HomeUncategorizedಚಿತ್ತಾಪುರ ಆರೆಸ್ಸೆಸ್‌ ಪಥಸಂಚಲನಕ್ಕೆ ವಿರೋಧ: ಕಲಬುರಗಿಯಲ್ಲಿಂದು ಶಾಂತಿ ಸಭೆ, ಹಲವು ಮುಖಂಡರಿಗೆ ಆಹ್ವಾನ.

ಚಿತ್ತಾಪುರ ಆರೆಸ್ಸೆಸ್‌ ಪಥಸಂಚಲನಕ್ಕೆ ವಿರೋಧ: ಕಲಬುರಗಿಯಲ್ಲಿಂದು ಶಾಂತಿ ಸಭೆ, ಹಲವು ಮುಖಂಡರಿಗೆ ಆಹ್ವಾನ.

- Advertisement -
- Advertisement -

ಶುಕ್ರವಾರ ಕರ್ನಾಟಕ ಹೈಕೋರ್ಟ್ ನೀಡಿದ ನಿರ್ದೇಶನದಂತೆ ಇಂದು (ನವೆಂಬರ್ 2) ಚಿತ್ತಾಪುರದಲ್ಲಿ ತಮ್ಮ ಮಾರ್ಗ ಮೆರವಣಿಗೆ ನಡೆಸಲು ಅನುಮತಿ ಕೋರಿರುವ ವಿವಿಧ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಶಾಂತಿ ಸಭೆ ನಡೆಸಲು ಜಿಲ್ಲಾಡಳಿತ ಮುಂದಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್), ಭೀಮ್ ಆರ್ಮಿ, ಭಾರತೀಯ ದಲಿತ ಪ್ಯಾಂಥರ್ಸ್, ಗೊಂಡ ಕುರುಬ ಎಸ್‌ಟಿ ಹೋರಾಟ ಸಮಿತಿ, ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ದಿ ಸಂಘ ಮತ್ತು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸೇರಿದಂತೆ 10 ಸಂಘಟನೆಗಳನ್ನು ಸಭೆಗೆ ಆಹ್ವಾನಿಸಲಾಗಿದೆ ಎಂದು ವರದಿಯಾಗಿದೆ.

ಸಭೆಯು ಬೆಳಿಗ್ಗೆ 11.30 ಕ್ಕೆ ಜಿಲ್ಲಾಧಿಕಾರಿ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಪ್ರಾರಂಭವಾಗಲಿದೆ. ಪ್ರತಿ ಸಂಘಟನೆಯಿಂದ ಗರಿಷ್ಠ ಮೂವರು ಸದಸ್ಯರಿಗೆ ಆಹ್ವಾನಿಸಲಾಗಿದೆ. ಸಂಬಂಧಪಟ್ಟ ಎಲ್ಲಾ ಗುಂಪುಗಳಿಗೆ ಈಗಾಗಲೇ ನೋಟಿಸ್ ನೀಡಲಾಗಿದೆ.

ಆರೆಸ್ಸೆಸ್‌ 100 ವರ್ಷದ ತುಂಬಿದ ಹಿನ್ನೆಲೆಯಲ್ಲಿ ದೊಣ್ಣೆ ಹಿಡಿದು ರಾಜ್ಯದ ಹಲವು ಭಾಗಗಳಲ್ಲಿ ಸಾರ್ವಜನಿಕವಾಗಿ ಪಥಸಂಚಲನ ಮಾಡಿವೆ. ಇದು ಸಾರ್ವಜನಿಕರಲ್ಲಿ ಭಯದ ವಾತಾವರಣ ನಿರ್ಮಿಸುತ್ತಿದೆ ಅಲ್ಲದೆ ಆರೆಸ್ಸೆಸ್‌ ಸಾರ್ವಜನಿಕ ಸ್ಥಳಗಳಲ್ಲಿ ಶಾಖೆಗಳನ್ನು ನಡೆಸುತ್ತಿರುವುದಕ್ಕೆ ಹಾಗೂ ಆ ರೀತಿಯ ಚಟುವಟಿಕೆ ನಡೆಸಲು ನಿರ್ಭಂದಿಸಬೇಕು ಎಂದು ಕೋರಿ ಪಂಚಾಯತ್‌ ರಾಜ್‌ ಮತ್ತು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವರಾದ ಪ್ರಿಯಾಂಕ್‌ ಖರ್ಗೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು. ಸರ್ಕಾರದ ಅನುಮತಿ ಖಡ್ಡಾಯ ಎಂದು ಸರ್ಕಾರ ಇತ್ತೀಚೆಗೆ ಆದೇಶ ಹೊಡಿಸಿತ್ತು.

ಪ್ರಿಯಾಂಕ್‌ ಖರ್ಗೆಯವರ ಈ ಪತ್ರದ ವಿರುದ್ದ ದೇಶದ ನಾನಾ ಭಾಗಗಳಿಂದ ಬೆದರಿಕೆ ಕರೆಗಳು ಬಂದಿದ್ದವು. ಪ್ರಿಯಾಂಕ್‌ ಖರ್ಗೆ ಆರೆಸ್ಸೆಸ್‌ ಸಂವಿಧಾನ ವಿರೋಧಿ ಎಂಬುದನ್ನು ಹಲವು ಪ್ರಶ್ನೆಗಳನ್ನು ಕೇಳುವ ಮೂಲಕ ಆರೆಸ್ಸೆಸ್‌ ನ್ನು ಇಕ್ಕಟ್ಟಿಗೆ ಸಿಲುಕಿಸಿದ್ದಾರೆ ಎನ್ನಲಾಗುತ್ತಿದೆ.

ಪ್ರಿಯಾಂಕ್‌ ಖರ್ಗೆಯವರ ಈ ನಿಲುವನ್ನು ವಿರೋಧಿಸಿ ಅವರ ಕ್ಷೇತ್ರವಾದ ಚಿತ್ತಾಪುರದಲ್ಲಿ ನವೆಂಬರ್‌ 2ರಂದು ಬೃಹತ್‌ ಶಕ್ತಿ ಪ್ರದರ್ಶನಕ್ಕೆ ಆರೆಸ್ಸೆಸ್‌ ಮುಂದಾಗಿತ್ತು.

ಪ್ರಿಯಾಂಕ್‌ ಖರ್ಗೆ ನಿಲುವನ್ನು ಬೆಂಬಲಿಸಿ ಭೀಮ್‌ ಆರ್ಮಿ, ದಲಿತ ಸಂಘಟನೆಗಳು ಹಾಗೂ ಇನ್ನಿತರೆ ಸಂಘಟನೆಗಳು ಆರೆಸ್ಸೆಸ್‌ ಪಥಸಂಚಲನ ನಡೆಸಲು ಉದ್ದೇಶಿಸಿರುವ ಮಾರ್ಗದಲ್ಲೇ ತಮಗೂ ಮೆರವಣಿಗೆಗೆ ಅನುಮತಿ ನೀಡಬೇಕೆಂದು ಅರ್ಜಿ ಸಲ್ಲಿಸಿದ್ದವು. ಅಲ್ಲದೇ ತಮಗೂ ದೊಣ್ಣೆ ಸೇರಿದಂತೆ ಪರವಾನಗಿ ಪಡೆದ ಬಂದೂಕುಗಳನ್ನೂ ಮೆರವಣಿಗೆಯಲ್ಲಿ ಬಳಸಲು ಅನುಮತಿ ಕೇಳಿದ್ದವು.

ಶಾಂತಿ ಮತ್ತು ಸುವ್ಯವಸ್ಥೆ ದೃಷ್ಟಿಯಿಂದ ತಾಲೂಕು ಆಡಳಿತವು ಪಥಸಂಚಲದ ಆಯೋಜಕರಿಗೆ ಹಲವು ಮಾಹಿತಿ ಕೋರಿ ಅನುಮತಿಯನ್ನು ನಿರಾಕರಿಸಲಾಗಿತ್ತು. ಆರ್‌ಎಸ್‌ಎಸ್ ನಾಯಕ ಅಶೋಕ್ ಪಾಟೀಲ್ ಅವರು ತಹಶೀಲ್ದಾರ್ ಅವರ ನಿರ್ಧಾರವನ್ನು ಪ್ರಶ್ನಿಸಿ ಕಲಬುರಗಿಯ ಹೈಕೋರ್ಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದರು. ಅಕ್ಟೋಬರ್ 19 ರಂದು ವಿಶೇಷ ಸಭೆಯಲ್ಲಿ ಈ ವಿಷಯವನ್ನು ಆಲಿಸಿದ ನ್ಯಾಯಾಲಯವು, ಅಕ್ಟೋಬರ್‌ 28ಕ್ಕೆ (ಇಂದು) ಶಾಂತಿ ಸಭೆ ನಡೆಸಿ ವರದಿ ಸಲ್ಲಿಸುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

24 ವರ್ಷಗಳ ಮೋದಿ ವರ್ಚಸ್ಸನ್ನು 2 ವಾರಗಳಲ್ಲಿ ಧೂಳೀಪಟ ಮಾಡಿದ ಸಿಜೆಪಿ: CJP ಆಂದೋಲನಕ್ಕೆ ಅರುಂಧತಿ ರಾಯ್ ಮೆಚ್ಚುಗೆ

ಪ್ರಧಾನಿ ನರೇಂದ್ರ ಮೋದಿ ಅವರ ಎರಡು ದಶಕಗಳಿಗೂ ಹೆಚ್ಚಿನ ಸುದೀರ್ಘ ರಾಜಕೀಯ ವರ್ಚಸ್ಸನ್ನು ಕಾಕ್ರೋಚ್ ಜನತಾ ಪಾರ್ಟಿ (CJP) ನಡೆಸಿದ ಪ್ರತಿಭಟನಾ ಆಂದೋಲನವು ಕೇವಲ ಎರಡು ವಾರಗಳಲ್ಲಿ ಬುಡಸಮೇತ ಅಲ್ಲಾಡಿಸಿದೆ. ಇದು ಯಾವುದೇ...

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...