Homeಮುಖಪುಟಉತ್ತರ ಕನ್ನಡದಲ್ಲಿ ಕ್ಯಾಸಿನೋ ಜೂಜಾಟ ಶುರುಮಾಡುವ ಸಚಿವ ಹೆಬ್ಬಾರ್ ಹೇಳಿಕೆಗೆ ವಿರೋಧ

ಉತ್ತರ ಕನ್ನಡದಲ್ಲಿ ಕ್ಯಾಸಿನೋ ಜೂಜಾಟ ಶುರುಮಾಡುವ ಸಚಿವ ಹೆಬ್ಬಾರ್ ಹೇಳಿಕೆಗೆ ವಿರೋಧ

- Advertisement -
- Advertisement -

ಉತ್ತರ ಕನ್ನಡದಲ್ಲಿ ಕ್ಯಾಸಿನೋ (ನದಿಯಲ್ಲಿರುವ ಬೃಹತ್ ಬೋಟಲ್ಲಿ ನಡೆಯುವ ಜೂಜು-ಮೋಜು) ಶುರು ಮಾಡುವ ಸಚಿವ ಶಿವರಾಮ್ ಹೆಬ್ಬಾರ್ ಹೇಳಿಕೆಗೆ ಜಿಲ್ಲೆಯಲ್ಲಿ ವಿರೋಧದ ಅಲೆಯೆದ್ದಿದೆ. ಕಾರವಾರ, ಅಂಕೋಲಾ, ಯಲ್ಲಾಪುರ, ಮುಂಡಗೋಡಿನವರು ಗೋವಾಕ್ಕೆ ಹೋಗಿ ಕ್ಯಾಸಿನೋ ಆಡಿ ಬರುತ್ತಾರೆ. ಇಲ್ಲಿ ಕ್ಯಾಸಿನೋ ಆರಂಭಿಸಿದರೆ ಸಂಸ್ಕೃತಿ ಹಾಳಾಗುತ್ತದೆ, ಹಾಗೆ-ಹೀಗೆ ಎಂದು ಆಕ್ಷೇಪ ವ್ಯಕ್ತ ಪಡಿಸಲಾಗುತ್ತದೆ. ಇಂಥ ದ್ವಂದ್ವವೆ ಉತ್ತರ ಕನ್ನಡದ ಪ್ರವಾಸೋದ್ಯಮ ಅಭಿವೃದ್ಧಿ ಹಿನ್ನಡೆಗೆ ಕಾರಣ. ಗೋವಾ ಸರಕಾರಕ್ಕೆ ಕ್ಯಾಸಿನೋದಿಂದ ಪ್ರತಿ ವರ್ಷ 696 ಕೋಟಿ ರೂ ಆದಾಯ ಬರುತ್ತಿದೆ. 3000 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಸಿಕ್ಕಿದೆ ಎಂದು ಸಚಿವ ಹೆಬ್ಬಾರ್ ಹೇಳಿಕೆ ನೀಡಿದ್ದರು.

ಜಿಲ್ಲೆ ಜನರು ಇಂಥ ಇಬ್ಬಂದಿತನ ಬಿಟ್ಟು ಸಹಕರಿಸದರೆ ಪ್ರವಾಸೋದ್ಯಮ ದೊಡ್ಡ ಮಟ್ಟದಲ್ಲಿ ಅಭಿವೃದ್ದಿ ಸಾಧಿಸಬಹುದು. ಪ್ರವಾಸೋದ್ಯಮ ಮಂತ್ರಿಯನ್ನು ಜಿಲ್ಲೆಗೆ ಕರೆತಂದು ಕ್ಯಾಸಿನೋ ಸೆರಿದಂತೆ ಬೇರೆ-ಬೇರೆ ಪ್ರವಾಸೋದ್ಯಮ ಉತ್ತೇಜನದ ಕುರಿತು ಚರ್ಚಿಸಲಾಗುತ್ತದೆ. ಗೋವಾ ಅಭಿವೃದ್ದಿಗೆ ದೊಡ್ಡ ಕೊಡುಗೆ ಕೊಟ್ಟಿರುವ ಕ್ಯಾಸಿನೋ ನಮ್ಮ ಜಿಲ್ಲೆಗೇಕೆ ತರಬಾರದು? ಹಿಂದೆ ದೇಶಪಾಂಡೆ ಪ್ರವಾಸೋದ್ಯಮ ಮಂತ್ರಿಯಾಗಿದ್ದಾಗ ಕ್ಯಾಸಿನೋ ತರಲಾಗುತ್ತದೆಯೆಂದಾಗ ಬಿಜೆಪಿ ವಿರೋಧಿಸಿರಬಹುದು. ಈಗಲೂ ಪ್ರತಿರೋಧ ವ್ಯಕ್ತ ಪಡಿಸಬೇಕೆಂದೇನೂ ಇಲ್ಲವಲ್ಲ. ಮನಸ್ಥಿತಿ ಕಾಲ ಕಾಲಕ್ಕೆ ಬದಲಾಗುತ್ತದೆ ಎಂದು ಹೆಬ್ಬಾರ್ ಹೇಳಿದ್ದರು.

ಮಂತ್ರಿ ಹೆಬ್ಬಾರರ ರಾಜ್ಯೋತ್ಸವ ಭಾಷಣದ ಪ್ರಮುಖ ಅಂಶವಾಗಿದ್ದ ಕ್ಯಾಸಿನೋ ಆಧರಿತ ಪ್ರವಾಸೋದ್ಯಮ ಯೋಜನೆಯ ಹೇಳಿಕೆ ಬಂದ ನಂತರ ಇದು ಬಿಜೆಪಿಗರ ದ್ವಂದ್ವ-ಇಬ್ಬಂದಿತನದ ಎಂಬ ಟೀಕೆ ಕೇಳಿ ಬರಲಾರಂಭಿಸದೆ. ಪ್ರವಾಸೋದ್ಯಮಕ್ಕೆ ಸಾತ್ವಿಕವಾದ ಹಲವು ಸಾಧ್ಯತೆಯಿರುವಾಗ ಗೋವಾ ಸಂಸ್ಕೃತಿಯ ಪ್ರವಾಸೋದ್ಯಮ ತಂದರೆ ಅದು ಜಿಲ್ಲೆಗೆ ಕಳಂಕವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದು ಸಚಿವ ಹೆಬ್ಬಾರರ ವೈಯಕ್ತಿಕ ಅಭಿಪ್ರಾಯವೋ? ಬಿಜೆಪಿ ನೀತಿಯೋ? ಎಂಬ ಪ್ರಶ್ನೆ ಎದ್ದಿದೆ.

ಗೋವಾ ಮಾದರಿಯ ಕ್ಯಾಸಿನೋ ಪ್ರವಾಸೋದ್ಯಮ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿರುವ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ್, “ಸಚಿವರು ಅರಣ್ಯ ಸಾಗುವಳಿದಾರರ ಸಂಕಷ್ಟ ಮತ್ತಿತರ ಜ್ವಲಂತ ಸಮಸ್ಯೆ ಕಡೆಗಣಿಸಿ ಕ್ಯಾಸಿನೋದಂಥ ಜೂಜಿನ ಬಗ್ಗೆ ತಲೆ ಕೆಡಿಸಿಕೊಳ್ಳಲಾಗುತ್ತಿದ್ದಾರೆ. ಇದು ಉತ್ತರ ಕನ್ನಡ ಜಿಲ್ಲೆಯ ಜನರ ಮನೋಭಾವ, ಅಭಿಪ್ರಾಯಕ್ಕೆ ವಿರುದ್ದವಾದುದು ಎಂದಿದ್ದಾರೆ. ಕ್ಯಾಸಿನೋದಿಂದ ಉತ್ತರ ಕನ್ನಡದ ಭಾಗ್ಯದ ಬಾಗಿಲೇನೂ ತೆರೆಯುವುದಿಲ್ಲ; ಗೋವಾದ ಮೋಜಿನ ಸಂಸ್ಕೃತಿಗೆ ಅವಕಾಶ ಕೊಟ್ಟಂತಾಗುತ್ತದಷ್ಟೇ; ಕ್ಯಾಸಿನೋ ಜೂಜಾಟದ ಮೂಲಕ ಜಿಲ್ಲೆಯ ಸಂಸ್ಕೃತಿ-ಸಂಸ್ಕಾರಕ್ಕೆ ಅಪಚಾರವೆಸಗಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...