Homeಕರ್ನಾಟಕಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

ಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

ಶಾಂತಿ ಸಭೆಯು ಯಾವುದೆ ಅಧೀಕೃತತೆ ಇಲ್ಲದ ಕಾನೂನುಬಾಹಿರ ಸಭೆ ಎಂದು ಕಮಿಟಿ ಹೇಳಿದ್ದು, ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾದ ಸಂತ್ರಸ್ತರ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡುವುದಾಗಿ ನಿರ್ಧರಿಸಿದೆ

- Advertisement -
- Advertisement -

ಕರಾವಳಿಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಸೂಚನೆಯಂತೆ ಜಿಲ್ಲಾಧಿಕಾರಿಗಳು ಕರೆದಿದ್ದ ಶಾಂತಿ ಸಭೆಯಲ್ಲಿ ಮಂಗಳೂರು ಮುಸ್ಲಿಂ ಸೆಂಟ್ರಲ್ ಕಮಿಟಿ ಪದಾಧಿಕಾರಿಗಳು ಭಾಗವಹಿಸದೆ ರಾಜ್ಯ ಸರ್ಕಾರದ ಇಬ್ಬಗೆ ನಿಲುವಿನ ವಿರುದ್ಧ ಪ್ರತಿಭಟಿಸಿರುವ ಘಟನೆ ಶನಿವಾರ ನಡೆದಿದೆ.

ಇತ್ತೀಚೆಗೆ ಕೊಲೆಯಾದ ಬಿಜೆಪಿ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿ ಬೊಮ್ಮಾಯಿ ತೆರಳಿದ್ದರೂ ಅದೇ ಊರಿನಲ್ಲಿ ಒಂದು ವಾರ ಮುಂಚೆ ಕೊಲೆಯಾದ ಮಸೂದ್ ಹಾಗೂ ಎರಡು ದಿನಗಳ ಹಿಂದೆ ಕೊಲೆಯಾದ ಫಾಝಿಲ್ ಅವರ ಮನೆಗೆ ಭೇಟಿ ನೀಡದೆ ಹೋಗಿರುವ ಬಗ್ಗೆ ಸೆಂಟ್ರಲ್ ಕಮಿಟಿ ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆಎಸ್ ಮಸೂದ್,“ಶಾಂತಿ ಸಭೆಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಅವರು ಬಹಿಷ್ಕಾರ ಮಾಡಿದ್ದಾರೆ ಎಂದು ಸುದ್ದಿ ಓಡಾಡುತ್ತಿದೆ. ಆದರೆ ಕಮಿಟಿ ಸಭೆಯನ್ನು ಬಹಿಷ್ಕಾರ ಮಾಡಲಿಲ್ಲ. ಆದರೆ ನಾವು ಸಭೆಗೆ ಯಾಕೆ ಹೋಗಿಲ್ಲ ಎಂದರೆ, ಶಾಂತಿ ಸಮಿತಿಗೆ ಅಧೀಕೃತತೆ ಇಲ್ಲ. ಶಾಂತಿ ಸಮಿತಿಯು ಸರ್ಕಾರದಿಂದ ಆಗಬೇಕಾಗಿದೆ. ಆದರೆ ಪ್ರಸ್ತುತ ಇರುವ ಶಾಂತಿ ಸಮಿತಿ ಕಾನೂನುಬಾಹಿರ. ಅಷ್ಟೆ ಅಲ್ಲದೆ, ಅಧಿಕಾರಿಗಳು ಒಂದೇ ಸಮುದಾಯದ ಜನರಿಗಷ್ಟೆ ಭಾಗವಹಿಸಲು ಹೇಳಿದ್ದಾರೆ” ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿ ಕೂಡಾ ಕೊಲೆಗೀಡಾದ ಮುಸ್ಲಿಮರ ಮನೆಗೆ ಹೋಗಿಲ್ಲ. ಆದ್ದರಿಂದ ಈ ಬಗ್ಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಸಭೆ ಕರೆದಿದ್ದೆವು. ಈ ಸಭೆ ನಡೆದ ನಂತರ ನಿನ್ನೆ ರಾತ್ರಿ ಎಂಟು ಗಂಟೆಗೆ ನಮಗೆ ಶಾಂತಿ ಸಭೆಗೆ ಕರೆದಿದ್ದಾರೆ. ಆದರೆ ಈ ಸಭೆಗೆ ಕಾನೂನು ಮಾನ್ಯತೆ ಮತ್ತು ಅಧೀಕೃತತೆ ಇಲ್ಲದ ಕಾರಣ ನಾವು ಸಭೆಗೆ ಹೋಗಿಲ್ಲ” ಎಂದು ಮಸೂದ್ ಅವರು ನಾನುಗೌರಿ.ಕಾಂ ಹೇಳಿದ್ದಾರೆ.

ಇದನ್ನೂ ಓದಿ: ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ – ಫಾಝಿಲ್ ತಂದೆಯ ಮನದಾಳದ ಮಾತು

ಈ ಮಧ್ಯೆ ಕಮಿಟಿಯ ಅಧ್ಯಕ್ಷ ಕೆ.ಎಸ್. ಮುಹಮ್ಮದ್ ಮಸೂದ್‌ರ ನಿವಾಸದಲ್ಲಿ ತುರ್ತು ಸಭೆ ನಡೆದು ಮೃತ ಬೆಳ್ಳಾರೆಯ ಮುಹಮ್ಮದ್ ಮಸೂದ್ ಮತ್ತು ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ವಾರ್ತಾಭಾರತಿ ವರದಿ ಮಾಡಿದೆ. ಜಿಲ್ಲೆಯ ಸಮಸ್ತ ನಾಗರಿಕರು ಶಾಂತಿಯನ್ನು ಕಾಪಾಡಬೇಕು ಮತ್ತು ಮೃತಪಟ್ಟ ಮೂವರು ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವನು ಅನುಗ್ರಹಿಸಲಿ ಎಂದು ಮಸೂದ್ ಸಭೆಯಲ್ಲಿ ಸಾಂತ್ವನ ಮಾತುಗಳನ್ನು ಆಡಿದ್ದಾರೆ.

ಶಾಂತಿ ಸಭೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಸ್ವತಹ ಮುಖ್ಯಮಂತ್ರಿಗಳೇ ಮುಂದೆ ನಿಂತು ಒಂದು ಸಮುದಾಯವನ್ನು ‘ಎರಡನೇ ದರ್ಜೆಯ ನಾಗರಿಕರು’ ಎಂಬಂತೆ ಬಹಿರಂಗವಾಗಿ ನಡೆಸಿಕೊಂಡು, ನಂತರ ಜಿಲ್ಲಾಧಿಕಾರಿಗಳು ಆ ‘ಸಮುದಾಯ’ವನ್ನು‌ ಶಾಂತಿ ಸಭೆಗೆ ಆಹ್ವಾನಿಸುವುದನ್ನು ತಾರತಮ್ಯಕ್ಕೊಳಗಾದ ಸಮುದಾಯ ಏನೂಂತ ಅರ್ಥೈಸಿಕೊಳ್ಳಬೇಕು” ಎಂದು ಪ್ರಶ್ನಿಸಿದ್ದಾರೆ.

“ಫಾಝಿಲ್ ಕೊಲೆ ನಡೆದಿರುವುದು ಮಂಗಳೂರು ಉತ್ತರ ಕ್ಷೇತ್ರದ ಸುರತ್ಕಲ್ ನಲ್ಲಿ, ಆತನ ಊರು ಮಂಗಳಪೇಟೆ ಮೂಡಬಿದ್ರೆ ಕ್ಷೇತ್ರಕ್ಕೆ ಸೇರುತ್ರದೆ. ಉತ್ತರ ಶಾಸಕ ಭರತ್ ಶೆಟ್ಟಿ, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಇಬ್ಬರೂ ಫಾಝಿಲ್ ದುಃಖತಪ್ತ ಕುಟುಂಬವನ್ನು ಈವರೆಗೂ ಭೇಟಿಯಾಗಿಲ್ಲ. ಪರಿಹಾರ ಒದಗಿಸುವ ಕುರಿತು ಮಾತಾಡಿಲ್ಲ. ಪೊಲೀಸರ ಹೊರತು ಜಿಲ್ಲಾಡಳಿತದ ಯಾವೊಬ್ಬ ಪ್ರಮುಖ ಅಧಿಕಾರಿಯೂ ಫಾಝಿಲ್ ಮನೆಯ ಬಳಿ ಸುಳಿದಿಲ್ಲ. ಸಂತ್ರಸ್ತ ಕುಟುಂಬಗಳು ಸರಕಾರ, ಜನಪ್ರತಿನಿಧಿಗಳ ಸಾಂತ್ವನವನ್ನು ಅಸಹಾಯಕರಾಗಿ ನಿರೀಕ್ಷಿಸುತ್ತಿರುವಾಗ ಈ ರೀತಿ ಕಠಿಣತೆ, ತಾರತಮ್ಯ, ನಿರ್ಲಕ್ಷವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೇಗೆ ಅರ್ಥೈಸುವುದು ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಯುಪಿ ಮಾಡೆಲ್ ತರ್ತೀವಿ ಅನ್ನುವ ಬೊಮ್ಮಾಯಿಯವರೆ, ಯುಪಿ ಮಾಡೆಲ್ ಎಂದರೇನು ಗೊತ್ತೆ? 

“ಅಷ್ಟೆ ಅಲ್ಲದೆ ‘ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಮಿತಿ ಸಭೆ ಇದೆ. ನಿಮ್ಮ ಮಸೀದಿ ಜಮಾತ್ ವ್ಯಾಪ್ತಿಯಿಂದ ತಲಾ ಮೂರು ಜನ ಪ್ರತಿನಿಧಿಗಳು ಬರಬೇಕು’ ಎಂದು ಪ್ರತಿಯೊಂದು ಮಸೀದಿಗಳಿಗೂ ಆಯಾಯ ಠಾಣೆಗಳಿಂದ ಕರೆಗಳು ಬರುತ್ತಿವೆ ಎಂದು ಮಾಹಿತಿ ಇದೆ. ರಾಜಕೀಯ ಪಕ್ಷಗಳಿಗೆ, ಸಾಮಾಜಿಕ ಸಂಘಟನೆಗಳಿಗೆ ಈವರಗೆ ಆಹ್ವಾನ ಬಂದಿಲ್ಲ. ಈ ರೀತಿಯ ಶಾಂತಿ ಸಭೆಯ ಉದ್ದೇಶ ಏನು? ನಾವು ಹೇಳುವುದನ್ಜು ಕೇಳಿಕೊಂಡು ಬಿದ್ದಿರಿ ಅಂತಲೇ?” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್‌ ಅವರು ಹೇಳಿದ್ದಾರೆ. “ಎಲ್ಲರೂ ಶಂಕಿತರಾಗಿದ್ದು ಅವರ ಸಂಘಟನೆ ಅಥವಾ ಇತರ ಯಾವುದೇ ಲಿಂಕ್ ಮುಖ್ಯವಲ್ಲ” ಎಂದು ಪೊಲೀಸ್‌ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ ಎಂದು ವಾರ್ತಾಭಾರತಿ ವರದಿ ಮಾಡಿದೆ.

ಪೊಲೀಸರು ಫಾಝಿಲ್ ಕೊಲೆಯ ಶಂಕಿತರನ್ನು ವಶಕ್ಕೆ ಪಡೆಯುತ್ತಿದ್ದಂತೆ ಸ್ಥಳೀಯ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ,“ಕೊಲೆ ಮಾಡಿದ ಆರೋಪಿಗಳು ಬಳಸಿದ ವಾಹನ, ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ನಿಮ್ಮ ಇಲಾಖೆಗೆ ಸಿಕ್ಕಿದ್ದರೂ, ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವುದನ್ನು ಬಿಟ್ಟು, ಅಮಾಯಕ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿದರೆ ಕಾರ್ಯಕರ್ತರ ಪರವಾಗಿ ನಿಮ್ಮ ಮುಖ್ಯ ಕಚೇರಿಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಂದು ಪೊಲೀಸ್ ಆಯುಕ್ತರಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

“ಸಾಕ್ಷ್ಯಾಧಾರ ನಿಮ್ಮ ಕೈಯ್ಯಲ್ಲಿದೆ. ಆರೋಪಿಗಳನ್ನು ಬಂಧಿಸಿ, ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ. ಆದರೆ ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ, ಅವರ ಕುಟುಂಬದಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬಾರದು. ಈ ಬಗ್ಗೆ ನನಗೆ ದೂರುಗಳು ಬರುತ್ತಿದ್ದು, ನಿಮ್ಮ ಅನುಚಿತ ವರ್ತನೆಯ ಬಗ್ಗೆ ಗೃಹ ಸಚಿವರಿಗೆ ದೂರು ನೀಡಲಿದ್ದೇನೆ. ನಾನು ಪದವಿಗಿಂತ ಕಾರ್ಯಕರ್ತರ ಹಿತವೇ ಮುಖ್ಯ ಎಂದು ಪರಿಗಣಿಸಿದ್ದೇನೆ. ಕಾರ್ಯಕರ್ತರ ಕುಟುಂಬಕ್ಕೆ ನೋವುಂಟು ಮಾಡಿದರೆ ಸಹಿಸಲಾಗದು. ತಕ್ಷಣ ನೈಜ ಆರೋಪಿಗಳ ಪತ್ತೆಗೆ ಕ್ರಮ ಜರುಗಿಸಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...

ರಾಮಮಂದಿರದ ದೇಣಿಗೆ ಕಳ್ಳತನ: ಆರೋಪಿಗಳ ಪರ ಯಾವುದೇ ವಕೀಲರು ವಾದಿಸುವಂತಿಲ್ಲ , ವಾದಿಸಿದರೆ ರೂ. 5ಲಕ್ಷ ದಂಡ

ರಾಮಮಂದಿರದ ದೇಣಿಗೆ ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳ ಪರವಾಗಿ ಯಾವುದೇ ವಕೀಲರು ನ್ಯಾಯಾಲಯದಲ್ಲಿ ವಕಾಲತ್ತು ವಹಿಸಬಾರದು ಎಂದು ಅಯೋಧ್ಯೆ ಬಾರ್ ಅಸೋಸಿಯೇಷನ್ ಮಹತ್ವದ ನಿರ್ಧಾರ ಕೈಗೊಂಡಿದೆ. ಒಂದು ವೇಳೆ ಸಂಘದ ಈ ತೀರ್ಮಾನವನ್ನು...

ವೋಟರ್ ಲಿಸ್ಟ್‌ನಿಂದ ಹೆಸರು ಡಿಲೀಟ್: ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ಬ್ರೇಕ್! ಬಂಗಾಳ ಸಿಎಂ ಗೆ ಪತ್ರ ಬರೆದ ಕೇರಳ ಸಿಎಂ

ಹಿರಿಯ ಪತ್ರಕರ್ತ ಮತ್ತು ‘ದಿ ಟೆಲಿಗ್ರಾಫ್’ ಪತ್ರಿಕೆಯ ಮಾಜಿ ಸಂಪಾದಕ ರಾಜಗೋಪಾಲ್ ರಾಮದಾಸ್ ಅವರ ಪಾಸ್‌ಪೋರ್ಟ್ ನವೀಕರಣ ವಿವಾದವು ಸೋಮವಾರ ಮತ್ತಷ್ಟು ತೀವ್ರಗೊಂಡಿದೆ. ಈ ಸಮಸ್ಯೆಯನ್ನು ತಕ್ಷಣವೇ ಬಗೆಹರಿಸಲು ಮಧ್ಯಪ್ರವೇಶಿಸಬೇಕು ಎಂದು ಕೋರಿ...

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...