Homeಕರ್ನಾಟಕಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

ಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

ಶಾಂತಿ ಸಭೆಯು ಯಾವುದೆ ಅಧೀಕೃತತೆ ಇಲ್ಲದ ಕಾನೂನುಬಾಹಿರ ಸಭೆ ಎಂದು ಕಮಿಟಿ ಹೇಳಿದ್ದು, ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾದ ಸಂತ್ರಸ್ತರ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡುವುದಾಗಿ ನಿರ್ಧರಿಸಿದೆ

- Advertisement -
- Advertisement -

ಕರಾವಳಿಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಸೂಚನೆಯಂತೆ ಜಿಲ್ಲಾಧಿಕಾರಿಗಳು ಕರೆದಿದ್ದ ಶಾಂತಿ ಸಭೆಯಲ್ಲಿ ಮಂಗಳೂರು ಮುಸ್ಲಿಂ ಸೆಂಟ್ರಲ್ ಕಮಿಟಿ ಪದಾಧಿಕಾರಿಗಳು ಭಾಗವಹಿಸದೆ ರಾಜ್ಯ ಸರ್ಕಾರದ ಇಬ್ಬಗೆ ನಿಲುವಿನ ವಿರುದ್ಧ ಪ್ರತಿಭಟಿಸಿರುವ ಘಟನೆ ಶನಿವಾರ ನಡೆದಿದೆ.

ಇತ್ತೀಚೆಗೆ ಕೊಲೆಯಾದ ಬಿಜೆಪಿ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿ ಬೊಮ್ಮಾಯಿ ತೆರಳಿದ್ದರೂ ಅದೇ ಊರಿನಲ್ಲಿ ಒಂದು ವಾರ ಮುಂಚೆ ಕೊಲೆಯಾದ ಮಸೂದ್ ಹಾಗೂ ಎರಡು ದಿನಗಳ ಹಿಂದೆ ಕೊಲೆಯಾದ ಫಾಝಿಲ್ ಅವರ ಮನೆಗೆ ಭೇಟಿ ನೀಡದೆ ಹೋಗಿರುವ ಬಗ್ಗೆ ಸೆಂಟ್ರಲ್ ಕಮಿಟಿ ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆಎಸ್ ಮಸೂದ್,“ಶಾಂತಿ ಸಭೆಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಅವರು ಬಹಿಷ್ಕಾರ ಮಾಡಿದ್ದಾರೆ ಎಂದು ಸುದ್ದಿ ಓಡಾಡುತ್ತಿದೆ. ಆದರೆ ಕಮಿಟಿ ಸಭೆಯನ್ನು ಬಹಿಷ್ಕಾರ ಮಾಡಲಿಲ್ಲ. ಆದರೆ ನಾವು ಸಭೆಗೆ ಯಾಕೆ ಹೋಗಿಲ್ಲ ಎಂದರೆ, ಶಾಂತಿ ಸಮಿತಿಗೆ ಅಧೀಕೃತತೆ ಇಲ್ಲ. ಶಾಂತಿ ಸಮಿತಿಯು ಸರ್ಕಾರದಿಂದ ಆಗಬೇಕಾಗಿದೆ. ಆದರೆ ಪ್ರಸ್ತುತ ಇರುವ ಶಾಂತಿ ಸಮಿತಿ ಕಾನೂನುಬಾಹಿರ. ಅಷ್ಟೆ ಅಲ್ಲದೆ, ಅಧಿಕಾರಿಗಳು ಒಂದೇ ಸಮುದಾಯದ ಜನರಿಗಷ್ಟೆ ಭಾಗವಹಿಸಲು ಹೇಳಿದ್ದಾರೆ” ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿ ಕೂಡಾ ಕೊಲೆಗೀಡಾದ ಮುಸ್ಲಿಮರ ಮನೆಗೆ ಹೋಗಿಲ್ಲ. ಆದ್ದರಿಂದ ಈ ಬಗ್ಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಸಭೆ ಕರೆದಿದ್ದೆವು. ಈ ಸಭೆ ನಡೆದ ನಂತರ ನಿನ್ನೆ ರಾತ್ರಿ ಎಂಟು ಗಂಟೆಗೆ ನಮಗೆ ಶಾಂತಿ ಸಭೆಗೆ ಕರೆದಿದ್ದಾರೆ. ಆದರೆ ಈ ಸಭೆಗೆ ಕಾನೂನು ಮಾನ್ಯತೆ ಮತ್ತು ಅಧೀಕೃತತೆ ಇಲ್ಲದ ಕಾರಣ ನಾವು ಸಭೆಗೆ ಹೋಗಿಲ್ಲ” ಎಂದು ಮಸೂದ್ ಅವರು ನಾನುಗೌರಿ.ಕಾಂ ಹೇಳಿದ್ದಾರೆ.

ಇದನ್ನೂ ಓದಿ: ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ – ಫಾಝಿಲ್ ತಂದೆಯ ಮನದಾಳದ ಮಾತು

ಈ ಮಧ್ಯೆ ಕಮಿಟಿಯ ಅಧ್ಯಕ್ಷ ಕೆ.ಎಸ್. ಮುಹಮ್ಮದ್ ಮಸೂದ್‌ರ ನಿವಾಸದಲ್ಲಿ ತುರ್ತು ಸಭೆ ನಡೆದು ಮೃತ ಬೆಳ್ಳಾರೆಯ ಮುಹಮ್ಮದ್ ಮಸೂದ್ ಮತ್ತು ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ವಾರ್ತಾಭಾರತಿ ವರದಿ ಮಾಡಿದೆ. ಜಿಲ್ಲೆಯ ಸಮಸ್ತ ನಾಗರಿಕರು ಶಾಂತಿಯನ್ನು ಕಾಪಾಡಬೇಕು ಮತ್ತು ಮೃತಪಟ್ಟ ಮೂವರು ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವನು ಅನುಗ್ರಹಿಸಲಿ ಎಂದು ಮಸೂದ್ ಸಭೆಯಲ್ಲಿ ಸಾಂತ್ವನ ಮಾತುಗಳನ್ನು ಆಡಿದ್ದಾರೆ.

ಶಾಂತಿ ಸಭೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಸ್ವತಹ ಮುಖ್ಯಮಂತ್ರಿಗಳೇ ಮುಂದೆ ನಿಂತು ಒಂದು ಸಮುದಾಯವನ್ನು ‘ಎರಡನೇ ದರ್ಜೆಯ ನಾಗರಿಕರು’ ಎಂಬಂತೆ ಬಹಿರಂಗವಾಗಿ ನಡೆಸಿಕೊಂಡು, ನಂತರ ಜಿಲ್ಲಾಧಿಕಾರಿಗಳು ಆ ‘ಸಮುದಾಯ’ವನ್ನು‌ ಶಾಂತಿ ಸಭೆಗೆ ಆಹ್ವಾನಿಸುವುದನ್ನು ತಾರತಮ್ಯಕ್ಕೊಳಗಾದ ಸಮುದಾಯ ಏನೂಂತ ಅರ್ಥೈಸಿಕೊಳ್ಳಬೇಕು” ಎಂದು ಪ್ರಶ್ನಿಸಿದ್ದಾರೆ.

“ಫಾಝಿಲ್ ಕೊಲೆ ನಡೆದಿರುವುದು ಮಂಗಳೂರು ಉತ್ತರ ಕ್ಷೇತ್ರದ ಸುರತ್ಕಲ್ ನಲ್ಲಿ, ಆತನ ಊರು ಮಂಗಳಪೇಟೆ ಮೂಡಬಿದ್ರೆ ಕ್ಷೇತ್ರಕ್ಕೆ ಸೇರುತ್ರದೆ. ಉತ್ತರ ಶಾಸಕ ಭರತ್ ಶೆಟ್ಟಿ, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಇಬ್ಬರೂ ಫಾಝಿಲ್ ದುಃಖತಪ್ತ ಕುಟುಂಬವನ್ನು ಈವರೆಗೂ ಭೇಟಿಯಾಗಿಲ್ಲ. ಪರಿಹಾರ ಒದಗಿಸುವ ಕುರಿತು ಮಾತಾಡಿಲ್ಲ. ಪೊಲೀಸರ ಹೊರತು ಜಿಲ್ಲಾಡಳಿತದ ಯಾವೊಬ್ಬ ಪ್ರಮುಖ ಅಧಿಕಾರಿಯೂ ಫಾಝಿಲ್ ಮನೆಯ ಬಳಿ ಸುಳಿದಿಲ್ಲ. ಸಂತ್ರಸ್ತ ಕುಟುಂಬಗಳು ಸರಕಾರ, ಜನಪ್ರತಿನಿಧಿಗಳ ಸಾಂತ್ವನವನ್ನು ಅಸಹಾಯಕರಾಗಿ ನಿರೀಕ್ಷಿಸುತ್ತಿರುವಾಗ ಈ ರೀತಿ ಕಠಿಣತೆ, ತಾರತಮ್ಯ, ನಿರ್ಲಕ್ಷವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೇಗೆ ಅರ್ಥೈಸುವುದು ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಯುಪಿ ಮಾಡೆಲ್ ತರ್ತೀವಿ ಅನ್ನುವ ಬೊಮ್ಮಾಯಿಯವರೆ, ಯುಪಿ ಮಾಡೆಲ್ ಎಂದರೇನು ಗೊತ್ತೆ? 

“ಅಷ್ಟೆ ಅಲ್ಲದೆ ‘ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಮಿತಿ ಸಭೆ ಇದೆ. ನಿಮ್ಮ ಮಸೀದಿ ಜಮಾತ್ ವ್ಯಾಪ್ತಿಯಿಂದ ತಲಾ ಮೂರು ಜನ ಪ್ರತಿನಿಧಿಗಳು ಬರಬೇಕು’ ಎಂದು ಪ್ರತಿಯೊಂದು ಮಸೀದಿಗಳಿಗೂ ಆಯಾಯ ಠಾಣೆಗಳಿಂದ ಕರೆಗಳು ಬರುತ್ತಿವೆ ಎಂದು ಮಾಹಿತಿ ಇದೆ. ರಾಜಕೀಯ ಪಕ್ಷಗಳಿಗೆ, ಸಾಮಾಜಿಕ ಸಂಘಟನೆಗಳಿಗೆ ಈವರಗೆ ಆಹ್ವಾನ ಬಂದಿಲ್ಲ. ಈ ರೀತಿಯ ಶಾಂತಿ ಸಭೆಯ ಉದ್ದೇಶ ಏನು? ನಾವು ಹೇಳುವುದನ್ಜು ಕೇಳಿಕೊಂಡು ಬಿದ್ದಿರಿ ಅಂತಲೇ?” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್‌ ಅವರು ಹೇಳಿದ್ದಾರೆ. “ಎಲ್ಲರೂ ಶಂಕಿತರಾಗಿದ್ದು ಅವರ ಸಂಘಟನೆ ಅಥವಾ ಇತರ ಯಾವುದೇ ಲಿಂಕ್ ಮುಖ್ಯವಲ್ಲ” ಎಂದು ಪೊಲೀಸ್‌ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ ಎಂದು ವಾರ್ತಾಭಾರತಿ ವರದಿ ಮಾಡಿದೆ.

ಪೊಲೀಸರು ಫಾಝಿಲ್ ಕೊಲೆಯ ಶಂಕಿತರನ್ನು ವಶಕ್ಕೆ ಪಡೆಯುತ್ತಿದ್ದಂತೆ ಸ್ಥಳೀಯ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ,“ಕೊಲೆ ಮಾಡಿದ ಆರೋಪಿಗಳು ಬಳಸಿದ ವಾಹನ, ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ನಿಮ್ಮ ಇಲಾಖೆಗೆ ಸಿಕ್ಕಿದ್ದರೂ, ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವುದನ್ನು ಬಿಟ್ಟು, ಅಮಾಯಕ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿದರೆ ಕಾರ್ಯಕರ್ತರ ಪರವಾಗಿ ನಿಮ್ಮ ಮುಖ್ಯ ಕಚೇರಿಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಂದು ಪೊಲೀಸ್ ಆಯುಕ್ತರಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

“ಸಾಕ್ಷ್ಯಾಧಾರ ನಿಮ್ಮ ಕೈಯ್ಯಲ್ಲಿದೆ. ಆರೋಪಿಗಳನ್ನು ಬಂಧಿಸಿ, ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ. ಆದರೆ ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ, ಅವರ ಕುಟುಂಬದಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬಾರದು. ಈ ಬಗ್ಗೆ ನನಗೆ ದೂರುಗಳು ಬರುತ್ತಿದ್ದು, ನಿಮ್ಮ ಅನುಚಿತ ವರ್ತನೆಯ ಬಗ್ಗೆ ಗೃಹ ಸಚಿವರಿಗೆ ದೂರು ನೀಡಲಿದ್ದೇನೆ. ನಾನು ಪದವಿಗಿಂತ ಕಾರ್ಯಕರ್ತರ ಹಿತವೇ ಮುಖ್ಯ ಎಂದು ಪರಿಗಣಿಸಿದ್ದೇನೆ. ಕಾರ್ಯಕರ್ತರ ಕುಟುಂಬಕ್ಕೆ ನೋವುಂಟು ಮಾಡಿದರೆ ಸಹಿಸಲಾಗದು. ತಕ್ಷಣ ನೈಜ ಆರೋಪಿಗಳ ಪತ್ತೆಗೆ ಕ್ರಮ ಜರುಗಿಸಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ. ಬಂಗಾಳ | ಬಿಜೆಪಿ ಪ್ರಚಾರ ಸಾಮಗ್ರಿ ಸಜ್ಜುಗೊಳಿಸಿದ ವಿಡಿಯೋ ವೈರಲ್ : ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿ ಅಮಾನತು

ಬಿಜೆಪಿ ಪ್ರಚಾರ ಸಾಮಗ್ರಿಗಳನ್ನು ತಯಾರಿಸಲು ಸಹಾಯ ಮಾಡಿದ ಆರೋಪದ ಮೇಲೆ ಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಪಾಣಿಹಟಿ ವಿಧಾನಸಭಾ ಕ್ಷೇತ್ರದ ಅಧಿಕಾರಿಯೊಬ್ಬರನ್ನು ಚುನಾವಣಾ ಆಯೋಗ ಅಮಾನತುಗೊಳಿಸಿದೆ ಎಂದು ದಿ ಇಂಡಿಯನ್...

ಮುಸ್ಲಿಮರ ವಿರುದ್ಧ ದ್ವೇಷ ಕಾರುವ ಅಸ್ಸಾಂ ಸಿಎಂ ಪತ್ನಿ ಬಳಿ 2 ಮುಸ್ಲಿಂ ದೇಶಗಳ ಪಾಸ್‌ಪೋರ್ಟ್ ಇದೆ : ಕಾಂಗ್ರೆಸ್ ಆರೋಪ

ಮತದಾನಕ್ಕೆ ಇನ್ನೇನು ಮೂರು ದಿನಗಳು ಬಾಕಿ ಇರುವಾಗ, ಅಸ್ಸಾಂನಲ್ಲಿ ಕಾಂಗ್ರೆಸ್‌-ಬಿಜೆಪಿ ನಡುವೆ ವೈಯಕ್ತಿಕ ವಿಚಾರಗಳ ಕುರಿತ ವಾಗ್ಯುದ್ಧ ತಾರಕಕ್ಕೇರಿದೆ. ಸಿಎಂ ಹಿಮಂತ ಬಿಸ್ವಾ ಶರ್ಮಾ ಮತ್ತು ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ...

ದಟ್ಟಾರಣ್ಯದೊಳಗೆ ಮೂರು ದಿನಗಳನ್ನು ಕಳೆದಿದ್ದು ಹೇಗೆ..ದಾರಿ ತಪ್ಪಿದ ಬಳಿಕ ಏನಾಯ್ತು? ನಾಪತ್ತೆ ವಿಚಾರ ಬಿಚ್ಚಿಟ್ಟ ಶರಣ್ಯ

ಕಳೆದ ಗುರುವಾರ (ಏಪ್ರಿಲ್ 2, 2026) ಕೊಡಗಿನ ತಡಿಯಂಡಮೋಳ್ ಬೆಟ್ಟಕ್ಕೆ ಚಾರಣಕ್ಕೆ ತೆರಳಿ ನಾಪತ್ತೆಯಾಗಿದ್ದ ಕೇರಳದ ಯುವತಿ ಶರಣ್ಯ, ಮೂರು ದಿನಗಳ ಬಳಿಕ, ಅಂದರೆ ನಾಪತ್ತೆಯಾದ ನಾಲ್ಕನೇ ದಿನ ಭಾನುವಾರ (ಏಪ್ರಿಲ್ 4,...

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...