Homeಕರ್ನಾಟಕಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

ಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

'ರೈತ ಹಕ್ಕುಗಳ ರಕ್ಷಣೆಗೆ ರೈತರ ನಡಿಗೆ' ಹೆಸರಿನಲ್ಲಿ ನಡೆಯುತ್ತಿರುವ ಈ ಪಾದಯಾತ್ರೆಯು ಈಗಾಗಲೇ 10 ದಿನಗಳನ್ನು ಪೂರೈಸಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ 3 ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಮತ್ತು ಎಂಎಸ್‌ಪಿಗಾಗಿ ಕಾನೂನು ರಚಿಸಬೇಕೆಂದು ಒತ್ತಾಯಿಸಿ ಕರ್ನಾಟಕದಲ್ಲಿ ವಿನೂತನ ಚಳವಳಿಯೊಂದು ಸದ್ದಿಲ್ಲದೆ ನಡೆಯುತ್ತಿದೆ. ಹೈದರಾಬಾದ್ ಕರ್ನಾಟಕದ 6 ಜಿಲ್ಲೆಗಳ ನೂರಾರು ಗ್ರಾಮಗಳನ್ನು ತಲುಪಿ ಕೃಷಿ ಕಾಯ್ದೆಗಳ ಕುರಿತು ವಿವರಿಸುತ್ತಾ, ಜನರನ್ನು ಹೋರಾಟಕ್ಕೆ ಅಣಿಗೊಳಿಸಲು 200ಕ್ಕೂ ಹೆಚ್ಚು ರೈತರು ಬೀದರ್‌ನ ಬಸವಕಲ್ಯಾಣದಿಂದ ಬಳ್ಳಾರಿವರೆಗೆ ರೈತ ಪಾದಯಾತ್ರೆ ನಡೆಸುತ್ತಿದ್ದಾರೆ.

ಆಲ್ ಇಂಡಿಯಾ ಕಿಸಾನ್ ಮಜ್ದೂರ್ ಸಭಾ, ರೈತನಾಯಕ ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ರಿ) ರಾಜ್ಯಾಧ್ಯಕ್ಷರಾದ ಬಿ.ಜೆ ಹಳ್ಳಿ ಜಿ ನಾರಾಯಣಸ್ವಾಮಿಯವರ ನೇತೃತ್ವದಲ್ಲಿ ಮಾರ್ಚ್ 5ರಂದು ಬಸವಕಲ್ಯಾಣದಲ್ಲಿ ರೈತ ಪಾದಯಾತ್ರೆ ಆರಂಭವಾಗಿದೆ. ‘ರೈತ ಹಕ್ಕುಗಳ ರಕ್ಷಣೆಗೆ ರೈತರ ನಡಿಗೆ’ ಹೆಸರಿನಲ್ಲಿ 10 ದಿನಗಳನ್ನು ಪೂರೈಸಿ ಸದ್ಯ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕುಗಳಲ್ಲಿ ಜಾಗೃತಿ ಜಾಥ ನಡೆಯುತ್ತಿದೆ. 400 ಕಿ.ಮೀ ಉದ್ದದ ಈ ಪಾದಯಾತ್ರೆಯು ಮಾರ್ಚ್ 23 ಭಗತ್ ಸಿಂಗ್ ಹುತಾತ್ಮ ದಿನದಂದು ಬಳ್ಳಾರಿಯಲ್ಲಿ ಸಮಾರೋಪಗೊಳ್ಳಲಿದೆ.

ಈ ಕುರಿತು ರೈತ ಮುಖಂಡ ಜಿ ನಾರಾಯಣಸ್ವಾಮಿ ನಾನುಗೌರಿ.ಕಾಂ ನೊಂದಿಗೆ ಮಾತನಾಡಿ “250 ರೈತರು ಪಾದಯಾತ್ರೆ ಹೊರಟಿದ್ದು, ಅದರಲ್ಲಿ 22 ಜನ ಮಹಿಳಾ ರೈತರಿದ್ದಾರೆ. 2 ಟ್ರ್ಯಾಕ್ಟರ್‌ನಲ್ಲಿ ಆಹಾರ ಸಾಮಗ್ರಿಗಳು ಮತ್ತು ಅಗತ್ಯ ವಸ್ತುಗಳನ್ನು ಜೊತೆಗೆ ಒಯ್ಯಲಾಗುತ್ತಿದೆ. ತುರ್ತು ಪರಿಸ್ಥಿತಿ ನಿಭಾಯಿಸಲು 2 ಕಾರು ನಮ್ಮ ಜೊತೆಗಿವೆ. ಮಾರ್ಚ್ 5 ರಂದು ಆರಂಭವಾದ ಪಾದಾಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಗಿದೆ. ಮಾರ್ಚ್ 9 ರಂದು ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದೆವು. ಮಾಜಿ ಶಾಸಕರಾದ ಬಿ.ಆರ್ ಪಾಟೀಲ್, ಹೋರಾಟಗಾರರಾದ ಶಾಮರಾಮ್ ಚಂದ್ರಶೇಖರ್ ಪಾಟೀಲ್ ಜೊತೆಗಿದ್ದರು” ಎಂದಿದ್ದಾರೆ.

“ದೆಹಲಿಯಲ್ಲಿ ರೈತರು ನೂರು ದಿನಗಳಿಂದಲೂ ಹೋರಾಡುತ್ತಿದ್ದರೂ ಕೇಂದ್ರ ಸರ್ಕಾರ ರೈತರಿಗೆ ಮರಣಶಾಸನವಾಗಿರುವ ಕಾನೂನುಗಳನ್ನು ವಾಪಸ್ ಪಡೆಯುತ್ತಿಲ್ಲ. ರಾಜ್ಯ ಸರ್ಕಾರ ಭೂಸುಧಾರಣಾ ತಿದ್ದುಪಡಿ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ತಂದು ರೈತರನ್ನು ಬೀದಿಗೆ ತಳ್ಳುತ್ತಿದೆ. ಬೆಲೆಏರಿಕೆ, ಸರ್ಕಾರಿ ಸಂಸ್ಥೆಗಳ ಖಾಸಗೀಕರಣದಿಂದ ಇತರ ಜನವರ್ಗಗಳನ್ನು ಹಿಂಸಿಲಾಗುತ್ತಿದೆ. ಹಾಗಾಗಿ ಈ ಕುರಿತು ಜನಜಾಗೃತಿ ಮೂಡಿಸಲು ಪಾದಯಾತ್ರೆಯಲ್ಲಿ ನೂರಾರು ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಮಾರ್ಚ್ 23 ರಂದು ಬಳ್ಳಾರಿಯಲ್ಲಿ ಪಾದಯಾತ್ರೆಯ ಸಮಾರೋಪ ಸಮಾವೇಶ ನಡೆಯಲಿದೆ. ಅಖಿಲ ಭಾರತ ಮಟ್ಟದ ರೈತ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕರ್ನಾಟಕದಲ್ಲಿ ರೈತ ಹೋರಾಟದ ಮುಂದಿನ ರೂಪುರೇಷೆಗಳನ್ನು ಚರ್ಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಹೋರಾಟಕ್ಕೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...