Homeಕರ್ನಾಟಕಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ಡಾ.ಬಿ.ಆರ್ ಅಂಬೇಡ್ಕರ್, ಕುವೆಂಪು, ಪೂರ್ಣಚಂದ್ರ ತೇಜಸ್ವಿ, ಜಿ.ಪಿ ರಾಜರತ್ನಂ ಸೇರಿದಂತೆ ಹಲವು ಮಹಾನೀಯರು ಹೇಳಿಕೆಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಕರ್ನಾಟಕದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ ಟ್ವಿಟರ್ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ. ಕೇಂದ್ರ-ರಾಜ್ಯ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿರುವ ಕನ್ನಡಿಗರು ಹಿಂದಿಗುಲಾಮಗಿರಿಬೇಡ ಹೆಸರಿನಲ್ಲಿ ನ್ಯಾಷನಲ್ ಟ್ರೆಂಡಿಂಗ್ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿತ್ತು. ಅದನ್ನು ಖಂಡಿಸಿ #ಹಿಂದಿಗುಲಾಮಗಿರಿಬೇಡ #No‌ToHindiSlavery ಹ್ಯಾಷ್‌ಟ್ಯಾಗ್ ಹೆಸರಿನಲ್ಲಿ ಟ್ವಿಟರ್ ಟ್ರೆಂಡಿಂಗ್‌ಗೆ ಕರವೇ ಕರೆ ನೀಡಿತ್ತು. #ಹಿಂದಿಗುಲಾಮಗಿರಿಬೇಡ ಹ್ಯಾಷ್‌ಟ್ಯಾಗ್ ರಾಷ್ಟ್ರಮಟ್ಟದಲ್ಲಿಯೇ 3 ನೇ ಸ್ಥಾನದಲ್ಲಿ ಟ್ರೆಂಡಿಂಗ್‌ ಆಗುತ್ತಿದ್ದು, ಕೇವಲ ಒಂದೂವರೆ ಗಂಟೆ ಸಮಯದಲ್ಲಿಯೇ 16 ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳು ದಾಖಲಾಗಿವೆ.

ಭಾರತ ಬಹುಭಾಷಿಕರ ದೇಶ. ವಿವಿಧ ಭಾಷಾ‌ಸಮುದಾಯಗಳ ಮೇಲೆ ಹಿಂದಿಯನ್ನು ಹೇರುವುದು ದೇಶ ಒಡೆಯುವ ನೀಚತನ.‌ ಇದಕ್ಕಿಂತ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ದೇಶ ಬಹುತ್ವದೊಂದಿಗೆ ಒಂದಾಗಿರಲು‌ ಬಿಡಿ. ಭಾರತ ಒಕ್ಕೂಟ ಬಲಗೊಳಿಸುವ ಕೆಲಸ ಮಾಡಿ. #ಹಿಂದಿಗುಲಾಮಗಿರಿಬೇಡ #No‌ToHindiSlavery ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ ಟ್ವೀಟ್ ಮಾಡಿದ್ದಾರೆ.

ಗುಜರಾತಿನ ಕಾರ್ಯಕ್ರಮದಲ್ಲಿ ಗುಜರಾತಿ ಭಾಷೆಯನ್ನು, ತಮಿಳುನಾಡಿನಲ್ಲಿ ತಮಿಳು ಭಾಷೆಯಲ್ಲಿ ಬ್ಯಾನರ್ ಮತ್ತು ಕಾರ್ಯಕ್ರಮ ನಡೆಸುವುದಾರೆ ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲಿ ನಡೆಸಲು ಏಕೆ ಸಾಧ್ಯವಿಲ್ಲ ಎಂದು ಅನಂತ್ ಮಹಾಜನ್ ಪ್ರಶ್ನಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ನಮ್ಮ ಭಾಷೆಯಲ್ಲಿ ಮಾತನಾಡಲು ಮತ್ತು ಜೀವಿಸುದಕ್ಕಾಗಿ ಹೋರಾಟ ಮಾಡಬೇಕಿರುವುದು ದುರಂತ. ಕರ್ನಾಟಕದಲ್ಲಿದ್ದಾಗ ಕನ್ನಡ ಕಲಿಯಿರಿ ಮತ್ತು ಮಾತನಾಡಿ. ಇದು ಕೇವಲ ಭಾವನೆಗಳ ವಿಷಯ ಮಾತ್ರವಲ್ಲ, ಹಿಂದಿ ಹೇರಿಕೆಯಿಂದಾಗಿ ಕಳೆದುಹೋದ ಉದ್ಯೋಗಗಳಿಗಾಗಿಯೂ ನಮ್ಮ ಹೋರಾಟದವಿದೆ ಎಂದು ಲಾವಣ್ಯ ಬಲ್ಲಾಳ್‌ರವರು ಟ್ವೀಟ್ ಮಾಡಿದ್ದಾರೆ.

ನೆಹರೂ ಕನ್ನಡಕ್ಕಿಂತ ದೊಡ್ಡವರಲ್ಲ. ಅವರು ಬೇಕಿದ್ದರೆ ಕನ್ನಡ ಕಲಿಯಲಿ ಅಥವಾ ಅವರ ಭಾಷಣಗಳನ್ನು ಕನ್ನಡಕ್ಕೆ ಭಾಷಾಂತರಿಸಲಿ ಎಂಬ ಕುವೆಂಪು ಹೇಳಿಕೆಯನ್ನು ಉಲ್ಲೇಖಿಸಿ ದಿನೇಶ್ ಕುಮಾರ್ ದಿನೂ ಟ್ವೀಟ್‌ ಮಾಡಿದ್ದಾರೆ. ಅದೇ ರೀತಿಯಾಗಿ ಡಾ.ಬಿ.ಆರ್ ಅಂಬೇಡ್ಕರ್, ಪೂರ್ಣಚಂದ್ರ ತೇಜಸ್ವಿ, ಜಿ.ಪಿ ರಾಜರತ್ನಂ ಸೇರಿದಂತೆ ಹಲವು ಮಹಾನೀಯರು ಹೇಳಿಕೆಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಆರ್ಟಿಕಲ್ 343 ಒಕ್ಕೂಟ ಸರ್ಕಾರದ ಅಧಿಕೃತ ಭಾಷೆ ದೇವನಾಗರಿ ಲಿಪಿಯಲ್ಲಿ ಹಿಂದಿಯಾಗಿರಬೇಕು ಎಂದು ಹೇಳುತ್ತದೆ. ಕೇವಲ ಹಿಂದಿ ಮಾತ್ರವೇ ಏಕೆ? ಆರ್ಟಿಕಲ್ 343 ಅನ್ನು ತಿದ್ದುಪಡಿ ಮಾಡಿ ಮತ್ತು ಎಲ್ಲಾ ಭಾರತೀಯ ಭಾಷೆಗಳನ್ನು 8 ನೇ ಶೆಡ್ಯೂಲ್‌ನಲ್ಲಿ ಅಧಿಕೃತ ಭಾಷೆಯಾಗಿ ಗುರುತಿಸಬೇಕು ಎಂದು ಅರುಣ್ ಜಾವಗಲ್ ಒತ್ತಾಯಿಸಿದ್ದಾರೆ.

ಕೆಲವು ಗಮನ ಸೆಳೆದ ಟ್ವೀಟ್‌ಗಳು ಇಲ್ಲಿವೆ.


ಇದನ್ನೂ ಓದಿ: ಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...