Homeಚಳವಳಿಕೃಷಿ ಕಾಯ್ದೆಗಳಿಗೆ ವಿರೋಧ: ದೇಶಾದ್ಯಂತ ರಸ್ತೆ ತಡೆ, ದೆಹಲಿ ಚಲೋಗೆ ನಿರ್ಧಾರ!

ಕೃಷಿ ಕಾಯ್ದೆಗಳಿಗೆ ವಿರೋಧ: ದೇಶಾದ್ಯಂತ ರಸ್ತೆ ತಡೆ, ದೆಹಲಿ ಚಲೋಗೆ ನಿರ್ಧಾರ!

ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (ಎಐಕೆಎಸ್‌ಸಿಸಿ)ಯ ನೇತೃತ್ವದಲ್ಲಿ ನವೆಂಬರ್ 5 ರಂದು ದೇಶಾದ್ಯಂತ ರಸ್ತೆ ತಡೆ ಮತ್ತು ನವೆಂಬರ್ 26-27 ರಂದು ‘ದೆಹಲಿ ಚಲೋ’ಗೆ ಕರೆ ನೀಡಲಾಗಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಅಂಗೀಕರಿಸಿರುವ ಮೂರು ಕೃಷಿ ಕಾಯ್ದೆಗಳಿಗೆ ಮತ್ತು ವಿದ್ಯುತ್ ಮಸೂದೆ 2020ಕ್ಕೆ ರೈತರ ವಿರೋಧ ಮುಂದುವರೆದಿದೆ. ಈ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ (ಎಐಕೆಎಸ್‌ಸಿಸಿ)ಯ ನೇತೃತ್ವದಲ್ಲಿ ನವೆಂಬರ್ 5 ರಂದು ದೇಶಾದ್ಯಂತ ರಸ್ತೆ ತಡೆ ಮತ್ತು ನವೆಂಬರ್ 26-27 ರಂದು ‘ದೆಹಲಿ ಚಲೋ’ಗೆ ಕರೆ ನೀಡಲಾಗಿದೆ.

ದೇಶದ 500 ಕ್ಕೂ ಹೆಚ್ಚು ರೈತ ಸಂಘಟನೆಗಳ ಒಕ್ಕೂಟವಾದ ಎಐಕೆಎಸ್‌ಸಿಸಿ ಅಕ್ಟೋಬರ್ 27 ರಂದು ನವದೆಹಲಿಯ ಗುರುದ್ವಾರ ರಾಕಬ್‌ಗಂಜ್‌ನಲ್ಲಿ ಸಭೆ ಸೇರಿ ಹೋರಾಟವನ್ನು ತೀವ್ರಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.

ಹಲವು ರಾಜ್ಯದ ರೈತಸಂಘಟನೆಗಳು ಮತ್ತು ರೈತ ಮುಖಂಡರಾದ ಬಲ್ಬೀರ್ ಸಿಂಗ್ ರಾಜೇವಾಲ್ ಮತ್ತು ಗುರ್ನಮ್ ಸಿಂಗ್ ಚಾಂದೂನಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ 3 ಕೃಷಿ ಕಾಯ್ದೆಗಳು ಮತ್ತು ವಿದ್ಯುತ್ ಮಸೂದೆ 2020 ವಿರುದ್ಧದ ಹೋರಾಟವನ್ನು ಮುನ್ನಡೆಸಲು ರೈತ ಒಕ್ಕೂಟಗಳ ಸಮನ್ವಯ ಸಮಿತಿ ರಚಿಸಲಾಗಿದೆ. ಇದರಲ್ಲಿ ವಿ.ಎಂ.ಸಿಂಗ್, ಬಲ್ಬೀರ್ ಸಿಂಗ್ ರಾಜೇವಾಲ್, ಗುರ್ನಮ್ ಸಿಂಗ್, ರಾಜು ಶೆಟ್ಟಿ ಮತ್ತು ಯೋಗೇಂದ್ರ ಯಾದವ್ ಸೇರಿದ್ದು ಎರಡು ಹೋರಾಟಗಳನ್ನು ಸಂಘಟಿಸುವ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

ನವೆಂಬರ್ 5 ರಂದು ದೇಶಾದ್ಯಂತ ಹಲವು ರೈತ ಸಂಘಟನೆಗಳು ಹೆದ್ದಾರಿಗಳನ್ನು ಬಂದ್ ಮಾಡಿ ಪ್ರತಿರೋಧ ತೋರುವುದಲ್ಲದೇ ಕೇಂದ್ರ ಸರ್ಕಾರದ ಸರ್ಕಾರಿ ಕಚೇರಿಗಳು, ಬಿಜೆಪಿ ಹಾಗೂ ಅದರ ಮಿತ್ರ ಪಕ್ಷಗಳ ಕಚೇರಿಗಳು ಮತ್ತು ಕಾರ್ಪೊರೇಟ್‌ ಕಚೇರಿಗಳ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ.

ನವೆಂಬರ್ 26-27 ರಂದು ದೇಶಾದ್ಯಂತದ ರೈತರು ದೆಹಲಿಗೆ ಹೊರಟು ವ್ಯಾಪಕ ಪ್ರತಿರೋಧ ತೋರಲು ಮುಂದಾಗಿದ್ದಾರೆ. ಕಳೆದ ಎರಡು ವರ್ಷಗಳ ಹಿಂದೆಯು ಸಹ ದೊಡ್ಡ ಮಟ್ಟದಲ್ಲಿ ರೈತರು ದೆಹಲಿ ಚಲೋ ನಡೆಸಿ ಗಮನ ಸೆಳೆದಿದ್ದರು.


ಇದನ್ನೂ ಓದಿ: ಪ್ರಧಾನಿ ಮೋದಿ, ಅಂಬಾನಿ, ಅದಾನಿ ಪ್ರತಿಮೆ ಸುಟ್ಟು ಕೃಷಿ ಮಸೂದೆಗಳಿಗೆ ರೈತರ ವಿರೋಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...