Homeಕರ್ನಾಟಕಅಕ್ರಮ ಪರಿಸರ ಲೂಟಿಗೆ ವಿರೋಧ: ಹೋರಾಟಗಾರ ಗಿರೀಶ್ ಆಚಾರ್ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ಅಕ್ರಮ ಪರಿಸರ ಲೂಟಿಗೆ ವಿರೋಧ: ಹೋರಾಟಗಾರ ಗಿರೀಶ್ ಆಚಾರ್ ಮೇಲಿನ ಹಲ್ಲೆಗೆ ತೀವ್ರ ಖಂಡನೆ

ಎಸ್.ಆರ್ ಹಿರೇಮಠ್‌ರವರು ಶಿವಮೊಗ್ಗದ ಜಿಲ್ಲಾಧಿಕಾರಿಯನ್ನು ಭೇಟಿಯಾಗಿ, ಗಿರೀಶ್ ಅವರ ಪ್ರಾಣಕ್ಕೆ ಅಪಾಯವಿರುವುದರಿಂದ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

- Advertisement -
- Advertisement -

ಶಿವಮೊಗ್ಗದ ಹೊಸನಗರ ಭಾಗದಲ್ಲಿ ಅಕ್ರಮ ಜಲ್ಲಿ, ಮರಳು ಗಣಿಗಾರಿಕೆ, ಭೂ ಮಾಫಿಯಾ ಮತ್ತು ಟಿಂಬರ್ ಮಾಫಿಯಾ ವಿರುದ್ಧ ಹೋರಾಟ ನಡೆಸುತ್ತಿರುವ ಪರಿಸರ ಹೋರಾಟಗಾರ ಗಿರೀಶ್ ಆಚಾರ್ ಮೇಲೆ ಅಪರಿಚಿತ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದು, ಇದು ಅವರ ಮೇಲಿನ ನಾಲ್ಕನೇ ಹಲ್ಲೆಯಾಗಿದೆ ಎಂದು ಜನಸಂಗ್ರಾಮ ಪರಿಷತ್ ಆರೋಪಿಸಿದೆ.

ಕೆಲ ಉದ್ಯಮಿಗಳ ಕೂಟ ಮಲೆನಾಡಿನ ಪರಿಸರವನ್ನು ಲೂಟಿ ಮಾಡಲಾಗುತ್ತಿದೆ. ಈ ಎಲ್ಲಾ ಅಕ್ರಮಗಳ ವಿರುದ್ಧ ಗಿರೀಶ್ ಆಚಾರ್ ಕಳೆದ 20 ವರ್ಷಗಳಿಂದ ತೀವ್ರವಾದ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಅಭಿವೃದ್ಧಿ ಎಂಬ ಹೆಸರಿನಲ್ಲಿ ನಡೆಯುತ್ತಿರುವ ಪ್ರಕೃತಿ ನಾಶ ಮಾಡುವ ಅನೇಕ ಕಾಮಗಾರಿಗಳನ್ನು ಕಾನೂನಾತ್ಮಕವಾಗಿ ಪ್ರಶ್ನಿಸಿ ತಡೆಯೊಡ್ಡಿದ್ದಾರೆ. ಇದು ಗುತ್ತಿಗೆದಾರರ ಕೆಂಗಣ್ಣಿಗೆ ಗುರಿಯಾಗಿತ್ತು. ಹಾಗಾಗಿ ಜನಪ್ರತಿನಿಧಿಗಳು, ಪೊಲೀಸರು ಮತ್ತು ಗುತ್ತಿಗೆದಾರರ ಅಕ್ರಮ ಕೂಟ ಅವರ ಮೇಲೆ ಹಲ್ಲೆ ನಡೆಸಿದೆ ಎಂದು ಜನ ಸಂಗ್ರಾಮ ಪರಿಷತ್‌ನ ಸಂಸ್ಥಾಪಕರಾದ ಎಸ್‌.ಆರ್ ಹಿರೇಮಠ್ ಸೇರಿದಂತೆ ಅನೇಕರು ಖಂಡನೆ ವ್ಯಕ್ತಪಡಿಸಿದ್ದಾರೆ.

ಮಾ. 8 ರಂದು ಮಧ್ಯಾಹ್ನ ಕುಂದಾಪುರಕ್ಕೆ ಹೋಗುತ್ತಿದ್ದ ಗಿರೀಶ್ ಅವರನ್ನು, ಶಿವಮೊಗ್ಗದ ನಿಟ್ಟೂರು ಸಮೀಪವಿರುವ ಮತ್ತಿಮೆನೆ ಎಂಬಲ್ಲಿ ಥಳಿಸಿ ರಾಧಾ ಎಂಬುವವರ ಮನೆಗೆ ದುಷ್ಕರ್ಮಿಗಳಿಬ್ಬರು ಬಲವಂತವಾಗಿ ಎಳೆದೊಯ್ದಿದ್ದಾರೆ. ನಂತರ ಮನೆಗೆ ಅತಿಕ್ರಮ ಪ್ರವೇಶ ಮಾಡಿದ್ದಾರೆ ಎಂದು ಆ ಹೆಣ್ಣುಮಗಳ ಕೈಯಿಂದಲೇ ಸುಳ್ಳು ದೂರು ಕೊಡಿಸಿದ್ದಾರೆ. ಈ ವಿಷಯ ತಿಳಿದ ಪೊಲೀಸರು ಗಿರೀಶ್ ಅವರನ್ನು ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ರಾತ್ರಿ 9 ಗಂಟೆಯವರೆಗೂ ಅವರ ಮೇಲೆ ಯಾವುದೆ ದೂರನ್ನು ದಾಖಲಿಸದೇ ಠಾಣೆಯಲ್ಲಿಯೇ ಇರಿಸಿಕೊಳ್ಳಲಾಗಿದೆ ಎಂದು ವೇದಿಕೆ ಆರೋಪಿಸಿದೆ.

ಘಟನೆ ನಡೆದ ನಂತರ ಎಸ್.ಆರ್ ಹಿರೇಮಠ್‌ರವರು ಶಿವಮೊಗ್ಗದ ಜಿಲ್ಲಾಧಿಕಾರಿಯನ್ನು ಖುದ್ದಾಗಿ ಭೇಟಿಯಾಗಿ, ಗಿರೀಶ್ ಅವರ ಮೇಲೆ ಮತ್ತೆ ಹಲ್ಲೆಯಾಗುವ ಸಾಧ್ಯತೆಯಿದ್ದು, ಅವರ ಪ್ರಾಣಕ್ಕೆ ಅಪಾಯವಿರುವುದರಿಂದ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ಸಿಡಿ ಪ್ರಕರಣ: ಸಿಡಿ ನಕಲಿ, ನಾನು ನಿರಪರಾಧಿ ಎಂದು ರಮೇಶ್ ಜಾರಕಿಹೊಳಿ

ಜನಸಂಗ್ರಾಮ ಪರಿಷತ್ತಿನ ಸಕ್ರಿಯ ಸದಸ್ಯರಾದ ಗಿರೀಶ್ ಆಚಾರ್ ಅವರ ಮೇಲೆ ದಾಖಲಾಗಿರುವ ಸುಳ್ಳು ಪ್ರಕರಣಗಳನ್ನು ಬೇಷರತ್ತಾಗಿ ಹಿಂಪಡೆಯಬೇಕು. ಅವರಿಗೆ ನಿರಂತರವಾಗಿ ರಕ್ಷಣೆ ನೀಡಬೇಕು. ಇಲ್ಲದಿದ್ದರೆ ರಾಜ್ಯದಾದ್ಯಂತ ತೀವ್ರ ಹೋರಾಟ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಗಿರೀಶ್ ಆಚಾರ್, “ಇದುವರೆಗೂ ನನ್ನ ಮೇಲೆ 4 ಬಾರಿ ಹಲ್ಲೆ ನಡೆದಿದೆ. ಈ ಕುರಿತು ಹಲವು ಬಾರಿ ಪೊಲೀಸರಿಗೆ, ಜಿಲ್ಲಾಧಿಕಾರಿಗೆ ದೂರು ನೀಡಿದ್ದೇನೆ. ಆದರೆ ಯಾವುದೂ ಉಪಯೋಗಕ್ಕೆ ಬಂದಿಲ್ಲ. ನಿನ್ನೆ (ಮಾ.8) ಶಿವಮೊಗ್ಗದ ಹೊಸನಗರ ಬಳಿ ಪಲ್ಸರ್ ಬೈಕ್‌ನಲ್ಲಿ ಬಂದವರು ನನ್ನನ್ನು ಅಡ್ಡಗಟ್ಟಿ ತೀವ್ರವಾಗಿ ಹಲ್ಲೆ ಮಾಡಿದರು. ನಂತರ ಮಹಿಳೆಯೊಬ್ಬಳ ಮನೆಗೆ ಬಲವಂತವಾಗಿ ಎಳೆದುಕೊಂಡು ಹೋದರು. ನಂತರ ಅ ಮಹಿಳೆಯಿಂದಲೆ ಮಹಿಳಾ ದೌರ್ಜನ್ಯದ ಪ್ರಕರಣದ ದಾಖಲಿಸಿದ್ದಾರೆ” ಎಂದರು.

“ನಂತರ ನನ್ನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಹೋದರು. ಅಲ್ಲಿ ನಾನು ದೂರು ನೀಡಿದರೂ ಅದನ್ನು ಪೊಲೀಸರು ಸ್ವೀಕರಿಸಲಿಲ್ಲ. ಯಾವುದೋ ಹಳೆ ಪ್ರಕರಣ ಎಂದು ನೋಟಿಸ್ ನೀಡಿದ್ದಾರೆ. ಈಗ ನಾನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದೇನೆ. ನನ್ನ ಮೇಲೆ ನಡೆದಿರುವ ಹಲ್ಲೆಯ ಸಿಸಿ ಟಿವಿ ದೃಶ್ಯಾವಳಿಗಳು ಸಿಕ್ಕಿವೆ. ಇದರ ಆಧಾರದಲ್ಲಿ ಮುಂದಿನ ಕಾನೂನು ಕ್ರಮ ಕೈಗೊಳ್ಳುತ್ತೇವೆ” ಎಂದು ತಿಳಿಸಿದರು.


ಇದನ್ನೂ ಓದಿ: ವೀರಶೈವ ಲಿಂಗಾಯತ, ಒಕ್ಕಲಿಗರ ನಿಗಮ ಸ್ಥಾಪನೆಯನ್ನು ಸ್ವಾಗತಿಸುತ್ತೇನೆ: ಬಜೆಟ್ ವಿಶ್ಲೇಷಣೆ ಮಾಡಿದ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...