Homeಕರ್ನಾಟಕಒಳಮೀಸಲಾತಿಗೆ ವಿರೋಧ; ಶಹಾಪುರದಲ್ಲಿ ನಿಷೇಧಾಜ್ಞೆ ಜಾರಿ

ಒಳಮೀಸಲಾತಿಗೆ ವಿರೋಧ; ಶಹಾಪುರದಲ್ಲಿ ನಿಷೇಧಾಜ್ಞೆ ಜಾರಿ

- Advertisement -
- Advertisement -

ಒಳಮೀಸಲಾತಿ ಜಾರಿಗೊಳಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಮಾಡಿರುವ ಬೆನ್ನಲ್ಲೇ ವಿರೋಧಗಳೂ ವ್ಯಕ್ತವಾಗುತ್ತಿವೆ. ಪರಿಶಿಷ್ಟ ಜಾತಿಯೊಳಗಿನ ಮಾದಿಗ ಸಮುದಾಯಕ್ಕೆ ಶೇ.6, ಹೊಲೆಯ ಸಮುದಾಯಕ್ಕೆ ಶೇ.5.5, ಸ್ಪೃಶ್ಯ ಪಟ್ಟಿಯಲ್ಲಿನ ಬೋವಿ, ಬಂಜಾರ, ಕೊರಚ, ಕೊರಮ ಸಮುದಾಯಗಳಿಗೆ ಶೇ.4.5, ಇತರೆ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿಯನ್ನು ನೀಡುವುದಾಗಿ ಘೋಷಿಸಲಾಗಿದ್ದು, ಬಂಜಾರ ಸಮುದಾಯ ಹೋರಾಟಕ್ಕಿಳಿದಿದೆ.

ರಾಜ್ಯ ವಿವಿಧೆಡೆ ಹೋರಾಟಗಳು ನಡೆಯುತ್ತಿದ್ದು ಮೀಸಲು ಸಂರಕ್ಷಣಾ ಒಕ್ಕೂಟ ಶಹಾಪುರ ನಗರದಲ್ಲಿ ಗುರುವಾರ ಪ್ರತಿಭಟನೆಗೆ ಕರೆ ನೀಡಿತ್ತು. ಆದರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್‌.ಸ್ನೇಹಲ್ ಆದೇಶ ಹೊರಡಿಸಿದ್ದಾರೆ.‌

“ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 14ರನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಶಹಾಪುರ ನಗರದ ಬಸವೇಶ್ವರ ವೃತ್ತದಿಂದ ಹೊಸ ತಹಶೀಲ್ದಾರ್ ಕಾರ್ಯಾಲಯದವರೆಗೆ ಕಾಲ್ನಡಿಗೆಯಲ್ಲಿ ಬೃಹತ್‌ ಪ್ರತಿಭಟನಾ ರ್‍ಯಾಲಿಯನ್ನು ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಗೆ ಶಹಾಪುರ, ವಡಗೇರಾ ತಾಲ್ಲೂಕುಗಳ ವ್ಯಾಪ್ತಿಯ ಹಾಗೂ ಯಾದಗಿರಿ ಜಿಲ್ಲೆಯ ಕೆಲವು ತಾಂಡಾಗಳಿಂದ ಜನರು ಆಗಮಿಸುವ ಸಾಧ್ಯತೆ ಇತ್ತು.

“ಈ ಸಂದರ್ಭದಲ್ಲಿ ಶಾಂತಿ ಕದಡಿ ಸಾರ್ವಜನಿಕರ ಆಸ್ತಿ- ಪಾಸ್ತಿಗೆ ನಷ್ಟ ಉಂಟಾಗುವ ಸಾದ್ಯತೆಗಳಿರುತ್ತವೆ. ಅಲ್ಲದೆ ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತ್ತು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿರುವುದರಿಂದ ಶಹಾಪುರ ನಗರ ಮತ್ತು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಶಹಾಪುರ ನಗರದಾದ್ಯಂತ ಹಾಗೂ ಶಹಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಾರಿಗೊಳಿಸಬೇಕು” ಎಂದು ಪೊಲೀಸರು ಜಿಲ್ಲಾಧಿಕಾರಿಗೆ ಪತ್ರ ಬರೆದ್ದರು. ಈ ಹಿನ್ನೆಲೆಯನ್ನು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.‌

“ಶಹಾಪುರ ನಗರದಲ್ಲಿ ಮತ್ತು ಶಹಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚಿನ ಯಾವುದೇ ವ್ಯಕ್ತಿ, ಗುಂಪು ಕೂಡುವುದು, ಮೆರವಣಿಗೆ ಸಭೆ ಸಮಾರಂಭ ಬಹಿರಂಗ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ. ಯಾವುದೇ ಮಾರಕಾಸ್ತ್ರಗಳನ್ನು (ಬಂದೂಕು, ಭರ್ಚಿ, ಕತ್ತಿ, ಚಾಕು, ಕುಡುಗೋಲು, ಕೊಡಲಿ, ಬಡಿಗೆ, ಇತ್ಯಾದಿ) ಮತ್ತು ಸ್ಫೋಟಕ ವಸ್ತುಗಳನ್ನು ಸಂಗಡ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಭಾಷಣ, ಕೂಗಾಡುವುದು, ಹಾಡುವುದು, ವಾದ್ಯ ಬಾರಿಸುವುದು, ಅಣಕವಾಡುವುದು ಮುಂತಾದ ಕಾರ್ಯಗಳನ್ನು ನಿಷೇಧಿಸಲಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಾಯ್ದೆ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಆದೇಶ ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶಿಸಿದ್ದಾರೆ.

ಇದನ್ನೂ ಓದಿರಿ: ಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

ಇತ್ತೀಚೆಗೆ ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಕಲ್ಲು ತೂರಾಟ ಮಾಡಲಾಗಿತ್ತು.

ಪ್ರತಿಭಟನಾಕಾರರು ಮಾಜಿ  ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದರು. ಆದರೆ ಕೆಲವು ಕಿಡಿಗೇಡಿಗಳು ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕಲ್ಲು ತೂರಾಟದಿಂದ ಮನೆಯ ಕಿಟಕಿ ಗಾಜಿಗೆ ಹಾನಿಯಾಗಿತ್ತು. ತಡೆಯಲು ಬಂದ ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಲಾಗಿತ್ತು. ಯಡಿಯೂರಪ್ಪ ನಿವಾಸದ ಮುಂದೆ ಹಾಕಲಾಗಿದ್ದ ಬ್ಯಾನರ್​ಗಳನ್ನು ಸಹ ಹರಿದು ಹಾಕಲಾಗಿತ್ತು. ನಿವಾಸದ ಮೇಲೆ ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದರು.

ಈ ವೇಳೆ ಪಟ್ಟಣದಲ್ಲಿ ಹಾಕಲಾಗಿದ್ದ ಬಿಜೆಪಿ, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಬ್ಯಾನರ್, ಫ್ಲೆಕ್ಸ್‌ಗಳನ್ನು ಕಿತ್ತೊಗೆದಿದ್ದರು. ಟೈರ್‌, ಸೀರೆಗಳಿಗೆ ಬೆಂಕಿ ಹಚ್ಚಿ,  ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು. ಘಟನೆಯಲ್ಲಿ ಪ್ರತಿಭಟನಾಕಾರರು ಮತ್ತು ಕೆಲವು ಪೊಲೀಸರು ಗಾಯಗೊಂಡಿದ್ದರು ಎಂದು ವರದಿಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...