HomeUncategorizedಚಿತ್ತಾಪುರ ಆರೆಸ್ಸೆಸ್‌ ಪಥಸಂಚಲನಕ್ಕೆ ವಿರೋಧ: ಕಲಬುರಗಿಯಲ್ಲಿಂದು ಶಾಂತಿ ಸಭೆ, ಹಲವು ಮುಖಂಡರಿಗೆ ಆಹ್ವಾನ.

ಚಿತ್ತಾಪುರ ಆರೆಸ್ಸೆಸ್‌ ಪಥಸಂಚಲನಕ್ಕೆ ವಿರೋಧ: ಕಲಬುರಗಿಯಲ್ಲಿಂದು ಶಾಂತಿ ಸಭೆ, ಹಲವು ಮುಖಂಡರಿಗೆ ಆಹ್ವಾನ.

- Advertisement -
- Advertisement -

ಶುಕ್ರವಾರ ಕರ್ನಾಟಕ ಹೈಕೋರ್ಟ್ ನೀಡಿದ ನಿರ್ದೇಶನದಂತೆ ಇಂದು (ನವೆಂಬರ್ 2) ಚಿತ್ತಾಪುರದಲ್ಲಿ ತಮ್ಮ ಮಾರ್ಗ ಮೆರವಣಿಗೆ ನಡೆಸಲು ಅನುಮತಿ ಕೋರಿರುವ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಶಾಂತಿ ಸಭೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಭೀಮ್ ಆರ್ಮಿ, ಭಾರತೀಯ ದಲಿತ ಪ್ಯಾಂಥರ್ಸ್, ಗೊಂಡ ಕುರುಬ ಎಸ್‌ಟಿ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸೇರಿದಂತೆ 10 ಸಂಘಟನೆಗಳನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ವರದಿಯಾಗಿದೆ.

ಸಭೆಯು ಬೆಳಿಗ್ಗೆ 11.30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಪ್ರಾರಂಭವಾಗಲಿದೆ. ಪ್ರತಿ ಸಂಘಟನೆಯಿಂದ ಗರಿಷ್ಠ ಮೂವರು ಸದಸ್ಯರಿಗೆ ಆಹ್ವಾನಿಸಲಾಗಿದೆ. ಸಂಬಂಧಪಟ್ಟ ಎಲ್ಲಾ ಗುಂಪುಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ.

ಆರೆಸ್ಸೆಸ್‌ 100 ವರ್ಷದ ತುಂಬಿದ ಹಿನ್ನೆಲೆಯಲ್ಲಿ ದೊಣ್ಣೆ ಹಿಡಿದು ರಾಜ್ಯದ ಹಲವು ಭಾಗಗಳಲ್ಲಿ ಸಾರ್ವಜನಿಕವಾಗಿ ಪಥಸಂಚಲನ ಮಾಡಿವೆ. ಇದು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಿಸುತ್ತಿದೆ ಅಲ್ಲದೆ ಆರೆಸ್ಸೆಸ್‌ ಸಾರ್ವಜನಿಕ ಸ್ಥಳಗಳಲ್ಲಿ ಶಾಖೆಗಳನ್ನು ನಡೆಸುತ್ತಿರುವುದಕ್ಕೆ ಹಾಗೂ ಆ ರೀತಿಯ ಚಟುವಟಿಕೆ ನಡೆಸಲು ನಿರ್ಭಂದಿಸಬೇಕು ಎಂದು ಕೋರಿ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವರಾದ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಸರ್ಕಾರದ ಅನುಮತಿ ಖಡ್ಡಾಯ ಎಂದು ಸರ್ಕಾರ ಇತ್ತೀಚೆಗೆ ಆದೇಶ ಹೊಡಿಸಿತ್ತು.

ಪ್ರಿಯಾಂಕ್‌ ಖರ್ಗೆಯವರ ಈ ಪತ್ರದ ವಿರುದ್ದ ದೇಶದ ನಾನಾ ಭಾಗಗಳಿಂದ ಬೆದರಿಕೆ ಕರೆಗಳು ಬಂದಿದ್ದವು. ಪ್ರಿಯಾಂಕ್‌ ಖರ್ಗೆ ಆರೆಸ್ಸೆಸ್‌ ಸಂವಿಧಾನ ವಿರೋಧಿ ಎಂಬುದನ್ನು ಹಲವು ಪ್ರಶ್ನೆಗಳನ್ನು ಕೇಳುವ ಮೂಲಕ ಆರೆಸ್ಸೆಸ್‌ ನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ಎನ್ನಲಾಗುತ್ತಿದೆ.

ಪ್ರಿಯಾಂಕ್‌ ಖರ್ಗೆಯವರ ಈ ನಿಲುವನ್ನು ವಿರೋಧಿಸಿ ಅವರ ಕ್ಷೇತ್ರವಾದ ಚಿತ್ತಾಪುರದಲ್ಲಿ ನವೆಂಬರ್‌ 2ರಂದು ಬೃಹತ್‌ ಶಕ್ತಿ ಪ್ರದರ್ಶನಕ್ಕೆ ಆರೆಸ್ಸೆಸ್‌ ಮುಂದಾಗಿತ್ತು.

ಪ್ರಿಯಾಂಕ್‌ ಖರ್ಗೆ ನಿಲುವನ್ನು ಬೆಂಬಲಿಸಿ ಭೀಮ್‌ ಆರ್ಮಿ, ದಲಿತ ಸಂಘಟನೆಗಳು ಹಾಗೂ ಇನ್ನಿತರೆ ಸಂಘಟನೆಗಳು ಆರೆಸ್ಸೆಸ್‌ ಪಥಸಂಚಲನ ನಡೆಸಲು ಉದ್ದೇಶಿಸಿರುವ ಮಾರ್ಗದಲ್ಲೇ ತಮಗೂ ಮೆರವಣಿಗೆಗೆ ಅನುಮತಿ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದವು. ಅಲ್ಲದೇ ತಮಗೂ ದೊಣ್ಣೆ ಸೇರಿದಂತೆ ಪರವಾನಗಿ ಪಡೆದ ಬಂದೂಕುಗಳನ್ನೂ ಮೆರವಣಿಗೆಯಲ್ಲಿ ಬಳಸಲು ಅನುಮತಿ ಕೇಳಿದ್ದವು.

ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ತಾಲೂಕು ಆಡಳಿತವು ಪಥಸಂಚಲದ ಆಯೋಜಕರಿಗೆ ಹಲವು ಮಾಹಿತಿ ಕೋರಿ ಅನುಮತಿಯನ್ನು ನಿರಾಕರಿಸಲಾಗಿತ್ತು. ಆರ್‌ಎಸ್‌ಎಸ್ ನಾಯಕ ಅಶೋಕ್ ಪಾಟೀಲ್ ಅವರು ತಹಶೀಲ್ದಾರ್ ಅವರ ನಿರ್ಧಾರವನ್ನು ಪ್ರಶ್ನಿಸಿ ಕಲಬುರಗಿಯ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು. ಅಕ್ಟೋಬರ್ 19 ರಂದು ವಿಶೇಷ ಸಭೆಯಲ್ಲಿ ಈ ವಿಷಯವನ್ನು ಆಲಿಸಿದ ನ್ಯಾಯಾಲಯವು, ಅಕ್ಟೋಬರ್‌ 28ಕ್ಕೆ (ಇಂದು) ಶಾಂತಿ ಸಭೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...