Homeಕರ್ನಾಟಕಒಳಮೀಸಲಾತಿಗೆ ವಿರೋಧ; ಶಹಾಪುರದಲ್ಲಿ ನಿಷೇಧಾಜ್ಞೆ ಜಾರಿ

ಒಳಮೀಸಲಾತಿಗೆ ವಿರೋಧ; ಶಹಾಪುರದಲ್ಲಿ ನಿಷೇಧಾಜ್ಞೆ ಜಾರಿ

- Advertisement -
- Advertisement -

ಒಳಮೀಸಲಾತಿ ಜಾರಿಗೊಳಿಸುವ ಪ್ರಸ್ತಾಪವನ್ನು ರಾಜ್ಯ ಸರ್ಕಾರ ಮಾಡಿರುವ ಬೆನ್ನಲ್ಲೇ ವಿರೋಧಗಳೂ ವ್ಯಕ್ತವಾಗುತ್ತಿವೆ. ಪರಿಶಿಷ್ಟ ಜಾತಿಯೊಳಗಿನ ಮಾದಿಗ ಸಮುದಾಯಕ್ಕೆ ಶೇ.6, ಹೊಲೆಯ ಸಮುದಾಯಕ್ಕೆ ಶೇ.5.5, ಸ್ಪೃಶ್ಯ ಪಟ್ಟಿಯಲ್ಲಿನ ಬೋವಿ, ಬಂಜಾರ, ಕೊರಚ, ಕೊರಮ ಸಮುದಾಯಗಳಿಗೆ ಶೇ.4.5, ಇತರೆ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿಯನ್ನು ನೀಡುವುದಾಗಿ ಘೋಷಿಸಲಾಗಿದ್ದು, ಬಂಜಾರ ಸಮುದಾಯ ಹೋರಾಟಕ್ಕಿಳಿದಿದೆ.

ರಾಜ್ಯ ವಿವಿಧೆಡೆ ಹೋರಾಟಗಳು ನಡೆಯುತ್ತಿದ್ದು ಮೀಸಲು ಸಂರಕ್ಷಣಾ ಒಕ್ಕೂಟ ಶಹಾಪುರ ನಗರದಲ್ಲಿ ಗುರುವಾರ ಪ್ರತಿಭಟನೆಗೆ ಕರೆ ನೀಡಿತ್ತು. ಆದರೆ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಆರ್‌.ಸ್ನೇಹಲ್ ಆದೇಶ ಹೊರಡಿಸಿದ್ದಾರೆ.‌

“ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ, ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ ಪಾಲನೆಗಾಗಿ ಗುರುವಾರ ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ದಂಡ ಪ್ರಕ್ರಿಯೆ ಸಂಹಿತೆ 1973ರ ಕಲಂ 14ರನ್ವಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ” ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಶಹಾಪುರ ನಗರದ ಬಸವೇಶ್ವರ ವೃತ್ತದಿಂದ ಹೊಸ ತಹಶೀಲ್ದಾರ್ ಕಾರ್ಯಾಲಯದವರೆಗೆ ಕಾಲ್ನಡಿಗೆಯಲ್ಲಿ ಬೃಹತ್‌ ಪ್ರತಿಭಟನಾ ರ್‍ಯಾಲಿಯನ್ನು ಗುರುವಾರ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಹಮ್ಮಿಕೊಳ್ಳಲಾಗಿತ್ತು. ಈ ಪ್ರತಿಭಟನೆಗೆ ಶಹಾಪುರ, ವಡಗೇರಾ ತಾಲ್ಲೂಕುಗಳ ವ್ಯಾಪ್ತಿಯ ಹಾಗೂ ಯಾದಗಿರಿ ಜಿಲ್ಲೆಯ ಕೆಲವು ತಾಂಡಾಗಳಿಂದ ಜನರು ಆಗಮಿಸುವ ಸಾಧ್ಯತೆ ಇತ್ತು.

“ಈ ಸಂದರ್ಭದಲ್ಲಿ ಶಾಂತಿ ಕದಡಿ ಸಾರ್ವಜನಿಕರ ಆಸ್ತಿ- ಪಾಸ್ತಿಗೆ ನಷ್ಟ ಉಂಟಾಗುವ ಸಾದ್ಯತೆಗಳಿರುತ್ತವೆ. ಅಲ್ಲದೆ ಪ್ರಸ್ತುತ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಮತ್ತು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳು ನಡೆಯುತ್ತಿರುವುದರಿಂದ ಶಹಾಪುರ ನಗರ ಮತ್ತು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಶಹಾಪುರ ನಗರದಾದ್ಯಂತ ಹಾಗೂ ಶಹಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಜಾರಿಗೊಳಿಸಬೇಕು” ಎಂದು ಪೊಲೀಸರು ಜಿಲ್ಲಾಧಿಕಾರಿಗೆ ಪತ್ರ ಬರೆದ್ದರು. ಈ ಹಿನ್ನೆಲೆಯನ್ನು ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.‌

“ಶಹಾಪುರ ನಗರದಲ್ಲಿ ಮತ್ತು ಶಹಾಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಾಲ್ಕು ಅಥವಾ ನಾಲ್ಕಕ್ಕಿಂತ ಹೆಚ್ಚಿನ ಯಾವುದೇ ವ್ಯಕ್ತಿ, ಗುಂಪು ಕೂಡುವುದು, ಮೆರವಣಿಗೆ ಸಭೆ ಸಮಾರಂಭ ಬಹಿರಂಗ ಘೋಷಣೆ ಕೂಗುವುದನ್ನು ನಿಷೇಧಿಸಲಾಗಿದೆ. ಯಾವುದೇ ಮಾರಕಾಸ್ತ್ರಗಳನ್ನು (ಬಂದೂಕು, ಭರ್ಚಿ, ಕತ್ತಿ, ಚಾಕು, ಕುಡುಗೋಲು, ಕೊಡಲಿ, ಬಡಿಗೆ, ಇತ್ಯಾದಿ) ಮತ್ತು ಸ್ಫೋಟಕ ವಸ್ತುಗಳನ್ನು ಸಂಗಡ ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಸಾರ್ವಜನಿಕವಾಗಿ ಭಾಷಣ, ಕೂಗಾಡುವುದು, ಹಾಡುವುದು, ವಾದ್ಯ ಬಾರಿಸುವುದು, ಅಣಕವಾಡುವುದು ಮುಂತಾದ ಕಾರ್ಯಗಳನ್ನು ನಿಷೇಧಿಸಲಾಗಿದೆ. ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗದಂತೆ ಸಂಬಂಧಿಸಿದ ಅಧಿಕಾರಿಗಳು ಸೂಕ್ತ ಕ್ರಮ ವಹಿಸಬೇಕು. ಈ ಆದೇಶವನ್ನು ಉಲ್ಲಂಘಿಸಿದವರ ವಿರುದ್ಧ ಕಾಯ್ದೆ ಪ್ರಕಾರ ಸೂಕ್ತ ಕ್ರಮ ಜರುಗಿಸಲಾಗುವುದು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಈ ಆದೇಶ ಪರಿಣಾಮಕಾರಿಯಾಗಿ ಜಾರಿಗೆ ಬರುವಂತೆ ಕ್ರಮ ಕೈಗೊಳ್ಳಬೇಕು” ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ಆದೇಶಿಸಿದ್ದಾರೆ.

ಇದನ್ನೂ ಓದಿರಿ: ಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

ಇತ್ತೀಚೆಗೆ ಶಿಕಾರಿಪುರದಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮನೆಗೆ ಕಲ್ಲು ತೂರಾಟ ಮಾಡಲಾಗಿತ್ತು.

ಪ್ರತಿಭಟನಾಕಾರರು ಮಾಜಿ  ಬಿ.ಎಸ್.ಯಡಿಯೂರಪ್ಪರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದರು. ಆದರೆ ಕೆಲವು ಕಿಡಿಗೇಡಿಗಳು ಯಡಿಯೂರಪ್ಪನವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಕಲ್ಲು ತೂರಾಟದಿಂದ ಮನೆಯ ಕಿಟಕಿ ಗಾಜಿಗೆ ಹಾನಿಯಾಗಿತ್ತು. ತಡೆಯಲು ಬಂದ ಪೊಲೀಸರ ಮೇಲೂ ಕಲ್ಲು ತೂರಾಟ ಮಾಡಲಾಗಿತ್ತು. ಯಡಿಯೂರಪ್ಪ ನಿವಾಸದ ಮುಂದೆ ಹಾಕಲಾಗಿದ್ದ ಬ್ಯಾನರ್​ಗಳನ್ನು ಸಹ ಹರಿದು ಹಾಕಲಾಗಿತ್ತು. ನಿವಾಸದ ಮೇಲೆ ಚಪ್ಪಲಿ ಎಸೆದು ಆಕ್ರೋಶ ಹೊರಹಾಕಿದ್ದರು.

ಈ ವೇಳೆ ಪಟ್ಟಣದಲ್ಲಿ ಹಾಕಲಾಗಿದ್ದ ಬಿಜೆಪಿ, ಪ್ರಧಾನಿ ಮೋದಿ, ಮುಖ್ಯಮಂತ್ರಿ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರ ಬ್ಯಾನರ್, ಫ್ಲೆಕ್ಸ್‌ಗಳನ್ನು ಕಿತ್ತೊಗೆದಿದ್ದರು. ಟೈರ್‌, ಸೀರೆಗಳಿಗೆ ಬೆಂಕಿ ಹಚ್ಚಿ,  ಆಕ್ರೋಶ ವ್ಯಕ್ತಪಡಿಸಿದ್ದರು. ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿದ್ದರು. ಘಟನೆಯಲ್ಲಿ ಪ್ರತಿಭಟನಾಕಾರರು ಮತ್ತು ಕೆಲವು ಪೊಲೀಸರು ಗಾಯಗೊಂಡಿದ್ದರು ಎಂದು ವರದಿಯಾಗಿತ್ತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...