Homeಮುಖಪುಟಉತ್ತರ ಕನ್ನಡದಲ್ಲಿ ಕ್ಯಾಸಿನೋ ಜೂಜಾಟ ಶುರುಮಾಡುವ ಸಚಿವ ಹೆಬ್ಬಾರ್ ಹೇಳಿಕೆಗೆ ವಿರೋಧ

ಉತ್ತರ ಕನ್ನಡದಲ್ಲಿ ಕ್ಯಾಸಿನೋ ಜೂಜಾಟ ಶುರುಮಾಡುವ ಸಚಿವ ಹೆಬ್ಬಾರ್ ಹೇಳಿಕೆಗೆ ವಿರೋಧ

- Advertisement -
- Advertisement -

ಉತ್ತರ ಕನ್ನಡದಲ್ಲಿ ಕ್ಯಾಸಿನೋ (ನದಿಯಲ್ಲಿರುವ ಬೃಹತ್ ಬೋಟಲ್ಲಿ ನಡೆಯುವ ಜೂಜು-ಮೋಜು) ಶುರು ಮಾಡುವ ಸಚಿವ ಶಿವರಾಮ್ ಹೆಬ್ಬಾರ್ ಹೇಳಿಕೆಗೆ ಜಿಲ್ಲೆಯಲ್ಲಿ ವಿರೋಧದ ಅಲೆಯೆದ್ದಿದೆ. ಕಾರವಾರ, ಅಂಕೋಲಾ, ಯಲ್ಲಾಪುರ, ಮುಂಡಗೋಡಿನವರು ಗೋವಾಕ್ಕೆ ಹೋಗಿ ಕ್ಯಾಸಿನೋ ಆಡಿ ಬರುತ್ತಾರೆ. ಇಲ್ಲಿ ಕ್ಯಾಸಿನೋ ಆರಂಭಿಸಿದರೆ ಸಂಸ್ಕೃತಿ ಹಾಳಾಗುತ್ತದೆ, ಹಾಗೆ-ಹೀಗೆ ಎಂದು ಆಕ್ಷೇಪ ವ್ಯಕ್ತ ಪಡಿಸಲಾಗುತ್ತದೆ. ಇಂಥ ದ್ವಂದ್ವವೆ ಉತ್ತರ ಕನ್ನಡದ ಪ್ರವಾಸೋದ್ಯಮ ಅಭಿವೃದ್ಧಿ ಹಿನ್ನಡೆಗೆ ಕಾರಣ. ಗೋವಾ ಸರಕಾರಕ್ಕೆ ಕ್ಯಾಸಿನೋದಿಂದ ಪ್ರತಿ ವರ್ಷ 696 ಕೋಟಿ ರೂ ಆದಾಯ ಬರುತ್ತಿದೆ. 3000 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಸಿಕ್ಕಿದೆ ಎಂದು ಸಚಿವ ಹೆಬ್ಬಾರ್ ಹೇಳಿಕೆ ನೀಡಿದ್ದರು.

ಜಿಲ್ಲೆ ಜನರು ಇಂಥ ಇಬ್ಬಂದಿತನ ಬಿಟ್ಟು ಸಹಕರಿಸದರೆ ಪ್ರವಾಸೋದ್ಯಮ ದೊಡ್ಡ ಮಟ್ಟದಲ್ಲಿ ಅಭಿವೃದ್ದಿ ಸಾಧಿಸಬಹುದು. ಪ್ರವಾಸೋದ್ಯಮ ಮಂತ್ರಿಯನ್ನು ಜಿಲ್ಲೆಗೆ ಕರೆತಂದು ಕ್ಯಾಸಿನೋ ಸೆರಿದಂತೆ ಬೇರೆ-ಬೇರೆ ಪ್ರವಾಸೋದ್ಯಮ ಉತ್ತೇಜನದ ಕುರಿತು ಚರ್ಚಿಸಲಾಗುತ್ತದೆ. ಗೋವಾ ಅಭಿವೃದ್ದಿಗೆ ದೊಡ್ಡ ಕೊಡುಗೆ ಕೊಟ್ಟಿರುವ ಕ್ಯಾಸಿನೋ ನಮ್ಮ ಜಿಲ್ಲೆಗೇಕೆ ತರಬಾರದು? ಹಿಂದೆ ದೇಶಪಾಂಡೆ ಪ್ರವಾಸೋದ್ಯಮ ಮಂತ್ರಿಯಾಗಿದ್ದಾಗ ಕ್ಯಾಸಿನೋ ತರಲಾಗುತ್ತದೆಯೆಂದಾಗ ಬಿಜೆಪಿ ವಿರೋಧಿಸಿರಬಹುದು. ಈಗಲೂ ಪ್ರತಿರೋಧ ವ್ಯಕ್ತ ಪಡಿಸಬೇಕೆಂದೇನೂ ಇಲ್ಲವಲ್ಲ. ಮನಸ್ಥಿತಿ ಕಾಲ ಕಾಲಕ್ಕೆ ಬದಲಾಗುತ್ತದೆ ಎಂದು ಹೆಬ್ಬಾರ್ ಹೇಳಿದ್ದರು.

ಮಂತ್ರಿ ಹೆಬ್ಬಾರರ ರಾಜ್ಯೋತ್ಸವ ಭಾಷಣದ ಪ್ರಮುಖ ಅಂಶವಾಗಿದ್ದ ಕ್ಯಾಸಿನೋ ಆಧರಿತ ಪ್ರವಾಸೋದ್ಯಮ ಯೋಜನೆಯ ಹೇಳಿಕೆ ಬಂದ ನಂತರ ಇದು ಬಿಜೆಪಿಗರ ದ್ವಂದ್ವ-ಇಬ್ಬಂದಿತನದ ಎಂಬ ಟೀಕೆ ಕೇಳಿ ಬರಲಾರಂಭಿಸದೆ. ಪ್ರವಾಸೋದ್ಯಮಕ್ಕೆ ಸಾತ್ವಿಕವಾದ ಹಲವು ಸಾಧ್ಯತೆಯಿರುವಾಗ ಗೋವಾ ಸಂಸ್ಕೃತಿಯ ಪ್ರವಾಸೋದ್ಯಮ ತಂದರೆ ಅದು ಜಿಲ್ಲೆಗೆ ಕಳಂಕವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದು ಸಚಿವ ಹೆಬ್ಬಾರರ ವೈಯಕ್ತಿಕ ಅಭಿಪ್ರಾಯವೋ? ಬಿಜೆಪಿ ನೀತಿಯೋ? ಎಂಬ ಪ್ರಶ್ನೆ ಎದ್ದಿದೆ.

ಗೋವಾ ಮಾದರಿಯ ಕ್ಯಾಸಿನೋ ಪ್ರವಾಸೋದ್ಯಮ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿರುವ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ್, “ಸಚಿವರು ಅರಣ್ಯ ಸಾಗುವಳಿದಾರರ ಸಂಕಷ್ಟ ಮತ್ತಿತರ ಜ್ವಲಂತ ಸಮಸ್ಯೆ ಕಡೆಗಣಿಸಿ ಕ್ಯಾಸಿನೋದಂಥ ಜೂಜಿನ ಬಗ್ಗೆ ತಲೆ ಕೆಡಿಸಿಕೊಳ್ಳಲಾಗುತ್ತಿದ್ದಾರೆ. ಇದು ಉತ್ತರ ಕನ್ನಡ ಜಿಲ್ಲೆಯ ಜನರ ಮನೋಭಾವ, ಅಭಿಪ್ರಾಯಕ್ಕೆ ವಿರುದ್ದವಾದುದು ಎಂದಿದ್ದಾರೆ. ಕ್ಯಾಸಿನೋದಿಂದ ಉತ್ತರ ಕನ್ನಡದ ಭಾಗ್ಯದ ಬಾಗಿಲೇನೂ ತೆರೆಯುವುದಿಲ್ಲ; ಗೋವಾದ ಮೋಜಿನ ಸಂಸ್ಕೃತಿಗೆ ಅವಕಾಶ ಕೊಟ್ಟಂತಾಗುತ್ತದಷ್ಟೇ; ಕ್ಯಾಸಿನೋ ಜೂಜಾಟದ ಮೂಲಕ ಜಿಲ್ಲೆಯ ಸಂಸ್ಕೃತಿ-ಸಂಸ್ಕಾರಕ್ಕೆ ಅಪಚಾರವೆಸಗಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...