Homeಮುಖಪುಟಉತ್ತರ ಕನ್ನಡದಲ್ಲಿ ಕ್ಯಾಸಿನೋ ಜೂಜಾಟ ಶುರುಮಾಡುವ ಸಚಿವ ಹೆಬ್ಬಾರ್ ಹೇಳಿಕೆಗೆ ವಿರೋಧ

ಉತ್ತರ ಕನ್ನಡದಲ್ಲಿ ಕ್ಯಾಸಿನೋ ಜೂಜಾಟ ಶುರುಮಾಡುವ ಸಚಿವ ಹೆಬ್ಬಾರ್ ಹೇಳಿಕೆಗೆ ವಿರೋಧ

- Advertisement -
- Advertisement -

ಉತ್ತರ ಕನ್ನಡದಲ್ಲಿ ಕ್ಯಾಸಿನೋ (ನದಿಯಲ್ಲಿರುವ ಬೃಹತ್ ಬೋಟಲ್ಲಿ ನಡೆಯುವ ಜೂಜು-ಮೋಜು) ಶುರು ಮಾಡುವ ಸಚಿವ ಶಿವರಾಮ್ ಹೆಬ್ಬಾರ್ ಹೇಳಿಕೆಗೆ ಜಿಲ್ಲೆಯಲ್ಲಿ ವಿರೋಧದ ಅಲೆಯೆದ್ದಿದೆ. ಕಾರವಾರ, ಅಂಕೋಲಾ, ಯಲ್ಲಾಪುರ, ಮುಂಡಗೋಡಿನವರು ಗೋವಾಕ್ಕೆ ಹೋಗಿ ಕ್ಯಾಸಿನೋ ಆಡಿ ಬರುತ್ತಾರೆ. ಇಲ್ಲಿ ಕ್ಯಾಸಿನೋ ಆರಂಭಿಸಿದರೆ ಸಂಸ್ಕೃತಿ ಹಾಳಾಗುತ್ತದೆ, ಹಾಗೆ-ಹೀಗೆ ಎಂದು ಆಕ್ಷೇಪ ವ್ಯಕ್ತ ಪಡಿಸಲಾಗುತ್ತದೆ. ಇಂಥ ದ್ವಂದ್ವವೆ ಉತ್ತರ ಕನ್ನಡದ ಪ್ರವಾಸೋದ್ಯಮ ಅಭಿವೃದ್ಧಿ ಹಿನ್ನಡೆಗೆ ಕಾರಣ. ಗೋವಾ ಸರಕಾರಕ್ಕೆ ಕ್ಯಾಸಿನೋದಿಂದ ಪ್ರತಿ ವರ್ಷ 696 ಕೋಟಿ ರೂ ಆದಾಯ ಬರುತ್ತಿದೆ. 3000 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಸಿಕ್ಕಿದೆ ಎಂದು ಸಚಿವ ಹೆಬ್ಬಾರ್ ಹೇಳಿಕೆ ನೀಡಿದ್ದರು.

ಜಿಲ್ಲೆ ಜನರು ಇಂಥ ಇಬ್ಬಂದಿತನ ಬಿಟ್ಟು ಸಹಕರಿಸದರೆ ಪ್ರವಾಸೋದ್ಯಮ ದೊಡ್ಡ ಮಟ್ಟದಲ್ಲಿ ಅಭಿವೃದ್ದಿ ಸಾಧಿಸಬಹುದು. ಪ್ರವಾಸೋದ್ಯಮ ಮಂತ್ರಿಯನ್ನು ಜಿಲ್ಲೆಗೆ ಕರೆತಂದು ಕ್ಯಾಸಿನೋ ಸೆರಿದಂತೆ ಬೇರೆ-ಬೇರೆ ಪ್ರವಾಸೋದ್ಯಮ ಉತ್ತೇಜನದ ಕುರಿತು ಚರ್ಚಿಸಲಾಗುತ್ತದೆ. ಗೋವಾ ಅಭಿವೃದ್ದಿಗೆ ದೊಡ್ಡ ಕೊಡುಗೆ ಕೊಟ್ಟಿರುವ ಕ್ಯಾಸಿನೋ ನಮ್ಮ ಜಿಲ್ಲೆಗೇಕೆ ತರಬಾರದು? ಹಿಂದೆ ದೇಶಪಾಂಡೆ ಪ್ರವಾಸೋದ್ಯಮ ಮಂತ್ರಿಯಾಗಿದ್ದಾಗ ಕ್ಯಾಸಿನೋ ತರಲಾಗುತ್ತದೆಯೆಂದಾಗ ಬಿಜೆಪಿ ವಿರೋಧಿಸಿರಬಹುದು. ಈಗಲೂ ಪ್ರತಿರೋಧ ವ್ಯಕ್ತ ಪಡಿಸಬೇಕೆಂದೇನೂ ಇಲ್ಲವಲ್ಲ. ಮನಸ್ಥಿತಿ ಕಾಲ ಕಾಲಕ್ಕೆ ಬದಲಾಗುತ್ತದೆ ಎಂದು ಹೆಬ್ಬಾರ್ ಹೇಳಿದ್ದರು.

ಮಂತ್ರಿ ಹೆಬ್ಬಾರರ ರಾಜ್ಯೋತ್ಸವ ಭಾಷಣದ ಪ್ರಮುಖ ಅಂಶವಾಗಿದ್ದ ಕ್ಯಾಸಿನೋ ಆಧರಿತ ಪ್ರವಾಸೋದ್ಯಮ ಯೋಜನೆಯ ಹೇಳಿಕೆ ಬಂದ ನಂತರ ಇದು ಬಿಜೆಪಿಗರ ದ್ವಂದ್ವ-ಇಬ್ಬಂದಿತನದ ಎಂಬ ಟೀಕೆ ಕೇಳಿ ಬರಲಾರಂಭಿಸದೆ. ಪ್ರವಾಸೋದ್ಯಮಕ್ಕೆ ಸಾತ್ವಿಕವಾದ ಹಲವು ಸಾಧ್ಯತೆಯಿರುವಾಗ ಗೋವಾ ಸಂಸ್ಕೃತಿಯ ಪ್ರವಾಸೋದ್ಯಮ ತಂದರೆ ಅದು ಜಿಲ್ಲೆಗೆ ಕಳಂಕವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಇದು ಸಚಿವ ಹೆಬ್ಬಾರರ ವೈಯಕ್ತಿಕ ಅಭಿಪ್ರಾಯವೋ? ಬಿಜೆಪಿ ನೀತಿಯೋ? ಎಂಬ ಪ್ರಶ್ನೆ ಎದ್ದಿದೆ.

ಗೋವಾ ಮಾದರಿಯ ಕ್ಯಾಸಿನೋ ಪ್ರವಾಸೋದ್ಯಮ ಪ್ರಾರಂಭಕ್ಕೆ ವಿರೋಧ ವ್ಯಕ್ತಪಡಿಸಿರುವ ಜಿಲ್ಲಾ ಅರಣ್ಯ ಭೂಮಿ ಸಾಗುವಳಿದಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ್, “ಸಚಿವರು ಅರಣ್ಯ ಸಾಗುವಳಿದಾರರ ಸಂಕಷ್ಟ ಮತ್ತಿತರ ಜ್ವಲಂತ ಸಮಸ್ಯೆ ಕಡೆಗಣಿಸಿ ಕ್ಯಾಸಿನೋದಂಥ ಜೂಜಿನ ಬಗ್ಗೆ ತಲೆ ಕೆಡಿಸಿಕೊಳ್ಳಲಾಗುತ್ತಿದ್ದಾರೆ. ಇದು ಉತ್ತರ ಕನ್ನಡ ಜಿಲ್ಲೆಯ ಜನರ ಮನೋಭಾವ, ಅಭಿಪ್ರಾಯಕ್ಕೆ ವಿರುದ್ದವಾದುದು ಎಂದಿದ್ದಾರೆ. ಕ್ಯಾಸಿನೋದಿಂದ ಉತ್ತರ ಕನ್ನಡದ ಭಾಗ್ಯದ ಬಾಗಿಲೇನೂ ತೆರೆಯುವುದಿಲ್ಲ; ಗೋವಾದ ಮೋಜಿನ ಸಂಸ್ಕೃತಿಗೆ ಅವಕಾಶ ಕೊಟ್ಟಂತಾಗುತ್ತದಷ್ಟೇ; ಕ್ಯಾಸಿನೋ ಜೂಜಾಟದ ಮೂಲಕ ಜಿಲ್ಲೆಯ ಸಂಸ್ಕೃತಿ-ಸಂಸ್ಕಾರಕ್ಕೆ ಅಪಚಾರವೆಸಗಲಾಗುತ್ತಿದೆ” ಎಂದು ಕಿಡಿಕಾರಿದ್ದಾರೆ.


ಇದನ್ನೂ ಓದಿ: ಕಾರ್ಮಿಕರಿಗೆ ಕೋವಿಡ್ ಲಸಿಕೆ ನೆಪದಲ್ಲಿ 312 ಕೋಟಿ ದುರ್ಬಳಕೆ: ಹರೀಶ್ ನಾಯ್ಕ್ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....