Homeಕರ್ನಾಟಕಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

ಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

'ರೈತ ಹಕ್ಕುಗಳ ರಕ್ಷಣೆಗೆ ರೈತರ ನಡಿಗೆ' ಹೆಸರಿನಲ್ಲಿ ನಡೆಯುತ್ತಿರುವ ಈ ಪಾದಯಾತ್ರೆಯು ಈಗಾಗಲೇ 10 ದಿನಗಳನ್ನು ಪೂರೈಸಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ 3 ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಮತ್ತು ಎಂಎಸ್‌ಪಿಗಾಗಿ ಕಾನೂನು ರಚಿಸಬೇಕೆಂದು ಒತ್ತಾಯಿಸಿ ಕರ್ನಾಟಕದಲ್ಲಿ ವಿನೂತನ ಚಳವಳಿಯೊಂದು ಸದ್ದಿಲ್ಲದೆ ನಡೆಯುತ್ತಿದೆ. ಹೈದರಾಬಾದ್ ಕರ್ನಾಟಕದ 6 ಜಿಲ್ಲೆಗಳ ನೂರಾರು ಗ್ರಾಮಗಳನ್ನು ತಲುಪಿ ಕೃಷಿ ಕಾಯ್ದೆಗಳ ಕುರಿತು ವಿವರಿಸುತ್ತಾ, ಜನರನ್ನು ಹೋರಾಟಕ್ಕೆ ಅಣಿಗೊಳಿಸಲು 200ಕ್ಕೂ ಹೆಚ್ಚು ರೈತರು ಬೀದರ್‌ನ ಬಸವಕಲ್ಯಾಣದಿಂದ ಬಳ್ಳಾರಿವರೆಗೆ ರೈತ ಪಾದಯಾತ್ರೆ ನಡೆಸುತ್ತಿದ್ದಾರೆ.

ಆಲ್ ಇಂಡಿಯಾ ಕಿಸಾನ್ ಮಜ್ದೂರ್ ಸಭಾ, ರೈತನಾಯಕ ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ರಿ) ರಾಜ್ಯಾಧ್ಯಕ್ಷರಾದ ಬಿ.ಜೆ ಹಳ್ಳಿ ಜಿ ನಾರಾಯಣಸ್ವಾಮಿಯವರ ನೇತೃತ್ವದಲ್ಲಿ ಮಾರ್ಚ್ 5ರಂದು ಬಸವಕಲ್ಯಾಣದಲ್ಲಿ ರೈತ ಪಾದಯಾತ್ರೆ ಆರಂಭವಾಗಿದೆ. ‘ರೈತ ಹಕ್ಕುಗಳ ರಕ್ಷಣೆಗೆ ರೈತರ ನಡಿಗೆ’ ಹೆಸರಿನಲ್ಲಿ 10 ದಿನಗಳನ್ನು ಪೂರೈಸಿ ಸದ್ಯ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕುಗಳಲ್ಲಿ ಜಾಗೃತಿ ಜಾಥ ನಡೆಯುತ್ತಿದೆ. 400 ಕಿ.ಮೀ ಉದ್ದದ ಈ ಪಾದಯಾತ್ರೆಯು ಮಾರ್ಚ್ 23 ಭಗತ್ ಸಿಂಗ್ ಹುತಾತ್ಮ ದಿನದಂದು ಬಳ್ಳಾರಿಯಲ್ಲಿ ಸಮಾರೋಪಗೊಳ್ಳಲಿದೆ.

ಈ ಕುರಿತು ರೈತ ಮುಖಂಡ ಜಿ ನಾರಾಯಣಸ್ವಾಮಿ ನಾನುಗೌರಿ.ಕಾಂ ನೊಂದಿಗೆ ಮಾತನಾಡಿ “250 ರೈತರು ಪಾದಯಾತ್ರೆ ಹೊರಟಿದ್ದು, ಅದರಲ್ಲಿ 22 ಜನ ಮಹಿಳಾ ರೈತರಿದ್ದಾರೆ. 2 ಟ್ರ್ಯಾಕ್ಟರ್‌ನಲ್ಲಿ ಆಹಾರ ಸಾಮಗ್ರಿಗಳು ಮತ್ತು ಅಗತ್ಯ ವಸ್ತುಗಳನ್ನು ಜೊತೆಗೆ ಒಯ್ಯಲಾಗುತ್ತಿದೆ. ತುರ್ತು ಪರಿಸ್ಥಿತಿ ನಿಭಾಯಿಸಲು 2 ಕಾರು ನಮ್ಮ ಜೊತೆಗಿವೆ. ಮಾರ್ಚ್ 5 ರಂದು ಆರಂಭವಾದ ಪಾದಾಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಗಿದೆ. ಮಾರ್ಚ್ 9 ರಂದು ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದೆವು. ಮಾಜಿ ಶಾಸಕರಾದ ಬಿ.ಆರ್ ಪಾಟೀಲ್, ಹೋರಾಟಗಾರರಾದ ಶಾಮರಾಮ್ ಚಂದ್ರಶೇಖರ್ ಪಾಟೀಲ್ ಜೊತೆಗಿದ್ದರು” ಎಂದಿದ್ದಾರೆ.

“ದೆಹಲಿಯಲ್ಲಿ ರೈತರು ನೂರು ದಿನಗಳಿಂದಲೂ ಹೋರಾಡುತ್ತಿದ್ದರೂ ಕೇಂದ್ರ ಸರ್ಕಾರ ರೈತರಿಗೆ ಮರಣಶಾಸನವಾಗಿರುವ ಕಾನೂನುಗಳನ್ನು ವಾಪಸ್ ಪಡೆಯುತ್ತಿಲ್ಲ. ರಾಜ್ಯ ಸರ್ಕಾರ ಭೂಸುಧಾರಣಾ ತಿದ್ದುಪಡಿ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ತಂದು ರೈತರನ್ನು ಬೀದಿಗೆ ತಳ್ಳುತ್ತಿದೆ. ಬೆಲೆಏರಿಕೆ, ಸರ್ಕಾರಿ ಸಂಸ್ಥೆಗಳ ಖಾಸಗೀಕರಣದಿಂದ ಇತರ ಜನವರ್ಗಗಳನ್ನು ಹಿಂಸಿಲಾಗುತ್ತಿದೆ. ಹಾಗಾಗಿ ಈ ಕುರಿತು ಜನಜಾಗೃತಿ ಮೂಡಿಸಲು ಪಾದಯಾತ್ರೆಯಲ್ಲಿ ನೂರಾರು ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಮಾರ್ಚ್ 23 ರಂದು ಬಳ್ಳಾರಿಯಲ್ಲಿ ಪಾದಯಾತ್ರೆಯ ಸಮಾರೋಪ ಸಮಾವೇಶ ನಡೆಯಲಿದೆ. ಅಖಿಲ ಭಾರತ ಮಟ್ಟದ ರೈತ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕರ್ನಾಟಕದಲ್ಲಿ ರೈತ ಹೋರಾಟದ ಮುಂದಿನ ರೂಪುರೇಷೆಗಳನ್ನು ಚರ್ಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಹೋರಾಟಕ್ಕೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...