Homeಕರ್ನಾಟಕಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

ಮುಖ್ಯಮಂತ್ರಿಯ ಇಬ್ಬಗೆ ನೀತಿ; ಕಾನೂನುಬಾಹಿರ ಶಾಂತಿಸಭೆಗೆ ವಿರೋಧ: ಮುಸ್ಲಿಂ ಸೆಂಟ್ರಲ್ ಕಮಿಟಿ

ಶಾಂತಿ ಸಭೆಯು ಯಾವುದೆ ಅಧೀಕೃತತೆ ಇಲ್ಲದ ಕಾನೂನುಬಾಹಿರ ಸಭೆ ಎಂದು ಕಮಿಟಿ ಹೇಳಿದ್ದು, ಸರ್ಕಾರದಿಂದ ನಿರ್ಲಕ್ಷ್ಯಕ್ಕೆ ಒಳಗಾದ ಸಂತ್ರಸ್ತರ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡುವುದಾಗಿ ನಿರ್ಧರಿಸಿದೆ

- Advertisement -
- Advertisement -

ಕರಾವಳಿಯಲ್ಲಿ ನಡೆಯುತ್ತಿರುವ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರ ಸೂಚನೆಯಂತೆ ಜಿಲ್ಲಾಧಿಕಾರಿಗಳು ಕರೆದಿದ್ದ ಶಾಂತಿ ಸಭೆಯಲ್ಲಿ ಮಂಗಳೂರು ಮುಸ್ಲಿಂ ಸೆಂಟ್ರಲ್ ಕಮಿಟಿ ಪದಾಧಿಕಾರಿಗಳು ಭಾಗವಹಿಸದೆ ರಾಜ್ಯ ಸರ್ಕಾರದ ಇಬ್ಬಗೆ ನಿಲುವಿನ ವಿರುದ್ಧ ಪ್ರತಿಭಟಿಸಿರುವ ಘಟನೆ ಶನಿವಾರ ನಡೆದಿದೆ.

ಇತ್ತೀಚೆಗೆ ಕೊಲೆಯಾದ ಬಿಜೆಪಿ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಮನೆಗೆ ಮುಖ್ಯಮಂತ್ರಿ ಬೊಮ್ಮಾಯಿ ತೆರಳಿದ್ದರೂ ಅದೇ ಊರಿನಲ್ಲಿ ಒಂದು ವಾರ ಮುಂಚೆ ಕೊಲೆಯಾದ ಮಸೂದ್ ಹಾಗೂ ಎರಡು ದಿನಗಳ ಹಿಂದೆ ಕೊಲೆಯಾದ ಫಾಝಿಲ್ ಅವರ ಮನೆಗೆ ಭೇಟಿ ನೀಡದೆ ಹೋಗಿರುವ ಬಗ್ಗೆ ಸೆಂಟ್ರಲ್ ಕಮಿಟಿ ಅಸಮಾಧಾನ ವ್ಯಕ್ತಪಡಿಸಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ನಾನುಗೌರಿ.ಕಾಂ ಜೊತೆಗೆ ಮಾತನಾಡಿದ ಮುಸ್ಲಿಂ ಸೆಂಟ್ರಲ್ ಕಮಿಟಿ ಅಧ್ಯಕ್ಷ ಕೆಎಸ್ ಮಸೂದ್,“ಶಾಂತಿ ಸಭೆಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ಅವರು ಬಹಿಷ್ಕಾರ ಮಾಡಿದ್ದಾರೆ ಎಂದು ಸುದ್ದಿ ಓಡಾಡುತ್ತಿದೆ. ಆದರೆ ಕಮಿಟಿ ಸಭೆಯನ್ನು ಬಹಿಷ್ಕಾರ ಮಾಡಲಿಲ್ಲ. ಆದರೆ ನಾವು ಸಭೆಗೆ ಯಾಕೆ ಹೋಗಿಲ್ಲ ಎಂದರೆ, ಶಾಂತಿ ಸಮಿತಿಗೆ ಅಧೀಕೃತತೆ ಇಲ್ಲ. ಶಾಂತಿ ಸಮಿತಿಯು ಸರ್ಕಾರದಿಂದ ಆಗಬೇಕಾಗಿದೆ. ಆದರೆ ಪ್ರಸ್ತುತ ಇರುವ ಶಾಂತಿ ಸಮಿತಿ ಕಾನೂನುಬಾಹಿರ. ಅಷ್ಟೆ ಅಲ್ಲದೆ, ಅಧಿಕಾರಿಗಳು ಒಂದೇ ಸಮುದಾಯದ ಜನರಿಗಷ್ಟೆ ಭಾಗವಹಿಸಲು ಹೇಳಿದ್ದಾರೆ” ಎಂದು ಹೇಳಿದ್ದಾರೆ.

“ಮುಖ್ಯಮಂತ್ರಿ ಕೂಡಾ ಕೊಲೆಗೀಡಾದ ಮುಸ್ಲಿಮರ ಮನೆಗೆ ಹೋಗಿಲ್ಲ. ಆದ್ದರಿಂದ ಈ ಬಗ್ಗೆ ಮುಸ್ಲಿಂ ಸೆಂಟ್ರಲ್ ಕಮಿಟಿ ವತಿಯಿಂದ ಸಭೆ ಕರೆದಿದ್ದೆವು. ಈ ಸಭೆ ನಡೆದ ನಂತರ ನಿನ್ನೆ ರಾತ್ರಿ ಎಂಟು ಗಂಟೆಗೆ ನಮಗೆ ಶಾಂತಿ ಸಭೆಗೆ ಕರೆದಿದ್ದಾರೆ. ಆದರೆ ಈ ಸಭೆಗೆ ಕಾನೂನು ಮಾನ್ಯತೆ ಮತ್ತು ಅಧೀಕೃತತೆ ಇಲ್ಲದ ಕಾರಣ ನಾವು ಸಭೆಗೆ ಹೋಗಿಲ್ಲ” ಎಂದು ಮಸೂದ್ ಅವರು ನಾನುಗೌರಿ.ಕಾಂ ಹೇಳಿದ್ದಾರೆ.

ಇದನ್ನೂ ಓದಿ: ಹಿಂದೂ-ಮುಸ್ಲಿಂ ಕ್ರಿಶ್ಚಿಯನ್ ಯಾರೇ ಆಗಿರಲಿ, ಯಾವ ತಂದೆ ತಾಯಿಗೂ ನಮಗೆ ಬಂದ ಕಷ್ಟ ಬಾರದಿರಲಿ – ಫಾಝಿಲ್ ತಂದೆಯ ಮನದಾಳದ ಮಾತು

ಈ ಮಧ್ಯೆ ಕಮಿಟಿಯ ಅಧ್ಯಕ್ಷ ಕೆ.ಎಸ್. ಮುಹಮ್ಮದ್ ಮಸೂದ್‌ರ ನಿವಾಸದಲ್ಲಿ ತುರ್ತು ಸಭೆ ನಡೆದು ಮೃತ ಬೆಳ್ಳಾರೆಯ ಮುಹಮ್ಮದ್ ಮಸೂದ್ ಮತ್ತು ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಕುಟುಂಬಕ್ಕೆ ತಲಾ 30 ಲಕ್ಷ ರೂ. ಪರಿಹಾರ ನೀಡಲು ನಿರ್ಧರಿಸಲಾಗಿದೆ ಎಂದು ವಾರ್ತಾಭಾರತಿ ವರದಿ ಮಾಡಿದೆ. ಜಿಲ್ಲೆಯ ಸಮಸ್ತ ನಾಗರಿಕರು ಶಾಂತಿಯನ್ನು ಕಾಪಾಡಬೇಕು ಮತ್ತು ಮೃತಪಟ್ಟ ಮೂವರು ಕುಟುಂಬಸ್ಥರಿಗೆ ನೋವನ್ನು ಭರಿಸುವ ಶಕ್ತಿಯನ್ನು ದೇವನು ಅನುಗ್ರಹಿಸಲಿ ಎಂದು ಮಸೂದ್ ಸಭೆಯಲ್ಲಿ ಸಾಂತ್ವನ ಮಾತುಗಳನ್ನು ಆಡಿದ್ದಾರೆ.

ಶಾಂತಿ ಸಭೆಯ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿವೈಎಫ್‌ಐ ರಾಜ್ಯಾಧ್ಯಕ್ಷ ಮುನೀರ್‌ ಕಾಟಿಪಳ್ಳ, “ಸ್ವತಹ ಮುಖ್ಯಮಂತ್ರಿಗಳೇ ಮುಂದೆ ನಿಂತು ಒಂದು ಸಮುದಾಯವನ್ನು ‘ಎರಡನೇ ದರ್ಜೆಯ ನಾಗರಿಕರು’ ಎಂಬಂತೆ ಬಹಿರಂಗವಾಗಿ ನಡೆಸಿಕೊಂಡು, ನಂತರ ಜಿಲ್ಲಾಧಿಕಾರಿಗಳು ಆ ‘ಸಮುದಾಯ’ವನ್ನು‌ ಶಾಂತಿ ಸಭೆಗೆ ಆಹ್ವಾನಿಸುವುದನ್ನು ತಾರತಮ್ಯಕ್ಕೊಳಗಾದ ಸಮುದಾಯ ಏನೂಂತ ಅರ್ಥೈಸಿಕೊಳ್ಳಬೇಕು” ಎಂದು ಪ್ರಶ್ನಿಸಿದ್ದಾರೆ.

“ಫಾಝಿಲ್ ಕೊಲೆ ನಡೆದಿರುವುದು ಮಂಗಳೂರು ಉತ್ತರ ಕ್ಷೇತ್ರದ ಸುರತ್ಕಲ್ ನಲ್ಲಿ, ಆತನ ಊರು ಮಂಗಳಪೇಟೆ ಮೂಡಬಿದ್ರೆ ಕ್ಷೇತ್ರಕ್ಕೆ ಸೇರುತ್ರದೆ. ಉತ್ತರ ಶಾಸಕ ಭರತ್ ಶೆಟ್ಟಿ, ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್ ಇಬ್ಬರೂ ಫಾಝಿಲ್ ದುಃಖತಪ್ತ ಕುಟುಂಬವನ್ನು ಈವರೆಗೂ ಭೇಟಿಯಾಗಿಲ್ಲ. ಪರಿಹಾರ ಒದಗಿಸುವ ಕುರಿತು ಮಾತಾಡಿಲ್ಲ. ಪೊಲೀಸರ ಹೊರತು ಜಿಲ್ಲಾಡಳಿತದ ಯಾವೊಬ್ಬ ಪ್ರಮುಖ ಅಧಿಕಾರಿಯೂ ಫಾಝಿಲ್ ಮನೆಯ ಬಳಿ ಸುಳಿದಿಲ್ಲ. ಸಂತ್ರಸ್ತ ಕುಟುಂಬಗಳು ಸರಕಾರ, ಜನಪ್ರತಿನಿಧಿಗಳ ಸಾಂತ್ವನವನ್ನು ಅಸಹಾಯಕರಾಗಿ ನಿರೀಕ್ಷಿಸುತ್ತಿರುವಾಗ ಈ ರೀತಿ ಕಠಿಣತೆ, ತಾರತಮ್ಯ, ನಿರ್ಲಕ್ಷವನ್ನು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಹೇಗೆ ಅರ್ಥೈಸುವುದು ?” ಎಂದು ಅವರು ಕೇಳಿದ್ದಾರೆ.

ಇದನ್ನೂ ಓದಿ: ಯುಪಿ ಮಾಡೆಲ್ ತರ್ತೀವಿ ಅನ್ನುವ ಬೊಮ್ಮಾಯಿಯವರೆ, ಯುಪಿ ಮಾಡೆಲ್ ಎಂದರೇನು ಗೊತ್ತೆ? 

“ಅಷ್ಟೆ ಅಲ್ಲದೆ ‘ಇವತ್ತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಶಾಂತಿ ಸಮಿತಿ ಸಭೆ ಇದೆ. ನಿಮ್ಮ ಮಸೀದಿ ಜಮಾತ್ ವ್ಯಾಪ್ತಿಯಿಂದ ತಲಾ ಮೂರು ಜನ ಪ್ರತಿನಿಧಿಗಳು ಬರಬೇಕು’ ಎಂದು ಪ್ರತಿಯೊಂದು ಮಸೀದಿಗಳಿಗೂ ಆಯಾಯ ಠಾಣೆಗಳಿಂದ ಕರೆಗಳು ಬರುತ್ತಿವೆ ಎಂದು ಮಾಹಿತಿ ಇದೆ. ರಾಜಕೀಯ ಪಕ್ಷಗಳಿಗೆ, ಸಾಮಾಜಿಕ ಸಂಘಟನೆಗಳಿಗೆ ಈವರಗೆ ಆಹ್ವಾನ ಬಂದಿಲ್ಲ. ಈ ರೀತಿಯ ಶಾಂತಿ ಸಭೆಯ ಉದ್ದೇಶ ಏನು? ನಾವು ಹೇಳುವುದನ್ಜು ಕೇಳಿಕೊಂಡು ಬಿದ್ದಿರಿ ಅಂತಲೇ?” ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಮಧ್ಯೆ ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ 21ಕ್ಕೂ ಅಧಿಕ ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾಗಿ ಮಂಗಳೂರು ನಗರ ಪೊಲೀಸ್ ಆಯುಕ್ತ ಶಶಿಕುಮಾರ್‌ ಅವರು ಹೇಳಿದ್ದಾರೆ. “ಎಲ್ಲರೂ ಶಂಕಿತರಾಗಿದ್ದು ಅವರ ಸಂಘಟನೆ ಅಥವಾ ಇತರ ಯಾವುದೇ ಲಿಂಕ್ ಮುಖ್ಯವಲ್ಲ” ಎಂದು ಪೊಲೀಸ್‌ ಆಯುಕ್ತ ಶಶಿಕುಮಾರ್ ತಿಳಿಸಿದ್ದಾರೆ ಎಂದು ವಾರ್ತಾಭಾರತಿ ವರದಿ ಮಾಡಿದೆ.

ಪೊಲೀಸರು ಫಾಝಿಲ್ ಕೊಲೆಯ ಶಂಕಿತರನ್ನು ವಶಕ್ಕೆ ಪಡೆಯುತ್ತಿದ್ದಂತೆ ಸ್ಥಳೀಯ ಬಿಜೆಪಿ ಶಾಸಕ ಡಾ. ಭರತ್ ಶೆಟ್ಟಿ,“ಕೊಲೆ ಮಾಡಿದ ಆರೋಪಿಗಳು ಬಳಸಿದ ವಾಹನ, ಸಿಸಿಟಿವಿ ಕ್ಯಾಮೆರಾ ದೃಶ್ಯಗಳು ನಿಮ್ಮ ಇಲಾಖೆಗೆ ಸಿಕ್ಕಿದ್ದರೂ, ನೈಜ ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವುದನ್ನು ಬಿಟ್ಟು, ಅಮಾಯಕ ಕಾರ್ಯಕರ್ತರನ್ನು ಎಳೆದುಕೊಂಡು ಹೋಗಿ ತನಿಖೆಯ ನೆಪದಲ್ಲಿ ಕಿರುಕುಳ ನೀಡಿದರೆ ಕಾರ್ಯಕರ್ತರ ಪರವಾಗಿ ನಿಮ್ಮ ಮುಖ್ಯ ಕಚೇರಿಯ ಎದುರು ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಂದು ಪೊಲೀಸ್ ಆಯುಕ್ತರಿಗೆ ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

“ಸಾಕ್ಷ್ಯಾಧಾರ ನಿಮ್ಮ ಕೈಯ್ಯಲ್ಲಿದೆ. ಆರೋಪಿಗಳನ್ನು ಬಂಧಿಸಿ, ಇದಕ್ಕೆ ನನ್ನ ಸಂಪೂರ್ಣ ಸಹಕಾರ ಇದೆ. ಆದರೆ ಅಮಾಯಕ ಕಾರ್ಯಕರ್ತರ ಮನೆಗೆ ನುಗ್ಗಿ, ಅವರ ಕುಟುಂಬದಲ್ಲಿ ಭೀತಿ ಹುಟ್ಟಿಸುವ ಕೆಲಸವನ್ನು ಪೊಲೀಸ್ ಇಲಾಖೆ ಮಾಡಬಾರದು. ಈ ಬಗ್ಗೆ ನನಗೆ ದೂರುಗಳು ಬರುತ್ತಿದ್ದು, ನಿಮ್ಮ ಅನುಚಿತ ವರ್ತನೆಯ ಬಗ್ಗೆ ಗೃಹ ಸಚಿವರಿಗೆ ದೂರು ನೀಡಲಿದ್ದೇನೆ. ನಾನು ಪದವಿಗಿಂತ ಕಾರ್ಯಕರ್ತರ ಹಿತವೇ ಮುಖ್ಯ ಎಂದು ಪರಿಗಣಿಸಿದ್ದೇನೆ. ಕಾರ್ಯಕರ್ತರ ಕುಟುಂಬಕ್ಕೆ ನೋವುಂಟು ಮಾಡಿದರೆ ಸಹಿಸಲಾಗದು. ತಕ್ಷಣ ನೈಜ ಆರೋಪಿಗಳ ಪತ್ತೆಗೆ ಕ್ರಮ ಜರುಗಿಸಿ” ಎಂದು ಹೇಳಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...