Homeಮುಖಪುಟಮಾಜಿ IPS ಬೋರ್ವಾಂಕರ್ ಆತ್ಮಚರಿತ್ರೆಯಲ್ಲಿ ಬರೆದ ಅಂಶ ಸೃಷ್ಟಿಸಿದ ವಿವಾದ

ಮಾಜಿ IPS ಬೋರ್ವಾಂಕರ್ ಆತ್ಮಚರಿತ್ರೆಯಲ್ಲಿ ಬರೆದ ಅಂಶ ಸೃಷ್ಟಿಸಿದ ವಿವಾದ

- Advertisement -
- Advertisement -

ಮಹಾರಾಷ್ಟ್ರದ ಮಾಜಿ ಐಪಿಎಸ್‌ ಅಧಿಕಾರಿ ಮೀರಾನ್ ಬೋರ್ವಾಂಕರ್, ಪೊಲೀಸ್ ಇಲಾಖೆಗೆ ಸಂಬಂಧಿಸಿದ ಜಮೀನು ಹರಾಜು ಕುರಿತು ತಮ್ಮ ಪುಸ್ತಕದಲ್ಲಿ ಬರೆದುಕೊಂಡಿದ್ದು, ಪುಣೆಯ ಜಿಲ್ಲಾಉಸ್ತುವಾರಿ ಸಚಿವರು ‘ದಾದಾ’ ಹರಾಜು ಪ್ರಕ್ರಿಯೆಗೆ ಒತ್ತಾಯಿಸಿದ್ದಾರೆ ಎಂದು ಬರೆದಿದ್ದರು. ಇದೀಗ ಪ್ರತಿಪಕ್ಷಗಳು ಈ ಕುರಿತು ತನಿಖೆಗೆ ಆಗ್ರಹಿಸಿದೆ.

ಸಚಿವರ ವಿರುದ್ಧ ಮಾಜಿ ಪೊಲೀಸ್ ಅಧಿಕಾರಿಯೊಬ್ಬರು ಮಾಡಿರುವ ಆರೋಪದ ಬಗ್ಗೆ ಸರಕಾರ ತನಿಖೆ ನಡೆಸಬೇಕು ಎಂದು ಮಹರಾಷ್ಟ್ರದ ಪ್ರತಿಪಕ್ಷದ ನಾಯಕ ವಿಜಯ ವಾಡೆತ್ತಿವಾರ್‌ ಆಗ್ರಹಿಸಿದ್ದಾರೆ.

‘ಮೇಡಂ ಕಮಿಷನರ್’ ಎಂಬ ಆತ್ಮಚರಿತ್ರೆಯಲ್ಲಿ ಮಾಜಿ ಐಪಿಎಸ್ ಅಧಿಕಾರಿ ಮೀರಾನ್ ಬೋರ್ವಾಂಕರ್ ಅವರು ಸಚಿವರ ವಿರುದ್ಧ ಆರೋಪ ಮಾಡಿದ್ದಾರೆ. ಆರೋಪಗಳು ಭೂಪರಿವರ್ತನೆಗೆ ಸಂಬಂಧಿಸಿದೆ. ಈ ಬಗ್ಗೆ ತನಿಖೆಗಾಗಿ ಸರ್ಕಾರವು ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ವಿಜಯ ವಾಡೆತ್ತಿವಾರ್‌ ಹೇಳಿದ್ದಾರೆ.

ಬೋರ್ವಾಂಕರ್ ಯಾವುದೇ ಹೆಸರನ್ನು ಪುಸ್ತಕದಲ್ಲಿ ಹೆಸರಿಸಿಲ್ಲ. ಆದರೆ ಅವರು ಪುಸ್ತಕದಲ್ಲಿ ಜಿಲ್ಲಾ ಮಂತ್ರಿ ‘ದಾದಾ’ ಎಂದು ಉಲ್ಲೇಖಿಸಿದ್ದಾರೆ. ಇದು ಪ್ರಸ್ತುತ ಸರ್ಕಾರದ ಭಾಗವಾಗಿರುವ ಸಚಿವರನ್ನು ಸ್ಪಷ್ಟವಾಗಿ ಸೂಚಿಸುತ್ತದೆ ಎಂದು ವಾಡೆತ್ತಿವಾರ್‌ ಹೇಳಿದ್ದಾರೆ. ಇದಲ್ಲದೆ ಅಜಿತ್ ಪವಾರ್ ಅವರನ್ನು ಜಿಲ್ಲಾ ಸಚಿವ ಸ್ಥಾನದಿಂದ ವಜಾಗೊಳಿಸುವಂತೆ ಒತ್ತಾಯಿಸಿದ್ದಾರೆ.

ಪುಸ್ತಕದಲ್ಲಿ ದಾಖಲಾಗಿರುವ ಪ್ರಕಾರ, 2010ರಲ್ಲಿ ನಗರದ ಯರವಾಡ ಪ್ರದೇಶದಲ್ಲಿ ಹರಾಜಾದ 3 ಎಕರೆ ಪೊಲೀಸ್ ಭೂಮಿಯನ್ನು ಟಾಪ್ ಬಿಡ್ಡರ್‌ಗೆ ಹಸ್ತಾಂತರಿಸುವುದನ್ನು ಪೂರ್ಣಗೊಳಿಸಬೇಕೆಂದು ಸಚಿವರು ಒತ್ತಾಯಿಸಿದ್ದಾರೆ. ಆದರೆ ಯರವಾಡ ಕೇಂದ್ರ ಸ್ಥಳವಾಗಿದ್ದು, ಪೊಲೀಸರಿಗೆ ಮತ್ತೆ ಅಂತಹ ಸ್ಥಳ ಸಿಗುವುದಿಲ್ಲ. ಅದಲ್ಲದೆ ಕಚೇರಿ, ಪೊಲೀಸ್ ಕಾಲೋನಿಗೆ ಈ ಸ್ಥಳ ಬೇಕಾಗುತ್ತದೆ ಎಂದು ನಾನು ಹೇಳಿದ್ದೆ ಎಂದು ಪುಸ್ತಕದಲ್ಲಿ ಉಲ್ಲೇಖಿಸಿದ್ದಾರೆ.

ಸುಮಾರು ಮೂರು ಎಕರೆ ವಿಸ್ತೀರ್ಣದ ಭೂಮಿಯನ್ನು ಹರಾಜು ಮಾಡಲಾಗಿದೆ ಎಂದು ನಾನು ತಿಳಿದುಕೊಂಡೆ ಮತ್ತು ನಾವು ಅದನ್ನು ಅತಿ ಹೆಚ್ಚು ಬಿಡ್ ಮಾಡಿದವರಿಗೆ ಹಸ್ತಾಂತರಿಸಬೇಕಾಗಿತ್ತು. ಹರಾಜು ಪ್ರಕ್ರಿಯೆಯು ವಿಭಾಗೀಯ ಆಯುಕ್ತರ ನೇತೃತ್ವದ ಮೇಲ್ವಿಚಾರಣೆಯಲ್ಲಿತ್ತು ಎಂದು ಬೋರ್ವಾಂಕರ್ ಬರೆದಿದ್ದಾರೆ. ಭೂಮಿಯು ಪೋಲೀಸ್ ಇಲಾಖೆಗೆ ಸೇರಿದ್ದರಿಂದ ಈ ಬೆಳವಣಿಗೆ ತುಂಬಾ ಆಶ್ಚರ್ಯಕರವಾಗಿದೆ ಎಂದು ಅವರು ಬರೆದಿದ್ದಾರೆ.

2010ರಲ್ಲಿ ಪುಣೆ ಪೊಲೀಸರಿಗೆ ಸೇರಿದ ಪುಣೆಯ ಯರವಾಡದಲ್ಲಿನ ಸುಮಾರು ಮೂರು ಎಕರೆ ಭೂಮಿಯನ್ನು ಆಗಿನ ಜಿಲ್ಲಾ ಸಚಿವರ ಆದೇಶದ ಮೇರೆಗೆ ಹರಾಜು ಮಾಡಲಾಯಿತು. ಭೂಮಿಯನ್ನು ಹಸ್ತಾಂತರಿಸಲು ಸಚಿವರು ಆಗ್ರಹಿಸಿದಾಗ ಪುಣೆಯ ಅಂದಿನ ಪೊಲೀಸ್ ಕಮಿಷನರ್ ಅವರು ಅದನ್ನು ಬಿಟ್ಟುಕೊಡಲು ನಿರಾಕರಿಸಿದ್ದರು. ಆದರೆ ಆ ಬಳಿಕ ಅವರಿಗೆ ಭಾರೀ ಒತ್ತಡ ಮಾಡಲಾಗಿತ್ತು ಎಂದು ಪುಸ್ತಕದಲ್ಲಿ ಉಲ್ಲೇಖವಿದೆ.

ಆದರೆ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮೀರಾ ಬೋರವಾಂಕರ್ ಆರೋಪವನ್ನು ತಳ್ಳಿ ಹಾಕಿದ್ದಾರೆ. ಸರ್ಕಾರಿ ಭೂಮಿಯನ್ನು ಹರಾಜು ಹಾಕುವ ಹಕ್ಕು ಸಚಿವರಿಗೆ ಇಲ್ಲ, ಸಚಿವ ಸಂಪುಟದ ಒಪ್ಪಿಗೆ ನಂತರವೆ ಭೂಮಿ ಹರಾಜು ನಡೆಯುತ್ತದೆ ಎಂದು ಅಜಿತ್ ಪವಾರ್ ಹೇಳಿದ್ದಾರೆ.  ನಾನು ಕೂಡ ಈ ಹರಾಜಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದೆ. ಜಿಲ್ಲಾ ಸಚಿವರಿಗೆ ಜಮೀನು ಹರಾಜು ಹಾಕುವ ಹಕ್ಕು ಇಲ್ಲ. ಯಾವುದೇ ಭೂಮಿಯನ್ನು ಹರಾಜು ಮಾಡಲು ಕಂದಾಯ ಇಲಾಖೆ ಮೂಲಕ ಪ್ರಸ್ತಾವನೆ ಬಂದ ನಂತರ ಸಚಿವ ಸಂಪುಟದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಅಜಿತ್ ಪವಾರ್ ಅವರು ಪ್ರತಿಕ್ರಿಯಿಸಿದ್ದಾರೆ.

ಇದನ್ನು ಓದಿ; ಪ್ಯಾಲೆಸ್ತೀನ್‌ ಬಗ್ಗೆ ತಪ್ಪು ಮಾಹಿತಿಯು ಹೆಚ್ಚಾಗಿ ಭಾರತದಿಂದ ಯಾಕೆ ವೈರಲ್‌ ಆಗುತ್ತಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...