Homeಕರ್ನಾಟಕಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ಡಾ.ಬಿ.ಆರ್ ಅಂಬೇಡ್ಕರ್, ಕುವೆಂಪು, ಪೂರ್ಣಚಂದ್ರ ತೇಜಸ್ವಿ, ಜಿ.ಪಿ ರಾಜರತ್ನಂ ಸೇರಿದಂತೆ ಹಲವು ಮಹಾನೀಯರು ಹೇಳಿಕೆಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಕರ್ನಾಟಕದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ ಟ್ವಿಟರ್ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ. ಕೇಂದ್ರ-ರಾಜ್ಯ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿರುವ ಕನ್ನಡಿಗರು ಹಿಂದಿಗುಲಾಮಗಿರಿಬೇಡ ಹೆಸರಿನಲ್ಲಿ ನ್ಯಾಷನಲ್ ಟ್ರೆಂಡಿಂಗ್ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿತ್ತು. ಅದನ್ನು ಖಂಡಿಸಿ #ಹಿಂದಿಗುಲಾಮಗಿರಿಬೇಡ #No‌ToHindiSlavery ಹ್ಯಾಷ್‌ಟ್ಯಾಗ್ ಹೆಸರಿನಲ್ಲಿ ಟ್ವಿಟರ್ ಟ್ರೆಂಡಿಂಗ್‌ಗೆ ಕರವೇ ಕರೆ ನೀಡಿತ್ತು. #ಹಿಂದಿಗುಲಾಮಗಿರಿಬೇಡ ಹ್ಯಾಷ್‌ಟ್ಯಾಗ್ ರಾಷ್ಟ್ರಮಟ್ಟದಲ್ಲಿಯೇ 3 ನೇ ಸ್ಥಾನದಲ್ಲಿ ಟ್ರೆಂಡಿಂಗ್‌ ಆಗುತ್ತಿದ್ದು, ಕೇವಲ ಒಂದೂವರೆ ಗಂಟೆ ಸಮಯದಲ್ಲಿಯೇ 16 ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳು ದಾಖಲಾಗಿವೆ.

ಭಾರತ ಬಹುಭಾಷಿಕರ ದೇಶ. ವಿವಿಧ ಭಾಷಾ‌ಸಮುದಾಯಗಳ ಮೇಲೆ ಹಿಂದಿಯನ್ನು ಹೇರುವುದು ದೇಶ ಒಡೆಯುವ ನೀಚತನ.‌ ಇದಕ್ಕಿಂತ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ದೇಶ ಬಹುತ್ವದೊಂದಿಗೆ ಒಂದಾಗಿರಲು‌ ಬಿಡಿ. ಭಾರತ ಒಕ್ಕೂಟ ಬಲಗೊಳಿಸುವ ಕೆಲಸ ಮಾಡಿ. #ಹಿಂದಿಗುಲಾಮಗಿರಿಬೇಡ #No‌ToHindiSlavery ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ ಟ್ವೀಟ್ ಮಾಡಿದ್ದಾರೆ.

ಗುಜರಾತಿನ ಕಾರ್ಯಕ್ರಮದಲ್ಲಿ ಗುಜರಾತಿ ಭಾಷೆಯನ್ನು, ತಮಿಳುನಾಡಿನಲ್ಲಿ ತಮಿಳು ಭಾಷೆಯಲ್ಲಿ ಬ್ಯಾನರ್ ಮತ್ತು ಕಾರ್ಯಕ್ರಮ ನಡೆಸುವುದಾರೆ ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲಿ ನಡೆಸಲು ಏಕೆ ಸಾಧ್ಯವಿಲ್ಲ ಎಂದು ಅನಂತ್ ಮಹಾಜನ್ ಪ್ರಶ್ನಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ನಮ್ಮ ಭಾಷೆಯಲ್ಲಿ ಮಾತನಾಡಲು ಮತ್ತು ಜೀವಿಸುದಕ್ಕಾಗಿ ಹೋರಾಟ ಮಾಡಬೇಕಿರುವುದು ದುರಂತ. ಕರ್ನಾಟಕದಲ್ಲಿದ್ದಾಗ ಕನ್ನಡ ಕಲಿಯಿರಿ ಮತ್ತು ಮಾತನಾಡಿ. ಇದು ಕೇವಲ ಭಾವನೆಗಳ ವಿಷಯ ಮಾತ್ರವಲ್ಲ, ಹಿಂದಿ ಹೇರಿಕೆಯಿಂದಾಗಿ ಕಳೆದುಹೋದ ಉದ್ಯೋಗಗಳಿಗಾಗಿಯೂ ನಮ್ಮ ಹೋರಾಟದವಿದೆ ಎಂದು ಲಾವಣ್ಯ ಬಲ್ಲಾಳ್‌ರವರು ಟ್ವೀಟ್ ಮಾಡಿದ್ದಾರೆ.

ನೆಹರೂ ಕನ್ನಡಕ್ಕಿಂತ ದೊಡ್ಡವರಲ್ಲ. ಅವರು ಬೇಕಿದ್ದರೆ ಕನ್ನಡ ಕಲಿಯಲಿ ಅಥವಾ ಅವರ ಭಾಷಣಗಳನ್ನು ಕನ್ನಡಕ್ಕೆ ಭಾಷಾಂತರಿಸಲಿ ಎಂಬ ಕುವೆಂಪು ಹೇಳಿಕೆಯನ್ನು ಉಲ್ಲೇಖಿಸಿ ದಿನೇಶ್ ಕುಮಾರ್ ದಿನೂ ಟ್ವೀಟ್‌ ಮಾಡಿದ್ದಾರೆ. ಅದೇ ರೀತಿಯಾಗಿ ಡಾ.ಬಿ.ಆರ್ ಅಂಬೇಡ್ಕರ್, ಪೂರ್ಣಚಂದ್ರ ತೇಜಸ್ವಿ, ಜಿ.ಪಿ ರಾಜರತ್ನಂ ಸೇರಿದಂತೆ ಹಲವು ಮಹಾನೀಯರು ಹೇಳಿಕೆಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಆರ್ಟಿಕಲ್ 343 ಒಕ್ಕೂಟ ಸರ್ಕಾರದ ಅಧಿಕೃತ ಭಾಷೆ ದೇವನಾಗರಿ ಲಿಪಿಯಲ್ಲಿ ಹಿಂದಿಯಾಗಿರಬೇಕು ಎಂದು ಹೇಳುತ್ತದೆ. ಕೇವಲ ಹಿಂದಿ ಮಾತ್ರವೇ ಏಕೆ? ಆರ್ಟಿಕಲ್ 343 ಅನ್ನು ತಿದ್ದುಪಡಿ ಮಾಡಿ ಮತ್ತು ಎಲ್ಲಾ ಭಾರತೀಯ ಭಾಷೆಗಳನ್ನು 8 ನೇ ಶೆಡ್ಯೂಲ್‌ನಲ್ಲಿ ಅಧಿಕೃತ ಭಾಷೆಯಾಗಿ ಗುರುತಿಸಬೇಕು ಎಂದು ಅರುಣ್ ಜಾವಗಲ್ ಒತ್ತಾಯಿಸಿದ್ದಾರೆ.

ಕೆಲವು ಗಮನ ಸೆಳೆದ ಟ್ವೀಟ್‌ಗಳು ಇಲ್ಲಿವೆ.


ಇದನ್ನೂ ಓದಿ: ಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...