Homeಕರ್ನಾಟಕಬಿಡಿಎ ಲೇಔಟ್‌‌ಗಾಗಿ ಕೃಷಿ ಭೂಮಿ ಒತ್ತುವರಿಗೆ ವಿರೋಧ - ರೈತರಿಂದ ಪ್ರತಿಭಟನೆ

ಬಿಡಿಎ ಲೇಔಟ್‌‌ಗಾಗಿ ಕೃಷಿ ಭೂಮಿ ಒತ್ತುವರಿಗೆ ವಿರೋಧ – ರೈತರಿಂದ ಪ್ರತಿಭಟನೆ

- Advertisement -
- Advertisement -

ಡಾ.ಕೆ.ಶಿವರಾಮ ಕಾರಂತ್ ಲೇಔಟ್‌‌‌‌‌ಗಾಗಿ ಭೂಮಿಯನ್ನು ಕಳೆದುಕೊಳ್ಳಲಿರುವ ರೈತರು ಮತ್ತು ಭೂಮಾಲೀಕರು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಯೋಜನೆಯನ್ನು ಕೈಬಿಡಬೇಕೆಂದು ಒತ್ತಾಯಿಸಿ ಬುಧವಾರ ಬೆಂಗಳೂರಿನ ಮೌರ್ಯ ಸರ್ಕಲ್‌ ಬಳಿ ಪ್ರತಿಭಟನೆ ನಡೆಸಿದರು.

ಲೇಔಟ್‌ಗೆ ಸಂಬಂಧಿಸಿದಂತೆ ಇತ್ತೀಚೆಗೆ ಸುಪ್ರೀಂ ಕೋರ್ಟ್ ನೇಮಿಸಿದ್ದ ಮೂರು ಸದಸ್ಯರ ಸಮಿತಿಯ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ ರೈತರು, ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನೆಯು ಅರಮನೆ ಮೈದಾನದ 9ನೇ ಗೇಟ್ ಬಳಿಯ ಬಿಡಿಎ ಕೇಂದ್ರ ಕಚೇರಿ ಮುಂದೆ ಆಯೋಜನೆಗೊಂಡಿತ್ತಾದರೂ, ಅಲ್ಲಿ ಪ್ರತಿಭಟನೆ ನಡೆಸಲು ಪೊಲೀಸರು ಅನುಮತಿ ನೀಡಿರಲಿಲ್ಲ. ಹೀಗಾಗಿ ಪ್ರತಿಭಟನೆ ಮೌರ್ಯಸರ್ಕಲ್ ಬಳಿಗೆ ಸ್ಥಳಾಂತರಗೊಂಡಿದೆ.

ಇದನ್ನೂ ಓದಿ: ಲಾಕ್‌ಡೌನ್ 1 ವರ್ಷ: ಬೀದಿ ವ್ಯಾಪಾರಿಗಳಿಗೆ ಇನ್ನೂ ಕಾಡುತ್ತಿರುವ ಲಾಕ್‌ಡೌನ್ ಭೂತ

ಬಿಡಿಎ ವಿರುದ್ದ ರೈತರ ಆಕ್ರೋಶ ಹೆಚ್ಚುತ್ತಿರುವುದನ್ನು ಮನಗಂಡಿದ್ದ ಬಿಡಿಎ ಅಧ್ಯಕ್ಷ, ಯಲಹಂಕ ಶಾಸಕ ಎಸ್‌.ಆರ್‌.ವಿಶ್ವನಾಥ್‌ ಅವರು ನಿನ್ನೆ ರಾತ್ರಿಯೇ ಲೇಔಟ್‌‌ ಇರುವ 16 ಹಳ್ಳಿಯ ರೈತರಿಗೆ ಪ್ರತಿಭಟನೆಗೆ ತೆರಳದಂತೆ ಪೊಲೀಸರ ಮುಖಾಂತರ ಕೇಳಿಕೊಂಡಿದ್ದರು. ಇಂದು ಮುಂಜಾನೆ ಕೂಡಾ ಪೊಲೀಸರು ಪ್ರತಿಭಟನೆಗೆ ತೆರಳದಂತೆ ರೈತರಿಗೆ ತಡೆ ಒಡ್ಡಿದ್ದರು ಎನ್ನಲಾಗಿದೆ. ಆದರೂ ಇದನ್ನು ಮೀರಿ ರೈತರು ಬೆಂಗಳೂರಿನ ಮೌರ್ಯ ಸರ್ಕಲ್‌ಗೆ ತಲುಪಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಬಗ್ಗೆ ನಾನುಗೌರಿ.ಕಾಂ ಜೊತೆ ಮಾತನಾಡಿದ ಹೋರಾಟಗಾರರಾದ ಪ್ರಸನ್ನ ಲಕ್ಷ್ಮೀಪುರ, “ಪ್ರತಿಭಟನೆಗೆ ಹೊರಡುತ್ತಿದ್ದ ರೈತರನ್ನು ಅವರ ಹಳ್ಳಿಯಲ್ಲೆ ತಡೆದು ಲೇಔಟ್‌ಗೆ ಯಾರದ್ದೂ ವಿರೋಧವಿಲ್ಲ ಎಂದು ತೋರಿಸಿಕೊಳ್ಳುವ ಉಪಾಯವನ್ನು ಶಾಸಕ ವಿಶ್ವನಾಥ್‌ ಹೂಂದಿದ್ದರು. ಅದಕ್ಕಾಗಿ ಹಳ್ಳಿಗಳಲ್ಲೇ ರೈತರನ್ನು ಪೊಲೀಸರು ತಡೆದಿದ್ದರು, ಆದರೆ ಇಲ್ಲಿ ಯಾವ ರೈತರು ಲೇಔಟ್ ಪರವಾಗಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಜಾವೇದ್ ಅಖ್ತರ್ V/s ಕಂಗನಾ: ವಾರೆಂಟ್ ಪ್ರಶ್ನಿಸಿ ಅರ್ಜಿ ಸಲ್ಲಿಸಿದ ನಟಿ

“ರೈತರು ತಮ್ಮ ಭೂಮಿಯನ್ನು ಲೇಔಟ್‌‌ಗೆ ನೀಡುವುದಿಲ್ಲ ಎಂದು ಹೋರಾಟ ಮಾಡುತ್ತಿದ್ದಾರೆ. ನಮ್ಮ ಬಳಿಯಿಂದ ಭೂಮಿಯನ್ನು ಪಡೆದುಕೊಂಡು ಬೇರೆಯವರಿಗೆ ಮನೆ ಕಟ್ಟಲು ನೀಡುತ್ತಿದ್ದಾರೆ. ಹೀಗೆ ನೀಡಲು ಬಿಡಿಎ ಯಾಕೆ ಬೇಕು? ಜನರೆ ನೇರವಾಗಿ ತಮಗೆ ಬೇಕಾದವರಿಗೆ ಭೂಮಿ ನೀಡುವುದಿಲ್ಲವೆ?. ಬಿಡಿಎ ಪ್ರಸ್ತುತ ಅಲ್ಲಿರುವ ಮನೆಗಳನ್ನು ಒಡೆದು ಹಾಕಲು ಹೊರಟಿದೆ. ಅಲ್ಲಿರುವ ಮನೆಗಳನ್ನು ಒಡೆದು ಹಾಕಿ ಅಲ್ಲಿ ಬೇರೆ ಮನೆಗಳನ್ನು ಕಟ್ಟಿ ಬೇರೆ ಜನರಿಗೆ ಮನೆ ನೀಡುತ್ತೇವೆ ಅಂದರೆ ಅದು ಅನ್ಯಾಯವಲ್ಲವೆ?” ಎಂದು ಪ್ರಶ್ನಿಸಿದ್ದಾರೆ.

“ಬಿಡಿಎ ಉದ್ದೇಶವೆ ಸೈಟುಗಳನ್ನು ಮಾರಿ ಮನೆ ಕಟ್ಟುವುದಾದರೆ, ಸೈಟುಗಳಲ್ಲಿ ಈಗಾಗಲೆ ಇರುವ ಮನೆಗಳನ್ನು ಒಡೆಯುವುದು ಯಾಕೆ? ಅದು ಅಲ್ಲದೆ ರೈತರೊಂದಿಗೆ ಬಲವಂತವಾಗಿ ಜಮೀನನ್ನು ಪಡೆಯುವುದು ಯಾತಕ್ಕಾಗಿ? ಇಲ್ಲಿನ ಯಾವುದೇ ರೈತರಿಗೆ ತಮ್ಮ ಭೂಮಿಯನ್ನು ಬಿಡಿಎಗೆ ನೀಡಲು ಮನಸ್ಸಿಲ್ಲ. ಈ ಹಿನ್ನಲೆಯಲ್ಲಿ ನಾವು ಪ್ರತಿಭಟನೆ ನಡೆಸುತ್ತಿದ್ದೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಪ್ರದೇಶದಲ್ಲಿ ಮತ್ತಿಬ್ಬರು ಯುವ ಸಹೋದರಿಯರ ಸಂಶಯಾಸ್ಪದ ಸಾವು: ಕೊಲೆ ಶಂಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...