Homeಕರ್ನಾಟಕಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

- Advertisement -
- Advertisement -

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿದ ‘ಒಳಮೀಸಲಾತಿ ಹೋರಾಟ ಸಮಿತಿ’ ಮುಖಂಡರು, “ಒಳಮೀಸಲಾತಿ ವಿಧೇಯಕವು ರಾಜ್ಯಪಾಲರ ಸಹಿ ಪಡೆದು ಅನುಮೋದನೆಗೊಂಡಿದೆ ಎಂದು ಸಂತೋಷ ಪಡುವ ಸಂದರ್ಭದಲ್ಲಿ ಒಳಮೀಸಲಾತಿ ಅನ್ವಯವಾಗದಂತೆ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂಬ ಫೆಬ್ರವರಿ 26ರ ಸಚಿವ ಸಂಪುಟದ ತೀರ್ಮಾನ ಸಂವಿಧಾನ ಮತ್ತು ಸಾಮಾಜಿಕ ನ್ಯಾಯಕ್ಕೆ ಬಗೆದ ಘೋರ ಅನ್ಯಾಯವಾಗಿದೆ. ಆ ಮೂಲಕ 35 ವರ್ಷಗಳ ಒಳ ಮೀಸಲಾತಿ ಹೋರಾಟಕ್ಕೆ ಮಹಾದ್ರೋಹ ಎಸಗಲಾಗಿದೆ. ಸರ್ಕಾರದ ಈ ತೀರ್ಮಾನವನ್ನು ಒಳ ಮೀಸಲಾತಿ ಹೋರಾಟಗಾರರು, ಸಾಮಾಜಿಕ ನ್ಯಾಯದ ಪರವಿರುವ ಪ್ರಜ್ಞಾವಂತರೆಲ್ಲರೂ ಒಕ್ಕೊರಲಿನಿಂದ ಉಗ್ರವಾಗಿ ಖಂಡಿಸುತ್ತೇವೆ” ಎಂದರು.

“ಚುನಾವಣೆ ಪೂರ್ವದಲ್ಲಿ ಸರ್ಕಾರ ಬಂದ ಮೊದಲನೇ ಅಧಿವೇಶನದಲ್ಲಿಯೇ ಒಳಮೀಸಲಾತಿಯನ್ನು ನಮ್ಮ ಸರ್ಕಾರ ಜಾರಿಗೊಳಿಸುತ್ತದೆ ಎಂದು ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿತ್ತು. ಚಿತ್ರದುರ್ಗ ಸಮಾವೇಶದಲ್ಲಿಯೂ ಅದೇ ಭರವಸೆ ನೀಡಲಾಗಿತ್ತು. ಸರ್ಕಾರ ಬಂದು 3 ವರ್ಷ ಮುಗಿಯುತ್ತಿದ್ದರೂ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಿಲ್ಲ. ಅಂತಿಮವಾಗಿ ಸುಪ್ರೀಂ ಕೋರ್ಟಿನ ತೀರ್ಪಿನ ನಂತರ ಹೋರಾಟದ ಒತ್ತಡಕ್ಕೆ ಮಣಿದು ಸಚಿವ ಸಂಪುಟದಲ್ಲಿ ಒಳಮೀಸಲಾತಿ ಜಾರಿಗೆ ತರುತ್ತೇವೆಂದು ತಾತ್ವಿಕವಾಗಿ ಒಪ್ಪಿಕೊಂಡು 25, ಆಗಸ್ಟ್ 2025 ರಂದು ಆದೇಶ ಹೊರಡಿಸಿದಿರಿ. 2025 ರ ಚಳಿಗಾಲದ ಅಧಿವೇಶನದಲ್ಲಿ ಶಾಸನ ಬದ್ದ ಕಾಯ್ದೆ ಮಾಡಿಕೊಂಡು ರಾಜ್ಯಪಾಲರಿಂದ ಅಂತಿಮ ಅಂಗೀಕಾರ ಪಡೆಯಲಾಗಿದೆ. ಇಷ್ಟೆಲ್ಲ ಇದ್ದರೂ ಒಳಮೀಸಲಾತಿ ಇಲ್ಲದೇ ನೇಮಕಾತಿಗಳನ್ನು ಭರ್ತಿ ಮಾಡುವಂತೆ ಸಚಿವ ಸಂಪುಟ ತೀರ್ಮಾನ ತೆಗೆದುಕೊಳ್ಳುವುದು ಸರ್ಕಾರಕ್ಕೆ ಆತ್ಮಸಾಕ್ಷಿ ಇಲ್ಲ ಎಂಬುದನ್ನು ಸಾರುತ್ತದೆ” ಎಂದು ಹೇಳಿದ್ದಾರೆ.

“ಭಾರತದ ಹಲವಾರು ರಾಜ್ಯದಲ್ಲಿ ಪ.ಜಾತಿ/ಪ.ಪಂಗಡ ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಸಂವಿಧಾನಬದ್ಧವಾಗಿ ಮಿಸಲಾತಿ ಪ್ರಮಾಣ ಹೆಚ್ಚಿಸಿ ಅನುಷ್ಠಾನ ಗೊಳಿಸಲಾಗಿದೆ. ಆದರೆ ಕರ್ನಾಟಕದಲ್ಲಿ ದಿನಾಂಕ 28.12.2022 ರಿಂದ ಜಾರಿಗೆ ಬಂದ ಪ.ಜಾ 17% ಮತ್ತು ಪ.ಪಂ 7% ಮಿಸಲು ಪ್ರಮಾಣ ಹೆಚ್ಚಳದಂತೆ ಉದ್ಯೋಗಗಳನ್ನು ನೀಡದೆ, ಪರಿಶಿಷ್ಟ ಜಾತಿಗೆ 2% ಕಡಿತ ಎಂದರೆ 1129 ಮತ್ತು ಪರಿಶಿಷ್ಟ ಪಂಗಡಕ್ಕೆ 4% ಕಡಿತ ಎಂದರೆ 2,258 ಒಟ್ಟು ಪ.ಜಾ-ಪ.ಪದಲಿತ ಸಮುದಾಯಕ್ಕೆ ಸಿಗಬೇಕಾದ 3387 ಕ್ಕೂ ಹೆಚ್ಚಿನ ಹುದ್ದೆಗಳನ್ನು ತಪ್ಪಿಸಿ 56,439ಹುದ್ದೆಗಳ ಭರ್ತಿಗೆ ಮುಂದಾದ ಪರಿಶಿಷ್ಟ ಜಾತಿಗಳ ವಿರೋಧಿ ನೀತಿಯ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸುತ್ತೇವೆ” ಎಂದರು.

“ಪರಿಶಿಷ್ಟರ ಮೀಸಲಾತಿ ಹೆಚ್ಚಳದಿಂದ ಶೇ.56 ಮೀಸಲಾತಿಯನ್ನು ಕೋರ್ಟಿನಲ್ಲಿ ಪ್ರಶ್ನಿಸಲಾಗಿದೆ. ಆದರೆ ಅರ್ಜಿದಾರರ ಪರ ವಕೀಲರು ಅದಕ್ಕೆ ತಡೆ ನೀಡುವಂತೆ ವಾದ ಮಂಡಿಸಿರುವುದಿಲ್ಲ ಮತ್ತು ನ್ಯಾಯಾಲಯವು ತಡೆಯಾಜ್ಞೆ ನೀಡಿಲ್ಲ. ಹಾಗಾಗಿ ಶೇ.56 ರಂತೆ ನೇರ ನೇಮಕಾತಿ ಮಾಡಿಕೊಳ್ಳಲು ನ್ಯಾಯಾಲವು ತಡೆಯಾಜ್ಞೆ ನೀಡಿದೆ ಎಂಬುದು ಸತ್ಯಕ್ಕೆ ದೂರವಾದ ಮಾತಾಗಿದೆ. ಆದರೂ ಸರ್ಕಾರ ದಿಕ್ಕು ತಪ್ಪಿಸುತ್ತಿರುವುದು ಮಹಾ ಅನ್ಯಾಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸದಾ ಸಂವಿದಾನ, ಬಾಬಾ ಸಾಹೇಬರೆಂದು ಬಾಯಿ ಬಡಿದುಕೊಳ್ಳುವ ಈ ಸರ್ಕಾರ ನೀತಿಯಲ್ಲಿ ಮಾತ್ರ ಸಾಮಾಜಿಕ ನ್ಯಾಯಕ್ಕೆ ವಿರೋಧವಾಗಿ ನಡೆದುಕೊಂಡಿದೆ. ಸುಪ್ರೀಂ ಕೋರ್ಟ್‌ನ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಬೇಕಾದ ಸಮಾಜ ಕಲ್ಯಾಣ ಇಲಾಖೆಯ ಸಚಿವರೇ ಒಳಮೀಸಲಾತಿಗೆ ಅಡ್ಡಲಾಗಿ ನಿಂತಿದ್ದಾರೆ. ಎಲ್ಲಾ ಪರಿಶಿಷ್ಟರಿಗೆ ಸಾಮಾಜಿಕ ನ್ಯಾಯ ಒದಗಿಸುವ ಬದಲು ಸದಾ ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಾ ಬಂದಿದ್ದಾರೆ. ಹಾಗಾಗಿ ಇಡೀ ಅಧಿಕಾರಿ ವರ್ಗ ಒಳಮೀಸಲಾತಿ ವಿಫಲಗೊಳಿಸಲು ಕೆಲಸ ಮಾಡುತ್ತಿದೆ. ಈ ಅನ್ಯಾಯಗಳನ್ನು ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಪ್ರಜ್ಞಾವಂತರು ಮತ್ತು ಸಮುದಾಯ ಮಾಡು ಇಲ್ಲವೇ ಮಡಿ ಎಂಬ ಅಂತಿಮ ಹೋರಾಟಕ್ಕೆ ಕರೆ ನೀಡುತ್ತಿದೆ. ಮಾರ್ಚ್ 12ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬುದ್ಧಿ ಕಲಿಸಲು ಮುಂದಾಗಿದ್ದೇವೆ. ನಮ್ಮ ಅಳಿವು-ಉಳಿವಿನ ಈ ನಿರ್ಣಾಯಕ ಹೋರಾಟದಲ್ಲಿ ತಾವೆಲ್ಲರೂ ತಪ್ಪದೇ ಜೊತೆಗೂಡಬೇಕೆಂದು ಆಗ್ರಹಿಸುತ್ತೇವೆ” ಎಂದು ಮನವಿ ಮಾಡಿದರು.

ಹಕ್ಕೊತ್ತಾಯಗಳು

  1. ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ ಹೊರಡಿಸಿರುವ ಸರ್ಕಾರದ ಆದೇಶ ಸಂಖ್ಯೆ ಸಿಆ ಸುಇ-1ಸೇಹಿಮ 2026, ದಿನಾಂಕ 27.02.2026 ಅನ್ನು ತಕ್ಷಣವೆ ಹಿಂಪಡೆಯಬೇಕು ಮತ್ತು ನೇಮಕಾತಿಯಲ್ಲಿ ಒಳಮೀಸಲಾತಿ ಕಡ್ಡಾಯಗೊಳಿಸಿ ಜಾರಿಗೆ ತರಬೇಕು.
  2. ರಾಜ್ಯದಲ್ಲಿ ದಲಿತರ ಜನಸಂಖ್ಯೆ 18%ನಷ್ಟಿದೆ. ಹಾಗಾಗಿಯೇ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ರವರು 17%ಗೆ ಪರಿಶಿಷ್ಟ ಜಾತಿಗಳ ಮೀಸಲಾತಿ ಹೆಚ್ಚಿಸಲು ಶಿಫಾರಸ್ಸು ಮಾಡಿರುತ್ತಾರೆ ಮತ್ತು ಅದು ಜಾರಿಯಲ್ಲಿದೆ. ಈ ಸಾಮಾಜಿಕ ನ್ಯಾಯದ ನೀತಿಯನ್ನು ನ್ಯಾಯಾಂಗೀಯ ಸವಾಲುಗಳಿಂದ ರಕ್ಷಿಸಲು ರಾಜ್ಯದ 56% ಮೀಸಲಾತಿ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿ, ಸರ್ವ ಪಕ್ಷಗಳ ನಿಯೋಗದೊಂದಿಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ, ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.
  3. ನೇರ ನೇಮಕಾತಿ, ಬಡ್ತಿ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಯಲ್ಲಿ 2001ರ ಹಿಂದಿನ ಬ್ಯಾಕ್‌ಲಾಗ್ ಹುದ್ದೆಗಳಿಗೆ ಮಾತ್ರ ಅನ್ವಯಿಸುತ್ತಿದೆ. ಈ ನಿಯಮವನ್ನು 2001ರ ನಂತರದ ಬ್ಯಾಕ್‌ಲಾಗ್ ಹುದ್ದೆಗಳಿಗೂ ಮುಂದುವರೆಸಬೇಕು ಹಾಗೂ ಒಳ ಮೀಸಲಾತಿ ಜಾರಿಯಾಗಬೇಕು. ಎಸ್‌ಇಪಿ-ಟಿಎಸ್‌ಪಿ ಅನುದಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಒಳಮೀಸಲಾತಿ ಸಂಪೂರ್ಣವಾಗಿ ಜಾರಿಯಾಗಬೇಕು.
  4. ನೇಮಕಾತಿಗಳಲ್ಲಿ ವಿಶ್ವವಿದ್ಯಾಲಯಗಳು ಒಂದು ಘಟಕ ಎಂದು ಪರಿಗಣಿಸಬೇಕೆನ್ನುವ ಪ್ರಸ್ತಾವನೆಯನ್ನು ಕೈಬಿಡಬೇಕು.
  5. ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿ ನೀಡಲೇಬೇಕು.
  6. ಸಮಾಜ ಕಲ್ಯಾಣವನ್ನು ಸಮರ್ಪಕವಾಗಿ ನಿರ್ವಹಿಸದೇ ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಿರುವ ಸಚಿವರನ್ನು ಕೂಡಲೇ ಬದಲಾಯಿಸಬೇಕು.

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...