Homeಕರ್ನಾಟಕಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

ಕೃಷಿ ಕಾಯ್ದೆಗಳಿಗೆ ವಿರೋಧ: ಬಸವಕಲ್ಯಾಣದಿಂದ ಬಳ್ಳಾರಿವರೆಗೆ ಸಾಗುತ್ತಿರುವ 400 ಕಿ.ಮೀ ರೈತ ಪಾದಯಾತ್ರೆ

'ರೈತ ಹಕ್ಕುಗಳ ರಕ್ಷಣೆಗೆ ರೈತರ ನಡಿಗೆ' ಹೆಸರಿನಲ್ಲಿ ನಡೆಯುತ್ತಿರುವ ಈ ಪಾದಯಾತ್ರೆಯು ಈಗಾಗಲೇ 10 ದಿನಗಳನ್ನು ಪೂರೈಸಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ 3 ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಮತ್ತು ಎಂಎಸ್‌ಪಿಗಾಗಿ ಕಾನೂನು ರಚಿಸಬೇಕೆಂದು ಒತ್ತಾಯಿಸಿ ಕರ್ನಾಟಕದಲ್ಲಿ ವಿನೂತನ ಚಳವಳಿಯೊಂದು ಸದ್ದಿಲ್ಲದೆ ನಡೆಯುತ್ತಿದೆ. ಹೈದರಾಬಾದ್ ಕರ್ನಾಟಕದ 6 ಜಿಲ್ಲೆಗಳ ನೂರಾರು ಗ್ರಾಮಗಳನ್ನು ತಲುಪಿ ಕೃಷಿ ಕಾಯ್ದೆಗಳ ಕುರಿತು ವಿವರಿಸುತ್ತಾ, ಜನರನ್ನು ಹೋರಾಟಕ್ಕೆ ಅಣಿಗೊಳಿಸಲು 200ಕ್ಕೂ ಹೆಚ್ಚು ರೈತರು ಬೀದರ್‌ನ ಬಸವಕಲ್ಯಾಣದಿಂದ ಬಳ್ಳಾರಿವರೆಗೆ ರೈತ ಪಾದಯಾತ್ರೆ ನಡೆಸುತ್ತಿದ್ದಾರೆ.

ಆಲ್ ಇಂಡಿಯಾ ಕಿಸಾನ್ ಮಜ್ದೂರ್ ಸಭಾ, ರೈತನಾಯಕ ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ (ರಿ) ರಾಜ್ಯಾಧ್ಯಕ್ಷರಾದ ಬಿ.ಜೆ ಹಳ್ಳಿ ಜಿ ನಾರಾಯಣಸ್ವಾಮಿಯವರ ನೇತೃತ್ವದಲ್ಲಿ ಮಾರ್ಚ್ 5ರಂದು ಬಸವಕಲ್ಯಾಣದಲ್ಲಿ ರೈತ ಪಾದಯಾತ್ರೆ ಆರಂಭವಾಗಿದೆ. ‘ರೈತ ಹಕ್ಕುಗಳ ರಕ್ಷಣೆಗೆ ರೈತರ ನಡಿಗೆ’ ಹೆಸರಿನಲ್ಲಿ 10 ದಿನಗಳನ್ನು ಪೂರೈಸಿ ಸದ್ಯ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕುಗಳಲ್ಲಿ ಜಾಗೃತಿ ಜಾಥ ನಡೆಯುತ್ತಿದೆ. 400 ಕಿ.ಮೀ ಉದ್ದದ ಈ ಪಾದಯಾತ್ರೆಯು ಮಾರ್ಚ್ 23 ಭಗತ್ ಸಿಂಗ್ ಹುತಾತ್ಮ ದಿನದಂದು ಬಳ್ಳಾರಿಯಲ್ಲಿ ಸಮಾರೋಪಗೊಳ್ಳಲಿದೆ.

ಈ ಕುರಿತು ರೈತ ಮುಖಂಡ ಜಿ ನಾರಾಯಣಸ್ವಾಮಿ ನಾನುಗೌರಿ.ಕಾಂ ನೊಂದಿಗೆ ಮಾತನಾಡಿ “250 ರೈತರು ಪಾದಯಾತ್ರೆ ಹೊರಟಿದ್ದು, ಅದರಲ್ಲಿ 22 ಜನ ಮಹಿಳಾ ರೈತರಿದ್ದಾರೆ. 2 ಟ್ರ್ಯಾಕ್ಟರ್‌ನಲ್ಲಿ ಆಹಾರ ಸಾಮಗ್ರಿಗಳು ಮತ್ತು ಅಗತ್ಯ ವಸ್ತುಗಳನ್ನು ಜೊತೆಗೆ ಒಯ್ಯಲಾಗುತ್ತಿದೆ. ತುರ್ತು ಪರಿಸ್ಥಿತಿ ನಿಭಾಯಿಸಲು 2 ಕಾರು ನಮ್ಮ ಜೊತೆಗಿವೆ. ಮಾರ್ಚ್ 5 ರಂದು ಆರಂಭವಾದ ಪಾದಾಯಾತ್ರೆಗೆ ಭಾರೀ ಜನಬೆಂಬಲ ವ್ಯಕ್ತವಾಗಿದೆ. ಮಾರ್ಚ್ 9 ರಂದು ಕಲಬುರಗಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದೆವು. ಮಾಜಿ ಶಾಸಕರಾದ ಬಿ.ಆರ್ ಪಾಟೀಲ್, ಹೋರಾಟಗಾರರಾದ ಶಾಮರಾಮ್ ಚಂದ್ರಶೇಖರ್ ಪಾಟೀಲ್ ಜೊತೆಗಿದ್ದರು” ಎಂದಿದ್ದಾರೆ.

“ದೆಹಲಿಯಲ್ಲಿ ರೈತರು ನೂರು ದಿನಗಳಿಂದಲೂ ಹೋರಾಡುತ್ತಿದ್ದರೂ ಕೇಂದ್ರ ಸರ್ಕಾರ ರೈತರಿಗೆ ಮರಣಶಾಸನವಾಗಿರುವ ಕಾನೂನುಗಳನ್ನು ವಾಪಸ್ ಪಡೆಯುತ್ತಿಲ್ಲ. ರಾಜ್ಯ ಸರ್ಕಾರ ಭೂಸುಧಾರಣಾ ತಿದ್ದುಪಡಿ, ಗೋಹತ್ಯೆ ನಿಷೇಧ ಕಾಯ್ದೆಗಳನ್ನು ತಂದು ರೈತರನ್ನು ಬೀದಿಗೆ ತಳ್ಳುತ್ತಿದೆ. ಬೆಲೆಏರಿಕೆ, ಸರ್ಕಾರಿ ಸಂಸ್ಥೆಗಳ ಖಾಸಗೀಕರಣದಿಂದ ಇತರ ಜನವರ್ಗಗಳನ್ನು ಹಿಂಸಿಲಾಗುತ್ತಿದೆ. ಹಾಗಾಗಿ ಈ ಕುರಿತು ಜನಜಾಗೃತಿ ಮೂಡಿಸಲು ಪಾದಯಾತ್ರೆಯಲ್ಲಿ ನೂರಾರು ಹಳ್ಳಿಗಳಿಗೆ ಭೇಟಿ ನೀಡುತ್ತಿದ್ದೇವೆ” ಎಂದು ಅವರು ತಿಳಿಸಿದ್ದಾರೆ.

ಮಾರ್ಚ್ 23 ರಂದು ಬಳ್ಳಾರಿಯಲ್ಲಿ ಪಾದಯಾತ್ರೆಯ ಸಮಾರೋಪ ಸಮಾವೇಶ ನಡೆಯಲಿದೆ. ಅಖಿಲ ಭಾರತ ಮಟ್ಟದ ರೈತ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕರ್ನಾಟಕದಲ್ಲಿ ರೈತ ಹೋರಾಟದ ಮುಂದಿನ ರೂಪುರೇಷೆಗಳನ್ನು ಚರ್ಚಿಸಲಾಗುತ್ತದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಹೋರಾಟಕ್ಕೆ ಹೆಚ್ಚುತ್ತಿರುವ ಅಂತಾರಾಷ್ಟ್ರೀಯ ಬೆಂಬಲ: ರೈತರ ಬೆನ್ನಿಗೆ ನಿಂತ ‘ಲಿಲ್ಲಿ ಸಿಂಗ್’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...