Homeಕರ್ನಾಟಕಕೃಷಿ ಮಸೂದೆಗಳಿಗೆ ವಿರೋಧ: ಹೆದ್ದಾರಿ ತಡೆದು ಪ್ರತಿಭಟಿಸಿದ ರೈತರ ಬಂಧನ!

ಕೃಷಿ ಮಸೂದೆಗಳಿಗೆ ವಿರೋಧ: ಹೆದ್ದಾರಿ ತಡೆದು ಪ್ರತಿಭಟಿಸಿದ ರೈತರ ಬಂಧನ!

- Advertisement -
- Advertisement -

ಕೃಷಿ ಸಂಬಂಧಿ ಸುಗ್ರೀವಾಜ್ಞೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಕೂಡಲೇ ಹಿಂಪಡೆಯಬೇಕು. ರೈತರ ಬೆಳೆ ಖರೀದಿಗೆ ಶೀಘ್ರವೇ ಖರೀದಿ ಕೇಂದ್ರಗಳನ್ನು ಆರಂಭಿಸುವಂತೆ ಒತ್ತಾಯಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಹೆದ್ದಾರಿ ತಡೆ ನಡೆಸಲಾಯಿತು. ತುಮಕೂರಿನ ಜಾಸ್ ಟೋಲ್ ಬಳಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ ನೂರಾರು ರೈತರನ್ನು ಪೊಲೀಸರು ಬಂಧಿಸಿದರು.

ಹೆದ್ದಾರಿ ತಡೆಯಿಂದ ವಾಹನಗಳ ದಟ್ಟಣೆ ಹೆಚ್ಚಾಯಿತು. ರೈತರು ಹೆದ್ದಾರಿ ತಡೆ ನಿಲ್ಲಿಸುವಂತೆ ಪೊಲೀಸರು ಮನವಿ ಮಾಡಿದರು. ಇದಕ್ಕೆ ರೈತರು ಕಿಮ್ಮತ್ತು ನೀಡಲಿಲ್ಲ. ಸ್ವಲ್ಪ ಸಮಯದ ನಂತರ ಬಂಧಿಸಿ ಎಲ್ಲರನ್ನು ವಾಹನಕ್ಕೆ ತುಂಬಿಕೊಂಡು ಡಿಆರ್ ಮೈದಾನಕ್ಕೆ ಪ್ರತಿಭಟನಾನಿರತ ರೈತರನ್ನು ಕರೆತಂದರು. ಹೆಸರು ವಿಳಾಸ ಕೊಟ್ಟು ಹೋಗಿ ಎಂದು ಪೊಲೀಸರು ಮನವಿ ಮಾಡಿದರು. ಇದಕ್ಕೆ ವಿರೋಧ ವ್ಯಕ್ತಪಡಿಸಿದ ರೈತ ಮುಖಂಡರು ನಾವು ಇಲ್ಲಿಯೇ ಧರಣಿ ನಡೆಸುತ್ತೇವೆ. ಯಾವುದೇ ಕಾರಣಕ್ಕೂ ಕುಳಿತಲ್ಲಿಂದ ಕದಲುವುದಿಲ್ಲ. ನಮ್ಮನ್ನು ಬೇಕಾದರೆ ಜೈಲಿಗೆ ಹಾಕಿ ಹೋಗುತ್ತೇವೆ, ಅದು ಬಿಟ್ಟು ಪ್ರತಿಭಟನೆಯನ್ನು ಕೈಬಿಡುವುದಿಲ್ಲ ಎಂದು ಪಟ್ಟುಹಿಡಿದರು. ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಧ್ಯಕ್ಷ ಅನಂದ್ ಪಟೇಲ್ ಮಾತನಾಡಿ, “ಭೂ ಸುಧಾರಣಾ ಕಾಯ್ದೆ, ಭೂಸ್ವಾಧೀನ ಕಾಯ್ದೆ, ಎಪಿಎಂಸಿ ಕಾಯ್ದೆ, ವಿದ್ಯುತ್ ಖಾಸಗೀಕರಣ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆ ಮತ್ತು ಕಾರ್ಮಿಕ ವಿರೋಧಿ ಕಾಯ್ದೆಗಳನ್ನು ಹಿಂಪಡೆಯಬೇಕು. ರಾಗಿ ಮತ್ತು ಶೇಂಗಾ ಖರೀದಿ ಇನ್ನಿತರ ಕೃಷಿ ಉತ್ಪನ್ನಗಳ ಖರೀದಿ ಕೇಂದ್ರಗಳನ್ನು ತೆರೆಯಬೇಕು” ಎಂದು ಆಗ್ರಹಿಸಿದರು.

ಈಗ ಒಕ್ಕಣೆ ಕಾಲ. ದಳ್ಳಾಳಿಗಳು ನೇರ ರೈತರ ಮನೆಗಳಿಗೆ ಹೋಗಿ ರಾಗಿ, ಶೇಂಗಾ ಸೇರಿದಂತೆ ರೈತರ ಕೃಷಿ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ಖರೀದಿ ಮಾಡುತ್ತಿದ್ದಾರೆ. ಮಾರುಕಟ್ಟೆಯಲ್ಲಿ ಕ್ವಿಂಟಲ್ ರಾಗಿಗೆ 3000 ರೂ ಇದೆ. ದಳ್ಳಾಳಿಗಳು ಕೇವಲ 1500 ರೂಗೆ ಖರೀದಿಸುತ್ತಿದ್ದಾರೆ. ರೈತರಿಗೆ ಮೋಸವಾಗುತ್ತಿದೆ. ದಳ್ಳಾಳಿಗಳಿಗೆ ಹೆಚ್ಚಿನ ಲಾಭ ಮತ್ತು ಅನುಕೂಲವಾಗುತ್ತಿದೆ. ರೈತರ ಬೆಳೆಗಳಿಗೆ ಬೆಂಬಲ ಬೆಲೆ ಕೊಟ್ಟು ಖರೀದಿ ಮಾಡಿ ಅಂದ್ರೆ ಸರ್ಕಾರದ ಬಳಿ ಹಣವಿಲ್ಲ ಎಂದು ಹೇಳಲಾಗುತ್ತಿದೆ. ಇದು ರೈತ ವಿರೋಧಿ ಸರ್ಕಾರ ಎಂದು ಕಿಡಿಕಾರಿದರು.

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಕೊಡಲು ಹಣವಿಲ್ಲ ಎಂದು ಮುಖ್ಯಮಂತ್ರಿಗಳು ಹೇಳುತ್ತಾರೆ. ಇದನ್ನು ನೋಡಿದರೆ ರಾಜ್ಯ ಸರ್ಕಾರ ದಿವಾಳಿಯಾಗಿದೆ. ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಬೇಕಾದ ಜಿಎಸ್.ಟಿ. ಪಾಲಿನ ಹಣವನ್ನು ಕೊಡುತ್ತಿಲ್ಲ. ತಾರತಮ್ಯ ಮಾಡುತ್ತಿದೆ. ರಾಜ್ಯದ ಪಾಲಿನ ಹಣವನ್ನು ಕೊಟ್ಟಿದ್ದರೆ ಈ ಸ್ಥಿತಿ ಬರುತ್ತಿರಲಿಲ್ಲ. ರಾಜ್ಯದ 25 ಬಿಜೆಪಿ ಸಂಸದರಿದ್ದರೂ ಧಮ್ ಕಳೆದುಕೊಂಡಿದ್ದಾರೆ. ಪ್ರಧಾನಿಯನ್ನು ಪಟ್ಟು ಹಿಡಿದು ಕೇಳುತ್ತಿಲ್ಲ. ಕೇಂದ್ರ ಸರ್ಕಾರ ಜಿಎಸ್ ಟಿ ಹಣ ನೀಡಿ ಎಂದರೆ ಸಾಲಕೊಡುತ್ತೇವೆ ಎನ್ನುತ್ತಿದೆ. ಕೇಂದ್ರ ಸರ್ಕಾರದ ಕೆಟ್ಟ ನೀತಿಯಿಂದ ಸಮಸ್ಯೆ ಉಂಟಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೃಷಿ ಮಸೂದೆಗಳಿಗೆ ವಿರೋಧ: ಹೆದ್ದಾರಿ ತಡೆದು ಪ್ರತಿಭಟಿಸಿದ ರೈತರ ಬಂಧನ!

ಕೃಷಿ ಮಸೂದೆಗಳಿಗೆ ವಿರೋಧ: ಹೆದ್ದಾರಿ ತಡೆದು ಪ್ರತಿಭಟಿಸಿದ ರೈತರ ಬಂಧನ!

Posted by Naanu Gauri on Thursday, 5 November 2020

ಉತ್ತರ ಕರ್ನಾಟಕ ಭಾಗದಲ್ಲಿ ಶುಗರ್ ಮಾಫಿಯಾ ನಡೆಯುತ್ತಿದೆ. ಕಬ್ಬು ಖರೀದಿಸಿರುವ ಬಾಕಿ ಹಣ ಕೊಟ್ಟಿಲ್ಲ. ಶುಗರ್ ಮಿಲ್ ಮಾಲಿಕರು ತಮ್ಮದೇ ಸಹಕಾರಿ ಬ್ಯಾಂಕ್ ಗಳನ್ನು ತೆರೆದು ರೈತರಿಗೆ ಸಾಲವನ್ನು ಕೊಡುತ್ತೇವೆ ಎನ್ನುತ್ತಿದ್ದಾರೆ. ಮುರುಗೇಶ್ ನಿರಾಣಿ, ಸಾಹುಕಾರರು ಇದರ ಮುಖ್ಯಸ್ಥರಾಗಿದ್ದಾರೆ. ಅದೇ ರೀತಿ ಕೇಂದ್ರ ಸರ್ಕಾರ ಹೇಳುತ್ತಿದೆ. ರೈತರು ಗೊಬ್ಬರ ಖರೀದಿಸಲು ದುಡ್ಡಿಲ್ಲ. ಸಾಲ ಕೊಡಲು ದುಡ್ಡಿದೆ. ರಾಜ್ಯ ಸರ್ಕಾರ ಕೇಂದ್ರದ ಮೇಲೆ ಒತ್ತಡ ಹೇರುವಂತಹ ಸ್ಥಿತಿಯಲ್ಲಿ ಇಲ್ಲ ಎಂದು ಪ್ರತಿಭಟನಾಕಾರರು ಹೇಳಿದರು.

ಕೇರಳ ಸರ್ಕಾರ 16 ಬಗೆಯ ತರಕಾರಿಗಳಿಗೆ ಬೆಂಬಲ ಬೆಲೆ ನೀಡುತ್ತಿದೆ. ಅದೇ ಮಾದರಿಯನ್ನು ರಾಜ್ಯದಲ್ಲೂ ಅನುಸರಿಸಬೇಕು. ಪಂಜಾಬ್ ರಾಜ್ಯದಲ್ಲಿ ಬೆಂಬಲ ಬೆಲೆಗಿಂತ ಕಡಿಮೆ ದರದಲ್ಲಿ ರೈತರ ಉತ್ಪನ್ನಗಳನ್ನು ಖರೀದಿಸಿದರೆ ಅಪರಾಧ ಎಂದಿದೆ. ಹಾಗಾಗಿ ರಾಜ್ಯದಲ್ಲೂ ಇದೇ ಕಾನೂನುನ್ನು ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.

ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ ರೈತರ ಭೂಮಿ ವಶಪಡಿಸಿಕೊಂಡು ದಶಕಗಳೇ ಕಳೆದಿದ್ದರೂ ಇದುವರೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಸಿಕ್ಕಿಲ್ಲ. ಗುತ್ತಿಗೆದಾರರು ಮತ್ತು ಅಧಿಕಾರಿಗಳು ಶಾಮೀಲಾಗಿ ರೈತರಿಗೆ ವಂಚನೆ ಮಾಡಿದ್ದಾರೆ. ರೈತರ ಭೂಮಿಯಲ್ಲಿ ನಡೆಯುತ್ತಿರುವ ಕಾಮಗಾರಿಗಳನ್ನು ಕೂಡಲೇ ನಿಲ್ಲಿಸಬೇಕು. ಹೇಮಾವತಿ ನಾಲೆಗೆ ವಶಪಡಿಸಿಕೊಂಡಿರುವ ರೈತರ ಭೂಮಿಗೆ 450 ಕೋಟಿ ಪರಿಹಾರ ಬಾಕಿ ಇರಿಸಿಕೊಂಡಿದೆ. ಮಾನಮರ್ಯಾದೆ ಇದ್ದರೆ ಬಾಕಿ ಹಣವನ್ನು ಕೂಡಲೇ ಬಿಡುಗಡೆ ಮಾಡಬೇಕು. ಅದು ಬಿಟ್ಟು ಕೊರೊನ ನೆಪದಲ್ಲಿ ರೈತರು ಮತ್ತು ಕೂಲಿಕಾರರ ನೆರವಿಗೆ ಬಾರದೆ ಸರ್ಕಾರ ಅವರ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಕೊಳ್ಳೆ ಹೊಡೆಯುತ್ತಿದೆ ಎಂದು ಆರೋಪಿಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕೆಂಕೆರೆ ಸತೀಶ್, ಧನಂಜಯಾರಾಧ್ಯ, ರುದ್ರೇಶ್ ಗೌಡ, ನಾಗೇಂದ್ರ, ಮತ್ತೊಂದು ಕಡೆ ನಡೆದ ಪ್ರತಿಭಟನೆಯಲ್ಲಿ ಎಐಕೆಎಸ್.ಸಿಸಿ. ಕಾರ್ಯದರ್ಶಿ ಸಿ.ಯತಿರಾಜು, ಪ್ರಾಂತ ರೈತ ಸಂಘದ ಸಂಚಾಲಕ ಸಿ.ಅಜ್ಜಪ್ಪ  ಆರ್.ಕೆ.ಎಸ್ ಸಂಚಾಲಕ ಎಸ್.ಎನ್.ಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.


ಇದನ್ನೂ ಓದಿ: ಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....