Homeಮುಖಪುಟಮಾಜಿ IPS ಬೋರ್ವಾಂಕರ್ ಆತ್ಮಚರಿತ್ರೆಯಲ್ಲಿ ಬರೆದ ಅಂಶ ಸೃಷ್ಟಿಸಿದ ವಿವಾದ

ಮಾಜಿ IPS ಬೋರ್ವಾಂಕರ್ ಆತ್ಮಚರಿತ್ರೆಯಲ್ಲಿ ಬರೆದ ಅಂಶ ಸೃಷ್ಟಿಸಿದ ವಿವಾದ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಐಪಿಎಸ್‌ ಅಧಿಕಾರಿ ಮೀರಾನ್ ಬೋರ್ವಾಂಕರ್, ಪೊಲೀಸ್ ಇಲಾಖೆಗೆ ಸಂಬಂಧಿಸಿದ ಜಮೀನು ಹರಾಜು ಕುರಿತು ತಮ್ಮ ಪುಸ್ತಕದಲ್ಲಿ ಬರೆದುಕೊಂಡಿದ್ದು, ಪುಣೆಯ ಜಿಲ್ಲಾಉಸ್ತುವಾರಿ ಸಚಿವರು ‘ದಾದಾ’ ಹರಾಜು ಪ್ರಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಬರೆದಿದ್ದರು. ಇದೀಗ ಪ್ರತಿಪಕ್ಷಗಳು ಈ ಕುರಿತು ತನಿಖೆಗೆ ಆಗ್ರಹಿಸಿದೆ.

ಸಚಿವರ ವಿರುದ್ಧ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ಮಾಡಿರುವ ಆರೋಪದ ಬಗ್ಗೆ ಸರಕಾರ ತನಿಖೆ ನಡೆಸಬೇಕು ಎಂದು ಮಹರಾಷ್ಟ್ರದ ಪ್ರತಿಪಕ್ಷದ ನಾಯಕ ವಿಜಯ ವಾಡೆತ್ತಿವಾರ್‌ ಆಗ್ರಹಿಸಿದ್ದಾರೆ.

‘ಮೇಡಂ ಕಮಿಷನರ್’ ಎಂಬ ಆತ್ಮಚರಿತ್ರೆಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಮೀರಾನ್ ಬೋರ್ವಾಂಕರ್ ಅವರು ಸಚಿವರ ವಿರುದ್ಧ ಆರೋಪ ಮಾಡಿದ್ದಾರೆ. ಆರೋಪಗಳು ಭೂಪರಿವರ್ತನೆಗೆ ಸಂಬಂಧಿಸಿದೆ. ಈ ಬಗ್ಗೆ ತನಿಖೆಗಾಗಿ ಸರ್ಕಾರವು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ವಿಜಯ ವಾಡೆತ್ತಿವಾರ್‌ ಹೇಳಿದ್ದಾರೆ.

ಬೋರ್ವಾಂಕರ್ ಯಾವುದೇ ಹೆಸರನ್ನು ಪುಸ್ತಕದಲ್ಲಿ ಹೆಸರಿಸಿಲ್ಲ. ಆದರೆ ಅವರು ಪುಸ್ತಕದಲ್ಲಿ ಜಿಲ್ಲಾ ಮಂತ್ರಿ ‘ದಾದಾ’ ಎಂದು ಉಲ್ಲೇಖಿಸಿದ್ದಾರೆ. ಇದು ಪ್ರಸ್ತುತ ಸರ್ಕಾರದ ಭಾಗವಾಗಿರುವ ಸಚಿವರನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ವಾಡೆತ್ತಿವಾರ್‌ ಹೇಳಿದ್ದಾರೆ. ಇದಲ್ಲದೆ ಅಜಿತ್ ಪವಾರ್ ಅವರನ್ನು ಜಿಲ್ಲಾ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಪುಸ್ತಕದಲ್ಲಿ ದಾಖಲಾಗಿರುವ ಪ್ರಕಾರ, 2010ರಲ್ಲಿ ನಗರದ ಯರವಾಡ ಪ್ರದೇಶದಲ್ಲಿ ಹರಾಜಾದ 3 ಎಕರೆ ಪೊಲೀಸ್ ಭೂಮಿಯನ್ನು ಟಾಪ್ ಬಿಡ್ಡರ್‌ಗೆ ಹಸ್ತಾಂತರಿಸುವುದನ್ನು ಪೂರ್ಣಗೊಳಿಸಬೇಕೆಂದು ಸಚಿವರು ಒತ್ತಾಯಿಸಿದ್ದಾರೆ. ಆದರೆ ಯರವಾಡ ಕೇಂದ್ರ ಸ್ಥಳವಾಗಿದ್ದು, ಪೊಲೀಸರಿಗೆ ಮತ್ತೆ ಅಂತಹ ಸ್ಥಳ ಸಿಗುವುದಿಲ್ಲ. ಅದಲ್ಲದೆ ಕಚೇರಿ, ಪೊಲೀಸ್ ಕಾಲೋನಿಗೆ ಈ ಸ್ಥಳ ಬೇಕಾಗುತ್ತದೆ ಎಂದು ನಾನು ಹೇಳಿದ್ದೆ ಎಂದು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.

ಸುಮಾರು ಮೂರು ಎಕರೆ ವಿಸ್ತೀರ್ಣದ ಭೂಮಿಯನ್ನು ಹರಾಜು ಮಾಡಲಾಗಿದೆ ಎಂದು ನಾನು ತಿಳಿದುಕೊಂಡೆ ಮತ್ತು ನಾವು ಅದನ್ನು ಅತಿ ಹೆಚ್ಚು ಬಿಡ್ ಮಾಡಿದವರಿಗೆ ಹಸ್ತಾಂತರಿಸಬೇಕಾಗಿತ್ತು. ಹರಾಜು ಪ್ರಕ್ರಿಯೆಯು ವಿಭಾಗೀಯ ಆಯುಕ್ತರ ನೇತೃತ್ವದ ಮೇಲ್ವಿಚಾರಣೆಯಲ್ಲಿತ್ತು ಎಂದು ಬೋರ್ವಾಂಕರ್ ಬರೆದಿದ್ದಾರೆ. ಭೂಮಿಯು ಪೋಲೀಸ್ ಇಲಾಖೆಗೆ ಸೇರಿದ್ದರಿಂದ ಈ ಬೆಳವಣಿಗೆ ತುಂಬಾ ಆಶ್ಚರ್ಯಕರವಾಗಿದೆ ಎಂದು ಅವರು ಬರೆದಿದ್ದಾರೆ.

2010ರಲ್ಲಿ ಪುಣೆ ಪೊಲೀಸರಿಗೆ ಸೇರಿದ ಪುಣೆಯ ಯರವಾಡದಲ್ಲಿನ ಸುಮಾರು ಮೂರು ಎಕರೆ ಭೂಮಿಯನ್ನು ಆಗಿನ ಜಿಲ್ಲಾ ಸಚಿವರ ಆದೇಶದ ಮೇರೆಗೆ ಹರಾಜು ಮಾಡಲಾಯಿತು. ಭೂಮಿಯನ್ನು ಹಸ್ತಾಂತರಿಸಲು ಸಚಿವರು ಆಗ್ರಹಿಸಿದಾಗ ಪುಣೆಯ ಅಂದಿನ ಪೊಲೀಸ್ ಕಮಿಷನರ್ ಅವರು ಅದನ್ನು ಬಿಟ್ಟುಕೊಡಲು ನಿರಾಕರಿಸಿದ್ದರು. ಆದರೆ ಆ ಬಳಿಕ ಅವರಿಗೆ ಭಾರೀ ಒತ್ತಡ ಮಾಡಲಾಗಿತ್ತು ಎಂದು ಪುಸ್ತಕದಲ್ಲಿ ಉಲ್ಲೇಖವಿದೆ.

ಆದರೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೀರಾ ಬೋರವಾಂಕರ್ ಆರೋಪವನ್ನು ತಳ್ಳಿ ಹಾಕಿದ್ದಾರೆ. ಸರ್ಕಾರಿ ಭೂಮಿಯನ್ನು ಹರಾಜು ಹಾಕುವ ಹಕ್ಕು ಸಚಿವರಿಗೆ ಇಲ್ಲ, ಸಚಿವ ಸಂಪುಟದ ಒಪ್ಪಿಗೆ ನಂತರವೆ ಭೂಮಿ ಹರಾಜು ನಡೆಯುತ್ತದೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.  ನಾನು ಕೂಡ ಈ ಹರಾಜಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದೆ. ಜಿಲ್ಲಾ ಸಚಿವರಿಗೆ ಜಮೀನು ಹರಾಜು ಹಾಕುವ ಹಕ್ಕು ಇಲ್ಲ. ಯಾವುದೇ ಭೂಮಿಯನ್ನು ಹರಾಜು ಮಾಡಲು ಕಂದಾಯ ಇಲಾಖೆ ಮೂಲಕ ಪ್ರಸ್ತಾವನೆ ಬಂದ ನಂತರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅಜಿತ್ ಪವಾರ್ ಅವರು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ; ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...

ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ, ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದ ಚು. ಆಯೋಗ

ನಿರೀಕ್ಷೆಯಂತೆ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಚುನಾವಣಾ ಆಯೋಗ ಪಶ್ಚಿಮ ಬಂಗಾಳದಲ್ಲಿ ತನ್ನ ಆಟ ಶುರು ಮಾಡಿದೆ. ರಾಜ್ಯದ ಸರ್ಕಾದ ಮುಖ್ಯ ಕಾರ್ಯದರ್ಶಿ, ಗೃಹ ಕಾರ್ಯದರ್ಶಿ ಮತ್ತು ಉನ್ನತ ಪೊಲೀಸ್ ಅಧಿಕಾರಿಗಳನ್ನು ಬದಲಾಯಿಸಿದೆ. ಪಶ್ಚಿಮ ಬಂಗಾಳ...