Homeಕರ್ನಾಟಕಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

ಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

ಶಾಂತಿ ಸಭೆಯು ಯಾವುದೆ ಅಧೀಕೃತತೆ ಇಲ್ಲದ ಕಾನೂನುಬಾಹಿರ ಸಭೆ ಎಂದು ಕಮಿಟಿ ಹೇಳಿದ್ದು, ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾದ ಸಂತ್ರಸ್ತರ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡುವುದಾಗಿ ನಿರ್ಧರಿಸಿದೆ

- Advertisement -
- Advertisement -

ಕರಾವಳಿಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಸೂಚನೆಯಂತೆ ಜಿಲ್ಲಾಧಿಕಾರಿಗಳು ಕರೆದಿದ್ದ ಶಾಂತಿ ಸಭೆಯಲ್ಲಿ ಮಂಗಳೂರು ಮುಸ್ಲಿಂ ಸೆಂಟ್ರಲ್ ಕಮಿಟಿ ಪದಾಧಿಕಾರಿಗಳು ಭಾಗವಹಿಸದೆ ರಾಜ್ಯ ಸರ್ಕಾರದ ಇಬ್ಬಗೆ ನಿಲುವಿನ ವಿರುದ್ಧ ಪ್ರತಿಭಟಿಸಿರುವ ಘಟನೆ ಶನಿವಾರ ನಡೆದಿದೆ.

ಇತ್ತೀಚೆಗೆ ಕೊಲೆಯಾದ ಬಿಜೆಪಿ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿ ಬೊಮ್ಮಾಯಿ ತೆರಳಿದ್ದರೂ ಅದೇ ಊರಿನಲ್ಲಿ ಒಂದು ವಾರ ಮುಂಚೆ ಕೊಲೆಯಾದ ಮಸೂದ್ ಹಾಗೂ ಎರಡು ದಿನಗಳ ಹಿಂದೆ ಕೊಲೆಯಾದ ಫಾಝಿಲ್ ಅವರ ಮನೆಗೆ ಭೇಟಿ ನೀಡದೆ ಹೋಗಿರುವ ಬಗ್ಗೆ ಸೆಂಟ್ರಲ್ ಕಮಿಟಿ ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆಎಸ್ ಮಸೂದ್,“ಶಾಂತಿ ಸಭೆಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಅವರು ಬಹಿಷ್ಕಾರ ಮಾಡಿದ್ದಾರೆ ಎಂದು ಸುದ್ದಿ ಓಡಾಡುತ್ತಿದೆ. ಆದರೆ ಕಮಿಟಿ ಸಭೆಯನ್ನು ಬಹಿಷ್ಕಾರ ಮಾಡಲಿಲ್ಲ. ಆದರೆ ನಾವು ಸಭೆಗೆ ಯಾಕೆ ಹೋಗಿಲ್ಲ ಎಂದರೆ, ಶಾಂತಿ ಸಮಿತಿಗೆ ಅಧೀಕೃತತೆ ಇಲ್ಲ. ಶಾಂತಿ ಸಮಿತಿಯು ಸರ್ಕಾರದಿಂದ ಆಗಬೇಕಾಗಿದೆ. ಆದರೆ ಪ್ರಸ್ತುತ ಇರುವ ಶಾಂತಿ ಸಮಿತಿ ಕಾನೂನುಬಾಹಿರ. ಅಷ್ಟೆ ಅಲ್ಲದೆ, ಅಧಿಕಾರಿಗಳು ಒಂದೇ ಸಮುದಾಯದ ಜನರಿಗಷ್ಟೆ ಭಾಗವಹಿಸಲು ಹೇಳಿದ್ದಾರೆ” ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿ ಕೂಡಾ ಕೊಲೆಗೀಡಾದ ಮುಸ್ಲಿಮರ ಮನೆಗೆ ಹೋಗಿಲ್ಲ. ಆದ್ದರಿಂದ ಈ ಬಗ್ಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಸಭೆ ಕರೆದಿದ್ದೆವು. ಈ ಸಭೆ ನಡೆದ ನಂತರ ನಿನ್ನೆ ರಾತ್ರಿ ಎಂಟು ಗಂಟೆಗೆ ನಮಗೆ ಶಾಂತಿ ಸಭೆಗೆ ಕರೆದಿದ್ದಾರೆ. ಆದರೆ ಈ ಸಭೆಗೆ ಕಾನೂನು ಮಾನ್ಯತೆ ಮತ್ತು ಅಧೀಕೃತತೆ ಇಲ್ಲದ ಕಾರಣ ನಾವು ಸಭೆಗೆ ಹೋಗಿಲ್ಲ” ಎಂದು ಮಸೂದ್ ಅವರು ನಾನುಗೌರಿ.ಕಾಂ ಹೇಳಿದ್ದಾರೆ.

ಇದನ್ನೂ ಓದಿ: ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ – ಫಾಝಿಲ್ ತಂದೆಯ ಮನದಾಳದ ಮಾತು

ಈ ಮಧ್ಯೆ ಕಮಿಟಿಯ ಅಧ್ಯಕ್ಷ ಕೆ.ಎಸ್. ಮುಹಮ್ಮದ್ ಮಸೂದ್‌ರ ನಿವಾಸದಲ್ಲಿ ತುರ್ತು ಸಭೆ ನಡೆದು ಮೃತ ಬೆಳ್ಳಾರೆಯ ಮುಹಮ್ಮದ್ ಮಸೂದ್ ಮತ್ತು ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ವಾರ್ತಾಭಾರತಿ ವರದಿ ಮಾಡಿದೆ. ಜಿಲ್ಲೆಯ ಸಮಸ್ತ ನಾಗರಿಕರು ಶಾಂತಿಯನ್ನು ಕಾಪಾಡಬೇಕು ಮತ್ತು ಮೃತಪಟ್ಟ ಮೂವರು ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವನು ಅನುಗ್ರಹಿಸಲಿ ಎಂದು ಮಸೂದ್ ಸಭೆಯಲ್ಲಿ ಸಾಂತ್ವನ ಮಾತುಗಳನ್ನು ಆಡಿದ್ದಾರೆ.

ಶಾಂತಿ ಸಭೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಸ್ವತಹ ಮುಖ್ಯಮಂತ್ರಿಗಳೇ ಮುಂದೆ ನಿಂತು ಒಂದು ಸಮುದಾಯವನ್ನು ‘ಎರಡನೇ ದರ್ಜೆಯ ನಾಗರಿಕರು’ ಎಂಬಂತೆ ಬಹಿರಂಗವಾಗಿ ನಡೆಸಿಕೊಂಡು, ನಂತರ ಜಿಲ್ಲಾಧಿಕಾರಿಗಳು ಆ ‘ಸಮುದಾಯ’ವನ್ನು‌ ಶಾಂತಿ ಸಭೆಗೆ ಆಹ್ವಾನಿಸುವುದನ್ನು ತಾರತಮ್ಯಕ್ಕೊಳಗಾದ ಸಮುದಾಯ ಏನೂಂತ ಅರ್ಥೈಸಿಕೊಳ್ಳಬೇಕು” ಎಂದು ಪ್ರಶ್ನಿಸಿದ್ದಾರೆ.

“ಫಾಝಿಲ್ ಕೊಲೆ ನಡೆದಿರುವುದು ಮಂಗಳೂರು ಉತ್ತರ ಕ್ಷೇತ್ರದ ಸುರತ್ಕಲ್ ನಲ್ಲಿ, ಆತನ ಊರು ಮಂಗಳಪೇಟೆ ಮೂಡಬಿದ್ರೆ ಕ್ಷೇತ್ರಕ್ಕೆ ಸೇರುತ್ರದೆ. ಉತ್ತರ ಶಾಸಕ ಭರತ್ ಶೆಟ್ಟಿ, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಇಬ್ಬರೂ ಫಾಝಿಲ್ ದುಃಖತಪ್ತ ಕುಟುಂಬವನ್ನು ಈವರೆಗೂ ಭೇಟಿಯಾಗಿಲ್ಲ. ಪರಿಹಾರ ಒದಗಿಸುವ ಕುರಿತು ಮಾತಾಡಿಲ್ಲ. ಪೊಲೀಸರ ಹೊರತು ಜಿಲ್ಲಾಡಳಿತದ ಯಾವೊಬ್ಬ ಪ್ರಮುಖ ಅಧಿಕಾರಿಯೂ ಫಾಝಿಲ್ ಮನೆಯ ಬಳಿ ಸುಳಿದಿಲ್ಲ. ಸಂತ್ರಸ್ತ ಕುಟುಂಬಗಳು ಸರಕಾರ, ಜನಪ್ರತಿನಿಧಿಗಳ ಸಾಂತ್ವನವನ್ನು ಅಸಹಾಯಕರಾಗಿ ನಿರೀಕ್ಷಿಸುತ್ತಿರುವಾಗ ಈ ರೀತಿ ಕಠಿಣತೆ, ತಾರತಮ್ಯ, ನಿರ್ಲಕ್ಷವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೇಗೆ ಅರ್ಥೈಸುವುದು ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಯುಪಿ ಮಾಡೆಲ್ ತರ್ತೀವಿ ಅನ್ನುವ ಬೊಮ್ಮಾಯಿಯವರೆ, ಯುಪಿ ಮಾಡೆಲ್ ಎಂದರೇನು ಗೊತ್ತೆ? 

“ಅಷ್ಟೆ ಅಲ್ಲದೆ ‘ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಮಿತಿ ಸಭೆ ಇದೆ. ನಿಮ್ಮ ಮಸೀದಿ ಜಮಾತ್ ವ್ಯಾಪ್ತಿಯಿಂದ ತಲಾ ಮೂರು ಜನ ಪ್ರತಿನಿಧಿಗಳು ಬರಬೇಕು’ ಎಂದು ಪ್ರತಿಯೊಂದು ಮಸೀದಿಗಳಿಗೂ ಆಯಾಯ ಠಾಣೆಗಳಿಂದ ಕರೆಗಳು ಬರುತ್ತಿವೆ ಎಂದು ಮಾಹಿತಿ ಇದೆ. ರಾಜಕೀಯ ಪಕ್ಷಗಳಿಗೆ, ಸಾಮಾಜಿಕ ಸಂಘಟನೆಗಳಿಗೆ ಈವರಗೆ ಆಹ್ವಾನ ಬಂದಿಲ್ಲ. ಈ ರೀತಿಯ ಶಾಂತಿ ಸಭೆಯ ಉದ್ದೇಶ ಏನು? ನಾವು ಹೇಳುವುದನ್ಜು ಕೇಳಿಕೊಂಡು ಬಿದ್ದಿರಿ ಅಂತಲೇ?” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್‌ ಅವರು ಹೇಳಿದ್ದಾರೆ. “ಎಲ್ಲರೂ ಶಂಕಿತರಾಗಿದ್ದು ಅವರ ಸಂಘಟನೆ ಅಥವಾ ಇತರ ಯಾವುದೇ ಲಿಂಕ್ ಮುಖ್ಯವಲ್ಲ” ಎಂದು ಪೊಲೀಸ್‌ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ ಎಂದು ವಾರ್ತಾಭಾರತಿ ವರದಿ ಮಾಡಿದೆ.

ಪೊಲೀಸರು ಫಾಝಿಲ್ ಕೊಲೆಯ ಶಂಕಿತರನ್ನು ವಶಕ್ಕೆ ಪಡೆಯುತ್ತಿದ್ದಂತೆ ಸ್ಥಳೀಯ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ,“ಕೊಲೆ ಮಾಡಿದ ಆರೋಪಿಗಳು ಬಳಸಿದ ವಾಹನ, ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ನಿಮ್ಮ ಇಲಾಖೆಗೆ ಸಿಕ್ಕಿದ್ದರೂ, ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವುದನ್ನು ಬಿಟ್ಟು, ಅಮಾಯಕ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿದರೆ ಕಾರ್ಯಕರ್ತರ ಪರವಾಗಿ ನಿಮ್ಮ ಮುಖ್ಯ ಕಚೇರಿಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಂದು ಪೊಲೀಸ್ ಆಯುಕ್ತರಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

“ಸಾಕ್ಷ್ಯಾಧಾರ ನಿಮ್ಮ ಕೈಯ್ಯಲ್ಲಿದೆ. ಆರೋಪಿಗಳನ್ನು ಬಂಧಿಸಿ, ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ. ಆದರೆ ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ, ಅವರ ಕುಟುಂಬದಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬಾರದು. ಈ ಬಗ್ಗೆ ನನಗೆ ದೂರುಗಳು ಬರುತ್ತಿದ್ದು, ನಿಮ್ಮ ಅನುಚಿತ ವರ್ತನೆಯ ಬಗ್ಗೆ ಗೃಹ ಸಚಿವರಿಗೆ ದೂರು ನೀಡಲಿದ್ದೇನೆ. ನಾನು ಪದವಿಗಿಂತ ಕಾರ್ಯಕರ್ತರ ಹಿತವೇ ಮುಖ್ಯ ಎಂದು ಪರಿಗಣಿಸಿದ್ದೇನೆ. ಕಾರ್ಯಕರ್ತರ ಕುಟುಂಬಕ್ಕೆ ನೋವುಂಟು ಮಾಡಿದರೆ ಸಹಿಸಲಾಗದು. ತಕ್ಷಣ ನೈಜ ಆರೋಪಿಗಳ ಪತ್ತೆಗೆ ಕ್ರಮ ಜರುಗಿಸಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...

‘ರಾಮನಿಗೆ ಅವಮಾನಿಸಿದ್ದಕ್ಕೆ ಶಾಯಿ ಎರಚಿದೆ’: ಜಂತರ್ ಮಂತರ್‌ನಲ್ಲಿ ಅಭಿಜೀತ್ ದೀಪ್ಕೆ ಮೇಲಿನ ದಾಳಿಯನ್ನು ಸಮರ್ಥಿಸಿಕೊಂಡ ಬರ್ಖಾ ಟ್ರೆಹಾನ್

ನವದೆಹಲಿ: ದೇಶದ ರಾಜಧಾನಿಯ ಜಂತರ್ ಮಂತರ್‌ನಲ್ಲಿ ಜುಲೈ 18 ರ ಶನಿವಾರದಂದು ನಡೆದ ಪ್ರತಿಭಟನಾ ಸಭೆಯಲ್ಲಿ ಭಾಷಣ ಮಾಡುತ್ತಿದ್ದ ‘ಜಿರಳೆ ಜನತಾ ಪಕ್ಷ’ದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರ ಮೇಲೆ ಶಾಯಿ ಎರಚಿದ...