Homeಚಳವಳಿಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಕೇಂದ್ರದ ಕಾಯ್ದೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಇಂದು ಭಗತ್ ಸಿಂಗ್ ಜನ್ಮದಿನದ ನೆನಪಿನಲ್ಲಿ ಅವರ ಹುಟ್ಟೂರು ಕಾತ್ಕರ್ ಕಲನ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. 

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸುತ್ತಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳ ವಿರುದ್ಧ ರೈತರ ಚಳವಳಿ ದಿನೇ ದಿನೇ ಗಟ್ಟಿಗೊಳ್ಳುತ್ತಿದೆ. ಇಂದು ಬೆಳಿಗ್ಗೆಯೇ ಕೇಂದ್ರದೆಹಲಿಯ ಇಂಡಿಯಾ ಗೇಟ್ ಬಳಿ ಜಮಾಯಿಸಿದ ರೈತರು ಟ್ರಾಕ್ಟರ್‌ಗೆ ಬೆಂಕಿ ಹಾಕಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಬೆಳಿಗ್ಗೆ 7.15ರ ಸಮಯಕ್ಕೆ ಜಮಾಯಿಸಿದ 15-20 ರಷ್ಟಿದ್ದ ರೈತರ ಗುಂಪು ಹಳೆಯ ಟ್ರಾಕ್ಟರ್ ಒಂದಕ್ಕೆ ಬೆಂಕಿ ಹಚ್ಚಿದ್ದಾರೆ. ಇಂಡಿಯಾ ಗೇಟ್ ಎದುರು ಹುತಾತ್ಮ ಭಗತ್ ಸಿಂಗ್ ಫೋಟೊ ಹಿಡಿದು ಕುಳಿತು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ನೇಣಿಗೇರಿಸಿದ್ದಾರೆ. ವಿಷಯ ಕಾಳ್ಗಿಚ್ಚಿನಂತೆ ಹಬ್ಬಿದ್ದು ಪೊಲೀಸರು 7.30ರ ಸಮಯಕ್ಕೆ ಎಲ್ಲಾ ಹೋರಾಟ ನಿರತ ರೈತರು ಅಲ್ಲಿಂದ ತೆರಳಿದರೆ, ಅಗ್ನಿಶಾಮಕ ದಳದ ಸಿಬ್ಬಂದಿ ನೀರು ಹಾರಿಸಿ ಟ್ರಾಕ್ಟರ್ ಅವಶೇ‍ಷಗಳನ್ನು ತೆರವುಗೊಳಿಸಿದ್ದಾರೆ.

ಇಂಡಿಯಾ ಗೇಟ್ ಎದುರು ನಡೆದಿರುವ ಈ ಐತಿಹಾಸಿಕ ಪ್ರತಿಭಟನೆಯನ್ನು ಪಂಜಾಬ್ ಯೂತ್ ಕಾಂಗ್ರೆಸ್‌ನ ಅಧಿಕೃತ ಫೇಸ್‌ಬುಕ್‌ ಪುಟದಿಂದ ಲೈವ್ ಸ್ಟ್ರೀಮ್ ಮಾಡಲಾಗಿದೆ. ಸೆಪ್ಟಂಬರ್ 20 ರಂದು ಹರಿಯಾಣದ ಅಂಬಾಲದಲ್ಲಿ ಸಹ ಟ್ರಾಕ್ಟರ್ ಸುಟ್ಟು ಪ್ರತಿಭಟನೆ ಯುವ ಕಾಂಗ್ರೆಸ್ ಕಾರ್ಯಕರ್ತರು ಮುಂದಾಗಿದ್ದಾರು ಎನ್ನಲಾಗಿದೆ.

ರೈತರ ಮತ್ತು ವಿರೋಧ ಪಕ್ಷಗಳ ವ್ಯಾಪಕ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಅಂಗೀಕರಿಸಿದ ಮೂರು ಮಸೂದೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್‌ರವರು ನಿನ್ನೆ ಸಹಿ ಮಾಡಿದ್ದಾರೆ. ಇದು ರೈತರ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು ಪಂಜಾಬ್ ಮತ್ತು ಹರಿಯಾಣದ ರೈತರನ್ನು ರೊಚ್ಚಿಗೆಬ್ಬಿಸಿದೆ. ಕೇಂದ್ರದ ಕಾಯ್ದೆಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಇಂದು ಭಗತ್ ಸಿಂಗ್ ಜನ್ಮದಿನದ ನೆನಪಿನಲ್ಲಿ ಅವರ ಹುಟ್ಟೂರು ಕಾತ್ಕರ್ ಕಲನ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ.

ಇಂದು ಕರ್ನಾಟಕದ ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಿದ್ದು ರಾಜ್ಯದೆಲ್ಲೆಡೆ ಬಂದ್ ಆರಂಭವಾಗಿದೆ. ಬೆಳಿಗ್ಗೆ 4 ಗಂಟೆಯಿಂದಲೇ ಕನ್ನಡಪರ ಸಂಘಟನೆಗಳು ಬಸ್‌ ತಡೆದು, ರೈಲ್ವೇ ನಿಲ್ದಾಣ ಮತ್ತು ವಿಮಾನ ನಿಲ್ದಾಣಗಳಲ್ಲಿ ಪ್ರತಿಭಟನೆ ಆರಂಭಿಸಿದ್ದಾರೆ. ರೈತ-ದಲಿತ-ಕಾರ್ಮಿಕರ ಐಕ್ಯವೇದಿಕೆಯು ಬೆಂಗಳೂರಿನ ಟೌನ್‌ ಹಾಲ್ ಬಳಿ ಧರಣಿ ಆರಂಭಿಸಿದೆ. ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ರೈತರ ಬಂದ್‌ಗೆ ಸಂಪೂರ್ಣ ಬೆಂಬಲ ಘೋಷಿಸಿವೆ.


ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಆಕ್ರೋಶ: ರಾಜ್ಯದ್ಯಂತ ಕರ್ನಾಟಕ ಬಂದ್ ಆರಂಭ – ವಿಡಿಯೋ ನೋಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...