Homeಕರ್ನಾಟಕಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

ಒಳಮೀಸಲಾತಿ ಇಲ್ಲದೇ ಉದ್ಯೋಗ ಭರ್ತಿಗೆ ವಿರೋಧ; ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ

- Advertisement -
- Advertisement -

ಒಳಮೀಸಲಾತಿ ಇಲ್ಲದೇ 56 ಸಾವಿರ ಉದ್ಯೋಗ ಭರ್ತಿಗೆ ಮುಂದಾಗಿರುವ ಕಾಂಗ್ರೆಸ್ ಸರ್ಕಾರದ ನಿರ್ಧಾರಕ್ಕೆ ಒಳಮೀಸಲಾತಿ ಹೋರಾಟಗಾರರು ವಿರೋಧ ವ್ಯಕ್ತಪಡಿಸಿದ್ದು, ಇದೇ ತಿಂಗಳ 12 ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿದ ‘ಒಳಮೀಸಲಾತಿ ಹೋರಾಟ ಸಮಿತಿ’ ಮುಖಂಡರು, “ಒಳಮೀಸಲಾತಿ ವಿಧೇಯಕವು ರಾಜ್ಯಪಾಲರ ಸಹಿ ಪಡೆದು ಅನುಮೋದನೆಗೊಂಡಿದೆ ಎಂದು ಸಂತೋಷ ಪಡುವ ಸಂದರ್ಭದಲ್ಲಿ ಒಳಮೀಸಲಾತಿ ಅನ್ವಯವಾಗದಂತೆ 56 ಸಾವಿರ ಹುದ್ದೆಗಳನ್ನು ಭರ್ತಿ ಮಾಡುತ್ತೇವೆ ಎಂಬ ಫೆಬ್ರವರಿ 26ರ ಸಚಿವ ಸಂಪುಟದ ತೀರ್ಮಾನ ಸಂವಿಧಾನ ಮತ್ತು ಸಾಮಾಜಿಕ ನ್ಯಾಯಕ್ಕೆ ಬಗೆದ ಘೋರ ಅನ್ಯಾಯವಾಗಿದೆ. ಆ ಮೂಲಕ 35 ವರ್ಷಗಳ ಒಳ ಮೀಸಲಾತಿ ಹೋರಾಟಕ್ಕೆ ಮಹಾದ್ರೋಹ ಎಸಗಲಾಗಿದೆ. ಸರ್ಕಾರದ ಈ ತೀರ್ಮಾನವನ್ನು ಒಳ ಮೀಸಲಾತಿ ಹೋರಾಟಗಾರರು, ಸಾಮಾಜಿಕ ನ್ಯಾಯದ ಪರವಿರುವ ಪ್ರಜ್ಞಾವಂತರೆಲ್ಲರೂ ಒಕ್ಕೊರಲಿನಿಂದ ಉಗ್ರವಾಗಿ ಖಂಡಿಸುತ್ತೇವೆ” ಎಂದರು.

“ಚುನಾವಣೆ ಪೂರ್ವದಲ್ಲಿ ಸರ್ಕಾರ ಬಂದ ಮೊದಲನೇ ಅಧಿವೇಶನದಲ್ಲಿಯೇ ಒಳಮೀಸಲಾತಿಯನ್ನು ನಮ್ಮ ಸರ್ಕಾರ ಜಾರಿಗೊಳಿಸುತ್ತದೆ ಎಂದು ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿತ್ತು. ಚಿತ್ರದುರ್ಗ ಸಮಾವೇಶದಲ್ಲಿಯೂ ಅದೇ ಭರವಸೆ ನೀಡಲಾಗಿತ್ತು. ಸರ್ಕಾರ ಬಂದು 3 ವರ್ಷ ಮುಗಿಯುತ್ತಿದ್ದರೂ ಒಳ ಮೀಸಲಾತಿಯನ್ನು ಜಾರಿಗೊಳಿಸುವ ಪ್ರಾಮಾಣಿಕ ಪ್ರಯತ್ನ ನಡೆಸಲಿಲ್ಲ. ಅಂತಿಮವಾಗಿ ಸುಪ್ರೀಂ ಕೋರ್ಟಿನ ತೀರ್ಪಿನ ನಂತರ ಹೋರಾಟದ ಒತ್ತಡಕ್ಕೆ ಮಣಿದು ಸಚಿವ ಸಂಪುಟದಲ್ಲಿ ಒಳಮೀಸಲಾತಿ ಜಾರಿಗೆ ತರುತ್ತೇವೆಂದು ತಾತ್ವಿಕವಾಗಿ ಒಪ್ಪಿಕೊಂಡು 25, ಆಗಸ್ಟ್ 2025 ರಂದು ಆದೇಶ ಹೊರಡಿಸಿದಿರಿ. 2025 ರ ಚಳಿಗಾಲದ ಅಧಿವೇಶನದಲ್ಲಿ ಶಾಸನ ಬದ್ದ ಕಾಯ್ದೆ ಮಾಡಿಕೊಂಡು ರಾಜ್ಯಪಾಲರಿಂದ ಅಂತಿಮ ಅಂಗೀಕಾರ ಪಡೆಯಲಾಗಿದೆ. ಇಷ್ಟೆಲ್ಲ ಇದ್ದರೂ ಒಳಮೀಸಲಾತಿ ಇಲ್ಲದೇ ನೇಮಕಾತಿಗಳನ್ನು ಭರ್ತಿ ಮಾಡುವಂತೆ ಸಚಿವ ಸಂಪುಟ ತೀರ್ಮಾನ ತೆಗೆದುಕೊಳ್ಳುವುದು ಸರ್ಕಾರಕ್ಕೆ ಆತ್ಮಸಾಕ್ಷಿ ಇಲ್ಲ ಎಂಬುದನ್ನು ಸಾರುತ್ತದೆ” ಎಂದು ಹೇಳಿದ್ದಾರೆ.

“ಭಾರತದ ಹಲವಾರು ರಾಜ್ಯದಲ್ಲಿ ಪ.ಜಾತಿ/ಪ.ಪಂಗಡ ಸಮುದಾಯಗಳಿಗೆ ಜನಸಂಖ್ಯೆಗೆ ಅನುಗುಣವಾಗಿ ಸಂವಿಧಾನಬದ್ಧವಾಗಿ ಮಿಸಲಾತಿ ಪ್ರಮಾಣ ಹೆಚ್ಚಿಸಿ ಅನುಷ್ಠಾನ ಗೊಳಿಸಲಾಗಿದೆ. ಆದರೆ ಕರ್ನಾಟಕದಲ್ಲಿ ದಿನಾಂಕ 28.12.2022 ರಿಂದ ಜಾರಿಗೆ ಬಂದ ಪ.ಜಾ 17% ಮತ್ತು ಪ.ಪಂ 7% ಮಿಸಲು ಪ್ರಮಾಣ ಹೆಚ್ಚಳದಂತೆ ಉದ್ಯೋಗಗಳನ್ನು ನೀಡದೆ, ಪರಿಶಿಷ್ಟ ಜಾತಿಗೆ 2% ಕಡಿತ ಎಂದರೆ 1129 ಮತ್ತು ಪರಿಶಿಷ್ಟ ಪಂಗಡಕ್ಕೆ 4% ಕಡಿತ ಎಂದರೆ 2,258 ಒಟ್ಟು ಪ.ಜಾ-ಪ.ಪದಲಿತ ಸಮುದಾಯಕ್ಕೆ ಸಿಗಬೇಕಾದ 3387 ಕ್ಕೂ ಹೆಚ್ಚಿನ ಹುದ್ದೆಗಳನ್ನು ತಪ್ಪಿಸಿ 56,439ಹುದ್ದೆಗಳ ಭರ್ತಿಗೆ ಮುಂದಾದ ಪರಿಶಿಷ್ಟ ಜಾತಿಗಳ ವಿರೋಧಿ ನೀತಿಯ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸುತ್ತೇವೆ” ಎಂದರು.

“ಪರಿಶಿಷ್ಟರ ಮೀಸಲಾತಿ ಹೆಚ್ಚಳದಿಂದ ಶೇ.56 ಮೀಸಲಾತಿಯನ್ನು ಕೋರ್ಟಿನಲ್ಲಿ ಪ್ರಶ್ನಿಸಲಾಗಿದೆ. ಆದರೆ ಅರ್ಜಿದಾರರ ಪರ ವಕೀಲರು ಅದಕ್ಕೆ ತಡೆ ನೀಡುವಂತೆ ವಾದ ಮಂಡಿಸಿರುವುದಿಲ್ಲ ಮತ್ತು ನ್ಯಾಯಾಲಯವು ತಡೆಯಾಜ್ಞೆ ನೀಡಿಲ್ಲ. ಹಾಗಾಗಿ ಶೇ.56 ರಂತೆ ನೇರ ನೇಮಕಾತಿ ಮಾಡಿಕೊಳ್ಳಲು ನ್ಯಾಯಾಲವು ತಡೆಯಾಜ್ಞೆ ನೀಡಿದೆ ಎಂಬುದು ಸತ್ಯಕ್ಕೆ ದೂರವಾದ ಮಾತಾಗಿದೆ. ಆದರೂ ಸರ್ಕಾರ ದಿಕ್ಕು ತಪ್ಪಿಸುತ್ತಿರುವುದು ಮಹಾ ಅನ್ಯಾಯವಾಗಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸದಾ ಸಂವಿದಾನ, ಬಾಬಾ ಸಾಹೇಬರೆಂದು ಬಾಯಿ ಬಡಿದುಕೊಳ್ಳುವ ಈ ಸರ್ಕಾರ ನೀತಿಯಲ್ಲಿ ಮಾತ್ರ ಸಾಮಾಜಿಕ ನ್ಯಾಯಕ್ಕೆ ವಿರೋಧವಾಗಿ ನಡೆದುಕೊಂಡಿದೆ. ಸುಪ್ರೀಂ ಕೋರ್ಟ್‌ನ ತೀರ್ಪಿನಂತೆ ಒಳಮೀಸಲಾತಿ ಜಾರಿಗೊಳಿಸಬೇಕಾದ ಸಮಾಜ ಕಲ್ಯಾಣ ಇಲಾಖೆಯ ಸಚಿವರೇ ಒಳಮೀಸಲಾತಿಗೆ ಅಡ್ಡಲಾಗಿ ನಿಂತಿದ್ದಾರೆ. ಎಲ್ಲಾ ಪರಿಶಿಷ್ಟರಿಗೆ ಸಾಮಾಜಿಕ ನ್ಯಾಯ ಒದಗಿಸುವ ಬದಲು ಸದಾ ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಾ ಬಂದಿದ್ದಾರೆ. ಹಾಗಾಗಿ ಇಡೀ ಅಧಿಕಾರಿ ವರ್ಗ ಒಳಮೀಸಲಾತಿ ವಿಫಲಗೊಳಿಸಲು ಕೆಲಸ ಮಾಡುತ್ತಿದೆ. ಈ ಅನ್ಯಾಯಗಳನ್ನು ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಹಾಗಾಗಿ ಪ್ರಜ್ಞಾವಂತರು ಮತ್ತು ಸಮುದಾಯ ಮಾಡು ಇಲ್ಲವೇ ಮಡಿ ಎಂಬ ಅಂತಿಮ ಹೋರಾಟಕ್ಕೆ ಕರೆ ನೀಡುತ್ತಿದೆ. ಮಾರ್ಚ್ 12ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ನಡೆಸಿ ಸರ್ಕಾರಕ್ಕೆ ಬುದ್ಧಿ ಕಲಿಸಲು ಮುಂದಾಗಿದ್ದೇವೆ. ನಮ್ಮ ಅಳಿವು-ಉಳಿವಿನ ಈ ನಿರ್ಣಾಯಕ ಹೋರಾಟದಲ್ಲಿ ತಾವೆಲ್ಲರೂ ತಪ್ಪದೇ ಜೊತೆಗೂಡಬೇಕೆಂದು ಆಗ್ರಹಿಸುತ್ತೇವೆ” ಎಂದು ಮನವಿ ಮಾಡಿದರು.

ಹಕ್ಕೊತ್ತಾಯಗಳು

  1. ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ ಹೊರಡಿಸಿರುವ ಸರ್ಕಾರದ ಆದೇಶ ಸಂಖ್ಯೆ ಸಿಆ ಸುಇ-1ಸೇಹಿಮ 2026, ದಿನಾಂಕ 27.02.2026 ಅನ್ನು ತಕ್ಷಣವೆ ಹಿಂಪಡೆಯಬೇಕು ಮತ್ತು ನೇಮಕಾತಿಯಲ್ಲಿ ಒಳಮೀಸಲಾತಿ ಕಡ್ಡಾಯಗೊಳಿಸಿ ಜಾರಿಗೆ ತರಬೇಕು.
  2. ರಾಜ್ಯದಲ್ಲಿ ದಲಿತರ ಜನಸಂಖ್ಯೆ 18%ನಷ್ಟಿದೆ. ಹಾಗಾಗಿಯೇ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್‌ದಾಸ್‌ರವರು 17%ಗೆ ಪರಿಶಿಷ್ಟ ಜಾತಿಗಳ ಮೀಸಲಾತಿ ಹೆಚ್ಚಿಸಲು ಶಿಫಾರಸ್ಸು ಮಾಡಿರುತ್ತಾರೆ ಮತ್ತು ಅದು ಜಾರಿಯಲ್ಲಿದೆ. ಈ ಸಾಮಾಜಿಕ ನ್ಯಾಯದ ನೀತಿಯನ್ನು ನ್ಯಾಯಾಂಗೀಯ ಸವಾಲುಗಳಿಂದ ರಕ್ಷಿಸಲು ರಾಜ್ಯದ 56% ಮೀಸಲಾತಿ ಸಂರಕ್ಷಣೆಗಾಗಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಿ, ಸರ್ವ ಪಕ್ಷಗಳ ನಿಯೋಗದೊಂದಿಗೆ ಕೇಂದ್ರ ಸರ್ಕಾರಕ್ಕೆ ಮನವರಿಕೆ ಮಾಡಿ, ಸಂವಿಧಾನದ 9ನೇ ಅನುಸೂಚಿಯಲ್ಲಿ ಸೇರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು.
  3. ನೇರ ನೇಮಕಾತಿ, ಬಡ್ತಿ ನೇಮಕಾತಿ ಮತ್ತು ಮುಂಬಡ್ತಿ ಬ್ಯಾಕ್‌ಲಾಗ್ ಹುದ್ದೆಗಳ ನೇಮಕಾತಿಯಲ್ಲಿ 2001ರ ಹಿಂದಿನ ಬ್ಯಾಕ್‌ಲಾಗ್ ಹುದ್ದೆಗಳಿಗೆ ಮಾತ್ರ ಅನ್ವಯಿಸುತ್ತಿದೆ. ಈ ನಿಯಮವನ್ನು 2001ರ ನಂತರದ ಬ್ಯಾಕ್‌ಲಾಗ್ ಹುದ್ದೆಗಳಿಗೂ ಮುಂದುವರೆಸಬೇಕು ಹಾಗೂ ಒಳ ಮೀಸಲಾತಿ ಜಾರಿಯಾಗಬೇಕು. ಎಸ್‌ಇಪಿ-ಟಿಎಸ್‌ಪಿ ಅನುದಾನ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲಿ ಒಳಮೀಸಲಾತಿ ಸಂಪೂರ್ಣವಾಗಿ ಜಾರಿಯಾಗಬೇಕು.
  4. ನೇಮಕಾತಿಗಳಲ್ಲಿ ವಿಶ್ವವಿದ್ಯಾಲಯಗಳು ಒಂದು ಘಟಕ ಎಂದು ಪರಿಗಣಿಸಬೇಕೆನ್ನುವ ಪ್ರಸ್ತಾವನೆಯನ್ನು ಕೈಬಿಡಬೇಕು.
  5. ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿ ನೀಡಲೇಬೇಕು.
  6. ಸಮಾಜ ಕಲ್ಯಾಣವನ್ನು ಸಮರ್ಪಕವಾಗಿ ನಿರ್ವಹಿಸದೇ ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಿರುವ ಸಚಿವರನ್ನು ಕೂಡಲೇ ಬದಲಾಯಿಸಬೇಕು.

‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಂಡಮಾನ್ ಸಮುದ್ರದಲ್ಲಿ ದೋಣಿ ಮುಳುಗಡೆ : 200ಕ್ಕೂ ಹೆಚ್ಚು ರೋಹಿಂಗ್ಯಾ ನಿರಾಶ್ರಿತರು ಕಣ್ಮರೆ

ಬಾಂಗ್ಲಾದೇಶದಿಂದ ಮಲೇಷ್ಯಾಗೆ ಹೊರಟಿದ್ದ ರೋಹಿಂಗ್ಯಾ ನಿರಾಶ್ರಿತರು ಮತ್ತು ಬಾಂಗ್ಲಾದೇಶದ ಪ್ರಜೆಗಳನ್ನು ಹೊತ್ತಿದ್ದ ದೋಣಿಯೊಂದು ಅಂಡಮಾನ್ ಸಮುದ್ರದಲ್ಲಿ ಮುಳುಗಡೆಯಾಗಿದೆ ಎಂದು ವರದಿಯಾಗಿದೆ. ದೋಣಿಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಇದ್ದರು ಎಂದು ವಿಶ್ವಸಂಸ್ಥೆಯ ನಿರಾಶ್ರಿತರ ಸಂಸ್ಥೆ (ಯುಎನ್‌ಹೆಚ್‌ಸಿಆರ್‌)...

ಬಿಹಾರ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಪ್ರಮಾಣ ವಚನ ಸ್ವೀಕಾರ: ರಾಜಕೀಯ ವೃತ್ತಿಜೀವನದ ಕಾಲಾನುಕ್ರಮ

ಪಾಟ್ನಾ: ಭಾರತೀಯ ಜನತಾ ಪಕ್ಷದ ನಾಯಕ ಸಾಮ್ರಾಟ್ ಚೌಧರಿ ಬುಧವಾರ ಬಿಹಾರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು, ಕೇಸರಿ ಪಕ್ಷದಿಂದ ರಾಜ್ಯದಲ್ಲಿ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ ಮೊದಲ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.  ರಾಜಭವನದಲ್ಲಿ...

ಛತ್ತೀಸ್‌ಗಢ | ವೇದಾಂತ ವಿದ್ಯುತ್ ಸ್ಥಾವರದಲ್ಲಿ ಬಾಯ್ಲರ್ ಸ್ಫೋಟ: ಮೃತರ ಸಂಖ್ಯೆ 14ಕ್ಕೆ ಏರಿಕೆ

ಛತ್ತೀಸ್‌ಗಢದ ವೇದಾಂತ ವಿದ್ಯುತ್ ಸ್ಥಾವರದಲ್ಲಿ ಸಂಭವಿಸಿದ ಬಾಯ್ಲರ್ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ ಮತ್ತು 40ಕ್ಕೂ ಹೆಚ್ಚು ಕಾರ್ಮಿಕರು ಗಾಯಗೊಂಡಿದ್ದಾರೆ. ಮಂಗಳವಾರ (ಏ.14) ಮಧ್ಯಾಹ್ನ ಸುಮಾರು 2:30ರ ವೇಳೆ ಕಾರ್ಮಿಕರು ಊಟ ಮಾಡುತ್ತಿದ್ದ ಸಮಯದಲ್ಲಿ ಈ...

ಕ್ಷೇತ್ರ ಮರುವಿಂಗಡಣೆ ವಿವಾದ : ಡಿಎಂಕೆ ಸಂಸದರ ತುರ್ತು ಸಭೆ ಕರೆದ ಸಿಎಂ ಸ್ಟಾಲಿನ್

ಕೇಂದ್ರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ಪ್ರಕ್ರಿಯೆಯಿಂದ ರಾಜ್ಯದ ಮೇಲೆ ಉಂಟಾಗುವ ಸಂಭಾವ್ಯ ಪರಿಣಾಮಗಳ ಕುರಿತು ಚರ್ಚಿಸಲು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಬುಧವಾರ (ಏ.15) ಡಿಎಂಕೆ ಸಂಸದರ ತುರ್ತು ಸಭೆ ಕರೆದಿದ್ದಾರೆ. ಸ್ಟಾಲಿನ್ ಚುನಾವಣೆ...

ತಮಿಳುನಾಡು: ಕ್ಷೇತ್ರ ಪುನರ್ವಿಂಗಡೆ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ: ಕೇಂದ್ರ ಸರ್ಕಾರಕ್ಕೆ ಎಂ.ಕೆ. ಸ್ಟಾಲಿನ್ ಎಚ್ಚರಿಕೆ

ಚೆನ್ನೈ: ಏಪ್ರಿಲ್ 16 ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಾಗಿರುವ ಪ್ರಸ್ತಾವಿತ ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆಯ ವಿರುದ್ಧ ರಾಜ್ಯಾದ್ಯಂತ ಬೃಹತ್ ಪ್ರತಿಭಟನೆಗಳ ಬಗ್ಗೆ ತಮಿಳುನಾಡು ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷರು ಮಂಗಳವಾರ ಬಿಜೆಪಿ...

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನಕ್ಕೆ ತಳ್ಳುವ ಅಪಾಯವಿದೆ : ವಿಶ್ವಸಂಸ್ಥೆ ವರದಿ

ಪಶ್ಚಿಮ ಏಷ್ಯಾ ಸಂಘರ್ಷವು 25 ಲಕ್ಷ ಭಾರತೀಯರನ್ನು ಬಡತನದ ಕೂಪಕ್ಕೆ ತಳ್ಳಬಹುದು ಮತ್ತು ದೇಶದ ಮಾನವ ಅಭಿವೃದ್ಧಿ ಪ್ರಗತಿಯಲ್ಲಿ ಸ್ವಲ್ಪ ಮಟ್ಟಿನ ಹಿನ್ನಡೆಯನ್ನುಂಟು ಮಾಡಬಹುದು ಎಂದು ವಿಶ್ವಸಂಸ್ಥೆಯ ಅಭಿವೃದ್ಧಿ ಕಾರ್ಯಕ್ರಮದ (ಯುಎನ್‌ಡಿಪಿ) ಹೊಸ...

ಗೋ-ರಕ್ಷಕರ ದಾಳಿಯ ನಂತರ ವ್ಯಕ್ತಿ ನಾಪತ್ತೆ: ಜಮ್ಮುವಿನ ರಾಂಬನ್‌ನಲ್ಲಿ ತೀವ್ರ ಪ್ರತಿಭಟನೆ; ಸಾಮಾಜಿಕ ಮಾಧ್ಯಮಗಳಲ್ಲೂ ಆಕ್ರೋಶ

ಗೋರಕ್ಷಕರ ದಾಳಿಗೆ ಸಂಬಂಧಿಸಿ ಸ್ಥಳೀಯ ನಿವಾಸಿ ತನ್ವೀರ್ ಅಹ್ಮದ್ ಚೋಪನ್ ನಾಪತ್ತೆಯಾದ ನಂತರ ಸೋಮವಾರ ರಾಂಬನ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 44 ರಲ್ಲಿ ಸಾವಿರಾರು ಜನರು ಸಂಚಾರ ತಡೆದು ಪ್ರತಿಭಟಿಸಿದ್ದಾರೆ. ಪೊಲೀಸರ ಪ್ರಕಾರ,...

ನಿತೀಶ್ ಕುಮಾರ್ ರಾಜೀನಾಮೆ : ಬಿಹಾರದ ಹೊಸ ಸಿಎಂ ಆಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಆಯ್ಕೆ

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿದ್ದು, ಹೊಸ ಮುಖ್ಯಮಂತ್ರಿಯಾಗಿ ಬಿಜೆಪಿಯ ಸಾಮ್ರಾಟ್ ಚೌಧರಿ ಅವರನ್ನು ಆಯ್ಕೆ ಮಾಡಲಾಗಿದೆ. ಪಾಟ್ನಾದ ಲೋಕ ಭವನದಲ್ಲಿ ಮಂಗಳವಾರ (ಏ.14) ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ (ನಿವೃತ್ತ)...

ಮುಂಬೈ ಸಂಗೀತ ಕಾರ್ಯಕ್ರಮದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಇಬ್ಬರು ವಿದ್ಯಾರ್ಥಿಗಳು ಸಾವು, ಐವರ ಬಂಧನ; ತನಿಖೆ

ಮಂಗಳವಾರ ಮುಂಬೈನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಮಾದಕ ದ್ರವ್ಯ ಸೇವಿಸಿದ ಆರೋಪದ ಮೇಲೆ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಮತ್ತೊಬ್ಬರ ಸ್ಥಿತಿ ಗಂಭೀರವಾಗಿದೆ. ದಕ್ಷಿಣ ಮುಂಬೈನ ಪ್ರತಿಷ್ಠಿತ ಸಂಸ್ಥೆಯ ವಿದ್ಯಾರ್ಥಿಗಳು ಎಂಬಿಎ ಓದುತ್ತಿದ್ದರು ಎಂದು...

ನಸೀರ್ ಅಹ್ಮದ್‌ರನ್ನು ವಜಾಗೊಳಿಸಿದ್ದೇಕೆ… ಡಿಕೆಶಿ ಹೇಳಿದ್ದೇನು?  

ಮುಖ್ಯಮಂತ್ರಿಗಳು ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಮಂಗಳವಾರ (ಏ.14)...