Homeಮುಖಪುಟಉತ್ತರ ಕನ್ನಡದಲ್ಲಿ ಕ್ಯಾಸಿನೋ ಜೂಜಾಟ ಶುರುಮಾಡುವ ಸಚಿವ ಹೆಬ್ಬಾರ್ ಹೇಳಿಕೆಗೆ ವಿರೋಧ

ಉತ್ತರ ಕನ್ನಡದಲ್ಲಿ ಕ್ಯಾಸಿನೋ ಜೂಜಾಟ ಶುರುಮಾಡುವ ಸಚಿವ ಹೆಬ್ಬಾರ್ ಹೇಳಿಕೆಗೆ ವಿರೋಧ

- Advertisement -
- Advertisement -

ಉತ್ತರ ಕನ್ನಡದಲ್ಲಿ ಕ್ಯಾಸಿನೋ (ನದಿಯಲ್ಲಿರುವ ಬೃಹತ್ ಬೋಟಲ್ಲಿ ನಡೆಯುವ ಜೂಜು-ಮೋಜು) ಶುರು ಮಾಡುವ ಸಚಿವ ಶಿವರಾಮ್ ಹೆಬ್ಬಾರ್ ಹೇಳಿಕೆಗೆ ಜಿಲ್ಲೆಯಲ್ಲಿ ವಿರೋಧದ ಅಲೆಯೆದ್ದಿದೆ. ಕಾರವಾರ, ಅಂಕೋಲಾ, ಯಲ್ಲಾಪುರ, ಮುಂಡಗೋಡಿನವರು ಗೋವಾಕ್ಕೆ ಹೋಗಿ ಕ್ಯಾಸಿನೋ ಆಡಿ ಬರುತ್ತಾರೆ. ಇಲ್ಲಿ ಕ್ಯಾಸಿನೋ ಆರಂಭಿಸಿದರೆ ಸಂಸ್ಕೃತಿ ಹಾಳಾಗುತ್ತದೆ, ಹಾಗೆ-ಹೀಗೆ ಎಂದು ಆಕ್ಷೇಪ ವ್ಯಕ್ತ ಪಡಿಸಲಾಗುತ್ತದೆ. ಇಂಥ ದ್ವಂದ್ವವೆ ಉತ್ತರ ಕನ್ನಡದ ಪ್ರವಾಸೋದ್ಯಮ ಅಭಿವೃದ್ಧಿ ಹಿನ್ನಡೆಗೆ ಕಾರಣ. ಗೋವಾ ಸರಕಾರಕ್ಕೆ ಕ್ಯಾಸಿನೋದಿಂದ ಪ್ರತಿ ವರ್ಷ 696 ಕೋಟಿ ರೂ ಆದಾಯ ಬರುತ್ತಿದೆ. 3000 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಸಿಕ್ಕಿದೆ ಎಂದು ಸಚಿವ ಹೆಬ್ಬಾರ್ ಹೇಳಿಕೆ ನೀಡಿದ್ದರು.

ಜಿಲ್ಲೆ ಜನರು ಇಂಥ ಇಬ್ಬಂದಿತನ ಬಿಟ್ಟು ಸಹಕರಿಸದರೆ ಪ್ರವಾಸೋದ್ಯಮ ದೊಡ್ಡ ಮಟ್ಟದಲ್ಲಿ ಅಭಿವೃದ್ದಿ ಸಾಧಿಸಬಹುದು. ಪ್ರವಾಸೋದ್ಯಮ ಮಂತ್ರಿಯನ್ನು ಜಿಲ್ಲೆಗೆ ಕರೆತಂದು ಕ್ಯಾಸಿನೋ ಸೆರಿದಂತೆ ಬೇರೆ-ಬೇರೆ ಪ್ರವಾಸೋದ್ಯಮ ಉತ್ತೇಜನದ ಕುರಿತು ಚರ್ಚಿಸಲಾಗುತ್ತದೆ. ಗೋವಾ ಅಭಿವೃದ್ದಿಗೆ ದೊಡ್ಡ ಕೊಡುಗೆ ಕೊಟ್ಟಿರುವ ಕ್ಯಾಸಿನೋ ನಮ್ಮ ಜಿಲ್ಲೆಗೇಕೆ ತರಬಾರದು? ಹಿಂದೆ ದೇಶಪಾಂಡೆ ಪ್ರವಾಸೋದ್ಯಮ ಮಂತ್ರಿಯಾಗಿದ್ದಾಗ ಕ್ಯಾಸಿನೋ ತರಲಾಗುತ್ತದೆಯೆಂದಾಗ ಬಿಜೆಪಿ ವಿರೋಧಿಸಿರಬಹುದು. ಈಗಲೂ ಪ್ರತಿರೋಧ ವ್ಯಕ್ತ ಪಡಿಸಬೇಕೆಂದೇನೂ ಇಲ್ಲವಲ್ಲ. ಮನಸ್ಥಿತಿ ಕಾಲ ಕಾಲಕ್ಕೆ ಬದಲಾಗುತ್ತದೆ ಎಂದು ಹೆಬ್ಬಾರ್ ಹೇಳಿದ್ದರು.

ಮಂತ್ರಿ ಹೆಬ್ಬಾರರ ರಾಜ್ಯೋತ್ಸವ ಭಾಷಣದ ಪ್ರಮುಖ ಅಂಶವಾಗಿದ್ದ ಕ್ಯಾಸಿನೋ ಆಧರಿತ ಪ್ರವಾಸೋದ್ಯಮ ಯೋಜನೆಯ ಹೇಳಿಕೆ ಬಂದ ನಂತರ ಇದು ಬಿಜೆಪಿಗರ ದ್ವಂದ್ವ-ಇಬ್ಬಂದಿತನದ ಎಂಬ ಟೀಕೆ ಕೇಳಿ ಬರಲಾರಂಭಿಸದೆ. ಪ್ರವಾಸೋದ್ಯಮಕ್ಕೆ ಸಾತ್ವಿಕವಾದ ಹಲವು ಸಾಧ್ಯತೆಯಿರುವಾಗ ಗೋವಾ ಸಂಸ್ಕೃತಿಯ ಪ್ರವಾಸೋದ್ಯಮ ತಂದರೆ ಅದು ಜಿಲ್ಲೆಗೆ ಕಳಂಕವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದು ಸಚಿವ ಹೆಬ್ಬಾರರ ವೈಯಕ್ತಿಕ ಅಭಿಪ್ರಾಯವೋ? ಬಿಜೆಪಿ ನೀತಿಯೋ? ಎಂಬ ಪ್ರಶ್ನೆ ಎದ್ದಿದೆ.

ಗೋವಾ ಮಾದರಿಯ ಕ್ಯಾಸಿನೋ ಪ್ರವಾಸೋದ್ಯಮ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿರುವ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ್, “ಸಚಿವರು ಅರಣ್ಯ ಸಾಗುವಳಿದಾರರ ಸಂಕಷ್ಟ ಮತ್ತಿತರ ಜ್ವಲಂತ ಸಮಸ್ಯೆ ಕಡೆಗಣಿಸಿ ಕ್ಯಾಸಿನೋದಂಥ ಜೂಜಿನ ಬಗ್ಗೆ ತಲೆ ಕೆಡಿಸಿಕೊಳ್ಳಲಾಗುತ್ತಿದ್ದಾರೆ. ಇದು ಉತ್ತರ ಕನ್ನಡ ಜಿಲ್ಲೆಯ ಜನರ ಮನೋಭಾವ, ಅಭಿಪ್ರಾಯಕ್ಕೆ ವಿರುದ್ದವಾದುದು ಎಂದಿದ್ದಾರೆ. ಕ್ಯಾಸಿನೋದಿಂದ ಉತ್ತರ ಕನ್ನಡದ ಭಾಗ್ಯದ ಬಾಗಿಲೇನೂ ತೆರೆಯುವುದಿಲ್ಲ; ಗೋವಾದ ಮೋಜಿನ ಸಂಸ್ಕೃತಿಗೆ ಅವಕಾಶ ಕೊಟ್ಟಂತಾಗುತ್ತದಷ್ಟೇ; ಕ್ಯಾಸಿನೋ ಜೂಜಾಟದ ಮೂಲಕ ಜಿಲ್ಲೆಯ ಸಂಸ್ಕೃತಿ-ಸಂಸ್ಕಾರಕ್ಕೆ ಅಪಚಾರವೆಸಗಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...