Homeಮುಖಪುಟಉತ್ತರ ಕನ್ನಡದಲ್ಲಿ ಕ್ಯಾಸಿನೋ ಜೂಜಾಟ ಶುರುಮಾಡುವ ಸಚಿವ ಹೆಬ್ಬಾರ್ ಹೇಳಿಕೆಗೆ ವಿರೋಧ

ಉತ್ತರ ಕನ್ನಡದಲ್ಲಿ ಕ್ಯಾಸಿನೋ ಜೂಜಾಟ ಶುರುಮಾಡುವ ಸಚಿವ ಹೆಬ್ಬಾರ್ ಹೇಳಿಕೆಗೆ ವಿರೋಧ

- Advertisement -
- Advertisement -

ಉತ್ತರ ಕನ್ನಡದಲ್ಲಿ ಕ್ಯಾಸಿನೋ (ನದಿಯಲ್ಲಿರುವ ಬೃಹತ್ ಬೋಟಲ್ಲಿ ನಡೆಯುವ ಜೂಜು-ಮೋಜು) ಶುರು ಮಾಡುವ ಸಚಿವ ಶಿವರಾಮ್ ಹೆಬ್ಬಾರ್ ಹೇಳಿಕೆಗೆ ಜಿಲ್ಲೆಯಲ್ಲಿ ವಿರೋಧದ ಅಲೆಯೆದ್ದಿದೆ. ಕಾರವಾರ, ಅಂಕೋಲಾ, ಯಲ್ಲಾಪುರ, ಮುಂಡಗೋಡಿನವರು ಗೋವಾಕ್ಕೆ ಹೋಗಿ ಕ್ಯಾಸಿನೋ ಆಡಿ ಬರುತ್ತಾರೆ. ಇಲ್ಲಿ ಕ್ಯಾಸಿನೋ ಆರಂಭಿಸಿದರೆ ಸಂಸ್ಕೃತಿ ಹಾಳಾಗುತ್ತದೆ, ಹಾಗೆ-ಹೀಗೆ ಎಂದು ಆಕ್ಷೇಪ ವ್ಯಕ್ತ ಪಡಿಸಲಾಗುತ್ತದೆ. ಇಂಥ ದ್ವಂದ್ವವೆ ಉತ್ತರ ಕನ್ನಡದ ಪ್ರವಾಸೋದ್ಯಮ ಅಭಿವೃದ್ಧಿ ಹಿನ್ನಡೆಗೆ ಕಾರಣ. ಗೋವಾ ಸರಕಾರಕ್ಕೆ ಕ್ಯಾಸಿನೋದಿಂದ ಪ್ರತಿ ವರ್ಷ 696 ಕೋಟಿ ರೂ ಆದಾಯ ಬರುತ್ತಿದೆ. 3000 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಸಿಕ್ಕಿದೆ ಎಂದು ಸಚಿವ ಹೆಬ್ಬಾರ್ ಹೇಳಿಕೆ ನೀಡಿದ್ದರು.

ಜಿಲ್ಲೆ ಜನರು ಇಂಥ ಇಬ್ಬಂದಿತನ ಬಿಟ್ಟು ಸಹಕರಿಸದರೆ ಪ್ರವಾಸೋದ್ಯಮ ದೊಡ್ಡ ಮಟ್ಟದಲ್ಲಿ ಅಭಿವೃದ್ದಿ ಸಾಧಿಸಬಹುದು. ಪ್ರವಾಸೋದ್ಯಮ ಮಂತ್ರಿಯನ್ನು ಜಿಲ್ಲೆಗೆ ಕರೆತಂದು ಕ್ಯಾಸಿನೋ ಸೆರಿದಂತೆ ಬೇರೆ-ಬೇರೆ ಪ್ರವಾಸೋದ್ಯಮ ಉತ್ತೇಜನದ ಕುರಿತು ಚರ್ಚಿಸಲಾಗುತ್ತದೆ. ಗೋವಾ ಅಭಿವೃದ್ದಿಗೆ ದೊಡ್ಡ ಕೊಡುಗೆ ಕೊಟ್ಟಿರುವ ಕ್ಯಾಸಿನೋ ನಮ್ಮ ಜಿಲ್ಲೆಗೇಕೆ ತರಬಾರದು? ಹಿಂದೆ ದೇಶಪಾಂಡೆ ಪ್ರವಾಸೋದ್ಯಮ ಮಂತ್ರಿಯಾಗಿದ್ದಾಗ ಕ್ಯಾಸಿನೋ ತರಲಾಗುತ್ತದೆಯೆಂದಾಗ ಬಿಜೆಪಿ ವಿರೋಧಿಸಿರಬಹುದು. ಈಗಲೂ ಪ್ರತಿರೋಧ ವ್ಯಕ್ತ ಪಡಿಸಬೇಕೆಂದೇನೂ ಇಲ್ಲವಲ್ಲ. ಮನಸ್ಥಿತಿ ಕಾಲ ಕಾಲಕ್ಕೆ ಬದಲಾಗುತ್ತದೆ ಎಂದು ಹೆಬ್ಬಾರ್ ಹೇಳಿದ್ದರು.

ಮಂತ್ರಿ ಹೆಬ್ಬಾರರ ರಾಜ್ಯೋತ್ಸವ ಭಾಷಣದ ಪ್ರಮುಖ ಅಂಶವಾಗಿದ್ದ ಕ್ಯಾಸಿನೋ ಆಧರಿತ ಪ್ರವಾಸೋದ್ಯಮ ಯೋಜನೆಯ ಹೇಳಿಕೆ ಬಂದ ನಂತರ ಇದು ಬಿಜೆಪಿಗರ ದ್ವಂದ್ವ-ಇಬ್ಬಂದಿತನದ ಎಂಬ ಟೀಕೆ ಕೇಳಿ ಬರಲಾರಂಭಿಸದೆ. ಪ್ರವಾಸೋದ್ಯಮಕ್ಕೆ ಸಾತ್ವಿಕವಾದ ಹಲವು ಸಾಧ್ಯತೆಯಿರುವಾಗ ಗೋವಾ ಸಂಸ್ಕೃತಿಯ ಪ್ರವಾಸೋದ್ಯಮ ತಂದರೆ ಅದು ಜಿಲ್ಲೆಗೆ ಕಳಂಕವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದು ಸಚಿವ ಹೆಬ್ಬಾರರ ವೈಯಕ್ತಿಕ ಅಭಿಪ್ರಾಯವೋ? ಬಿಜೆಪಿ ನೀತಿಯೋ? ಎಂಬ ಪ್ರಶ್ನೆ ಎದ್ದಿದೆ.

ಗೋವಾ ಮಾದರಿಯ ಕ್ಯಾಸಿನೋ ಪ್ರವಾಸೋದ್ಯಮ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿರುವ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ್, “ಸಚಿವರು ಅರಣ್ಯ ಸಾಗುವಳಿದಾರರ ಸಂಕಷ್ಟ ಮತ್ತಿತರ ಜ್ವಲಂತ ಸಮಸ್ಯೆ ಕಡೆಗಣಿಸಿ ಕ್ಯಾಸಿನೋದಂಥ ಜೂಜಿನ ಬಗ್ಗೆ ತಲೆ ಕೆಡಿಸಿಕೊಳ್ಳಲಾಗುತ್ತಿದ್ದಾರೆ. ಇದು ಉತ್ತರ ಕನ್ನಡ ಜಿಲ್ಲೆಯ ಜನರ ಮನೋಭಾವ, ಅಭಿಪ್ರಾಯಕ್ಕೆ ವಿರುದ್ದವಾದುದು ಎಂದಿದ್ದಾರೆ. ಕ್ಯಾಸಿನೋದಿಂದ ಉತ್ತರ ಕನ್ನಡದ ಭಾಗ್ಯದ ಬಾಗಿಲೇನೂ ತೆರೆಯುವುದಿಲ್ಲ; ಗೋವಾದ ಮೋಜಿನ ಸಂಸ್ಕೃತಿಗೆ ಅವಕಾಶ ಕೊಟ್ಟಂತಾಗುತ್ತದಷ್ಟೇ; ಕ್ಯಾಸಿನೋ ಜೂಜಾಟದ ಮೂಲಕ ಜಿಲ್ಲೆಯ ಸಂಸ್ಕೃತಿ-ಸಂಸ್ಕಾರಕ್ಕೆ ಅಪಚಾರವೆಸಗಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...