Homeಕರ್ನಾಟಕಅಕ್ರಮ ಪರಿಸರ ಲೂಟಿಗೆ ವಿರೋಧ: ಹೋರಾಟಗಾರ ಗಿರೀಶ್ ಆಚಾರ್ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ಅಕ್ರಮ ಪರಿಸರ ಲೂಟಿಗೆ ವಿರೋಧ: ಹೋರಾಟಗಾರ ಗಿರೀಶ್ ಆಚಾರ್ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ಎಸ್.ಆರ್ ಹಿರೇಮಠ್‌ರವರು ಶಿವಮೊಗ್ಗದ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ, ಗಿರೀಶ್ ಅವರ ಪ್ರಾಣಕ್ಕೆ ಅಪಾಯವಿರುವುದರಿಂದ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -
- Advertisement -

ಶಿವಮೊಗ್ಗದ ಹೊಸನಗರ ಭಾಗದಲ್ಲಿ ಅಕ್ರಮ ಜಲ್ಲಿ, ಮರಳು ಗಣಿಗಾರಿಕೆ, ಭೂ ಮಾಫಿಯಾ ಮತ್ತು ಟಿಂಬರ್ ಮಾಫಿಯಾ ವಿರುದ್ಧ ಹೋರಾಟ ನಡೆಸುತ್ತಿರುವ ಪರಿಸರ ಹೋರಾಟಗಾರ ಗಿರೀಶ್ ಆಚಾರ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಇದು ಅವರ ಮೇಲಿನ ನಾಲ್ಕನೇ ಹಲ್ಲೆಯಾಗಿದೆ ಎಂದು ಜನಸಂಗ್ರಾಮ ಪರಿಷತ್ ಆರೋಪಿಸಿದೆ.

ಕೆಲ ಉದ್ಯಮಿಗಳ ಕೂಟ ಮಲೆನಾಡಿನ ಪರಿಸರವನ್ನು ಲೂಟಿ ಮಾಡಲಾಗುತ್ತಿದೆ. ಈ ಎಲ್ಲಾ ಅಕ್ರಮಗಳ ವಿರುದ್ಧ ಗಿರೀಶ್ ಆಚಾರ್ ಕಳೆದ 20 ವರ್ಷಗಳಿಂದ ತೀವ್ರವಾದ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅಭಿವೃದ್ಧಿ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಪ್ರಕೃತಿ ನಾಶ ಮಾಡುವ ಅನೇಕ ಕಾಮಗಾರಿಗಳನ್ನು ಕಾನೂನಾತ್ಮಕವಾಗಿ ಪ್ರಶ್ನಿಸಿ ತಡೆಯೊಡ್ಡಿದ್ದಾರೆ. ಇದು ಗುತ್ತಿಗೆದಾರರ ಕೆಂಗಣ್ಣಿಗೆ ಗುರಿಯಾಗಿತ್ತು. ಹಾಗಾಗಿ ಜನಪ್ರತಿನಿಧಿಗಳು, ಪೊಲೀಸರು ಮತ್ತು ಗುತ್ತಿಗೆದಾರರ ಅಕ್ರಮ ಕೂಟ ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಜನ ಸಂಗ್ರಾಮ ಪರಿಷತ್‌ನ ಸಂಸ್ಥಾಪಕರಾದ ಎಸ್‌.ಆರ್ ಹಿರೇಮಠ್ ಸೇರಿದಂತೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ.

ಮಾ. 8 ರಂದು ಮಧ್ಯಾಹ್ನ ಕುಂದಾಪುರಕ್ಕೆ ಹೋಗುತ್ತಿದ್ದ ಗಿರೀಶ್ ಅವರನ್ನು, ಶಿವಮೊಗ್ಗದ ನಿಟ್ಟೂರು ಸಮೀಪವಿರುವ ಮತ್ತಿಮೆನೆ ಎಂಬಲ್ಲಿ ಥಳಿಸಿ ರಾಧಾ ಎಂಬುವವರ ಮನೆಗೆ ದುಷ್ಕರ್ಮಿಗಳಿಬ್ಬರು ಬಲವಂತವಾಗಿ ಎಳೆದೊಯ್ದಿದ್ದಾರೆ. ನಂತರ ಮನೆಗೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆ ಹೆಣ್ಣುಮಗಳ ಕೈಯಿಂದಲೇ ಸುಳ್ಳು ದೂರು ಕೊಡಿಸಿದ್ದಾರೆ. ಈ ವಿಷಯ ತಿಳಿದ ಪೊಲೀಸರು ಗಿರೀಶ್ ಅವರನ್ನು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ರಾತ್ರಿ 9 ಗಂಟೆಯವರೆಗೂ ಅವರ ಮೇಲೆ ಯಾವುದೆ ದೂರನ್ನು ದಾಖಲಿಸದೇ ಠಾಣೆಯಲ್ಲಿಯೇ ಇರಿಸಿಕೊಳ್ಳಲಾಗಿದೆ ಎಂದು ವೇದಿಕೆ ಆರೋಪಿಸಿದೆ.

ಘಟನೆ ನಡೆದ ನಂತರ ಎಸ್.ಆರ್ ಹಿರೇಮಠ್‌ರವರು ಶಿವಮೊಗ್ಗದ ಜಿಲ್ಲಾಧಿಕಾರಿಯನ್ನು ಖುದ್ದಾಗಿ ಭೇಟಿಯಾಗಿ, ಗಿರೀಶ್ ಅವರ ಮೇಲೆ ಮತ್ತೆ ಹಲ್ಲೆಯಾಗುವ ಸಾಧ್ಯತೆಯಿದ್ದು, ಅವರ ಪ್ರಾಣಕ್ಕೆ ಅಪಾಯವಿರುವುದರಿಂದ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ಜನಸಂಗ್ರಾಮ ಪರಿಷತ್ತಿನ ಸಕ್ರಿಯ ಸದಸ್ಯರಾದ ಗಿರೀಶ್ ಆಚಾರ್ ಅವರ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ಬೇಷರತ್ತಾಗಿ ಹಿಂಪಡೆಯಬೇಕು. ಅವರಿಗೆ ನಿರಂತರವಾಗಿ ರಕ್ಷಣೆ ನೀಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಗಿರೀಶ್ ಆಚಾರ್, “ಇದುವರೆಗೂ ನನ್ನ ಮೇಲೆ 4 ಬಾರಿ ಹಲ್ಲೆ ನಡೆದಿದೆ. ಈ ಕುರಿತು ಹಲವು ಬಾರಿ ಪೊಲೀಸರಿಗೆ, ಜಿಲ್ಲಾಧಿಕಾರಿಗೆ ದೂರು ನೀಡಿದ್ದೇನೆ. ಆದರೆ ಯಾವುದೂ ಉಪಯೋಗಕ್ಕೆ ಬಂದಿಲ್ಲ. ನಿನ್ನೆ (ಮಾ.8) ಶಿವಮೊಗ್ಗದ ಹೊಸನಗರ ಬಳಿ ಪಲ್ಸರ್ ಬೈಕ್‌ನಲ್ಲಿ ಬಂದವರು ನನ್ನನ್ನು ಅಡ್ಡಗಟ್ಟಿ ತೀವ್ರವಾಗಿ ಹಲ್ಲೆ ಮಾಡಿದರು. ನಂತರ ಮಹಿಳೆಯೊಬ್ಬಳ ಮನೆಗೆ ಬಲವಂತವಾಗಿ ಎಳೆದುಕೊಂಡು ಹೋದರು. ನಂತರ ಅ ಮಹಿಳೆಯಿಂದಲೆ ಮಹಿಳಾ ದೌರ್ಜನ್ಯದ ಪ್ರಕರಣದ ದಾಖಲಿಸಿದ್ದಾರೆ” ಎಂದರು.

“ನಂತರ ನನ್ನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಅಲ್ಲಿ ನಾನು ದೂರು ನೀಡಿದರೂ ಅದನ್ನು ಪೊಲೀಸರು ಸ್ವೀಕರಿಸಲಿಲ್ಲ. ಯಾವುದೋ ಹಳೆ ಪ್ರಕರಣ ಎಂದು ನೋಟಿಸ್ ನೀಡಿದ್ದಾರೆ. ಈಗ ನಾನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಮೇಲೆ ನಡೆದಿರುವ ಹಲ್ಲೆಯ ಸಿಸಿ ಟಿವಿ ದೃಶ್ಯಾವಳಿಗಳು ಸಿಕ್ಕಿವೆ. ಇದರ ಆಧಾರದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.


ಇದನ್ನೂ ಓದಿ: ವೀರಶೈವ ಲಿಂಗಾಯತ, ಒಕ್ಕಲಿಗರ ನಿಗಮ ಸ್ಥಾಪನೆಯನ್ನು ಸ್ವಾಗತಿಸುತ್ತೇನೆ: ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...