Homeಮುಖಪುಟಮಾಜಿ IPS ಬೋರ್ವಾಂಕರ್ ಆತ್ಮಚರಿತ್ರೆಯಲ್ಲಿ ಬರೆದ ಅಂಶ ಸೃಷ್ಟಿಸಿದ ವಿವಾದ

ಮಾಜಿ IPS ಬೋರ್ವಾಂಕರ್ ಆತ್ಮಚರಿತ್ರೆಯಲ್ಲಿ ಬರೆದ ಅಂಶ ಸೃಷ್ಟಿಸಿದ ವಿವಾದ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಐಪಿಎಸ್‌ ಅಧಿಕಾರಿ ಮೀರಾನ್ ಬೋರ್ವಾಂಕರ್, ಪೊಲೀಸ್ ಇಲಾಖೆಗೆ ಸಂಬಂಧಿಸಿದ ಜಮೀನು ಹರಾಜು ಕುರಿತು ತಮ್ಮ ಪುಸ್ತಕದಲ್ಲಿ ಬರೆದುಕೊಂಡಿದ್ದು, ಪುಣೆಯ ಜಿಲ್ಲಾಉಸ್ತುವಾರಿ ಸಚಿವರು ‘ದಾದಾ’ ಹರಾಜು ಪ್ರಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಬರೆದಿದ್ದರು. ಇದೀಗ ಪ್ರತಿಪಕ್ಷಗಳು ಈ ಕುರಿತು ತನಿಖೆಗೆ ಆಗ್ರಹಿಸಿದೆ.

ಸಚಿವರ ವಿರುದ್ಧ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ಮಾಡಿರುವ ಆರೋಪದ ಬಗ್ಗೆ ಸರಕಾರ ತನಿಖೆ ನಡೆಸಬೇಕು ಎಂದು ಮಹರಾಷ್ಟ್ರದ ಪ್ರತಿಪಕ್ಷದ ನಾಯಕ ವಿಜಯ ವಾಡೆತ್ತಿವಾರ್‌ ಆಗ್ರಹಿಸಿದ್ದಾರೆ.

‘ಮೇಡಂ ಕಮಿಷನರ್’ ಎಂಬ ಆತ್ಮಚರಿತ್ರೆಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಮೀರಾನ್ ಬೋರ್ವಾಂಕರ್ ಅವರು ಸಚಿವರ ವಿರುದ್ಧ ಆರೋಪ ಮಾಡಿದ್ದಾರೆ. ಆರೋಪಗಳು ಭೂಪರಿವರ್ತನೆಗೆ ಸಂಬಂಧಿಸಿದೆ. ಈ ಬಗ್ಗೆ ತನಿಖೆಗಾಗಿ ಸರ್ಕಾರವು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ವಿಜಯ ವಾಡೆತ್ತಿವಾರ್‌ ಹೇಳಿದ್ದಾರೆ.

ಬೋರ್ವಾಂಕರ್ ಯಾವುದೇ ಹೆಸರನ್ನು ಪುಸ್ತಕದಲ್ಲಿ ಹೆಸರಿಸಿಲ್ಲ. ಆದರೆ ಅವರು ಪುಸ್ತಕದಲ್ಲಿ ಜಿಲ್ಲಾ ಮಂತ್ರಿ ‘ದಾದಾ’ ಎಂದು ಉಲ್ಲೇಖಿಸಿದ್ದಾರೆ. ಇದು ಪ್ರಸ್ತುತ ಸರ್ಕಾರದ ಭಾಗವಾಗಿರುವ ಸಚಿವರನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ವಾಡೆತ್ತಿವಾರ್‌ ಹೇಳಿದ್ದಾರೆ. ಇದಲ್ಲದೆ ಅಜಿತ್ ಪವಾರ್ ಅವರನ್ನು ಜಿಲ್ಲಾ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಪುಸ್ತಕದಲ್ಲಿ ದಾಖಲಾಗಿರುವ ಪ್ರಕಾರ, 2010ರಲ್ಲಿ ನಗರದ ಯರವಾಡ ಪ್ರದೇಶದಲ್ಲಿ ಹರಾಜಾದ 3 ಎಕರೆ ಪೊಲೀಸ್ ಭೂಮಿಯನ್ನು ಟಾಪ್ ಬಿಡ್ಡರ್‌ಗೆ ಹಸ್ತಾಂತರಿಸುವುದನ್ನು ಪೂರ್ಣಗೊಳಿಸಬೇಕೆಂದು ಸಚಿವರು ಒತ್ತಾಯಿಸಿದ್ದಾರೆ. ಆದರೆ ಯರವಾಡ ಕೇಂದ್ರ ಸ್ಥಳವಾಗಿದ್ದು, ಪೊಲೀಸರಿಗೆ ಮತ್ತೆ ಅಂತಹ ಸ್ಥಳ ಸಿಗುವುದಿಲ್ಲ. ಅದಲ್ಲದೆ ಕಚೇರಿ, ಪೊಲೀಸ್ ಕಾಲೋನಿಗೆ ಈ ಸ್ಥಳ ಬೇಕಾಗುತ್ತದೆ ಎಂದು ನಾನು ಹೇಳಿದ್ದೆ ಎಂದು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.

ಸುಮಾರು ಮೂರು ಎಕರೆ ವಿಸ್ತೀರ್ಣದ ಭೂಮಿಯನ್ನು ಹರಾಜು ಮಾಡಲಾಗಿದೆ ಎಂದು ನಾನು ತಿಳಿದುಕೊಂಡೆ ಮತ್ತು ನಾವು ಅದನ್ನು ಅತಿ ಹೆಚ್ಚು ಬಿಡ್ ಮಾಡಿದವರಿಗೆ ಹಸ್ತಾಂತರಿಸಬೇಕಾಗಿತ್ತು. ಹರಾಜು ಪ್ರಕ್ರಿಯೆಯು ವಿಭಾಗೀಯ ಆಯುಕ್ತರ ನೇತೃತ್ವದ ಮೇಲ್ವಿಚಾರಣೆಯಲ್ಲಿತ್ತು ಎಂದು ಬೋರ್ವಾಂಕರ್ ಬರೆದಿದ್ದಾರೆ. ಭೂಮಿಯು ಪೋಲೀಸ್ ಇಲಾಖೆಗೆ ಸೇರಿದ್ದರಿಂದ ಈ ಬೆಳವಣಿಗೆ ತುಂಬಾ ಆಶ್ಚರ್ಯಕರವಾಗಿದೆ ಎಂದು ಅವರು ಬರೆದಿದ್ದಾರೆ.

2010ರಲ್ಲಿ ಪುಣೆ ಪೊಲೀಸರಿಗೆ ಸೇರಿದ ಪುಣೆಯ ಯರವಾಡದಲ್ಲಿನ ಸುಮಾರು ಮೂರು ಎಕರೆ ಭೂಮಿಯನ್ನು ಆಗಿನ ಜಿಲ್ಲಾ ಸಚಿವರ ಆದೇಶದ ಮೇರೆಗೆ ಹರಾಜು ಮಾಡಲಾಯಿತು. ಭೂಮಿಯನ್ನು ಹಸ್ತಾಂತರಿಸಲು ಸಚಿವರು ಆಗ್ರಹಿಸಿದಾಗ ಪುಣೆಯ ಅಂದಿನ ಪೊಲೀಸ್ ಕಮಿಷನರ್ ಅವರು ಅದನ್ನು ಬಿಟ್ಟುಕೊಡಲು ನಿರಾಕರಿಸಿದ್ದರು. ಆದರೆ ಆ ಬಳಿಕ ಅವರಿಗೆ ಭಾರೀ ಒತ್ತಡ ಮಾಡಲಾಗಿತ್ತು ಎಂದು ಪುಸ್ತಕದಲ್ಲಿ ಉಲ್ಲೇಖವಿದೆ.

ಆದರೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೀರಾ ಬೋರವಾಂಕರ್ ಆರೋಪವನ್ನು ತಳ್ಳಿ ಹಾಕಿದ್ದಾರೆ. ಸರ್ಕಾರಿ ಭೂಮಿಯನ್ನು ಹರಾಜು ಹಾಕುವ ಹಕ್ಕು ಸಚಿವರಿಗೆ ಇಲ್ಲ, ಸಚಿವ ಸಂಪುಟದ ಒಪ್ಪಿಗೆ ನಂತರವೆ ಭೂಮಿ ಹರಾಜು ನಡೆಯುತ್ತದೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.  ನಾನು ಕೂಡ ಈ ಹರಾಜಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದೆ. ಜಿಲ್ಲಾ ಸಚಿವರಿಗೆ ಜಮೀನು ಹರಾಜು ಹಾಕುವ ಹಕ್ಕು ಇಲ್ಲ. ಯಾವುದೇ ಭೂಮಿಯನ್ನು ಹರಾಜು ಮಾಡಲು ಕಂದಾಯ ಇಲಾಖೆ ಮೂಲಕ ಪ್ರಸ್ತಾವನೆ ಬಂದ ನಂತರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅಜಿತ್ ಪವಾರ್ ಅವರು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ; ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...