬೇಕು ಎಂದು ಹೈಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ.

ರಾಜಸ್ಥಾನ: ದೇವಾಲಯ ಪ್ರವೇಶಿಸಲು ಯತ್ನಿಸಿದ ದಲಿತ ವ್ಯಕ್ತಿ ಮೇಲೆ ಗುಂಪು ಹಲ್ಲೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...